Homeಕರ್ನಾಟಕಶಿರಾ ಉಪಚುನಾವಣೆ: ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ವರಿಷ್ಠರ ಗಡುವು

ಶಿರಾ ಉಪಚುನಾವಣೆ: ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ವರಿಷ್ಠರ ಗಡುವು

ಸಮಾವೇಶಕ್ಕೆ ಬಂದಿದ್ದ ಬಹುತೇಕ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಾತುಗಳಿಂದ ನಿರಾಶೆಗೊಂಡು ಹಿಂದಿರುಗಿದರು.

- Advertisement -
- Advertisement -

ಶಿರಾ ಉಪಚುನಾವಣೆ ಭರಾಟೆ ತೀವ್ರತೆ ಪಡೆದುಕೊಳ್ಳುತ್ತಿದೆ. ಉಪಚುನಾವಣೆಯ ದಿನಾಂಕ ಘೋಷಣೆ ಆಗುತ್ತಿದ್ದಂತೆಯೇ ಸೆಪ್ಟೆಂಬರ್ 30 ರಂದು ಶಿರಾ ನಗರದಲ್ಲಿ ಬೃಹತ್ ಸಮಾವೇಶ ನಡೆಸಿದ ಜೆಡಿಎಸ್ ವರಿಷ್ಠರು, ಅಭ್ಯರ್ಥಿ ಆಯ್ಕೆಗೆ ನಾಲ್ಕು ದಿನಗಳ ಗಡುವು ನೀಡಿ ಹೋಗಿದ್ದಾರೆ. ಇಂದೇ ಅಭ್ಯರ್ಥಿಯ ಹೆಸರು ಪ್ರಕಟಿಸುತ್ತಾರೆ ಎಂಬ ಕಾರ್ಯಕರ್ತರ ನಿರೀಕ್ಷೆಗೆ ಪಕ್ಷದ ನಾಯಕರು ತಣ್ಣೀರು ಎರೆಚಿದ್ದಾರೆ. ಹೀಗಾಗಿ ಜೆಡಿಎಸ್ ಅಭ್ಯರ್ಥಿಯ ಕಗ್ಗಂಟು ಮುಂದುವರಿದಿದ್ದು ಕಾರ್ಯಕರ್ತರ ಜಿಜ್ಞಾಸೆಗೆ ಕಾರಣವಾಗಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಂಸದ ಪ್ರಜ್ವಲ್ ರೇವಣ್ಣ, ಶಿರಾದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಿದರು. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿದರು. ರಾಜ್ಯದಲ್ಲಿ ಬರ ಮತ್ತು ಪ್ರವಾಹ ಬಂದು ರೈತರ ಬೆಳೆ ನಾಶವಾಗಿದೆ. ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ದೊಡ್ಡ ಪ್ರಮಾಣದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಉಭಯ ನಾಯಕರು ಆರೋಪಿಸಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ ನವೆಂಬರ್ 3 ಕ್ಕೆ: 56 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಸಂಸದರಾಗಿದ್ದ ಮುದ್ದಹನುಮೇಗೌಡ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, “ರಾಜ್ಯದಲ್ಲಿ ಬರ ಮತ್ತು ಪ್ರವಾಹದಿಂದ ಬೆಳೆ ನಷ್ಟವಾಗಿದೆ. ಪ್ರವಾಹ ಬಂದು ಮಣ್ಣುಪಾಲಾಗಿದೆ. ಶೀಘ್ರವೇ ರಾಜ್ಯಕ್ಕೆ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ” ಮನವಿ ಮಾಡಿದರು. “ಪ್ರಧಾನಿ ನಯಾ ಪೈಸೆಯನ್ನು ಕೊಡಲಿಲ್ಲ. ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ನಮ್ಮ ಮನವಿಗಳಿಗೆ ಪ್ರಧಾನಿ ಮೋದಿ ಓಗೊಡುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದರು.

