Homeಕರ್ನಾಟಕಶಿರಾ ಉಪಚುನಾವಣೆ: ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ವರಿಷ್ಠರ ಗಡುವು

ಶಿರಾ ಉಪಚುನಾವಣೆ: ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ವರಿಷ್ಠರ ಗಡುವು

ಸಮಾವೇಶಕ್ಕೆ ಬಂದಿದ್ದ ಬಹುತೇಕ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಾತುಗಳಿಂದ ನಿರಾಶೆಗೊಂಡು ಹಿಂದಿರುಗಿದರು.

- Advertisement -
- Advertisement -

ಶಿರಾ ಉಪಚುನಾವಣೆ ಭರಾಟೆ ತೀವ್ರತೆ ಪಡೆದುಕೊಳ್ಳುತ್ತಿದೆ. ಉಪಚುನಾವಣೆಯ ದಿನಾಂಕ ಘೋಷಣೆ ಆಗುತ್ತಿದ್ದಂತೆಯೇ ಸೆಪ್ಟೆಂಬರ್ 30 ರಂದು ಶಿರಾ ನಗರದಲ್ಲಿ ಬೃಹತ್ ಸಮಾವೇಶ ನಡೆಸಿದ ಜೆಡಿಎಸ್ ವರಿಷ್ಠರು, ಅಭ್ಯರ್ಥಿ ಆಯ್ಕೆಗೆ ನಾಲ್ಕು ದಿನಗಳ ಗಡುವು ನೀಡಿ ಹೋಗಿದ್ದಾರೆ. ಇಂದೇ ಅಭ್ಯರ್ಥಿಯ ಹೆಸರು ಪ್ರಕಟಿಸುತ್ತಾರೆ ಎಂಬ ಕಾರ್ಯಕರ್ತರ ನಿರೀಕ್ಷೆಗೆ ಪಕ್ಷದ ನಾಯಕರು ತಣ್ಣೀರು ಎರೆಚಿದ್ದಾರೆ. ಹೀಗಾಗಿ ಜೆಡಿಎಸ್ ಅಭ್ಯರ್ಥಿಯ ಕಗ್ಗಂಟು ಮುಂದುವರಿದಿದ್ದು ಕಾರ್ಯಕರ್ತರ ಜಿಜ್ಞಾಸೆಗೆ ಕಾರಣವಾಗಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಂಸದ ಪ್ರಜ್ವಲ್ ರೇವಣ್ಣ, ಶಿರಾದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಿದರು. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿದರು. ರಾಜ್ಯದಲ್ಲಿ ಬರ ಮತ್ತು ಪ್ರವಾಹ ಬಂದು ರೈತರ ಬೆಳೆ ನಾಶವಾಗಿದೆ. ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿದೆ. ದೊಡ್ಡ ಪ್ರಮಾಣದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಉಭಯ ನಾಯಕರು ಆರೋಪಿಸಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ ನವೆಂಬರ್ 3 ಕ್ಕೆ: 56 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಸಂಸದರಾಗಿದ್ದ ಮುದ್ದಹನುಮೇಗೌಡ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, “ರಾಜ್ಯದಲ್ಲಿ ಬರ ಮತ್ತು ಪ್ರವಾಹದಿಂದ ಬೆಳೆ ನಷ್ಟವಾಗಿದೆ. ಪ್ರವಾಹ ಬಂದು ಮಣ್ಣುಪಾಲಾಗಿದೆ. ಶೀಘ್ರವೇ ರಾಜ್ಯಕ್ಕೆ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ” ಮನವಿ ಮಾಡಿದರು. “ಪ್ರಧಾನಿ ನಯಾ ಪೈಸೆಯನ್ನು ಕೊಡಲಿಲ್ಲ. ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ನಮ್ಮ ಮನವಿಗಳಿಗೆ ಪ್ರಧಾನಿ ಮೋದಿ ಓಗೊಡುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದರು.

