Homeಕರ್ನಾಟಕಉಪಚುನಾವಣೆ - ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ..... ಹೋದ್ರೆ....

ಉಪಚುನಾವಣೆ – ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ….. ಹೋದ್ರೆ….

- Advertisement -
- Advertisement -

ಅನರ್ಹ ಶಾಸಕರ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಪ್ರಚಾರಕ್ಕೆ ಅಣಿಯಾಗುತ್ತಿದ್ದರೆ ಬಿಜೆಪಿ ಪಾಳೆಯದಲ್ಲಿ ಸದ್ದೇ ಇಲ್ಲ. ಅದರಲ್ಲೂ ಬೆಳಗಾವಿಯಲ್ಲಿ (ಈ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಬೇಕಿದೆ) ಬೃಹತ್ ಪ್ರತಿಭಟನೆ ಮತ್ತು ಹೊಸಕೋಟೆಯಲ್ಲಿ ಸಮಾವೇಶ ಮಾಡಿರುವ ಕಾಂಗ್ರೆಸ್ ‘ಇವರನ್ನು ಸೋಲಿಸಿಯೇ ಸಿದ್ಧ’ ಎಂದು ಪಣ ತೊಟ್ಟಂತಿದೆ. ಕೆಪಿಸಿಸಿ ಕಚೇರಿಯಲ್ಲಿ ಸಭೆಗಳ ಮೇಲೆ ಸಭೆಗಳು ನಡೆಯುತ್ತಿದ್ದು, ಪ್ರತಿ ಕ್ಷೇತ್ರಕ್ಕೂ ವೀಕ್ಷಕರ ನೇಮಕಾತಿಯಾಗಿಯೇ ಒಂದು ತಿಂಗಳಾಗಿದೆ. ಜೆಡಿಎಸ್ ಸಹಾ ಅದರ ಸಾರಥಿಗಳ ನೇತೃತ್ವದಲ್ಲಿ ಸಭೆಗಳನ್ನು ನಡೆಸಿದೆ. ಯಡಿಯೂರಪ್ಪನವರು ಮತ್ತು ಅನರ್ಹ ಶಾಸಕರು ಭೇಟಿ ಮಾಡಿ ಚರ್ಚಿಸಿದ್ದಾರಾದರೂ, ಬಿಜೆಪಿ ಕಚೇರಿ ಹಾಗೂ ಸಂಘಟನೆಗೂ ಈ ಉಪಚುನಾವಣೆಗೂ ಯಾವುದೇ ಸಂಬಂಧವಿಲ್ಲದಂತೆ ಇವೆ.

ಈ ಉಪಚುನಾವಣೆ ಏನಿದ್ದರೂ ಆಯಾ ಅನರ್ಹ ಶಾಸಕರು ಮತ್ತು ಯಡಿಯೂರಪ್ಪನವರಿಗೆ ಸಂಬಂಧಿಸಿದ್ದು ಎಂಬಂತೆ ಬಿಜೆಪಿಯು ವರ್ತಿಸುತ್ತಿದೆ. ಬಿಜೆಪಿ ಯಾವಾಗಲೂ ಗೆಲ್ಲುತ್ತಾ ಬಂದಿರುವುದು ಮತದಾರರು ತಮ್ಮಂತೆ ತಾವೇ ಆ ಪಕ್ಷದ ಜೊತೆಗೆ ಇದ್ದಾರೆ ಎಂಬ ಕಾರಣಕ್ಕಲ್ಲ. ಸಂಘಪರಿವಾರದ ಸಂಘಟನೆಗಳು ಮತ್ತು ಚುನಾವಣಾ ಯಂತ್ರಾಂಗ ವ್ಯವಸ್ಥಿತವಾಗಿ ಫೀಲ್ಡಿಗಿಳಿಯುತ್ತಾರೆ. ಈ ಸಾರಿ ಆ ರೀತಿ ಆಗಲಿಕ್ಕಿಲ್ಲ ಎಂಬ ಸ್ಪಷ್ಟ ಸೂಚನೆಗಳು ಈಗಾಗಲೇ ಸಂಭವಿಸಿವೆ.

