Homeಮುಖಪುಟಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲಿಯೇ ಮುಖಭಂಗ: ಹಾನಗಲ್‌ನಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್

ಸಿಎಂ ಬೊಮ್ಮಾಯಿಗೆ ತವರು ಜಿಲ್ಲೆಯಲ್ಲಿಯೇ ಮುಖಭಂಗ: ಹಾನಗಲ್‌ನಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್

ಇದು 2023ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ಪ್ರಶ್ನೆಯನ್ನು ಮತ್ತೊಮ್ಮೆ ಮುನ್ನಲೆಗೆ ತರಲಿದೆ.

- Advertisement -
- Advertisement -

ಭಾರೀ ಕೂತುಹಲ ಕೆರಳಿಸಿದ್ದ ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲ ಸಾಧಿಸಿವೆ. ಸಿಂದಗಿಯಲ್ಲಿ ಬಿಜೆಪಿ ಗೆದ್ದು ಬೀಗಿದರೆ, ಹಾನಗಲ್‌ನಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ. ಆದರೆ ಎರಡೂ ಕಡೆ ಠೇವಣಿ ಕಳೆದುಕೊಂಡಿರುವ ಜೆಡಿಎಸ್ ಹೀನಾಯ ಸೋಲು ಕಂಡಿದೆ. ಈ ಉಪ ಚುನಾವಣೆ ಫಲಿತಾಂಶ ಹಾಲಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ನುಂಗಲಾರದ ತುತ್ತಾಗಿದೆ. ಏಕೆಂದರೆ ಅವರ ತವರು ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಸೋಲುಂಡಿದೆ.

ಮಾಜಿ ಸಚಿವ ಸಿ.ಎಂ.ಉದಾಸಿಯವರ ನಿಧನದಿಂದಾಗಿ ತೆರವಾಗಿರುವ ಕ್ಷೇತ್ರದಲ್ಲಿ, ಕಾಂಗ್ರೆಸ್ ಪಕ್ಷವು ಕ್ಷತ್ರಿಯ ಮರಾಠ ಸಮುದಾಯದ ಶ್ರೀನಿವಾಸ ಮಾನೆಯವರಿಗೆ ಟಿಕೆಟ್ ನೀಡಿತ್ತು. ಬಿಜೆಪಿಯಿಂದ ಗಾಣಿಗ ಸಮುದಾಯದ ಶಿವರಾಜ್ ಸಜ್ಜನರ ಕಣಕ್ಕಿಳಿದಿದ್ದರು. ಸಿ.ಎಂ. ಉದಾಸಿಯವರ ಭದ್ರಕೋಟೆಯಾಗಿದ್ದ ಹಾನಗಲ್‌ನಲ್ಲಿ ಅನೇಕ ಸಲ ಕಾಂಗ್ರೆಸ್ ಅಭ್ಯರ್ಥಿಗಳೂ ಮೇಲುಗೈ ಸಾಧಿಸಿದ್ದಿದೆ. ಜೆಡಿಎಸ್ ಇಲ್ಲಿ ಮುಸ್ಲಿಂ ವ್ಯಕ್ತಿ ನಿಯಾಜ್ ಶೇಖ್ ಅವರನ್ನು ಈ ಬಾರಿ ಕಣಕ್ಕಿಳಿಸಿತ್ತು.

ಮತ ಎಣಿಕೆಯ 18ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಯವರು 83,324 ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರರವರು 75,999 ಮತಗಳಿಗೆ ಸೀಮಿತವಾದರು. ಇನ್ನು ಜೆಡಿಎಸ್‌ನ ನಿಯಾಜ್ ಶೇಖ್ ಕೇವಲ 566 ಮತಗಳನ್ನು ಪಡೆದರು.

ಹಾನಗಲ್‌ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಪ್ರತಿಷ್ಠೆಯ ಕಣವಾಗಿತ್ತು. ತವರು ಜಿಲ್ಲೆ ಎಂಬುದು ಒಂದು ಕಾರಣವಾದರೆ ಅವರು ಸಿಎಂ ಆದ ಬಳಿಕ ನಡೆಯುತ್ತಿರುವ ಮಹತ್ವದ ಉಪಚುನಾವಣೆ ಇದಾಗಿದೆ. ಆದರೆ ತವರು ಕ್ಷೇತ್ರದಲ್ಲಿಯೇ ಅವರು ಮುಖಭಂಗ ಅನುಭವಿಸಿದ್ದಾರೆ. ಇದು 2023ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ಪ್ರಶ್ನೆಯನ್ನು ಮತ್ತೊಮ್ಮೆ ಮುನ್ನಲೆಗೆ ತರಲಿದೆ.

ಈ ಫಲಿತಾಂಶ ಬೊಮ್ಮಾಯಿ ಪಾಲಿಗೆ ದುಸ್ವಪ್ನವಾಗಲಿದೆ. ಬೆನ್ನಿಗೆ ದೊಡ್ಡ ಬೆಂಬಲಿಗ ಶಾಸಕರ ಪಡೆಯಿಲ್ಲದೆಯೂ ಮುಖ್ಯಮಂತ್ರಿಯಾಗಿರುವ ಅವರ ನಾಯಕತ್ವದ ಪರೀಕ್ಷೆಯಲ್ಲಿ ಅವರು ಶೇ.50 ಮಾತ್ರ ಪಡೆದಿದ್ದಾರೆ. ಸಿಂದಗಿಯಲ್ಲಿ ಬಿಜೆಪಿಗೆ ಗೆಲುವಿಗೆ ಪಕ್ಷಕ್ಕಿಂತ ಮುಖ್ಯವಾಗಿ ರಮೇಶ್ ಭೂಸನೂರರವರ ವರ್ಚಸ್ಸು ಕಾರಣ ಎಂಬ ವಿಶ್ಲೇಷಣೆಗಳು ಸಹ ಕೇಳಿ ಬರುತ್ತಿವೆ. ಹೀಗಿರುವಾಗ ಹಿಂದೆ ಬಿಜೆಪಿ ಗೆದ್ದಿದ್ದ ತವರು ಕ್ಷೇತ್ರದಲ್ಲಿ ಬಿಜೆಪಿ ಸೋತಿರುವುದಕ್ಕೆ ಸಿಎಂ ಸಹ ಹೊಣೆ ಹೊರಬೇಕಿದೆ.


ಇದನ್ನೂ ಓದಿ: ರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...