Homeಕರ್ನಾಟಕಉಪಚುನಾವಣೆ - ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ..... ಹೋದ್ರೆ....

ಉಪಚುನಾವಣೆ – ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ….. ಹೋದ್ರೆ….

- Advertisement -
- Advertisement -

ಅನರ್ಹ ಶಾಸಕರ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಪ್ರಚಾರಕ್ಕೆ ಅಣಿಯಾಗುತ್ತಿದ್ದರೆ ಬಿಜೆಪಿ ಪಾಳೆಯದಲ್ಲಿ ಸದ್ದೇ ಇಲ್ಲ. ಅದರಲ್ಲೂ ಬೆಳಗಾವಿಯಲ್ಲಿ (ಈ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಬೇಕಿದೆ) ಬೃಹತ್ ಪ್ರತಿಭಟನೆ ಮತ್ತು ಹೊಸಕೋಟೆಯಲ್ಲಿ ಸಮಾವೇಶ ಮಾಡಿರುವ ಕಾಂಗ್ರೆಸ್ ‘ಇವರನ್ನು ಸೋಲಿಸಿಯೇ ಸಿದ್ಧ’ ಎಂದು ಪಣ ತೊಟ್ಟಂತಿದೆ. ಕೆಪಿಸಿಸಿ ಕಚೇರಿಯಲ್ಲಿ ಸಭೆಗಳ ಮೇಲೆ ಸಭೆಗಳು ನಡೆಯುತ್ತಿದ್ದು, ಪ್ರತಿ ಕ್ಷೇತ್ರಕ್ಕೂ ವೀಕ್ಷಕರ ನೇಮಕಾತಿಯಾಗಿಯೇ ಒಂದು ತಿಂಗಳಾಗಿದೆ. ಜೆಡಿಎಸ್ ಸಹಾ ಅದರ ಸಾರಥಿಗಳ ನೇತೃತ್ವದಲ್ಲಿ ಸಭೆಗಳನ್ನು ನಡೆಸಿದೆ. ಯಡಿಯೂರಪ್ಪನವರು ಮತ್ತು ಅನರ್ಹ ಶಾಸಕರು ಭೇಟಿ ಮಾಡಿ ಚರ್ಚಿಸಿದ್ದಾರಾದರೂ, ಬಿಜೆಪಿ ಕಚೇರಿ ಹಾಗೂ ಸಂಘಟನೆಗೂ ಈ ಉಪಚುನಾವಣೆಗೂ ಯಾವುದೇ ಸಂಬಂಧವಿಲ್ಲದಂತೆ ಇವೆ.

ಈ ಉಪಚುನಾವಣೆ ಏನಿದ್ದರೂ ಆಯಾ ಅನರ್ಹ ಶಾಸಕರು ಮತ್ತು ಯಡಿಯೂರಪ್ಪನವರಿಗೆ ಸಂಬಂಧಿಸಿದ್ದು ಎಂಬಂತೆ ಬಿಜೆಪಿಯು ವರ್ತಿಸುತ್ತಿದೆ. ಬಿಜೆಪಿ ಯಾವಾಗಲೂ ಗೆಲ್ಲುತ್ತಾ ಬಂದಿರುವುದು ಮತದಾರರು ತಮ್ಮಂತೆ ತಾವೇ ಆ ಪಕ್ಷದ ಜೊತೆಗೆ ಇದ್ದಾರೆ ಎಂಬ ಕಾರಣಕ್ಕಲ್ಲ. ಸಂಘಪರಿವಾರದ ಸಂಘಟನೆಗಳು ಮತ್ತು ಚುನಾವಣಾ ಯಂತ್ರಾಂಗ ವ್ಯವಸ್ಥಿತವಾಗಿ ಫೀಲ್ಡಿಗಿಳಿಯುತ್ತಾರೆ. ಈ ಸಾರಿ ಆ ರೀತಿ ಆಗಲಿಕ್ಕಿಲ್ಲ ಎಂಬ ಸ್ಪಷ್ಟ ಸೂಚನೆಗಳು ಈಗಾಗಲೇ ಸಂಭವಿಸಿವೆ.

