Homeಕರ್ನಾಟಕಉಪಚುನಾವಣೆ - ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ..... ಹೋದ್ರೆ....

ಉಪಚುನಾವಣೆ – ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ….. ಹೋದ್ರೆ….

- Advertisement -
- Advertisement -

ಅನರ್ಹ ಶಾಸಕರ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಪ್ರಚಾರಕ್ಕೆ ಅಣಿಯಾಗುತ್ತಿದ್ದರೆ ಬಿಜೆಪಿ ಪಾಳೆಯದಲ್ಲಿ ಸದ್ದೇ ಇಲ್ಲ. ಅದರಲ್ಲೂ ಬೆಳಗಾವಿಯಲ್ಲಿ (ಈ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಬೇಕಿದೆ) ಬೃಹತ್ ಪ್ರತಿಭಟನೆ ಮತ್ತು ಹೊಸಕೋಟೆಯಲ್ಲಿ ಸಮಾವೇಶ ಮಾಡಿರುವ ಕಾಂಗ್ರೆಸ್ ‘ಇವರನ್ನು ಸೋಲಿಸಿಯೇ ಸಿದ್ಧ’ ಎಂದು ಪಣ ತೊಟ್ಟಂತಿದೆ. ಕೆಪಿಸಿಸಿ ಕಚೇರಿಯಲ್ಲಿ ಸಭೆಗಳ ಮೇಲೆ ಸಭೆಗಳು ನಡೆಯುತ್ತಿದ್ದು, ಪ್ರತಿ ಕ್ಷೇತ್ರಕ್ಕೂ ವೀಕ್ಷಕರ ನೇಮಕಾತಿಯಾಗಿಯೇ ಒಂದು ತಿಂಗಳಾಗಿದೆ. ಜೆಡಿಎಸ್ ಸಹಾ ಅದರ ಸಾರಥಿಗಳ ನೇತೃತ್ವದಲ್ಲಿ ಸಭೆಗಳನ್ನು ನಡೆಸಿದೆ. ಯಡಿಯೂರಪ್ಪನವರು ಮತ್ತು ಅನರ್ಹ ಶಾಸಕರು ಭೇಟಿ ಮಾಡಿ ಚರ್ಚಿಸಿದ್ದಾರಾದರೂ, ಬಿಜೆಪಿ ಕಚೇರಿ ಹಾಗೂ ಸಂಘಟನೆಗೂ ಈ ಉಪಚುನಾವಣೆಗೂ ಯಾವುದೇ ಸಂಬಂಧವಿಲ್ಲದಂತೆ ಇವೆ.

ಈ ಉಪಚುನಾವಣೆ ಏನಿದ್ದರೂ ಆಯಾ ಅನರ್ಹ ಶಾಸಕರು ಮತ್ತು ಯಡಿಯೂರಪ್ಪನವರಿಗೆ ಸಂಬಂಧಿಸಿದ್ದು ಎಂಬಂತೆ ಬಿಜೆಪಿಯು ವರ್ತಿಸುತ್ತಿದೆ. ಬಿಜೆಪಿ ಯಾವಾಗಲೂ ಗೆಲ್ಲುತ್ತಾ ಬಂದಿರುವುದು ಮತದಾರರು ತಮ್ಮಂತೆ ತಾವೇ ಆ ಪಕ್ಷದ ಜೊತೆಗೆ ಇದ್ದಾರೆ ಎಂಬ ಕಾರಣಕ್ಕಲ್ಲ. ಸಂಘಪರಿವಾರದ ಸಂಘಟನೆಗಳು ಮತ್ತು ಚುನಾವಣಾ ಯಂತ್ರಾಂಗ ವ್ಯವಸ್ಥಿತವಾಗಿ ಫೀಲ್ಡಿಗಿಳಿಯುತ್ತಾರೆ. ಈ ಸಾರಿ ಆ ರೀತಿ ಆಗಲಿಕ್ಕಿಲ್ಲ ಎಂಬ ಸ್ಪಷ್ಟ ಸೂಚನೆಗಳು ಈಗಾಗಲೇ ಸಂಭವಿಸಿವೆ.

