Homeಕರ್ನಾಟಕಉಪಚುನಾವಣೆ - ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ..... ಹೋದ್ರೆ....

ಉಪಚುನಾವಣೆ – ಬಿಜೆಪಿ ಉಪೇಕ್ಷೆ: ಬಂದ್ರೆ ಬೆಟ್ಟ….. ಹೋದ್ರೆ….

- Advertisement -
- Advertisement -

ಅನರ್ಹ ಶಾಸಕರ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಪ್ರಚಾರಕ್ಕೆ ಅಣಿಯಾಗುತ್ತಿದ್ದರೆ ಬಿಜೆಪಿ ಪಾಳೆಯದಲ್ಲಿ ಸದ್ದೇ ಇಲ್ಲ. ಅದರಲ್ಲೂ ಬೆಳಗಾವಿಯಲ್ಲಿ (ಈ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಬೇಕಿದೆ) ಬೃಹತ್ ಪ್ರತಿಭಟನೆ ಮತ್ತು ಹೊಸಕೋಟೆಯಲ್ಲಿ ಸಮಾವೇಶ ಮಾಡಿರುವ ಕಾಂಗ್ರೆಸ್ ‘ಇವರನ್ನು ಸೋಲಿಸಿಯೇ ಸಿದ್ಧ’ ಎಂದು ಪಣ ತೊಟ್ಟಂತಿದೆ. ಕೆಪಿಸಿಸಿ ಕಚೇರಿಯಲ್ಲಿ ಸಭೆಗಳ ಮೇಲೆ ಸಭೆಗಳು ನಡೆಯುತ್ತಿದ್ದು, ಪ್ರತಿ ಕ್ಷೇತ್ರಕ್ಕೂ ವೀಕ್ಷಕರ ನೇಮಕಾತಿಯಾಗಿಯೇ ಒಂದು ತಿಂಗಳಾಗಿದೆ. ಜೆಡಿಎಸ್ ಸಹಾ ಅದರ ಸಾರಥಿಗಳ ನೇತೃತ್ವದಲ್ಲಿ ಸಭೆಗಳನ್ನು ನಡೆಸಿದೆ. ಯಡಿಯೂರಪ್ಪನವರು ಮತ್ತು ಅನರ್ಹ ಶಾಸಕರು ಭೇಟಿ ಮಾಡಿ ಚರ್ಚಿಸಿದ್ದಾರಾದರೂ, ಬಿಜೆಪಿ ಕಚೇರಿ ಹಾಗೂ ಸಂಘಟನೆಗೂ ಈ ಉಪಚುನಾವಣೆಗೂ ಯಾವುದೇ ಸಂಬಂಧವಿಲ್ಲದಂತೆ ಇವೆ.

ಈ ಉಪಚುನಾವಣೆ ಏನಿದ್ದರೂ ಆಯಾ ಅನರ್ಹ ಶಾಸಕರು ಮತ್ತು ಯಡಿಯೂರಪ್ಪನವರಿಗೆ ಸಂಬಂಧಿಸಿದ್ದು ಎಂಬಂತೆ ಬಿಜೆಪಿಯು ವರ್ತಿಸುತ್ತಿದೆ. ಬಿಜೆಪಿ ಯಾವಾಗಲೂ ಗೆಲ್ಲುತ್ತಾ ಬಂದಿರುವುದು ಮತದಾರರು ತಮ್ಮಂತೆ ತಾವೇ ಆ ಪಕ್ಷದ ಜೊತೆಗೆ ಇದ್ದಾರೆ ಎಂಬ ಕಾರಣಕ್ಕಲ್ಲ. ಸಂಘಪರಿವಾರದ ಸಂಘಟನೆಗಳು ಮತ್ತು ಚುನಾವಣಾ ಯಂತ್ರಾಂಗ ವ್ಯವಸ್ಥಿತವಾಗಿ ಫೀಲ್ಡಿಗಿಳಿಯುತ್ತಾರೆ. ಈ ಸಾರಿ ಆ ರೀತಿ ಆಗಲಿಕ್ಕಿಲ್ಲ ಎಂಬ ಸ್ಪಷ್ಟ ಸೂಚನೆಗಳು ಈಗಾಗಲೇ ಸಂಭವಿಸಿವೆ.

