Homeರಾಜಕೀಯಉಪಚುನಾವಣೆ: 5 ಕ್ಷೇತ್ರಗಳಲ್ಲಿಯೂ ಬಿಜೆಪಿಗೆ ಹೀನಾಯ ಸೋಲು - ಗೆಲುವಿನ ನಗೆ ಬೀರಿದ TMC, RJD,...

ಉಪಚುನಾವಣೆ: 5 ಕ್ಷೇತ್ರಗಳಲ್ಲಿಯೂ ಬಿಜೆಪಿಗೆ ಹೀನಾಯ ಸೋಲು – ಗೆಲುವಿನ ನಗೆ ಬೀರಿದ TMC, RJD, ಕಾಂಗ್ರೆಸ್

- Advertisement -
- Advertisement -

ಪಶ್ಚಿಮ ಬಂಗಾಳ, ಬಿಹಾರ, ಮಹಾರಾಷ್ಟ್ರ ಮತ್ತು ಚತ್ತೀಸ್‌ಘಡ ರಾಜ್ಯಗಳಲ್ಲಿನ ನಾಲ್ಕು ವಿಧಾನಸಭಾ ಕ್ಷೇತ್ರ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಐದು ಕಡೆಗಳಲ್ಲಿಯೂ ಬಿಜೆಪಿ ಹೀನಾಯ ಸೋಲು ಕಂಡಿದೆ.

ಪಶ್ಚಿಮ ಬಂಗಾಳದ ಅಸಾನ್ಸೋಲ್ ಲೋಕಸಭಾ ಕ್ಷೇತ್ರ ಮತ್ತು ಬಲ್ಲಿಗುಂಗೆ ವಿಧಾನಸಭಾ ಕ್ಷೇತ್ರ ಎರಡೂ ಕಡೆ ಟಿಎಂಸಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಉತ್ತರ ಮತ್ತು ಚತ್ತೀಸ್‌ಘಡದ ಖೈರಾಘರ್‌ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, ಬಿಹಾರದ ಬೋಛಾಹ ವಿಧಾನಸಭಾ ಕ್ಷೇತ್ರದಲ್ಲಿ ಆರ್‌ಜೆಡಿ ಅಭ್ಯರ್ಥಿ ಜಯಗಳಿಸಿದ್ದಾರೆ.

ಅಸಾನ್ಸೋಲ್ ಲೋಕಸಭಾ ಕ್ಷೇತ್ರ

ಪಶ್ಚಿಮ ಬಂಗಾಳದ ಅಸಾನ್ಸೋಲ್ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿತ್ತು. 2019ರ ಚುನಾವಣೆಯಲ್ಲಿ ಬಿಜೆಪಿಯಿಂದ ಬಬುಲ್ ಸುಪ್ರಿಯೋ ಗೆಲುವು ಸಾಧಿಸಿದ್ದರು. ಆದರೆ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯದಿಂದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ತೊರೆದು ಅವರು ಟಿಎಂಸಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಹಾಗಾಗಿ ತೆರವಾದ ಸ್ಥಾನಕ್ಕೆ ಟಿಎಂಸಿಯು ಹಿರಿಯ ನಾಯಕ ಶತ್ರುಘ್ನ ಸಿನ್ಹರನ್ನು ಕಣಕ್ಕಿಳಿಸಿತ್ತು. ಅವರು ಬಿಜೆಪಿ ಅಭ್ಯರ್ಥಿ ಅಗ್ನಿಮಿತ್ರ ಪೌಲ್ ವಿರುದ್ದ 1.5 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಆ ಕ್ಷೇತ್ರದಲ್ಲಿ ಮೊದಲ ಬಾರಿಗೆ ಟಿಎಂಸಿ ಜಯಗಳಿಸಿದೆ.

ಬಲ್ಲಿಗುಂಗೆ ವಿಧಾನಸಭಾ ಕ್ಷೇತ್ರ

ಪಶ್ಚಿಮ ಬಂಗಾಳದ ಬಲ್ಲಿಗುಂಗೆ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿಯ ಬಬುಲ್ ಸುಪ್ರಿಯೋ ಜಯಗಳಿಸಿದ್ದಾರೆ. ಸಚಿವರಾಗಿದ್ದ ಸುಬ್ರತ ಮುಖರ್ಜಿಯವರ ನಿಧನದಿಂದ ಕ್ಷೇತ್ರ ತೆರವಾಗಿತ್ತು. ಇಲ್ಲಿ ಬಿಜಪಿಯು ಖೆಯಾ ಘೋಷ್ ಎಂಬುವವರನ್ನು ಕಣಕ್ಕಿಳಿಸಿತ್ತು. ಆದರೆ ಅವರು ಸೋಲನ್ನಪ್ಪಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಖೈರಾಘರ್‌ ವಿಧಾನಸಭಾ ಕ್ಷೇತ್ರ

ಚತ್ತೀಸ್‌ಘಡದ ಖೈರಾಘರ್‌ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಜನತ ಕಾಂಗ್ರೆಸ್‌ನ ದೇವ್ರತ್ ಸಿಂಗ್ ಎಂಬುವವರು ನಿಧನರಾಗಿದ್ದರು. ಹಾಗಾಗಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಶೋದ ನಿಲಂಬರ್ ವರ್ಮಾರವರು 20,000 ಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ್ದಾರೆ.

ಕೊಲ್ಲಾಪುರ ಉತ್ತರ

ಮಹಾರಾಷ್ಟ್ರದ ಕೊಲ್ಲಾಪುರ ಉತ್ತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಶ್ರೀ ಜಾಧವ್‌ರವರು ಬಿಜೆಪಿಯ ಸತ್ಯಜಿತ್ ಕದಮ್ ವಿರುದ್ಧ 18,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಬೋಛಾಹ ವಿಧಾನಸಭಾ ಕ್ಷೇತ್ರ

ಬಿಹಾರದ ಬೋಛಾಹ ವಿಧಾನಸಭಾ ಕ್ಷೇತ್ರವು ಎಸ್‌ಸಿ ಮೀಸಲು ಕ್ಷೇತ್ರವಾಗಿದೆ. ಇಲ್ಲಿ ವಿಕಾಸಶೀಲ ಇನ್ಸಾನ್ ಪಾರ್ಟಿಯಿಂದ ಶಾಸಕರಾಗಿದ್ದ ಮುಖೇಶ್ ಸಹಾನಿಯವರು ಸಾವನಪ್ಪಿದ್ದರು. ಹಾಗಾಗಿ ನಡೆದ ಉಪಚುನಾವಣೆಯಲ್ಲಿ ಆರ್‌ಜೆಡಿಯ ಅಮರ್ ಕುಮಾರ್ ಪಾಸ್ವಾನ್‌ರವರು ಜಯಗಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...