Homeಕರ್ನಾಟಕಉಪಚುನಾವಣೆ - ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ..... ಹೋದ್ರೆ....

ಉಪಚುನಾವಣೆ – ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ….. ಹೋದ್ರೆ….

- Advertisement -
- Advertisement -

ಅನರ್ಹ ಶಾಸಕರ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಪ್ರಚಾರಕ್ಕೆ ಅಣಿಯಾಗುತ್ತಿದ್ದರೆ ಬಿಜೆಪಿ ಪಾಳೆಯದಲ್ಲಿ ಸದ್ದೇ ಇಲ್ಲ. ಅದರಲ್ಲೂ ಬೆಳಗಾವಿಯಲ್ಲಿ (ಈ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಬೇಕಿದೆ) ಬೃಹತ್ ಪ್ರತಿಭಟನೆ ಮತ್ತು ಹೊಸಕೋಟೆಯಲ್ಲಿ ಸಮಾವೇಶ ಮಾಡಿರುವ ಕಾಂಗ್ರೆಸ್ ‘ಇವರನ್ನು ಸೋಲಿಸಿಯೇ ಸಿದ್ಧ’ ಎಂದು ಪಣ ತೊಟ್ಟಂತಿದೆ. ಕೆಪಿಸಿಸಿ ಕಚೇರಿಯಲ್ಲಿ ಸಭೆಗಳ ಮೇಲೆ ಸಭೆಗಳು ನಡೆಯುತ್ತಿದ್ದು, ಪ್ರತಿ ಕ್ಷೇತ್ರಕ್ಕೂ ವೀಕ್ಷಕರ ನೇಮಕಾತಿಯಾಗಿಯೇ ಒಂದು ತಿಂಗಳಾಗಿದೆ. ಜೆಡಿಎಸ್ ಸಹಾ ಅದರ ಸಾರಥಿಗಳ ನೇತೃತ್ವದಲ್ಲಿ ಸಭೆಗಳನ್ನು ನಡೆಸಿದೆ. ಯಡಿಯೂರಪ್ಪನವರು ಮತ್ತು ಅನರ್ಹ ಶಾಸಕರು ಭೇಟಿ ಮಾಡಿ ಚರ್ಚಿಸಿದ್ದಾರಾದರೂ, ಬಿಜೆಪಿ ಕಚೇರಿ ಹಾಗೂ ಸಂಘಟನೆಗೂ ಈ ಉಪಚುನಾವಣೆಗೂ ಯಾವುದೇ ಸಂಬಂಧವಿಲ್ಲದಂತೆ ಇವೆ.

ಈ ಉಪಚುನಾವಣೆ ಏನಿದ್ದರೂ ಆಯಾ ಅನರ್ಹ ಶಾಸಕರು ಮತ್ತು ಯಡಿಯೂರಪ್ಪನವರಿಗೆ ಸಂಬಂಧಿಸಿದ್ದು ಎಂಬಂತೆ ಬಿಜೆಪಿಯು ವರ್ತಿಸುತ್ತಿದೆ. ಬಿಜೆಪಿ ಯಾವಾಗಲೂ ಗೆಲ್ಲುತ್ತಾ ಬಂದಿರುವುದು ಮತದಾರರು ತಮ್ಮಂತೆ ತಾವೇ ಆ ಪಕ್ಷದ ಜೊತೆಗೆ ಇದ್ದಾರೆ ಎಂಬ ಕಾರಣಕ್ಕಲ್ಲ. ಸಂಘಪರಿವಾರದ ಸಂಘಟನೆಗಳು ಮತ್ತು ಚುನಾವಣಾ ಯಂತ್ರಾಂಗ ವ್ಯವಸ್ಥಿತವಾಗಿ ಫೀಲ್ಡಿಗಿಳಿಯುತ್ತಾರೆ. ಈ ಸಾರಿ ಆ ರೀತಿ ಆಗಲಿಕ್ಕಿಲ್ಲ ಎಂಬ ಸ್ಪಷ್ಟ ಸೂಚನೆಗಳು ಈಗಾಗಲೇ ಸಂಭವಿಸಿವೆ.