ಇದಕ್ಕೆ ಕಾರಣಗಳು ಮೂರು. ಒಂದು, ಸದರಿ ಅನರ್ಹ ಶಾಸಕರು ಸಂಘಪರಿವಾರದ ಮೂಲದವರಲ್ಲ. ಬಹಳ ಕೆಟ್ಟ ರೀತಿಯಲ್ಲಿ ಆಮಿಷಕ್ಕೊಳಗಾಗಿ ಬಿಜೆಪಿಯ ಕಡೆಗೆ ಬಂದವರು. ಹಾಗಾಗಿ ಮುಂದೆಯೂ ಇವರ ನಿಷ್ಠೆ ಸಂಶಯಾಸ್ಪದ. ಎರಡು, ಇವರು ಗೆದ್ದ ಬಂದರೆ ಬಿಜೆಪಿ ಪ್ರಬಲವಾಗುತ್ತದೆ ಎಂಬುದಕ್ಕಿಂತ ಯಡಿಯೂರಪ್ಪನವರು ಪ್ರಬಲರಾಗುತ್ತಾರೆ; ಇದು ಬಿಜೆಪಿಯ ತ್ರೈಕಮ್ಯಾಂಡ್‍ಗೆ (ಮೋದಿ, ಶಾ, ಸಂತೋಷ್) ಬೇಕಿಲ್ಲ.

ಮೂರನೆಯದ್ದೇ ಮುಖ್ಯವಾದುದು. ಪ್ರತಿ ಕ್ಷೇತ್ರದಲ್ಲಿರುವ ಬಿಜೆಪಿಯ ಹಳೆಯ ಕಾರ್ಯಕರ್ತರು, ಪಕ್ಷವನ್ನು ಈ ಪಕ್ಷಾಂತರಿಗಳ ಗೆಲುವಿಗೆ ದುಡಿಸಿದರೆ ಮುಂದೆ ಅದರಿಂದ ಬಿಜೆಪಿಗೆ ಅನುಕೂಲವಾಗುತ್ತದೋ ಇಲ್ಲವೋ ಹೇಳಲು ಬರುವುದಿಲ್ಲ. ಇವರುಗಳು ಸೋಲಲೂಬಹುದು. ಅಂತಹ ಸಂದರ್ಭದಲ್ಲಿ ಸರ್ಕಾರವೇ ಬಿದ್ದು ಹೋಗಿ, ಅನರ್ಹ ಶಾಸಕರೂ ಬಿಜೆಪಿಯಲ್ಲಿ ಉಳಿಯದೇ, ಹಳೆಯ ಕಾರ್ಯಕರ್ತರೂ ಮುನಿಸಿಕೊಂಡರೆ ಪಕ್ಷಕ್ಕೆ ಡ್ಯಾಮೇಜು. ಅದರ ಬದಲಿಗೆ, ನಮ್ಮ ಸಂಘಟನೆ ನಾವು ಉಳಿಸಿಕೊಂಡರೆ ಮುಂದಿನ ಚುನಾವಣೆಯಲ್ಲಾದರೂ ಅನುಕೂಲವಾಗುತ್ತದೆ. ಸರ್ಕಾರ ಬಿದ್ದು ಹೋದರೆ ಒಳ್ಳೆಯದೇ. ಮಧ್ಯಂತರ ಚುನಾವಣೆಯಲ್ಲಿ ಗೆದ್ದು ಬರೋಣ ಎಂಬುದು ಬಿಜೆಪಿ ಪಕ್ಷದ ಇರಾದೆ.

ಒಂದು ವೇಳೆ ಹೆಚ್ಚಿನ ಬಿಜೆಪಿ ಅಭ್ಯರ್ಥಿಗಳು ಗೆದ್ದು ಬಂದರೆ ಅದೂ ಒಳ್ಳೆಯದೇ. ಸರ್ಕಾರ ಉಳಿದುಕೊಳ್ಳುತ್ತದೆ. ಮೂವರು ಉಪಮುಖ್ಯಮಂತ್ರಿಗಳ ಮೂಲಕ ಯಡಿಯೂರಪ್ಪನವರನ್ನು ನಿಯಂತ್ರಿಸುತ್ತಾ, ಪಕ್ಷವನ್ನು ಬೆಳೆಸಿಕೊಳ್ಳೋಣ. ನಂತರ ನೋಡೋಣ ಎಂದು ಬಿಜೆಪಿಯು ಭಾವಿಸಿದೆ. ಹಾಗಾಗಿಯೇ ತಳಮಟ್ಟದಲ್ಲಾಗಲೀ, ಮೇಲ್ಮಟ್ಟದಲ್ಲಾಗಲೀ ಬಿಜೆಪಿ ಪಕ್ಷವು ಯಾವ ತಯಾರಿಯನ್ನೂ ನಡೆಸದೇ ಸುಮ್ಮನೇ ಕುಳಿತಿದೆ. ಹಾಗಾಗಿಯೇ ಅವರ ಮಟ್ಟಿಗೆ ಇದೊಂಥರಾ ಬಂದ್ರೆ ಬೆಟ್ಟ, ಹೋದ್ರೆ . .. .. ಎಂಬಂತಿದೆ ಎಂಬುದು ಬಿಜೆಪಿಯ ವಲಯಗಳಲ್ಲಿ ಕೇಳಿ ಬರುತ್ತಿರುವ ಮಾತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...