ತುಮಕೂರು ಜಿಲ್ಲೆಯಲ್ಲಿ ಅಧಿಕ ಪ್ರಮಾಣದಲ್ಲಿ ತೆಂಗು ಬೆಳೆಯಲಾಗುತ್ತಿದೆ. ನುಸಿ ರೋಗಕ್ಕೆ ಬಹುತೇಕ ತೆಂಗು ಒಣಗಿ ಹೋಗಿದೆ. ಕೊಬ್ಬರಿಗೆ ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ. ಇದೇ ಕಾರಣಕ್ಕಾಗಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 180 ಕೋಟಿ ರೂಪಾಯಿ ಪರಿಹಾರದ ಹಣವನ್ನು ಬಿಡುಗಡೆ ಮಾಡಿದೆ. ಕೇಂದ್ರ ನಮ್ಮ ರಾಜ್ಯದ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಶಿರಾದ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಕಾರ್ಯಕರ್ತರು ಅಭ್ಯರ್ಥಿಯ ಹೆಸರನ್ನು ಈಗ ಘೋಷಣೆ ಮಾಡಬಹುದು ಎಂದು ಕಾದರು. ಉಭಯ ನಾಯಕರು ಭಾಷಣ ಮುಗಿಸಿದರೇ ಹೊರತು ಅಭ್ಯರ್ಥಿ ಆಯ್ಕೆ ಸಂಬಂಧದ ಕುರಿತು ಕೆಲವೇ ಮಾತುಗಳಲ್ಲಿ ಹೇಳಿದರು. ಇನ್ನು ಮೂರ್ನಾಲ್ಕು ದಿನಗಳೊಳಗೆ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಲಾಗುವುದು. ಈ ಸಂಬಂಧ ಮತ್ತೊಂದು ಬಾರಿ ಶಿರಾ ತಾಲೂಕಿನ ಮುಖಂಡರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಾತುಗಳಿಂದ ಬಹುತೇಕ ಕಾರ್ಯಕರ್ತರು ನಿರಾಶೆಗೊಂಡು ಹಿಂದಿರುಗಿದರು. ಕುಮಾರಣ್ಣ ಅಭ್ಯರ್ಥಿ ಹೆಸರನ್ನು ಘೋಷಿಸುತ್ತಾರೆ. ಪ್ರಚಾರಕ್ಕೆ ಅನುಕೂಲ ಆಗುತ್ತದೆ ಎಂದುಕೊಂಡೆವು. ಆದರೆ ಕುಮಾರಣ್ಣ ಇನ್ನೂ ನಾಲ್ಕು ದಿನಗಳ ಗಡುವು ತೆಗೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸಮಾವೇಶದಲ್ಲಿ ಶಿರಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮುಖಂಡರು ಸಪ್ಪೆ ಮೋರೆ ಹಾಕಿಕೊಂಡು ಹಿಂತಿರುಗಿದ ದೃಶ್ಯ ಕಂಡುಬಂತು.

ಇದೇ ವೇಳೆ ಬಿಜೆಪಿಯೂ ಕೂಡ ಅಭ್ಯರ್ಥಿಯ ಹೆಸರನ್ನು ಇದುವರೆಗೂ ಅಂತಿಗೊಳಿಸಿಲ್ಲ. ಜೆಡಿಎಸ್ ಅಭ್ಯರ್ಥಿ ಯಾರೆಂಬುದನ್ನು ನೋಡಿಕೊಂಡು ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಆಲೋಚನೆ ಮಾಡುತ್ತಿದೆ. ಸ್ಥಳೀಯರಿಗೆ ಕೊಡಬೇಕೇ? ಹೊರಗಿನಿಂದ ಕರೆತರಬೇಕೆ ಎಂಬ ಬಗ್ಗೆ ಬಿಜೆಪಿ ಮುಖಂಡರು ತಲೆಕಡೆಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...