Homeಕರ್ನಾಟಕಉಪಚುನಾವಣೆ - ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ..... ಹೋದ್ರೆ....

ಉಪಚುನಾವಣೆ – ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ….. ಹೋದ್ರೆ….

- Advertisement -
- Advertisement -

ಅನರ್ಹ ಶಾಸಕರ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಪ್ರಚಾರಕ್ಕೆ ಅಣಿಯಾಗುತ್ತಿದ್ದರೆ ಬಿಜೆಪಿ ಪಾಳೆಯದಲ್ಲಿ ಸದ್ದೇ ಇಲ್ಲ. ಅದರಲ್ಲೂ ಬೆಳಗಾವಿಯಲ್ಲಿ (ಈ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಬೇಕಿದೆ) ಬೃಹತ್ ಪ್ರತಿಭಟನೆ ಮತ್ತು ಹೊಸಕೋಟೆಯಲ್ಲಿ ಸಮಾವೇಶ ಮಾಡಿರುವ ಕಾಂಗ್ರೆಸ್ ‘ಇವರನ್ನು ಸೋಲಿಸಿಯೇ ಸಿದ್ಧ’ ಎಂದು ಪಣ ತೊಟ್ಟಂತಿದೆ. ಕೆಪಿಸಿಸಿ ಕಚೇರಿಯಲ್ಲಿ ಸಭೆಗಳ ಮೇಲೆ ಸಭೆಗಳು ನಡೆಯುತ್ತಿದ್ದು, ಪ್ರತಿ ಕ್ಷೇತ್ರಕ್ಕೂ ವೀಕ್ಷಕರ ನೇಮಕಾತಿಯಾಗಿಯೇ ಒಂದು ತಿಂಗಳಾಗಿದೆ. ಜೆಡಿಎಸ್ ಸಹಾ ಅದರ ಸಾರಥಿಗಳ ನೇತೃತ್ವದಲ್ಲಿ ಸಭೆಗಳನ್ನು ನಡೆಸಿದೆ. ಯಡಿಯೂರಪ್ಪನವರು ಮತ್ತು ಅನರ್ಹ ಶಾಸಕರು ಭೇಟಿ ಮಾಡಿ ಚರ್ಚಿಸಿದ್ದಾರಾದರೂ, ಬಿಜೆಪಿ ಕಚೇರಿ ಹಾಗೂ ಸಂಘಟನೆಗೂ ಈ ಉಪಚುನಾವಣೆಗೂ ಯಾವುದೇ ಸಂಬಂಧವಿಲ್ಲದಂತೆ ಇವೆ.

ಈ ಉಪಚುನಾವಣೆ ಏನಿದ್ದರೂ ಆಯಾ ಅನರ್ಹ ಶಾಸಕರು ಮತ್ತು ಯಡಿಯೂರಪ್ಪನವರಿಗೆ ಸಂಬಂಧಿಸಿದ್ದು ಎಂಬಂತೆ ಬಿಜೆಪಿಯು ವರ್ತಿಸುತ್ತಿದೆ. ಬಿಜೆಪಿ ಯಾವಾಗಲೂ ಗೆಲ್ಲುತ್ತಾ ಬಂದಿರುವುದು ಮತದಾರರು ತಮ್ಮಂತೆ ತಾವೇ ಆ ಪಕ್ಷದ ಜೊತೆಗೆ ಇದ್ದಾರೆ ಎಂಬ ಕಾರಣಕ್ಕಲ್ಲ. ಸಂಘಪರಿವಾರದ ಸಂಘಟನೆಗಳು ಮತ್ತು ಚುನಾವಣಾ ಯಂತ್ರಾಂಗ ವ್ಯವಸ್ಥಿತವಾಗಿ ಫೀಲ್ಡಿಗಿಳಿಯುತ್ತಾರೆ. ಈ ಸಾರಿ ಆ ರೀತಿ ಆಗಲಿಕ್ಕಿಲ್ಲ ಎಂಬ ಸ್ಪಷ್ಟ ಸೂಚನೆಗಳು ಈಗಾಗಲೇ ಸಂಭವಿಸಿವೆ.

