Homeಕರ್ನಾಟಕಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಬಿಜೆಪಿ ಶಿರಾ ನಗರದಲ್ಲಿ ಪ್ರಾಬಲ್ಯ ಸಾಧಿಸಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೊರಗಿನವರ 'ಭೂತ' ತೋರಿಸಿದರೆ ಕ್ಷೇತ್ರದ ಒಳಗಿನ ಮತದಾರ ಭಯ ಬೀಳುವರೇ? ಇಲ್ಲ ಎನ್ನುತ್ತವೆ ಮೂಲಗಳು.

- Advertisement -
- Advertisement -

ಶಿರಾ ಉಪಚುನಾವಣೆಯ ಬಹಿರಂಗ ಪ್ರಚಾರ ಕಾರ್ಯಕ್ಕೆ ತೆರೆ ಬಿದ್ದಿದೆ. ಮನೆಮನೆ ಪ್ರಚಾರ ಆರಂಭವಾಗಿದೆ. ಯಾವ ಅಭ್ಯರ್ಥಿ ನಮಗೆ ಸುಲಭವಾಗಿ ಕೈಗೆಟುಕುತ್ತಾರೆ..? ಯಾರಿಂದ ಅಭಿವೃದ್ಧಿ, ಯಾವ ಅಭ್ಯರ್ಥಿ ಗೆದ್ದರೆ ಕ್ಷೇತ್ರದಲ್ಲಿ ಉಳಿಯುವುದಿಲ್ಲ, ಯಾರು ನಮ್ಮ ನೋವು ಆಲಿಸಬಲ್ಲರು ಎಂಬ ಸ್ಪಷ್ಟನೆ ಮತದಾರರಿಗೆ ಸಿಕ್ಕಿದೆ. ಈವರೆಗೆ ಎಲ್ಲಾ ಪಕ್ಷಗಳ ಮುಖಂಡರು ಆಡಿದ ನಾಟಕಗಳಿಗೆ ತಲೆದೂಗಿರುವ ಮತದಾರರು ತೀರ್ಪು ಕಾಯ್ದಿರಿಸಿದ್ದಾರೆ. ನವೆಂಬರ್ 3ರಂದು ಮತಯಂತ್ರದ ಗುಂಡಿ ಒತ್ತುವ ಮತದಾರರ ತೀರ್ಪು ನವೆಂಬರ್ 10ರಂದು ಹೊರಬೀಳಲಿದೆ.

ಇಷ್ಟು ದಿನದ ಬಹಿರಂಗ ಪ್ರಚಾರದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿಯ ಮುಖಂಡರು ಜಾತಿ ಲೆಕ್ಕಾಚಾರವನ್ನೇ ಪ್ರಮುಖ ಅಸ್ತ್ರವಾಗಿ ಪ್ರಯೋಗ ಮಾಡಿರುವುದು ಇದುವರೆಗಿನ ಬೆಳವಣಿಗೆಗಳಿಂದ ದೃಢಪಟ್ಟಿದೆ. ಪ್ರತಿ ಜಾತಿ ಸಮುದಾಯದ ಮತಗಳನ್ನು ಸೆಳೆಯುವ ಕಸರತ್ತುಗಳೂ ನಡೆದಿವೆ. ಬಿಜೆಪಿ ಒಳಮೀಸಲಾತಿ ಜಾರಿ, ಕಾಡುಗೊಲ್ಲರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ವಿಷಯಗಳನ್ನು ಪ್ರಸ್ತಾಪಿಸಿ ಈ ಸಮುದಾಯದ ಮತಗಳನ್ನು ಛಿದ್ರಗೊಳಿಸಿದೆ.

ಇನ್ನು, ಸಚಿವ ಬಿಎಂಟಿ ನಾಗರಾಜ್ ಅವರನ್ನು ಕರೆಸಿ ಮುಖ್ಯಮಂತ್ರಿ ಯಡಿಯೂರಪ್ಪ ಕುರುಬರಿಗೆ ಸಚಿವ ಸ್ಥಾನ ನೀಡಿದ್ದಾರೆ. ಸಿದ್ದರಾಮಯ್ಯ ಈ ಕೆಲಸವನ್ನು ಮಾಡಲಿಲ್ಲ ಎಂದು ಹೇಳಿಸುವ ಮೂಲಕ ಕುರುಬ ಸಮುದಾಯದ ಮತಗಳು ಒಂದು ಕಡೆ ಹೋಗದಂತೆ ಮಾಡಿದೆ. ಶಿರಾ ಸುತ್ತಮುತ್ತಲ ಪ್ರದೇಶದಲ್ಲಿ ಕುಂಚಿಟಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದು ಆ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವ ಭರವಸೆಯನ್ನೂ ನೀಡಿ ಆ ಮತಗಳ ಬುಟ್ಟಿಗೂ ಬಿಜೆಪಿ ಕೈ ಹಾಕಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊನೆ ಗಳಿಗೆಯಲ್ಲಿ ಶಿರಾ ಕ್ಷೇತ್ರಕ್ಕೆ ಬಂದು ಪ್ರಚಾರ ನಡೆಸಿದ್ದಾರೆ. ನೀರಿನ ರಾಜಕೀಯವನ್ನು ಮುನ್ನೆಲೆಗೆ ತಂದು ಆರು ತಿಂಗಳಲ್ಲಿ ಮದಲೂರು ಕೆರೆಗೆ ನೀರು ಹರಿಸುವ ಮತ್ತು ಗಂಗಾ ಪೂಜೆ ಮಾಡುವ ಭರವಸೆಯನ್ನು ನೀಡಿ ಹೋಗಿರುವುದು ಬಿಜೆಪಿಗೆ ಒಂದಿಷ್ಟು ಮತಗಳು ಬರಲಿವೆ ಎಂಬ ಭರವಸೆ ನೀಡಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಇತ್ತ ಮದಲೂರು ಗ್ರಾಮ ಮತ್ತು ಶಿರಾ ನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶ ಮಾಡಿತ್ತು. ಸಮಾವೇಶದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಆದರೆ ಈ ಸಮಾವೇಶದಲ್ಲಿ ಭಾಗಿಯಾಗಿದ್ದವರ ಪೈಕಿ ಶೇ 65ರಷ್ಟು ಮಂದಿ ಹೊರಗಿನವರು ಎಂದು ಹೇಳಲಾಗುತ್ತಿದೆ.

