Homeಮುಖಪುಟಉಪಚುನಾವಣೆ: ಎಲ್ಲಾ ರಾಜ್ಯಗಳಲ್ಲೂ ಬಿಜೆಪಿಗೆ ಗೆಲುವು- ಸಿ ವೋಟರ್ & ಇಂಡಿಯಾ ಟುಡೆ ಸಮೀಕ್ಷೆ

ಉಪಚುನಾವಣೆ: ಎಲ್ಲಾ ರಾಜ್ಯಗಳಲ್ಲೂ ಬಿಜೆಪಿಗೆ ಗೆಲುವು- ಸಿ ವೋಟರ್ & ಇಂಡಿಯಾ ಟುಡೆ ಸಮೀಕ್ಷೆ

ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಅಧಿಕ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆಗಳು ಹೇಳಿವೆ

- Advertisement -
- Advertisement -

ನಿನ್ನೆ ಬಿಹಾರದಲ್ಲಿ ಅಂತಿಮ ಮತ್ತು ಮೂರನೇ ಹಂತದ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡಿದ್ದು, ಇನ್ನೇನು 2 ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಈ ಫಲಿತಾಂಶಕ್ಕಾಗಿ ಬಿಹಾರ ಸೇರಿದಂತೆ ಉಪಚುನಾವಣೆ ನಡೆದ ರಾಜ್ಯಗಳೂ ಸಹ ಕಾಯುತ್ತಿವೆ. 4 ರಾಜ್ಯಗಳಲ್ಲಿ ಉಪಚುನಾವಣೆ ನಡೆದಿದ್ದು, ಇದರ ಫಲಿತಾಂಶವೂ ನವೆಂಬರ್ 10 ರಂದು ಹೊರಬೀಳಲಿದೆ. ಈಗಾಗಲೇ ಇದರ ಕುರಿತಂತೆ ಹಲವು ಸಮೀಕ್ಷೆಗಳು ತಮ್ಮ ಫಲಿತಾಂಶಗಳನ್ನು ಬಹಿರಂಗಪಡಿಸಿವೆ. ಇದರ ಪ್ರಕಾರ ಈ ಉಪಚುನಾವಣೆಯಲ್ಲಿ ಬಿಜೆಪಿಯೆ ಮೇಲುಗೈ ಸಾಧಿಲಿದೆ ಎಂದು ಸಿ ವೋಟರ್ ಮತ್ತು ಇಂಡಿಯಾ ಟುಡೆ ಸಮೀಕ್ಷೆಗಳು ಹೇಳಿವೆ.

ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿವೆ. ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಅಧಿಕ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆಗಳು ಹೇಳಿವೆ.

ಇದನ್ನೂ ಓದಿ: ಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

ಇಂಡಿಯಾ ಟುಡೆ ಸಮೀಕ್ಷೆಯ ಪ್ರಕಾರ, ಉತ್ತರ ಪ್ರದೇಶದ ಒಟ್ಟು 7 ಸ್ಥಾನಗಳಲ್ಲಿ, ಬಿಜೆಪಿ 5-6, ಎಸ್‌ಪಿ – 1-2, ಬಿಎಸ್‌ಪಿ 0-1 ಹಂಚಿಕೆಯಾಗಲಿವೆ.

ಮಧ್ಯಪ್ರದೇಶದ ಒಟ್ಟು 28 ಸ್ಥಾನಗಳಲ್ಲಿ,  ಬಿಜೆಪಿ 16-18, ಕಾಂಗ್ರೆಸ್ 10-12, ಬಿಎಸ್‌ಪಿ 0-1 ರಂತೆ ಹಂಚಿಕೆಯಾಗಲಿದೆ. ಗುಜರಾತ್ ಒಟ್ಟು ಸ್ಥಾನಗಳಲ್ಲಿ 8, ಬಿಜೆಪಿ 6-7, ಕಾಂಗ್ರೆಸ್‌ 0-1 ಗೆದ್ದುಕೊಳ್ಳಲಿದೆ ಎಂದು ವರದಿ ಹೇಳುತ್ತದೆ.

ಇದನ್ನೂ ಓದಿ: ತಮಿಳು ನಟ ವಿಜಯ್ ಹೆಸರಿನಲ್ಲಿ ರಾಜಕೀಯ ಪಕ್ಷ ನೋಂದಣಿ: ವಿಜಯ್ ಪ್ರತಿಕ್ರಿಯೆ ಏನು?

ಇನ್ನು ಕರ್ನಾಟಕಕ್ಕೆ ಸಂಬಂಧಿಸಿದಂತೆ, ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ‘ಸಿ ವೋಟರ್‌’ ಚುನಾವಣೋತ್ತರ ಸಮೀಕ್ಷೆ ಹೇಳಿದೆ.

ಎರಡೂ ಕ್ಷೇತ್ರಗಳಲ್ಲಿ ನವೆಂಬರ್‌ 3ರಂದು ಮತದಾನ ನಡೆದಿತ್ತು. ನ.10 ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿಗಳಾದ ಮುನಿರತ್ನ ಮತ್ತು ಡಾ. ರಾಜೇಶ್‌ ಗೌಡ ಗೆಲುವು ಸಾಧಿಸಲಿದ್ದಾರೆ ಎಂದು ‘ಸಿ ವೋಟರ್‌’ ಸಮೀಕ್ಷೆ ತಿಳಿಸಿದೆ.


ಇದನ್ನೂ ಓದಿ: ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...