ಇದಕ್ಕೆ ಕಾರಣಗಳು ಮೂರು. ಒಂದು, ಸದರಿ ಅನರ್ಹ ಶಾಸಕರು ಸಂಘಪರಿವಾರದ ಮೂಲದವರಲ್ಲ. ಬಹಳ ಕೆಟ್ಟ ರೀತಿಯಲ್ಲಿ ಆಮಿಷಕ್ಕೊಳಗಾಗಿ ಬಿಜೆಪಿಯ ಕಡೆಗೆ ಬಂದವರು. ಹಾಗಾಗಿ ಮುಂದೆಯೂ ಇವರ ನಿಷ್ಠೆ ಸಂಶಯಾಸ್ಪದ. ಎರಡು, ಇವರು ಗೆದ್ದ ಬಂದರೆ ಬಿಜೆಪಿ ಪ್ರಬಲವಾಗುತ್ತದೆ ಎಂಬುದಕ್ಕಿಂತ ಯಡಿಯೂರಪ್ಪನವರು ಪ್ರಬಲರಾಗುತ್ತಾರೆ; ಇದು ಬಿಜೆಪಿಯ ತ್ರೈಕಮ್ಯಾಂಡ್‍ಗೆ (ಮೋದಿ, ಶಾ, ಸಂತೋಷ್) ಬೇಕಿಲ್ಲ.

ಮೂರನೆಯದ್ದೇ ಮುಖ್ಯವಾದುದು. ಪ್ರತಿ ಕ್ಷೇತ್ರದಲ್ಲಿರುವ ಬಿಜೆಪಿಯ ಹಳೆಯ ಕಾರ್ಯಕರ್ತರು, ಪಕ್ಷವನ್ನು ಈ ಪಕ್ಷಾಂತರಿಗಳ ಗೆಲುವಿಗೆ ದುಡಿಸಿದರೆ ಮುಂದೆ ಅದರಿಂದ ಬಿಜೆಪಿಗೆ ಅನುಕೂಲವಾಗುತ್ತದೋ ಇಲ್ಲವೋ ಹೇಳಲು ಬರುವುದಿಲ್ಲ. ಇವರುಗಳು ಸೋಲಲೂಬಹುದು. ಅಂತಹ ಸಂದರ್ಭದಲ್ಲಿ ಸರ್ಕಾರವೇ ಬಿದ್ದು ಹೋಗಿ, ಅನರ್ಹ ಶಾಸಕರೂ ಬಿಜೆಪಿಯಲ್ಲಿ ಉಳಿಯದೇ, ಹಳೆಯ ಕಾರ್ಯಕರ್ತರೂ ಮುನಿಸಿಕೊಂಡರೆ ಪಕ್ಷಕ್ಕೆ ಡ್ಯಾಮೇಜು. ಅದರ ಬದಲಿಗೆ, ನಮ್ಮ ಸಂಘಟನೆ ನಾವು ಉಳಿಸಿಕೊಂಡರೆ ಮುಂದಿನ ಚುನಾವಣೆಯಲ್ಲಾದರೂ ಅನುಕೂಲವಾಗುತ್ತದೆ. ಸರ್ಕಾರ ಬಿದ್ದು ಹೋದರೆ ಒಳ್ಳೆಯದೇ. ಮಧ್ಯಂತರ ಚುನಾವಣೆಯಲ್ಲಿ ಗೆದ್ದು ಬರೋಣ ಎಂಬುದು ಬಿಜೆಪಿ ಪಕ್ಷದ ಇರಾದೆ.

ಒಂದು ವೇಳೆ ಹೆಚ್ಚಿನ ಬಿಜೆಪಿ ಅಭ್ಯರ್ಥಿಗಳು ಗೆದ್ದು ಬಂದರೆ ಅದೂ ಒಳ್ಳೆಯದೇ. ಸರ್ಕಾರ ಉಳಿದುಕೊಳ್ಳುತ್ತದೆ. ಮೂವರು ಉಪಮುಖ್ಯಮಂತ್ರಿಗಳ ಮೂಲಕ ಯಡಿಯೂರಪ್ಪನವರನ್ನು ನಿಯಂತ್ರಿಸುತ್ತಾ, ಪಕ್ಷವನ್ನು ಬೆಳೆಸಿಕೊಳ್ಳೋಣ. ನಂತರ ನೋಡೋಣ ಎಂದು ಬಿಜೆಪಿಯು ಭಾವಿಸಿದೆ. ಹಾಗಾಗಿಯೇ ತಳಮಟ್ಟದಲ್ಲಾಗಲೀ, ಮೇಲ್ಮಟ್ಟದಲ್ಲಾಗಲೀ ಬಿಜೆಪಿ ಪಕ್ಷವು ಯಾವ ತಯಾರಿಯನ್ನೂ ನಡೆಸದೇ ಸುಮ್ಮನೇ ಕುಳಿತಿದೆ. ಹಾಗಾಗಿಯೇ ಅವರ ಮಟ್ಟಿಗೆ ಇದೊಂಥರಾ ಬಂದ್ರೆ ಬೆಟ್ಟ, ಹೋದ್ರೆ . .. .. ಎಂಬಂತಿದೆ ಎಂಬುದು ಬಿಜೆಪಿಯ ವಲಯಗಳಲ್ಲಿ ಕೇಳಿ ಬರುತ್ತಿರುವ ಮಾತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...