ಇದಕ್ಕೆ ಕಾರಣಗಳು ಮೂರು. ಒಂದು, ಸದರಿ ಅನರ್ಹ ಶಾಸಕರು ಸಂಘಪರಿವಾರದ ಮೂಲದವರಲ್ಲ. ಬಹಳ ಕೆಟ್ಟ ರೀತಿಯಲ್ಲಿ ಆಮಿಷಕ್ಕೊಳಗಾಗಿ ಬಿಜೆಪಿಯ ಕಡೆಗೆ ಬಂದವರು. ಹಾಗಾಗಿ ಮುಂದೆಯೂ ಇವರ ನಿಷ್ಠೆ ಸಂಶಯಾಸ್ಪದ. ಎರಡು, ಇವರು ಗೆದ್ದ ಬಂದರೆ ಬಿಜೆಪಿ ಪ್ರಬಲವಾಗುತ್ತದೆ ಎಂಬುದಕ್ಕಿಂತ ಯಡಿಯೂರಪ್ಪನವರು ಪ್ರಬಲರಾಗುತ್ತಾರೆ; ಇದು ಬಿಜೆಪಿಯ ತ್ರೈಕಮ್ಯಾಂಡ್‍ಗೆ (ಮೋದಿ, ಶಾ, ಸಂತೋಷ್) ಬೇಕಿಲ್ಲ.

ಮೂರನೆಯದ್ದೇ ಮುಖ್ಯವಾದುದು. ಪ್ರತಿ ಕ್ಷೇತ್ರದಲ್ಲಿರುವ ಬಿಜೆಪಿಯ ಹಳೆಯ ಕಾರ್ಯಕರ್ತರು, ಪಕ್ಷವನ್ನು ಈ ಪಕ್ಷಾಂತರಿಗಳ ಗೆಲುವಿಗೆ ದುಡಿಸಿದರೆ ಮುಂದೆ ಅದರಿಂದ ಬಿಜೆಪಿಗೆ ಅನುಕೂಲವಾಗುತ್ತದೋ ಇಲ್ಲವೋ ಹೇಳಲು ಬರುವುದಿಲ್ಲ. ಇವರುಗಳು ಸೋಲಲೂಬಹುದು. ಅಂತಹ ಸಂದರ್ಭದಲ್ಲಿ ಸರ್ಕಾರವೇ ಬಿದ್ದು ಹೋಗಿ, ಅನರ್ಹ ಶಾಸಕರೂ ಬಿಜೆಪಿಯಲ್ಲಿ ಉಳಿಯದೇ, ಹಳೆಯ ಕಾರ್ಯಕರ್ತರೂ ಮುನಿಸಿಕೊಂಡರೆ ಪಕ್ಷಕ್ಕೆ ಡ್ಯಾಮೇಜು. ಅದರ ಬದಲಿಗೆ, ನಮ್ಮ ಸಂಘಟನೆ ನಾವು ಉಳಿಸಿಕೊಂಡರೆ ಮುಂದಿನ ಚುನಾವಣೆಯಲ್ಲಾದರೂ ಅನುಕೂಲವಾಗುತ್ತದೆ. ಸರ್ಕಾರ ಬಿದ್ದು ಹೋದರೆ ಒಳ್ಳೆಯದೇ. ಮಧ್ಯಂತರ ಚುನಾವಣೆಯಲ್ಲಿ ಗೆದ್ದು ಬರೋಣ ಎಂಬುದು ಬಿಜೆಪಿ ಪಕ್ಷದ ಇರಾದೆ.

ಒಂದು ವೇಳೆ ಹೆಚ್ಚಿನ ಬಿಜೆಪಿ ಅಭ್ಯರ್ಥಿಗಳು ಗೆದ್ದು ಬಂದರೆ ಅದೂ ಒಳ್ಳೆಯದೇ. ಸರ್ಕಾರ ಉಳಿದುಕೊಳ್ಳುತ್ತದೆ. ಮೂವರು ಉಪಮುಖ್ಯಮಂತ್ರಿಗಳ ಮೂಲಕ ಯಡಿಯೂರಪ್ಪನವರನ್ನು ನಿಯಂತ್ರಿಸುತ್ತಾ, ಪಕ್ಷವನ್ನು ಬೆಳೆಸಿಕೊಳ್ಳೋಣ. ನಂತರ ನೋಡೋಣ ಎಂದು ಬಿಜೆಪಿಯು ಭಾವಿಸಿದೆ. ಹಾಗಾಗಿಯೇ ತಳಮಟ್ಟದಲ್ಲಾಗಲೀ, ಮೇಲ್ಮಟ್ಟದಲ್ಲಾಗಲೀ ಬಿಜೆಪಿ ಪಕ್ಷವು ಯಾವ ತಯಾರಿಯನ್ನೂ ನಡೆಸದೇ ಸುಮ್ಮನೇ ಕುಳಿತಿದೆ. ಹಾಗಾಗಿಯೇ ಅವರ ಮಟ್ಟಿಗೆ ಇದೊಂಥರಾ ಬಂದ್ರೆ ಬೆಟ್ಟ, ಹೋದ್ರೆ . .. .. ಎಂಬಂತಿದೆ ಎಂಬುದು ಬಿಜೆಪಿಯ ವಲಯಗಳಲ್ಲಿ ಕೇಳಿ ಬರುತ್ತಿರುವ ಮಾತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...