ಇದಕ್ಕೆ ಕಾರಣಗಳು ಮೂರು. ಒಂದು, ಸದರಿ ಅನರ್ಹ ಶಾಸಕರು ಸಂಘಪರಿವಾರದ ಮೂಲದವರಲ್ಲ. ಬಹಳ ಕೆಟ್ಟ ರೀತಿಯಲ್ಲಿ ಆಮಿಷಕ್ಕೊಳಗಾಗಿ ಬಿಜೆಪಿಯ ಕಡೆಗೆ ಬಂದವರು. ಹಾಗಾಗಿ ಮುಂದೆಯೂ ಇವರ ನಿಷ್ಠೆ ಸಂಶಯಾಸ್ಪದ. ಎರಡು, ಇವರು ಗೆದ್ದ ಬಂದರೆ ಬಿಜೆಪಿ ಪ್ರಬಲವಾಗುತ್ತದೆ ಎಂಬುದಕ್ಕಿಂತ ಯಡಿಯೂರಪ್ಪನವರು ಪ್ರಬಲರಾಗುತ್ತಾರೆ; ಇದು ಬಿಜೆಪಿಯ ತ್ರೈಕಮ್ಯಾಂಡ್‍ಗೆ (ಮೋದಿ, ಶಾ, ಸಂತೋಷ್) ಬೇಕಿಲ್ಲ.

ಮೂರನೆಯದ್ದೇ ಮುಖ್ಯವಾದುದು. ಪ್ರತಿ ಕ್ಷೇತ್ರದಲ್ಲಿರುವ ಬಿಜೆಪಿಯ ಹಳೆಯ ಕಾರ್ಯಕರ್ತರು, ಪಕ್ಷವನ್ನು ಈ ಪಕ್ಷಾಂತರಿಗಳ ಗೆಲುವಿಗೆ ದುಡಿಸಿದರೆ ಮುಂದೆ ಅದರಿಂದ ಬಿಜೆಪಿಗೆ ಅನುಕೂಲವಾಗುತ್ತದೋ ಇಲ್ಲವೋ ಹೇಳಲು ಬರುವುದಿಲ್ಲ. ಇವರುಗಳು ಸೋಲಲೂಬಹುದು. ಅಂತಹ ಸಂದರ್ಭದಲ್ಲಿ ಸರ್ಕಾರವೇ ಬಿದ್ದು ಹೋಗಿ, ಅನರ್ಹ ಶಾಸಕರೂ ಬಿಜೆಪಿಯಲ್ಲಿ ಉಳಿಯದೇ, ಹಳೆಯ ಕಾರ್ಯಕರ್ತರೂ ಮುನಿಸಿಕೊಂಡರೆ ಪಕ್ಷಕ್ಕೆ ಡ್ಯಾಮೇಜು. ಅದರ ಬದಲಿಗೆ, ನಮ್ಮ ಸಂಘಟನೆ ನಾವು ಉಳಿಸಿಕೊಂಡರೆ ಮುಂದಿನ ಚುನಾವಣೆಯಲ್ಲಾದರೂ ಅನುಕೂಲವಾಗುತ್ತದೆ. ಸರ್ಕಾರ ಬಿದ್ದು ಹೋದರೆ ಒಳ್ಳೆಯದೇ. ಮಧ್ಯಂತರ ಚುನಾವಣೆಯಲ್ಲಿ ಗೆದ್ದು ಬರೋಣ ಎಂಬುದು ಬಿಜೆಪಿ ಪಕ್ಷದ ಇರಾದೆ.

ಒಂದು ವೇಳೆ ಹೆಚ್ಚಿನ ಬಿಜೆಪಿ ಅಭ್ಯರ್ಥಿಗಳು ಗೆದ್ದು ಬಂದರೆ ಅದೂ ಒಳ್ಳೆಯದೇ. ಸರ್ಕಾರ ಉಳಿದುಕೊಳ್ಳುತ್ತದೆ. ಮೂವರು ಉಪಮುಖ್ಯಮಂತ್ರಿಗಳ ಮೂಲಕ ಯಡಿಯೂರಪ್ಪನವರನ್ನು ನಿಯಂತ್ರಿಸುತ್ತಾ, ಪಕ್ಷವನ್ನು ಬೆಳೆಸಿಕೊಳ್ಳೋಣ. ನಂತರ ನೋಡೋಣ ಎಂದು ಬಿಜೆಪಿಯು ಭಾವಿಸಿದೆ. ಹಾಗಾಗಿಯೇ ತಳಮಟ್ಟದಲ್ಲಾಗಲೀ, ಮೇಲ್ಮಟ್ಟದಲ್ಲಾಗಲೀ ಬಿಜೆಪಿ ಪಕ್ಷವು ಯಾವ ತಯಾರಿಯನ್ನೂ ನಡೆಸದೇ ಸುಮ್ಮನೇ ಕುಳಿತಿದೆ. ಹಾಗಾಗಿಯೇ ಅವರ ಮಟ್ಟಿಗೆ ಇದೊಂಥರಾ ಬಂದ್ರೆ ಬೆಟ್ಟ, ಹೋದ್ರೆ . .. .. ಎಂಬಂತಿದೆ ಎಂಬುದು ಬಿಜೆಪಿಯ ವಲಯಗಳಲ್ಲಿ ಕೇಳಿ ಬರುತ್ತಿರುವ ಮಾತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...