Homeಕರ್ನಾಟಕಉಪಚುನಾವಣೆ | ಚನ್ನಪಟ್ಟಣ, ಸಂಡೂರಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌ : ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ

ಉಪಚುನಾವಣೆ | ಚನ್ನಪಟ್ಟಣ, ಸಂಡೂರಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌ : ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ

- Advertisement -
- Advertisement -

ಉಪಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಕಾಂಗ್ರೆಸ್ ಬುಧವಾರ (ಅ.23) ಘೋಷಣೆ ಮಾಡಿದೆ. ಮತ್ತೊಂದು ಕ್ಷೇತ್ರದಲ್ಲಿ ಹೊಸ ಲೆಕ್ಕಾಚಾರದಲ್ಲಿದೆ.

ಚನ್ನಪಟ್ಟಣ ಮತ್ತು ಸಂಡೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಚನ್ನಪಟ್ಟಣದಲ್ಲಿ ನಿನ್ನೆಯಷ್ಟೆ ಪಕ್ಷ ಸೇರಿರುವ ಸಿ.ಪಿ ಯೋಗೇಶ್ವರ್‌ಗೆ ಮತ್ತು ಸಂಡೂರಿನಲ್ಲಿ ಸಂಸದ ಇ. ತುಕರಾಂ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ಇನ್ನೂ ಅಭ್ಯರ್ಥಿ ಘೋಷಣೆಯಾಗಿಲ್ಲ. ಹಾಗಾಗಿ, ನಿನ್ನೆಯವರೆಗೆ ಚನ್ನಪಟ್ಟಣದ ಮೇಲಿದ್ದ ಕುತೂಹಲ, ಈಗ ಶಿಗ್ಗಾವಿಗೆ ಶಿಫ್ಟ್‌ ಆಗಿದೆ.

ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾಗಿರುವ ಕಾರಣ ತೆರವಾಗಿರುವ ಶಿಗ್ಗಾವಿ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಬಹಳ ತಲೆ ಕೆಡಿಸಿಕೊಂಡಂತಿದೆ.

ಶಿಗ್ಗಾವಿ ಟಿಕೆಟ್ ಲಿಂಗಾಯತರಿಗೆ ನೀಡಬೇಕೆ, ಅಲ್ಪಸಂಖ್ಯಾತರಿಗೆ (ಮುಸ್ಲಿಂ) ನೀಡಬೇಕೆ? ಎಂಬ ಗೊಂದಲ ಕಾಂಗ್ರೆಸ್‌ನಲ್ಲಿ ಮುಂದುವರೆದಿದೆ. ಈ ಕ್ಷೇತ್ರದಲ್ಲಿ ಕಳೆದ ನಾಲ್ಕು ಅವಧಿಯಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಸೋಲನುಭವಿಸಿರುವ ಹಿನ್ನೆಲೆ, ಈ ಬಾರಿ ಲಿಂಗಾಯತ ಅಭ್ಯರ್ಥಿಗೆ ಮಣೆ ಹಾಕುವ ಹೊಸ ಲೆಕ್ಕಾಚಾರದಲ್ಲಿ ಕೈ ನಾಯಕರು ಇದ್ದಾರೆ ಎಂದು ಹೇಳಲಾಗ್ತಿದೆ.

ಆದರೆ, ಸಚಿವ ಝಮೀರ್ ಅಹ್ಮದ್ ಸೇರಿದಂತೆ ಕಾಂಗ್ರೆಸ್‌ನ ಮುಸ್ಲಿಂ ನಾಯಕರು ಮತ್ತೊಮ್ಮೆ ಮುಸ್ಲಿಂ ಅಭ್ಯರ್ಥಿಯನ್ನೇ ಕಣಕ್ಕಿಳಿಸುವಂತೆ ಪಟ್ಟು ಹಿಡಿದಿದ್ದಾರೆ ಎನ್ನಲಾಗ್ತಿದೆ. ಇದರಿಂದ ಕೈ ನಾಯಕರು ಅಂತಿಮ ನಿರ್ಧಾರಕ್ಕೆ ಬರಲಾಗದೆ ಅಭ್ಯರ್ಥಿ ಘೋಷಣೆ ವಿಳಂಬವಾಗಿದೆ ಎಂದು ವರದಿಯಾಗಿದೆ.

ಶಿಗ್ಗಾವಿ ಟಿಕೆಟ್‌ಗಾಗಿ ಮುಸ್ಲಿಂ ಮುಖಂಡರಾದ ಯಾಸಿರ್ ಅಹ್ಮದ್ ಖಾನ್ ಪಠಾಣ ಮತ್ತು ಸೈಯ್ಯದ್ ಅಜ್ಜಂಪೀರ್ ಖಾದ್ರಿ ಕಸರತ್ತು ನಡೆಸುತ್ತಿದ್ದಾರೆ. ಆದರೆ, ಬಿಜೆಪಿ ಅಭ್ಯರ್ಥಿಯಾಗಿರುವ ಲಿಂಗಾಯತ ಸಮುದಾಯದ ಸಾದರ ಉಪ ಪಂಗಡಕ್ಕೆ ಸೇರಿದ ಭರತ್ ಬೊಮ್ಮಾಯಿ ಅವರನ್ನು ಎದುರಿಸಲು, ಅದೇ ಸಮುದಾಯದ ಪಂಚಮಸಾಲಿ ಉಪ ಪಂಗಡದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಲೆಕ್ಕಾಚಾರದಲ್ಲಿ ಕೈ ನಾಯಕರಿದ್ದಾರೆ. ಇದಕ್ಕೆ ಪೂರಕವಾಗಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರು ತಮ್ಮ ಪತ್ನಿ ಶಿವಲೀಲಾ ಅಥವಾ ಮಗಳು ವೈಶಾಲಿಗೆ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಎರಡು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿರುವ ಬಿಜೆಪಿ

ಕಾಂಗ್ರೆಸ್‌ನಂತೆಯೇ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ, ಇನ್ನೊಂದು ಕ್ಷೇತ್ರದ ಬಗ್ಗೆ ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಸಂಡೂರಿನಿಂದ ಬಂಗಾರು ಹನುಮಂತು ಮತ್ತು ಶಿಗ್ಗಾವಿಯಿಂದ ಭರತ್ ಬೊಮ್ಮಾಯಿಯನ್ನು ಬಿಜೆಪಿ ಕಣಕ್ಕಿಳಿಸಿದೆ. ಆದರೆ, ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾವ ಪಕ್ಷದಿಂದ ಕಣಕ್ಕಿಳಿಯಬೇಕು ಎಂಬ ಗೊಂದಲದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರಿದ್ದಾರೆ.

ಇದನ್ನೂ ಓದಿ : ಮೂರು ಕ್ಷೇತ್ರಗಳ ಉಪ ಚುನಾವಣೆ: ‘ಕೈ-ಕಮಲ’ ಪಕ್ಷಗಳ ಕುಟುಂಬ ರಾಜಕಾರಣಕ್ಕೆ ಕಾರ್ಯಕರ್ತರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...