Homeಮುಖಪುಟಉಪಚುನಾವಣೆ: ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ, ಬಿಜೆಪಿ 7 ಕ್ಷೇತ್ರಗಳಲ್ಲಿ ಗೆಲುವು

ಉಪಚುನಾವಣೆ: ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ, ಬಿಜೆಪಿ 7 ಕ್ಷೇತ್ರಗಳಲ್ಲಿ ಗೆಲುವು

ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಶಿವಸೇನೆ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು ಕಂಡಿವೆ.

- Advertisement -
- Advertisement -

ದೇಶದ 14 ರಾಜ್ಯಗಳ 30 ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಫಲಿತಾಂಶಗಳನ್ನು ಪಕ್ಷವಾರು ಆಧಾರಲ್ಲಿ ನೋಡಿದರೆ ಮೂವತ್ತು ಸ್ಥಾನಗಳಲ್ಲಿ ಅತೀ ದೊಡ್ಡ ಪಕ್ಷವಾಗಿ ಕಾಂಗ್ರೆಸ್ ಹೊರ ಹೊಮ್ಮಿದೆ. ಅದು 8 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಬಿಜೆಪಿಗೆ ಏಳು ಸ್ಥಾನಗಳು ದಕ್ಕಿದರೆ, ಪಶ್ಚಿಮ ಬಂಗಾಳದಲ್ಲಿ ಎಲ್ಲಾ ನಾಲ್ಕು ಸ್ಥಾನಗಳು ಟಿಎಂಸಿಯ ಪಾಲಾಗಿದೆ.

ಒಟ್ಟು ಉಪಚುನಾವಣೆಯ ಫಲಿತಾಂಶ ಹೀಗಿದೆ

1. ಆಂಧ್ರಪ್ರದೇಶ

ಬದ್ವೇಲ್‌ ಕ್ಷೇತ್ರ – ವೈಎಸ್‌ಆರ್‌‌ ಕಾಂಗ್ರೆಸ್‌
ಕ್ಷೇತ್ರವು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಹಿಡಿತದಲ್ಲಿತ್ತು. ಉಪಚುನಾವಣೆಯಲ್ಲಿ ತನ್ನಲ್ಲೇ ಉಳಿಸಿಕೊಂಡಿದೆ.

2. ಅಸ್ಸಾಂ

ಭನಾನಿಪುರ್‌ – ಬಿಜೆಪಿ
ಗೋಸಾಯಿಗಾಂವ್ –  ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
ಮರಿಯಾನಿ – ಬಿಜೆಪಿ
ತಮುಲ್‌ಪುರ್‌ – ಯುಪಿಪಿಎಲ್‌ – (ಬಿಜೆಪಿ ಮೈತ್ರಿ ಪಕ್ಷ)
ಥೌರಾ – ಬಿಜೆಪಿ
ಬಿಜೆಪಿ ಗೆದ್ದ ಮೂರು ಕ್ಷೇತ್ರಗಳಲ್ಲಿ ಎರಡು ಕಾಂಗ್ರೆಸ್‌‌ನ ಹಿಡಿತದಲ್ಲಿದ್ದ ಕ್ಷೇತ್ರಗಳಾಗಿದ್ದು, ಒಂದು ಕ್ಷೇತ್ರ AIUDF ಹಿಡಿತದಲ್ಲಿದ್ದವು. ಯುಪಿಪಿಎಲ್‌ ಗೆದ್ದ ಎರಡು ಕ್ಷೇತ್ರಗಳಲ್ಲಿ ಒಂದು ತನ್ನದೇ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಮತ್ತೊಂದನ್ನು ಬೇರೆ ಪಕ್ಷದಿಂದ ತನ್ನ ತೆಕ್ಕೆಗೆ ಪಡೆದು ಕೊಂಡಿದೆ.

ಇದನ್ನೂ ಓದಿ: ನಾನೇಕೆ ಆರ್ ಎಸ್ ಎಸ್ ತೊರೆದೆ ಸರಣಿ; ದೇಶಕ್ಕಾಗಿ ಸಂಘದ ಸಖ್ಯ ಬಿಟ್ಟೆ!

3. ಬಿಹಾರ

ಕುಶೇಶ್ವರ ಆಸ್ಥಾನ – JDU
ತಾರಾಪುರ – JDU
ಕುಶೇಶ್ವರ ಆಸ್ಥಾನ ಮತ್ತು ತಾರಾಪುರದಲ್ಲಿ ಕ್ಷೇತ್ರಗಳಲ್ಲಿ ಜೆಡಿಯು ತನ್ನ ಸ್ಥಾನ ಉಳಿಸಿಕೊಂಡಿದೆ.

4. ಹರಿಯಾಣ

ಎಲ್ಲೇನಾಬಾದ್ – INLD ತನ್ನದೇ ಕ್ಷೇತ್ರವನ್ನು ಮತ್ತೇ ಗೆದ್ದುಕೊಂಡಿದೆ.

5. ಹಿಮಾಚಲ ಪ್ರದೇಶ

ಅರ್ಕಿ – ಕಾಂಗ್ರೆಸ್
ಫತೇಪುರ್ – ಕಾಂಗ್ರೆಸ್
ಜುಟ್ಟಬ್ – ಕಾಂಗ್ರೆಸ್
ಅರ್ಕಿ ಮತ್ತು ಫೆತೇಪುರ್‌ನಲ್ಲಿ ಕಾಂಗ್ರೆಸ್ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದರೆ, ಜುಟ್ಟಬ್‌ನಲ್ಲಿ ಹೊಸದಾಗಿ ಕ್ಷೇತ್ರವನ್ನು ಗೆದ್ದುಕೊಂಡಿದೆ.

6. ಕರ್ನಾಟಕ

ಹಾನಗಲ್‌ – ಕಾಂಗ್ರೆಸ್
ಸಿಂದಗಿ – ಬಿಜೆಪಿ
ಕರ್ನಾಟಕದಲ್ಲಿ ಬಿಜೆಪಿ ವಶದಲ್ಲಿ ಇದ್ದ ಹಾನಗಲ್‌ ಕ್ಷೇತ್ರವನ್ನು ಕಾಂಗ್ರೆಸ್ ವಶಪಡಿಸಿಕೊಂಡರೆ, ಜೆಡಿಎಸ್‌ ವಶದಲ್ಲಿದ್ದ ಸಿಂದಗಿಯನ್ನು ಬಿಜೆಪಿ ಗೆದ್ದುಕೊಂಡಿದೆ.

7. ಮಧ್ಯಪ್ರದೇಶ

ಜೋಬತ್ – ಬಿಜೆಪಿ
ಪೃಥ್ವಿಪುರ – ಬಿಜೆಪಿ
ರಾಯಗಾಂವ್ – ಕಾಂಗ್ರೆಸ್
ಜೋಬತ್ ಮತ್ತು ಪೃಥ್ವಿಪುರ ಕ್ಷೇತ್ರವನ್ನು ಬಿಜೆಪಿ ಬೇರೆ ಪಕ್ಷದಿಂದ ವಶಪಡಿಸಿಕೊಂಡರೆ, ಕಾಂಗ್ರೆಸ್‌ ರಾಯಗಾಂವ್ ಕ್ಷೇತ್ರವನ್ನು ಅನ್ನು ಹೊಸದಾಗಿ ಗೆದ್ದುಕೊಂಡಿದೆ.

8. ಮಹಾರಾಷ್ಟ್ರ

ದೆಗ್ಲೂರ್ – ಕಾಂಗ್ರೆಸ್
ಈ ಕ್ಷೇತ್ರವನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ತನ್ನಲ್ಲೇ ಉಳಿಸಿಕೊಂಡಿದೆ.

