Homeಮುಖಪುಟಉಪ ಚುನಾವಣೆ: ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ - ಬಿಜೆಪಿ 2, AJSU 1 ಕಡೆ...

ಉಪ ಚುನಾವಣೆ: ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ – ಬಿಜೆಪಿ 2, AJSU 1 ಕಡೆ ಗೆಲುವು

- Advertisement -
- Advertisement -

ಐದು ರಾಜ್ಯಗಳ ಆರು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಮೂರು ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದರೆ, ಎರಡು ಕಡೆ ಬಿಜೆಪಿ ಮತ್ತು ಒಂದು ಕಡೆ AJSU ಪಕ್ಷ ಗೆಲುವು ಸಾಧಿಸಿದೆ.

ಮಹಾರಾಷ್ಟ್ರದ ಎರಡು ಕ್ಷೇತ್ರಗಳು, ತಮಿಳುನಾಡು, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳ ತಲಾ ಒಂದೊಂದು ಕ್ಷೇತ್ರಗಳಿಗೆ ಫೆಬ್ರವರಿ ತಿಂಗಳಿನಲ್ಲಿ ಉಪ ಚುನಾವಣೆ ನಡೆದಿತ್ತು.

ಪುಣೆ ನಗರದ ಹೃದಯಭಾಗದಲ್ಲಿರುವ, ಬಿಜೆಪಿಯ ಭದ್ರಕೋಟೆಯೆಂದೇ ಪರಿಗಣಿಸಲ್ಪಟ್ಟ ಕಸ್ಬಾ ಪೇಠ್‌ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಸುಮಾರು ಮೂರು ದಶಕ ಕಾಲ ಕಬ್ಬಾ ಪೇಠ್‌ನಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯನ್ನು ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿದೆ. ಮಹಾ ವಿಕಾಸ್ ಅಘಾಡಿ ಬೆಂಬಲದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರವೀಂದ್ರ ಧಾಂಗೇಕರ್ ಅವರು ಚುನಾವಣೆಯಲ್ಲಿ ಗೆದ್ದಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರಾದ ಲೋಕಮಾನ್ಯ ತಿಲಕ್ ಅವರ ಮರಿ ಮೊಮ್ಮಗಳು, ಬಿಜೆಪಿ ಶಾಸಕಿ ಮುಕ್ತಾ ತಿಲಕ್ ಅವರು ನಿಧನರಾಗಿದ್ದರಿಂದ ಕ್ಷೇತ್ರದಲ್ಲಿ ಚುನಾವಣೆ ನಿಗದಿಯಾಗಿತ್ತು. ಮುಕ್ತಾ ಅವರು 2019ರ ಚುನಾವಣೆಯಲ್ಲಿ ಗೆದ್ದಿದ್ದರು.

ಬಿಜೆಪಿ ಶಾಸಕರಾದ ಲಕ್ಷ್ಮಣ್ ಜಗತಾಪ್ ಅವರು ನಿಧನರಾಗಿದ್ದರಿಂದ ಚಿಂಚವಾಡ್ ಕ್ಷೇತ್ರಕ್ಕೂ ಚುನಾವಣೆ ನಿಗದಿಯಾಗಿತ್ತು. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ತಮಿಳುನಾಡಿನ ಈರೋಡ್ ಪೂರ್ವ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇವಿಕೆಎಸ್ ಇಳಂಗೋವನ್ ಗೆಲುವು ಸಾಧಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ತಿರುಮಹನ್ ಎವೆರಾ ನಿಧನದ ನಂತರ ಈರೋಡ್ ಪೂರ್ವ ವಿಧಾನಸಭಾ ಕ್ಷೇತ್ರ ತೆರವಾಗಿತ್ತು.

ಪಶ್ಚಿಮ ಬಂಗಾಳದ ಪಶ್ಚಿಮ ಬಂಗಾಳದ ಸಾಗರ್ದಿಘಿ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಪಕ್ಷದ ಅಭ್ಯರ್ಥಿ ಬೈರಾನ್‌ರವರು ಟಿಎಂಸಿ ಅಭ್ಯರ್ಥಿ ಎದುರು 22986 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಅರುಣಾಚಲ ಪ್ರದೇಶದ ಲುಮ್ಲಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮೇರಾಲ್ಬೋರ್ನ್ ಸೈಯಮ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಾರ್ಖಂಡ್‌ನ ರಾಮಗಢಕ್ಕೆ ಕ್ಷೇತ್ರದ ಶಾಸಕಿ ಮಮತಾ ದೇವಿ ಅವರ ಅನರ್ಹತೆಯಿಂದಾಗಿ ಆ ಸ್ಥಾನವು ತೆರವಾಗಿತ್ತು. ಅಲ್ಲಿ AJSU ಪಕ್ಷದ ಅಭ್ಯರ್ಥಿ ಸುನೀತಾ ಚೌಧರಿ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಉಪಚುನಾವಣೆ; ಬಿಜೆಪಿ ಭದ್ರಕೋಟೆ ಕಸ್ಬಾ ಪೇಠ್‌ನಲ್ಲಿ ಕಾಂಗ್ರೆಸ್‌ ಜಯಭೇರಿ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನಾಡಾ’ದಿಂದ ಕುಸ್ತಿಪಟು ಬಜರಂಗ್ ಪುನಿಯಾ ಅಮಾನತು: ವರದಿ

0
ಡೋಪಿಂಗ್ ಪರೀಕ್ಷೆ (ಮಾದಕವಸ್ತು ಪತ್ತೆ ಪರೀಕ್ಷೆ)ಗೆ ಸರಿಯಾದ ಸಮಯಕ್ಕೆ ಮೂತ್ರದ ಮಾದರಿಯನ್ನು ನೀಡದ ಆರೋಪದ ಮೇಲೆ ಒಲಿಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ...