Homeಕರ್ನಾಟಕ29 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ: ಬಿಜೆಪಿ- ಕಾಂಗ್ರೆಸ್‌ ನಡುವೆ ಭಾರೀ ಫೈಟ್‌

29 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ: ಬಿಜೆಪಿ- ಕಾಂಗ್ರೆಸ್‌ ನಡುವೆ ಭಾರೀ ಫೈಟ್‌

- Advertisement -
- Advertisement -

13 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ಸೇರಿ ಒಟ್ಟು 29 ವಿಧಾನಸಭಾ ಕ್ಷೇತ್ರ, ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.

29 ಕ್ಷೇತ್ರಗಳಲ್ಲಿ ಬಿಜೆಪಿ 6 ಮತ್ತು ಕಾಂಗ್ರೆಸ್ 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಅಸ್ಸಾಂನ ಐದು ಸ್ಥಾನಗಳ ಪೈಕಿ ಬಿಜೆಪಿ ಮೂರರಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಒಂದರಲ್ಲಿ ಮುನ್ನಡೆಯಲ್ಲಿದೆ. ಬಿಜೆಪಿಯ ಮೈತ್ರಿಕೂಟದ ಯುಪಿಪಿಎಲ್‌ಗೆ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.

ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್ ಒಂದು ಸ್ಥಾನದಲ್ಲಿ ಮುಂದಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ 2 ಸ್ಥಾನಗಳಲ್ಲಿ ಮುಂದಿದೆ. ಈ ಚುನಾವಣೆಯು ಅಶೋಕ್ ಗೆಹ್ಲೋಟ್ ಸರ್ಕಾರದ ಕಾರ್ಯಕ್ಷಮತೆಯ ಮೇಲಿನ ಜನಾಭಿಪ್ರಾಯ ಎಂದು ಬಿಂಬಿಸಲಾಗಿದೆ.

ಬಂಗಾಳದ ಎಲ್ಲಾ ನಾಲ್ಕು ಸ್ಥಾನಗಳಲ್ಲಿ ತೃಣಮೂಲ ಕಾಂಗ್ರೆಸ್ ಮುಂದಿದೆ. ಏಪ್ರಿಲ್-ಮೇನಲ್ಲಿ ನಡೆದ ರಾಜ್ಯ ಚುನಾವಣೆಯಲ್ಲಿ ತೃಣಮೂಲದ ಭರ್ಜರಿ ಗೆಲುವಿನ ನಂತರ ಪ್ರಸ್ತುತ ಶಾಸಕರು ಮತ್ತು ಹಿರಿಯ ನಾಯಕರ ವಲಸೆ ಹೊರಟರು. ಹೀಗಾಗಿ ದೀನ್‌ಹಟಾ ಮತ್ತು ಶಾಂತಿಪುರದ ಉಪಚುನಾವಣೆಗಳು ಬಿಜೆಪಿಗೆ ಪ್ರತಿಷ್ಠೆಯ ಕಣಗಳಾಗಿವೆ.

ಕರ್ನಾಟಕದ ಎರಡು ಸ್ಥಾನಗಳಲ್ಲಿ ಬಿಜೆಪಿ ಒಂದು ಸ್ಥಾನದಲ್ಲಿ, ಕಾಂಗ್ರೆಸ್ ಒಂದರಲ್ಲಿ ಮುಂದಿದೆ. ಬಿ.ಎಸ್.ಯಡಿಯೂರಪ್ಪ ಅವರ ನಂತರ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಸಿಂದಗಿ ಮತ್ತು ಹಾನಗಲ್‌ ಉಪಚುನಾವಣೆ ಪ್ರತಿಷ್ಠೆಯ ಕಣವಾಗಿದೆ.

ಅಸ್ಸಾಂನಲ್ಲಿ ಐದು, ಬಂಗಾಳದಲ್ಲಿ ನಾಲ್ಕು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಮೇಘಾಲಯದಲ್ಲಿ ತಲಾ ಮೂರು, ಬಿಹಾರ, ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ತಲಾ ಎರಡು ಮತ್ತು ಆಂಧ್ರಪ್ರದೇಶ, ಹರಿಯಾಣ, ಮಹಾರಾಷ್ಟ್ರದಲ್ಲಿ ತಲಾ ಒಂದು ಸ್ಥಾನಗಳಿಗೆ ಉಪಚುನಾವಣೆ ನಡೆದಿದೆ.

ದಾದ್ರಾ ಮತ್ತು ನಗರ ಹವೇಲಿ, ಹಿಮಾಚಲ ಪ್ರದೇಶದ ಮಂಡಿ, ಮಧ್ಯಪ್ರದೇಶದ ಖಾಂಡ್ವಾ ಲೋಕಸಭಾ ಕ್ಷೇತ್ರಗಳಲ್ಲಿ ಹಾಲಿ ಸದಸ್ಯರು ಸಾವನ್ನಪ್ಪಿದ್ದರು. ಹೀಗಾಗಿ ಚುನಾವಣೆ ನಡೆದಿದೆ.

ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್‌ಎಸ್‌, ಪ್ರತಿಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ಹುಜೂರಾಬಾದ್ ವಿಧಾನಸಭಾ ಕ್ಷೇತ್ರಕ್ಕಾಗಿ ಸೆಣಸಾಡುತ್ತಿವೆ. ಭೂಕಬಳಿಕೆ ಆರೋಪದ ನಂತರ ಶಾಸಕ ಈಟಾಲ ರಾಜೇಂದರ್ ರಾಜೀನಾಮೆ ನೀಡಿದ್ದಾರೆ. ಆರೋಪವನ್ನು ತಳ್ಳಿಹಾಕಿರುವ ರಾಜೇಂದರ್, ಟಿಆರ್‌ಎಸ್‌ ತೊರೆದು ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.


ಇದನ್ನೂ ಓದಿರಿ: ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿ, ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...