Homeಮುಖಪುಟಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ಎದುರು ಸ್ಪರ್ಧಿಸದಿರಲು ಕಾಂಗ್ರೆಸ್ ನಿರ್ಧಾರ

ಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ಎದುರು ಸ್ಪರ್ಧಿಸದಿರಲು ಕಾಂಗ್ರೆಸ್ ನಿರ್ಧಾರ

- Advertisement -
- Advertisement -

ಸೆಪ್ಟಂಬರ್ 30 ರಂದು ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಹಾಲಿ ಸಿಎಂ ಮತ್ತು ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಎದುರು ಅಭ್ಯರ್ಥಿ ಹಾಕದಿರಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಿಎಂ ಆಗಿ ಮುಂದುವರೆಯಲು ಶಾಸಕರಾಗಿ ಆಯ್ಕೆಯಾಗಲೇಬೇಕಿದೆ. ಹಾಗಾಗಿ ಅವರು ತಮ್ಮ ಭದ್ರಕೋಟೆ  ಭವಾನಿಪುರದಿಂದ ಚುನಾವಣೆಗೆ ಇಳಿಯುತ್ತಿದ್ದಾರೆ. ಇಲ್ಲಿ ಅವರಿಗೆ ಅನುಕೂಲ ಮಾಡಿಕೊಡಲು ಕಾಂಗ್ರೆಸ್ ಅಭ್ಯರ್ಥಿ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಕಾಂಗ್ರೆಸ್ ಪಕ್ಷವು ಒಂದು ವೇಳೆ ಅಭ್ಯರ್ಥಿ ಕಣಕ್ಕಿಳಿಸಿದರೆ ಮಮತಾ ಬ್ಯಾನರ್ಜಿಗೆ ಹಿನ್ನಡೆಯುಂಟಾಗುವ ಸಂಭವವಿದೆ. ಹಾಗಾಗಿ ಅವರ ವಿರುದ್ದ ಸ್ಪರ್ಧಿಸದಂತೆ ಹೈಕಮಾಂಡ್ ಸೂಚಿಸಿದೆ ಎಂದು ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

2024 ರ ಲೋಕಸಭಾ ಚುಣಾವಣೆಯ ದೃಷ್ಟಿಯಿಂದಲೂ ಬಿಜೆಪಿಯನ್ನು ಸಂಘಟಿತವಾಗಿ ಎದುರಿಸಲು ಕಾಂಗ್ರೆಸ್ ಮತ್ತು ಟಿಎಂಸಿ ನೋಡುತ್ತಿವೆ. ಹಾಗಾಗಿ ಸೌಜನ್ಯದ ದೃಷ್ಟಿಯಿಂದ ಮಮತಾ ಬ್ಯಾನರ್ಜಿ ಆಯ್ಕೆಗೆ ಕಾಂಗ್ರೆಸ್ ಸಹಕರಿಸುತ್ತಿದೆ.

ಈ ಮೊದಲು ಕಾಂಗ್ರೆಸ್ ಟಿಎಂಸಿಯ ಮಮತಾ ಬ್ಯಾನರ್ಜಿ ಎದುರು ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಹಲವು ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಹಾಗಾಗಿ ಅಂತಿಮ ನಿರ್ಧಾರವನ್ನು ಹೈಕಮಾಂಡ್‌ಗೆ ಬಿಡಲಾಗಿತ್ತು. ಹೈಕಮಾಂಡ್ ಸ್ಪರ್ಧಿಸದಂತೆ ನಿರ್ಧಾರ ತೆಗೆದುಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಡಪಕ್ಷಗಳು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದವು. ಆದರೆ ಇಬ್ಬರಿಗೂ ತೀವ್ರ ಸೋಲು ಉಂಟಾಗಿತ್ತು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧಿಸದಿದ್ದರೆ ತಾವು ಸ್ಪರ್ಧಿಸುವುದಾಗಿ ಎಡಪಕ್ಷಗಳು ತಿಳಿಸಿದ್ದವು. ಈಗ ಕಾಂಗ್ರೆಸ್ ತೀರ್ಮಾನದ ನಂತರ ಅವರು ಯಾವ ನಿಲುವು ತೆಗೆದುಕೊಳ್ಳುತ್ತಾರೆ ಎಂಬುದು ಕುತೂಹಲ ಹುಟ್ಟಿಸಿದೆ.

ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತನ್ನ ಸ್ವಕ್ಷೇತ್ರ ಭವಾನಿಪುರ ಬಿಟ್ಟು, ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಸುವೆಂದು ಅಧಿಕಾರಿ ವಿರುದ್ಧ ನಂದಿಗ್ರಾಮದಿಂದ ಮಮತಾ ಬ್ಯಾನರ್ಜಿ ಸ್ಪರ್ಧಿಸಿದ್ದರು. ಕಡಿಮೆ ಅಂತರದಲ್ಲಿ ಸೋಲುಂಡಿದ್ದರು. ನಂದಿಗ್ರಾಮ ಫಲಿತಾಂಶದ ವಿರುದ್ಧ ಮಮತಾ ಬ್ಯಾನರ್ಜಿಯವರು ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಯುತ್ತಿದೆ. ಇದೇ ಸಮಯದಲ್ಲಿ ತಮ್ಮ ಸಿಎಂ ಸ್ಥಾನ ಉಳಿಸಿಕೊಲ್ಳುವ ಸಲುವಾಗಿ ತಮ್ಮ ಭದ್ರಕೋಟೆ ಭವಾನಿಪುರದಿಂದ ಕಣಕ್ಕಿಳಿಯುತ್ತಿದ್ದಾರೆ.

ಸದ್ಯ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಸೆಪ್ಟಂಬರ್ 30 ರಂದು ನಡೆಯಲಿರುವ ಉಪಚುನಾವಣೆಗೆ ಟಿಎಂಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಅಕ್ಟೋಬರ್ 3 ರಂದು ಫಲಿತಾಂಶ ಘೋಷಣೆಯಾಗಲಿದೆ.


ಇದನ್ನೂ ಓದಿ; ಕರ್ನಾಲ್‌: ಮುಂದುವರೆದ ರೈತ ಪ್ರತಿಭಟನೆ, ಸರ್ಕಾರಿ ಕಚೇರಿಗಳ ಹೊರಗೆ ಜಮಾಯಿಸಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮಗೆ ತಿಳಿಯಲಾರದ ಏಷ್ಟೋ ವಿಚಾರಗಳನ್ನು ತಿಳಿಸುತ್ತಿರುವ ನಿಮಗೆ ಎನ್ನ ಹೃದಯ ಪೂರ್ವಕ ಅಭಿನಂದನೆಗಳು ಸರ್.

  2. ಇ ನಿರ್ದಾರ ಅಸೆಂಬ್ಲಿ ಚುನಾವಣೇಲಿ ತಗೋಬೇಕಾಗಿತ್ತು.

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...