Homeಮುಖಪುಟಉಪ ಚುನಾವಣೆ: ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ - ಬಿಜೆಪಿ 2, AJSU 1 ಕಡೆ...

ಉಪ ಚುನಾವಣೆ: ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ – ಬಿಜೆಪಿ 2, AJSU 1 ಕಡೆ ಗೆಲುವು

- Advertisement -
- Advertisement -

ಐದು ರಾಜ್ಯಗಳ ಆರು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಮೂರು ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದರೆ, ಎರಡು ಕಡೆ ಬಿಜೆಪಿ ಮತ್ತು ಒಂದು ಕಡೆ AJSU ಪಕ್ಷ ಗೆಲುವು ಸಾಧಿಸಿದೆ.

ಮಹಾರಾಷ್ಟ್ರದ ಎರಡು ಕ್ಷೇತ್ರಗಳು, ತಮಿಳುನಾಡು, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳ ತಲಾ ಒಂದೊಂದು ಕ್ಷೇತ್ರಗಳಿಗೆ ಫೆಬ್ರವರಿ ತಿಂಗಳಿನಲ್ಲಿ ಉಪ ಚುನಾವಣೆ ನಡೆದಿತ್ತು.

ಪುಣೆ ನಗರದ ಹೃದಯಭಾಗದಲ್ಲಿರುವ, ಬಿಜೆಪಿಯ ಭದ್ರಕೋಟೆಯೆಂದೇ ಪರಿಗಣಿಸಲ್ಪಟ್ಟ ಕಸ್ಬಾ ಪೇಠ್‌ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಸುಮಾರು ಮೂರು ದಶಕ ಕಾಲ ಕಬ್ಬಾ ಪೇಠ್‌ನಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯನ್ನು ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿದೆ. ಮಹಾ ವಿಕಾಸ್ ಅಘಾಡಿ ಬೆಂಬಲದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರವೀಂದ್ರ ಧಾಂಗೇಕರ್ ಅವರು ಚುನಾವಣೆಯಲ್ಲಿ ಗೆದ್ದಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರಾದ ಲೋಕಮಾನ್ಯ ತಿಲಕ್ ಅವರ ಮರಿ ಮೊಮ್ಮಗಳು, ಬಿಜೆಪಿ ಶಾಸಕಿ ಮುಕ್ತಾ ತಿಲಕ್ ಅವರು ನಿಧನರಾಗಿದ್ದರಿಂದ ಕ್ಷೇತ್ರದಲ್ಲಿ ಚುನಾವಣೆ ನಿಗದಿಯಾಗಿತ್ತು. ಮುಕ್ತಾ ಅವರು 2019ರ ಚುನಾವಣೆಯಲ್ಲಿ ಗೆದ್ದಿದ್ದರು.

ಬಿಜೆಪಿ ಶಾಸಕರಾದ ಲಕ್ಷ್ಮಣ್ ಜಗತಾಪ್ ಅವರು ನಿಧನರಾಗಿದ್ದರಿಂದ ಚಿಂಚವಾಡ್ ಕ್ಷೇತ್ರಕ್ಕೂ ಚುನಾವಣೆ ನಿಗದಿಯಾಗಿತ್ತು. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ತಮಿಳುನಾಡಿನ ಈರೋಡ್ ಪೂರ್ವ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇವಿಕೆಎಸ್ ಇಳಂಗೋವನ್ ಗೆಲುವು ಸಾಧಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ತಿರುಮಹನ್ ಎವೆರಾ ನಿಧನದ ನಂತರ ಈರೋಡ್ ಪೂರ್ವ ವಿಧಾನಸಭಾ ಕ್ಷೇತ್ರ ತೆರವಾಗಿತ್ತು.

ಪಶ್ಚಿಮ ಬಂಗಾಳದ ಪಶ್ಚಿಮ ಬಂಗಾಳದ ಸಾಗರ್ದಿಘಿ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಪಕ್ಷದ ಅಭ್ಯರ್ಥಿ ಬೈರಾನ್‌ರವರು ಟಿಎಂಸಿ ಅಭ್ಯರ್ಥಿ ಎದುರು 22986 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಅರುಣಾಚಲ ಪ್ರದೇಶದ ಲುಮ್ಲಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮೇರಾಲ್ಬೋರ್ನ್ ಸೈಯಮ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಾರ್ಖಂಡ್‌ನ ರಾಮಗಢಕ್ಕೆ ಕ್ಷೇತ್ರದ ಶಾಸಕಿ ಮಮತಾ ದೇವಿ ಅವರ ಅನರ್ಹತೆಯಿಂದಾಗಿ ಆ ಸ್ಥಾನವು ತೆರವಾಗಿತ್ತು. ಅಲ್ಲಿ AJSU ಪಕ್ಷದ ಅಭ್ಯರ್ಥಿ ಸುನೀತಾ ಚೌಧರಿ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಉಪಚುನಾವಣೆ; ಬಿಜೆಪಿ ಭದ್ರಕೋಟೆ ಕಸ್ಬಾ ಪೇಠ್‌ನಲ್ಲಿ ಕಾಂಗ್ರೆಸ್‌ ಜಯಭೇರಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...