9. ಮೇಘಾಲಯ

ಮಾವ್‌ಫ್ಲಾಂಗ್‌ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
ಮೌರಿಂಗ್‌ಕೆಂಗ್ – ಯುನೈಟೆಡ್‌ ಡೆಮಾಕ್ರಟಿಕ್ ಪಾರ್ಟಿ
ರಾಜಬಾಲಾ – ನ್ಯಾಶನಲ್‌ ಪೀಪಲ್ಸ್‌ ಪಾರ್ಟಿ

10. ಮಿಜೋರಾಂ

ಟುಯಿರಿಯಲ್ – ಮಿಜೋ ನ್ಯಾಶನಲ್ ಫ್ರಂಟ್
ಬೇರೆ ಪಕ್ಷದಿಂದ ಕ್ಷೇತ್ರವನ್ನು ಗೆದ್ದುಕೊಂಡಿದೆ.

11. ನಾಗಾಲ್ಯಾಂಡ್

ಶಮ್ಟೋರ್ – ನ್ಯಾಶನಲಿಸ್ಟಿಕ್‌ ಡೆಮಾಕ್ರಟಿಕ್ ಪ್ರೊಗ್ರೇಸಿವ್ ಪಾರ್ಟಿ
ಅವಿರೋಧ ಆಯ್ಕೆ!

12. ರಾಜಸ್ಥಾನ

ಧರಿಯಾವಾಡ – ಕಾಂಗ್ರೆಸ್
ವಲ್ಲಭನಗರ – ಕಾಂಗ್ರೆಸ್
ಇಲ್ಲಿ ಕಾಂಗ್ರೆಸ್ ಒಂದು ತನ್ನದೇ ಕ್ಷೇತ್ರನ್ನು ಉಳಿಸಿಕೊಂಡು, ಮತ್ತೊಂದು ಕ್ಷೇತ್ರವನ್ನು ಬೇರೆ ಪಕ್ಷದಿಂದ ವಶಕ್ಕೆ ಪಡೆದಿದೆ.

13. ತೆಲಂಗಾಣ

ಹುಜೂರಾಬಾದ್ – ಬಿಜೆಪಿ
ಟಿಆರ್‌ಎಸ್‌ ಪಕ್ಷದಿಂದ ಬಿಜೆಪಿಯು ಈ ಕ್ಷೇತ್ರವನ್ನು ಗೆದ್ದುಕೊಂಡಿದೆ.

14. ಪಶ್ಚಿಮ ಬಂಗಾಳ

ದೀನ್‌ಹಟಾ – ಟಿಎಂಸಿ
ಗೋಸಾಬ – ಟಿಎಂಸಿ
ಖಾರ್ದಹೊ – ಟಿಎಂಸಿ
ಶಾಂತಿಪುರ – ಟಿಎಂಸಿ
ಇಲ್ಲಿ ಎರಡು ಕ್ಷೇತ್ರಗಳನ್ನು ಟಿಎಂಸಿ ತನ್ನದೇ ಕ್ಷೇತ್ರವನ್ನು ಗೆದ್ದುಕೊಂಡು, ಮತ್ತೆರೆಡು ಕ್ಷೇತ್ರವನ್ನು ಬಿಜೆಪಿಯಿಂದ ಗೆದ್ದುಕೊಂಡಿದೆ.

ಮಧ್ಯ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ದಾದ್ರ ನಗರ ಹಾವೇಲಿಯ ಮೂರು ಲೋಕಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಶಿವಸೇನೆ ತಲಾ ಒಂದೊಂದು ಕ್ಷೇತ್ರಗಳಲ್ಲಿ ಗೆಲುವು ಕಂಡಿವೆ.


ಇದನ್ನೂ ಓದಿ; ’ಪಂಜಾಬ್ ಲೋಕ್ ಕಾಂಗ್ರೆಸ್’: ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೊಸ ಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...