ತುಮಕೂರು ಜಿಲ್ಲೆಯಲ್ಲಿ ಅಧಿಕ ಪ್ರಮಾಣದಲ್ಲಿ ತೆಂಗು ಬೆಳೆಯಲಾಗುತ್ತಿದೆ. ನುಸಿ ರೋಗಕ್ಕೆ ಬಹುತೇಕ ತೆಂಗು ಒಣಗಿ ಹೋಗಿದೆ. ಕೊಬ್ಬರಿಗೆ ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ. ಇದೇ ಕಾರಣಕ್ಕಾಗಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 180 ಕೋಟಿ ರೂಪಾಯಿ ಪರಿಹಾರದ ಹಣವನ್ನು ಬಿಡುಗಡೆ ಮಾಡಿದೆ. ಕೇಂದ್ರ ನಮ್ಮ ರಾಜ್ಯದ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಶಿರಾದ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಕಾರ್ಯಕರ್ತರು ಅಭ್ಯರ್ಥಿಯ ಹೆಸರನ್ನು ಈಗ ಘೋಷಣೆ ಮಾಡಬಹುದು ಎಂದು ಕಾದರು. ಉಭಯ ನಾಯಕರು ಭಾಷಣ ಮುಗಿಸಿದರೇ ಹೊರತು ಅಭ್ಯರ್ಥಿ ಆಯ್ಕೆ ಸಂಬಂಧದ ಕುರಿತು ಕೆಲವೇ ಮಾತುಗಳಲ್ಲಿ ಹೇಳಿದರು. ಇನ್ನು ಮೂರ್ನಾಲ್ಕು ದಿನಗಳೊಳಗೆ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಲಾಗುವುದು. ಈ ಸಂಬಂಧ ಮತ್ತೊಂದು ಬಾರಿ ಶಿರಾ ತಾಲೂಕಿನ ಮುಖಂಡರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಾತುಗಳಿಂದ ಬಹುತೇಕ ಕಾರ್ಯಕರ್ತರು ನಿರಾಶೆಗೊಂಡು ಹಿಂದಿರುಗಿದರು. ಕುಮಾರಣ್ಣ ಅಭ್ಯರ್ಥಿ ಹೆಸರನ್ನು ಘೋಷಿಸುತ್ತಾರೆ. ಪ್ರಚಾರಕ್ಕೆ ಅನುಕೂಲ ಆಗುತ್ತದೆ ಎಂದುಕೊಂಡೆವು. ಆದರೆ ಕುಮಾರಣ್ಣ ಇನ್ನೂ ನಾಲ್ಕು ದಿನಗಳ ಗಡುವು ತೆಗೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸಮಾವೇಶದಲ್ಲಿ ಶಿರಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮುಖಂಡರು ಸಪ್ಪೆ ಮೋರೆ ಹಾಕಿಕೊಂಡು ಹಿಂತಿರುಗಿದ ದೃಶ್ಯ ಕಂಡುಬಂತು.

ಇದೇ ವೇಳೆ ಬಿಜೆಪಿಯೂ ಕೂಡ ಅಭ್ಯರ್ಥಿಯ ಹೆಸರನ್ನು ಇದುವರೆಗೂ ಅಂತಿಗೊಳಿಸಿಲ್ಲ. ಜೆಡಿಎಸ್ ಅಭ್ಯರ್ಥಿ ಯಾರೆಂಬುದನ್ನು ನೋಡಿಕೊಂಡು ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಆಲೋಚನೆ ಮಾಡುತ್ತಿದೆ. ಸ್ಥಳೀಯರಿಗೆ ಕೊಡಬೇಕೇ? ಹೊರಗಿನಿಂದ ಕರೆತರಬೇಕೆ ಎಂಬ ಬಗ್ಗೆ ಬಿಜೆಪಿ ಮುಖಂಡರು ತಲೆಕಡೆಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...