Homeಕರ್ನಾಟಕಉಪಚುನಾವಣೆ: ಶಿರಾ ಹಾಗೂ ಆರ್‌‌.ಆರ್‌‌ ನಗರದಲ್ಲಿ ಅರಳಿದ ಕಮಲ!

ಉಪಚುನಾವಣೆ: ಶಿರಾ ಹಾಗೂ ಆರ್‌‌.ಆರ್‌‌ ನಗರದಲ್ಲಿ ಅರಳಿದ ಕಮಲ!

- Advertisement -
- Advertisement -

ರಾಜ್ಯದಲ್ಲಿ ನಡೆದ ಎರಡು ಉಪಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದು ಅದರಲ್ಲೂ ಆರ್‌. ಆರ್‌. ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರಿ ಅಂತರದಲ್ಲಿ ಗೆದ್ದಿದ್ದಾರೆ. ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಕೊನೆಯವರೆಗೂ ಪೈಪೋಟಿ ಕೊಟ್ಟರೂ 13 ಸಾವಿರ ಮತಗಳ ಅಂತರದಲ್ಲಿ ಸೋತು, ಬಿಜೆಪಿ ಅಭ್ಯರ್ಥಿ ಡಾ. ಸಿ. ಎಂ. ರಾಜೇಶ್ ಗೌಡ ವಿಜಯ ಪತಾಕೆ ಹಾರಿಸಿದ್ದಾರೆ.

ಶಿರಾದಲ್ಲಿ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಬಿ. ಸತ್ಯನಾರಾಯಣ 35,982 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ 61,573 ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಡಾ. ಸಿ. ಎಂ. ರಾಜೇಶ್ ಗೌಡ 74,522 ಮತಗಳನ್ನು ಪಡೆದು ಕ್ಷೇತ್ರದಲ್ಲಿ ತನ್ನ ಹಿಡಿತ ಸಾಧಿಸಿದೆ.

ಇದನ್ನೂ ಓದಿ: Bihar Election Results: ಮುನ್ನಡೆಯುತ್ತಿರುವ NDA; ಮಹಾಘಟಬಂಧನ್‌ಗೆ ಹಿನ್ನಡೆ!

ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ವಿ. 10,251 ಮತಗಳನ್ನು ಪಡೆದರೆ, ಕಾಂಗ್ರೆಸ್‌‌ನ ಕುಸುಮಾ ಹೆಚ್. 67,798 ಮತಗಳನ್ನು ಪಡೆದಿದ್ದು, ಮಾಜಿ ಕಾಂಗ್ರೆಸಿಗ ಬಿಜೆಪಿ ಅಭ್ಯರ್ಥಿ ಮುನಿರತ್ನ ಬರೋಬ್ಬರಿ 1,25,734 ಮತಗಳನ್ನು ಪಡೆದು ತಾನು ಯಾವ ಪಕ್ಷದಲ್ಲಿದ್ದರೂ ಗೆಲ್ಲಬಲ್ಲೆ ಎಂದು ಸಾಧಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, “ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಕ್ಷದ ಅಭ್ಯರ್ಥಿಗಳಾದ ಡಾ. ರಾಜೇಶ್ ಗೌಡ ಮತ್ತು ಶ್ರೀ ಮುನಿರತ್ನ ಅವರಿಗೆ ಅಭಿನಂದನೆಗಳು. ಬಿಜೆಪಿಯ ಅಭಿವೃದ್ಧಿ ಕಾರ್ಯಸೂಚಿಯ ಮೇಲೆ ವಿಶ್ವಾಸವಿಟ್ಟು ಆಶೀರ್ವದಿಸಿದ ಎರಡೂ ಕ್ಷೇತ್ರಗಳ ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ರಾಜ್ಯದ ಜನತೆಗೆ ಸ್ಪಂದಿಸಿದ್ದಕ್ಕೆ ಉಪಚುನಾವಣೆಯಲ್ಲಿ ಗೆದ್ದಿದೆ: ಎಚ್.ಡಿ ಕುಮಾರಸ್ವಾಮಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಆರ್. ಆರ್ ನಗರ, ಶಿರಾ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವಿಗೆ ದುಡಿದಿರುವ ಕಾರ್ಯಕರ್ತರು, ಮುಖಂಡರು ಸೇರಿದಂತೆ ಮತದಾರರಿಗೆ ಧನ್ಯವಾದ ಸಲ್ಲಿಸಿದ್ದಾರೆ.

 

ನವೆಂಬರ್ 3 ರಂದು ಆರ್‌.ಆರ್‌. ನಗರ ಮತ್ತು ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು, ಹಾಗೂ ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಂದ ಅಕ್ಟೋಬರ್ 28 ರಂದು ಚುನಾವಣೆ ನಡೆದಿತ್ತು.

ಇದನ್ನೂ ಓದಿ:ತಡರಾತ್ರಿಯವರೆಗೆ ಎಣಿಕೆ ಮುಂದುವರಿಯುತ್ತದೆ. ಸರ್ಕಾರ ನಮ್ಮದೆ: RJD ವಿಶ್ವಾಸ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...