Homeಕರ್ನಾಟಕಉಪಚುನಾವಣೆ - ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ..... ಹೋದ್ರೆ....

ಉಪಚುನಾವಣೆ – ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ….. ಹೋದ್ರೆ….

- Advertisement -
- Advertisement -

ಅನರ್ಹ ಶಾಸಕರ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಪ್ರಚಾರಕ್ಕೆ ಅಣಿಯಾಗುತ್ತಿದ್ದರೆ ಬಿಜೆಪಿ ಪಾಳೆಯದಲ್ಲಿ ಸದ್ದೇ ಇಲ್ಲ. ಅದರಲ್ಲೂ ಬೆಳಗಾವಿಯಲ್ಲಿ (ಈ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಬೇಕಿದೆ) ಬೃಹತ್ ಪ್ರತಿಭಟನೆ ಮತ್ತು ಹೊಸಕೋಟೆಯಲ್ಲಿ ಸಮಾವೇಶ ಮಾಡಿರುವ ಕಾಂಗ್ರೆಸ್ ‘ಇವರನ್ನು ಸೋಲಿಸಿಯೇ ಸಿದ್ಧ’ ಎಂದು ಪಣ ತೊಟ್ಟಂತಿದೆ. ಕೆಪಿಸಿಸಿ ಕಚೇರಿಯಲ್ಲಿ ಸಭೆಗಳ ಮೇಲೆ ಸಭೆಗಳು ನಡೆಯುತ್ತಿದ್ದು, ಪ್ರತಿ ಕ್ಷೇತ್ರಕ್ಕೂ ವೀಕ್ಷಕರ ನೇಮಕಾತಿಯಾಗಿಯೇ ಒಂದು ತಿಂಗಳಾಗಿದೆ. ಜೆಡಿಎಸ್ ಸಹಾ ಅದರ ಸಾರಥಿಗಳ ನೇತೃತ್ವದಲ್ಲಿ ಸಭೆಗಳನ್ನು ನಡೆಸಿದೆ. ಯಡಿಯೂರಪ್ಪನವರು ಮತ್ತು ಅನರ್ಹ ಶಾಸಕರು ಭೇಟಿ ಮಾಡಿ ಚರ್ಚಿಸಿದ್ದಾರಾದರೂ, ಬಿಜೆಪಿ ಕಚೇರಿ ಹಾಗೂ ಸಂಘಟನೆಗೂ ಈ ಉಪಚುನಾವಣೆಗೂ ಯಾವುದೇ ಸಂಬಂಧವಿಲ್ಲದಂತೆ ಇವೆ.

ಈ ಉಪಚುನಾವಣೆ ಏನಿದ್ದರೂ ಆಯಾ ಅನರ್ಹ ಶಾಸಕರು ಮತ್ತು ಯಡಿಯೂರಪ್ಪನವರಿಗೆ ಸಂಬಂಧಿಸಿದ್ದು ಎಂಬಂತೆ ಬಿಜೆಪಿಯು ವರ್ತಿಸುತ್ತಿದೆ. ಬಿಜೆಪಿ ಯಾವಾಗಲೂ ಗೆಲ್ಲುತ್ತಾ ಬಂದಿರುವುದು ಮತದಾರರು ತಮ್ಮಂತೆ ತಾವೇ ಆ ಪಕ್ಷದ ಜೊತೆಗೆ ಇದ್ದಾರೆ ಎಂಬ ಕಾರಣಕ್ಕಲ್ಲ. ಸಂಘಪರಿವಾರದ ಸಂಘಟನೆಗಳು ಮತ್ತು ಚುನಾವಣಾ ಯಂತ್ರಾಂಗ ವ್ಯವಸ್ಥಿತವಾಗಿ ಫೀಲ್ಡಿಗಿಳಿಯುತ್ತಾರೆ. ಈ ಸಾರಿ ಆ ರೀತಿ ಆಗಲಿಕ್ಕಿಲ್ಲ ಎಂಬ ಸ್ಪಷ್ಟ ಸೂಚನೆಗಳು ಈಗಾಗಲೇ ಸಂಭವಿಸಿವೆ.