ಇದಕ್ಕೆ ಕಾರಣಗಳು ಮೂರು. ಒಂದು, ಸದರಿ ಅನರ್ಹ ಶಾಸಕರು ಸಂಘಪರಿವಾರದ ಮೂಲದವರಲ್ಲ. ಬಹಳ ಕೆಟ್ಟ ರೀತಿಯಲ್ಲಿ ಆಮಿಷಕ್ಕೊಳಗಾಗಿ ಬಿಜೆಪಿಯ ಕಡೆಗೆ ಬಂದವರು. ಹಾಗಾಗಿ ಮುಂದೆಯೂ ಇವರ ನಿಷ್ಠೆ ಸಂಶಯಾಸ್ಪದ. ಎರಡು, ಇವರು ಗೆದ್ದ ಬಂದರೆ ಬಿಜೆಪಿ ಪ್ರಬಲವಾಗುತ್ತದೆ ಎಂಬುದಕ್ಕಿಂತ ಯಡಿಯೂರಪ್ಪನವರು ಪ್ರಬಲರಾಗುತ್ತಾರೆ; ಇದು ಬಿಜೆಪಿಯ ತ್ರೈಕಮ್ಯಾಂಡ್‍ಗೆ (ಮೋದಿ, ಶಾ, ಸಂತೋಷ್) ಬೇಕಿಲ್ಲ.

ಮೂರನೆಯದ್ದೇ ಮುಖ್ಯವಾದುದು. ಪ್ರತಿ ಕ್ಷೇತ್ರದಲ್ಲಿರುವ ಬಿಜೆಪಿಯ ಹಳೆಯ ಕಾರ್ಯಕರ್ತರು, ಪಕ್ಷವನ್ನು ಈ ಪಕ್ಷಾಂತರಿಗಳ ಗೆಲುವಿಗೆ ದುಡಿಸಿದರೆ ಮುಂದೆ ಅದರಿಂದ ಬಿಜೆಪಿಗೆ ಅನುಕೂಲವಾಗುತ್ತದೋ ಇಲ್ಲವೋ ಹೇಳಲು ಬರುವುದಿಲ್ಲ. ಇವರುಗಳು ಸೋಲಲೂಬಹುದು. ಅಂತಹ ಸಂದರ್ಭದಲ್ಲಿ ಸರ್ಕಾರವೇ ಬಿದ್ದು ಹೋಗಿ, ಅನರ್ಹ ಶಾಸಕರೂ ಬಿಜೆಪಿಯಲ್ಲಿ ಉಳಿಯದೇ, ಹಳೆಯ ಕಾರ್ಯಕರ್ತರೂ ಮುನಿಸಿಕೊಂಡರೆ ಪಕ್ಷಕ್ಕೆ ಡ್ಯಾಮೇಜು. ಅದರ ಬದಲಿಗೆ, ನಮ್ಮ ಸಂಘಟನೆ ನಾವು ಉಳಿಸಿಕೊಂಡರೆ ಮುಂದಿನ ಚುನಾವಣೆಯಲ್ಲಾದರೂ ಅನುಕೂಲವಾಗುತ್ತದೆ. ಸರ್ಕಾರ ಬಿದ್ದು ಹೋದರೆ ಒಳ್ಳೆಯದೇ. ಮಧ್ಯಂತರ ಚುನಾವಣೆಯಲ್ಲಿ ಗೆದ್ದು ಬರೋಣ ಎಂಬುದು ಬಿಜೆಪಿ ಪಕ್ಷದ ಇರಾದೆ.

ಒಂದು ವೇಳೆ ಹೆಚ್ಚಿನ ಬಿಜೆಪಿ ಅಭ್ಯರ್ಥಿಗಳು ಗೆದ್ದು ಬಂದರೆ ಅದೂ ಒಳ್ಳೆಯದೇ. ಸರ್ಕಾರ ಉಳಿದುಕೊಳ್ಳುತ್ತದೆ. ಮೂವರು ಉಪಮುಖ್ಯಮಂತ್ರಿಗಳ ಮೂಲಕ ಯಡಿಯೂರಪ್ಪನವರನ್ನು ನಿಯಂತ್ರಿಸುತ್ತಾ, ಪಕ್ಷವನ್ನು ಬೆಳೆಸಿಕೊಳ್ಳೋಣ. ನಂತರ ನೋಡೋಣ ಎಂದು ಬಿಜೆಪಿಯು ಭಾವಿಸಿದೆ. ಹಾಗಾಗಿಯೇ ತಳಮಟ್ಟದಲ್ಲಾಗಲೀ, ಮೇಲ್ಮಟ್ಟದಲ್ಲಾಗಲೀ ಬಿಜೆಪಿ ಪಕ್ಷವು ಯಾವ ತಯಾರಿಯನ್ನೂ ನಡೆಸದೇ ಸುಮ್ಮನೇ ಕುಳಿತಿದೆ. ಹಾಗಾಗಿಯೇ ಅವರ ಮಟ್ಟಿಗೆ ಇದೊಂಥರಾ ಬಂದ್ರೆ ಬೆಟ್ಟ, ಹೋದ್ರೆ . .. .. ಎಂಬಂತಿದೆ ಎಂಬುದು ಬಿಜೆಪಿಯ ವಲಯಗಳಲ್ಲಿ ಕೇಳಿ ಬರುತ್ತಿರುವ ಮಾತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...