Homeಮುಖಪುಟಉಪಚುನಾವಣೆ: ಎಲ್ಲಾ ರಾಜ್ಯಗಳಲ್ಲೂ ಬಿಜೆಪಿಗೆ ಗೆಲುವು- ಸಿ ವೋಟರ್ & ಇಂಡಿಯಾ ಟುಡೆ ಸಮೀಕ್ಷೆ

ಉಪಚುನಾವಣೆ: ಎಲ್ಲಾ ರಾಜ್ಯಗಳಲ್ಲೂ ಬಿಜೆಪಿಗೆ ಗೆಲುವು- ಸಿ ವೋಟರ್ & ಇಂಡಿಯಾ ಟುಡೆ ಸಮೀಕ್ಷೆ

ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಅಧಿಕ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆಗಳು ಹೇಳಿವೆ

- Advertisement -
- Advertisement -

ನಿನ್ನೆ ಬಿಹಾರದಲ್ಲಿ ಅಂತಿಮ ಮತ್ತು ಮೂರನೇ ಹಂತದ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡಿದ್ದು, ಇನ್ನೇನು 2 ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಈ ಫಲಿತಾಂಶಕ್ಕಾಗಿ ಬಿಹಾರ ಸೇರಿದಂತೆ ಉಪಚುನಾವಣೆ ನಡೆದ ರಾಜ್ಯಗಳೂ ಸಹ ಕಾಯುತ್ತಿವೆ. 4 ರಾಜ್ಯಗಳಲ್ಲಿ ಉಪಚುನಾವಣೆ ನಡೆದಿದ್ದು, ಇದರ ಫಲಿತಾಂಶವೂ ನವೆಂಬರ್ 10 ರಂದು ಹೊರಬೀಳಲಿದೆ. ಈಗಾಗಲೇ ಇದರ ಕುರಿತಂತೆ ಹಲವು ಸಮೀಕ್ಷೆಗಳು ತಮ್ಮ ಫಲಿತಾಂಶಗಳನ್ನು ಬಹಿರಂಗಪಡಿಸಿವೆ. ಇದರ ಪ್ರಕಾರ ಈ ಉಪಚುನಾವಣೆಯಲ್ಲಿ ಬಿಜೆಪಿಯೆ ಮೇಲುಗೈ ಸಾಧಿಲಿದೆ ಎಂದು ಸಿ ವೋಟರ್ ಮತ್ತು ಇಂಡಿಯಾ ಟುಡೆ ಸಮೀಕ್ಷೆಗಳು ಹೇಳಿವೆ.

ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿವೆ. ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಅಧಿಕ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆಗಳು ಹೇಳಿವೆ.

ಇದನ್ನೂ ಓದಿ: ಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ಇಂಡಿಯಾ ಟುಡೆ ಸಮೀಕ್ಷೆಯ ಪ್ರಕಾರ, ಉತ್ತರ ಪ್ರದೇಶದ ಒಟ್ಟು 7 ಸ್ಥಾನಗಳಲ್ಲಿ, ಬಿಜೆಪಿ 5-6, ಎಸ್‌ಪಿ – 1-2, ಬಿಎಸ್‌ಪಿ 0-1 ಹಂಚಿಕೆಯಾಗಲಿವೆ.

ಮಧ್ಯಪ್ರದೇಶದ ಒಟ್ಟು 28 ಸ್ಥಾನಗಳಲ್ಲಿ,  ಬಿಜೆಪಿ 16-18, ಕಾಂಗ್ರೆಸ್ 10-12, ಬಿಎಸ್‌ಪಿ 0-1 ರಂತೆ ಹಂಚಿಕೆಯಾಗಲಿದೆ. ಗುಜರಾತ್ ಒಟ್ಟು ಸ್ಥಾನಗಳಲ್ಲಿ 8, ಬಿಜೆಪಿ 6-7, ಕಾಂಗ್ರೆಸ್‌ 0-1 ಗೆದ್ದುಕೊಳ್ಳಲಿದೆ ಎಂದು ವರದಿ ಹೇಳುತ್ತದೆ.

ಇದನ್ನೂ ಓದಿ: ತಮಿಳು ನಟ ವಿಜಯ್ ಹೆಸರಿನಲ್ಲಿ ರಾಜಕೀಯ ಪಕ್ಷ ನೋಂದಣಿ: ವಿಜಯ್ ಪ್ರತಿಕ್ರಿಯೆ ಏನು?

ಇನ್ನು ಕರ್ನಾಟಕಕ್ಕೆ ಸಂಬಂಧಿಸಿದಂತೆ, ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ‘ಸಿ ವೋಟರ್‌’ ಚುನಾವಣೋತ್ತರ ಸಮೀಕ್ಷೆ ಹೇಳಿದೆ.

ಎರಡೂ ಕ್ಷೇತ್ರಗಳಲ್ಲಿ ನವೆಂಬರ್‌ 3ರಂದು ಮತದಾನ ನಡೆದಿತ್ತು. ನ.10 ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿಗಳಾದ ಮುನಿರತ್ನ ಮತ್ತು ಡಾ. ರಾಜೇಶ್‌ ಗೌಡ ಗೆಲುವು ಸಾಧಿಸಲಿದ್ದಾರೆ ಎಂದು ‘ಸಿ ವೋಟರ್‌’ ಸಮೀಕ್ಷೆ ತಿಳಿಸಿದೆ.


ಇದನ್ನೂ ಓದಿ: ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...