ಇದಕ್ಕೆ ಕಾರಣಗಳು ಮೂರು. ಒಂದು, ಸದರಿ ಅನರ್ಹ ಶಾಸಕರು ಸಂಘಪರಿವಾರದ ಮೂಲದವರಲ್ಲ. ಬಹಳ ಕೆಟ್ಟ ರೀತಿಯಲ್ಲಿ ಆಮಿಷಕ್ಕೊಳಗಾಗಿ ಬಿಜೆಪಿಯ ಕಡೆಗೆ ಬಂದವರು. ಹಾಗಾಗಿ ಮುಂದೆಯೂ ಇವರ ನಿಷ್ಠೆ ಸಂಶಯಾಸ್ಪದ. ಎರಡು, ಇವರು ಗೆದ್ದ ಬಂದರೆ ಬಿಜೆಪಿ ಪ್ರಬಲವಾಗುತ್ತದೆ ಎಂಬುದಕ್ಕಿಂತ ಯಡಿಯೂರಪ್ಪನವರು ಪ್ರಬಲರಾಗುತ್ತಾರೆ; ಇದು ಬಿಜೆಪಿಯ ತ್ರೈಕಮ್ಯಾಂಡ್‍ಗೆ (ಮೋದಿ, ಶಾ, ಸಂತೋಷ್) ಬೇಕಿಲ್ಲ.

ಮೂರನೆಯದ್ದೇ ಮುಖ್ಯವಾದುದು. ಪ್ರತಿ ಕ್ಷೇತ್ರದಲ್ಲಿರುವ ಬಿಜೆಪಿಯ ಹಳೆಯ ಕಾರ್ಯಕರ್ತರು, ಪಕ್ಷವನ್ನು ಈ ಪಕ್ಷಾಂತರಿಗಳ ಗೆಲುವಿಗೆ ದುಡಿಸಿದರೆ ಮುಂದೆ ಅದರಿಂದ ಬಿಜೆಪಿಗೆ ಅನುಕೂಲವಾಗುತ್ತದೋ ಇಲ್ಲವೋ ಹೇಳಲು ಬರುವುದಿಲ್ಲ. ಇವರುಗಳು ಸೋಲಲೂಬಹುದು. ಅಂತಹ ಸಂದರ್ಭದಲ್ಲಿ ಸರ್ಕಾರವೇ ಬಿದ್ದು ಹೋಗಿ, ಅನರ್ಹ ಶಾಸಕರೂ ಬಿಜೆಪಿಯಲ್ಲಿ ಉಳಿಯದೇ, ಹಳೆಯ ಕಾರ್ಯಕರ್ತರೂ ಮುನಿಸಿಕೊಂಡರೆ ಪಕ್ಷಕ್ಕೆ ಡ್ಯಾಮೇಜು. ಅದರ ಬದಲಿಗೆ, ನಮ್ಮ ಸಂಘಟನೆ ನಾವು ಉಳಿಸಿಕೊಂಡರೆ ಮುಂದಿನ ಚುನಾವಣೆಯಲ್ಲಾದರೂ ಅನುಕೂಲವಾಗುತ್ತದೆ. ಸರ್ಕಾರ ಬಿದ್ದು ಹೋದರೆ ಒಳ್ಳೆಯದೇ. ಮಧ್ಯಂತರ ಚುನಾವಣೆಯಲ್ಲಿ ಗೆದ್ದು ಬರೋಣ ಎಂಬುದು ಬಿಜೆಪಿ ಪಕ್ಷದ ಇರಾದೆ.

ಒಂದು ವೇಳೆ ಹೆಚ್ಚಿನ ಬಿಜೆಪಿ ಅಭ್ಯರ್ಥಿಗಳು ಗೆದ್ದು ಬಂದರೆ ಅದೂ ಒಳ್ಳೆಯದೇ. ಸರ್ಕಾರ ಉಳಿದುಕೊಳ್ಳುತ್ತದೆ. ಮೂವರು ಉಪಮುಖ್ಯಮಂತ್ರಿಗಳ ಮೂಲಕ ಯಡಿಯೂರಪ್ಪನವರನ್ನು ನಿಯಂತ್ರಿಸುತ್ತಾ, ಪಕ್ಷವನ್ನು ಬೆಳೆಸಿಕೊಳ್ಳೋಣ. ನಂತರ ನೋಡೋಣ ಎಂದು ಬಿಜೆಪಿಯು ಭಾವಿಸಿದೆ. ಹಾಗಾಗಿಯೇ ತಳಮಟ್ಟದಲ್ಲಾಗಲೀ, ಮೇಲ್ಮಟ್ಟದಲ್ಲಾಗಲೀ ಬಿಜೆಪಿ ಪಕ್ಷವು ಯಾವ ತಯಾರಿಯನ್ನೂ ನಡೆಸದೇ ಸುಮ್ಮನೇ ಕುಳಿತಿದೆ. ಹಾಗಾಗಿಯೇ ಅವರ ಮಟ್ಟಿಗೆ ಇದೊಂಥರಾ ಬಂದ್ರೆ ಬೆಟ್ಟ, ಹೋದ್ರೆ . .. .. ಎಂಬಂತಿದೆ ಎಂಬುದು ಬಿಜೆಪಿಯ ವಲಯಗಳಲ್ಲಿ ಕೇಳಿ ಬರುತ್ತಿರುವ ಮಾತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....