ಇದಕ್ಕೆ ಕಾರಣಗಳು ಮೂರು. ಒಂದು, ಸದರಿ ಅನರ್ಹ ಶಾಸಕರು ಸಂಘಪರಿವಾರದ ಮೂಲದವರಲ್ಲ. ಬಹಳ ಕೆಟ್ಟ ರೀತಿಯಲ್ಲಿ ಆಮಿಷಕ್ಕೊಳಗಾಗಿ ಬಿಜೆಪಿಯ ಕಡೆಗೆ ಬಂದವರು. ಹಾಗಾಗಿ ಮುಂದೆಯೂ ಇವರ ನಿಷ್ಠೆ ಸಂಶಯಾಸ್ಪದ. ಎರಡು, ಇವರು ಗೆದ್ದ ಬಂದರೆ ಬಿಜೆಪಿ ಪ್ರಬಲವಾಗುತ್ತದೆ ಎಂಬುದಕ್ಕಿಂತ ಯಡಿಯೂರಪ್ಪನವರು ಪ್ರಬಲರಾಗುತ್ತಾರೆ; ಇದು ಬಿಜೆಪಿಯ ತ್ರೈಕಮ್ಯಾಂಡ್‍ಗೆ (ಮೋದಿ, ಶಾ, ಸಂತೋಷ್) ಬೇಕಿಲ್ಲ.

ಮೂರನೆಯದ್ದೇ ಮುಖ್ಯವಾದುದು. ಪ್ರತಿ ಕ್ಷೇತ್ರದಲ್ಲಿರುವ ಬಿಜೆಪಿಯ ಹಳೆಯ ಕಾರ್ಯಕರ್ತರು, ಪಕ್ಷವನ್ನು ಈ ಪಕ್ಷಾಂತರಿಗಳ ಗೆಲುವಿಗೆ ದುಡಿಸಿದರೆ ಮುಂದೆ ಅದರಿಂದ ಬಿಜೆಪಿಗೆ ಅನುಕೂಲವಾಗುತ್ತದೋ ಇಲ್ಲವೋ ಹೇಳಲು ಬರುವುದಿಲ್ಲ. ಇವರುಗಳು ಸೋಲಲೂಬಹುದು. ಅಂತಹ ಸಂದರ್ಭದಲ್ಲಿ ಸರ್ಕಾರವೇ ಬಿದ್ದು ಹೋಗಿ, ಅನರ್ಹ ಶಾಸಕರೂ ಬಿಜೆಪಿಯಲ್ಲಿ ಉಳಿಯದೇ, ಹಳೆಯ ಕಾರ್ಯಕರ್ತರೂ ಮುನಿಸಿಕೊಂಡರೆ ಪಕ್ಷಕ್ಕೆ ಡ್ಯಾಮೇಜು. ಅದರ ಬದಲಿಗೆ, ನಮ್ಮ ಸಂಘಟನೆ ನಾವು ಉಳಿಸಿಕೊಂಡರೆ ಮುಂದಿನ ಚುನಾವಣೆಯಲ್ಲಾದರೂ ಅನುಕೂಲವಾಗುತ್ತದೆ. ಸರ್ಕಾರ ಬಿದ್ದು ಹೋದರೆ ಒಳ್ಳೆಯದೇ. ಮಧ್ಯಂತರ ಚುನಾವಣೆಯಲ್ಲಿ ಗೆದ್ದು ಬರೋಣ ಎಂಬುದು ಬಿಜೆಪಿ ಪಕ್ಷದ ಇರಾದೆ.

ಒಂದು ವೇಳೆ ಹೆಚ್ಚಿನ ಬಿಜೆಪಿ ಅಭ್ಯರ್ಥಿಗಳು ಗೆದ್ದು ಬಂದರೆ ಅದೂ ಒಳ್ಳೆಯದೇ. ಸರ್ಕಾರ ಉಳಿದುಕೊಳ್ಳುತ್ತದೆ. ಮೂವರು ಉಪಮುಖ್ಯಮಂತ್ರಿಗಳ ಮೂಲಕ ಯಡಿಯೂರಪ್ಪನವರನ್ನು ನಿಯಂತ್ರಿಸುತ್ತಾ, ಪಕ್ಷವನ್ನು ಬೆಳೆಸಿಕೊಳ್ಳೋಣ. ನಂತರ ನೋಡೋಣ ಎಂದು ಬಿಜೆಪಿಯು ಭಾವಿಸಿದೆ. ಹಾಗಾಗಿಯೇ ತಳಮಟ್ಟದಲ್ಲಾಗಲೀ, ಮೇಲ್ಮಟ್ಟದಲ್ಲಾಗಲೀ ಬಿಜೆಪಿ ಪಕ್ಷವು ಯಾವ ತಯಾರಿಯನ್ನೂ ನಡೆಸದೇ ಸುಮ್ಮನೇ ಕುಳಿತಿದೆ. ಹಾಗಾಗಿಯೇ ಅವರ ಮಟ್ಟಿಗೆ ಇದೊಂಥರಾ ಬಂದ್ರೆ ಬೆಟ್ಟ, ಹೋದ್ರೆ . .. .. ಎಂಬಂತಿದೆ ಎಂಬುದು ಬಿಜೆಪಿಯ ವಲಯಗಳಲ್ಲಿ ಕೇಳಿ ಬರುತ್ತಿರುವ ಮಾತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...