ಆಡಳಿತಾರೂಢ ಬಿಜೆಪಿ ಬಹಿರಂಗ ವಿಜಯ ಸಂಕಲ್ಪ ಸಮಾವೇಶಕ್ಕೆ ಹಿರಿಯೂರು, ಮಧುಗಿರಿ, ಚಿಕ್ಕನಾಯನಹಳ್ಳಿ, ಹುಳಿಯಾರು ಭಾಗಗಳಿಂದ ಸಾವಿರಾರು ಜನರನ್ನು ಹಣ ಕೊಟ್ಟು ಕರೆತರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮದಲೂರಿನ ಸಮಾವೇಶದಲ್ಲಿ ಭಾಗವಹಿಸಿದ್ದ ಜನರನ್ನು ಕರೆದುಕೊಂಡು 300ಕ್ಕೂ ಹೆಚ್ಚು ವಾಹನಗಳು ಹಿರಿಯೂರಿನತ್ತ ಸಾಗಿವೆ. ಈ ವಾಹನಗಳು ಜವಗೊಂಡನಹಳ್ಳಿ ಮತ್ತು ಆದಿವಾಲದತ್ತ ಪ್ರಯಾಣ ಬೆಳೆಸಿವೆ. ವಿಜಯ ಸಂಕಲ್ಪ ಸಮಾವೇಶ ಮುಗಿದ ಬಳಿಕ ಮದ್ಯವನ್ನು ಮದಲೂರು ಕೆರೆಯ ಅಂಗಳದಲ್ಲಿ ಹಂಚಿಕೆ ಮಾಡಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.

ಕಾಂಗ್ರೆಸ್ ಕೂಡ ಬೇರೆ ಬೇರೆ ಜಾತಿಯ ಮತಗಳನ್ನು ಸೆಳೆಯಲು ತಂತ್ರಗಳನ್ನು ಅನುಸರಿಸಿದೆ. ಎಲ್ಲಾ ವಿಭಾಗಗಳ ಮುಖಂಡರನ್ನು ಕ್ಷೇತ್ರಕ್ಕೆ ಕರೆಸಿ ಪ್ರಚಾರ ಕೈಗೊಂಡಿದೆ. ಕಾಂಗ್ರೆಸ್ ಮುಖಂಡರು ಜೆಡಿಎಸ್ ಅಭ್ಯರ್ಥಿಯ ಕುರಿತು ಎಲ್ಲಿಯೂ ಟೀಕೆಗಳನ್ನು ವ್ಯಕ್ತಪಡಿಸಿಲ್ಲ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ಬಿ.ಕೆ.ಹರಿಪ್ರಸಾದ್, ಕೆ.ಎನ್.ರಾಜಣ್ಣ, ಮುದ್ದಹನುಮೇಗೌಡ, ಷಡಕ್ಷರಿ, ಡಾ.ಜಿ.ಪರಮೇಶ್ವರ್, ಉಮಾಶ್ರೀ, ಜಯಮಾಲ ಹೀಗೆ ಎಲ್ಲಾ ನಾಯಕರೂ ಬಂದು ಕಾಂಗ್ರೆಸ್ ಸರ್ಕಾರದ ಸಾಧನೆಗಳು, ಶಿರಾ ಕ್ಷೇತ್ರಕ್ಕೆ ಟಿ.ಬಿ.ಜಯಚಂದ್ರ ಮಾಡಿರುವ ಕಾರ್ಯಗಳು, ಮದಲೂರು ಕೆರೆಗೆ ನೀರು ಹರಿಸುವ ಕುರಿತು ಬಿಜೆಪಿ ದ್ವಂದ್ವ, ನೀರಿನ ಸಮಸ್ಯೆ ಇದ್ದಾಗ ಶಿರಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದನ್ನು ಪ್ರಸ್ತಾಪಿಸಿ ಮತದಾರರ ಮನಸ್ಸು ಗೆಲ್ಲುವ ಯತ್ನಗಳನ್ನು ಮಾಡುತ್ತಿದೆ.

ಅನುಕಂಪದ ಅಲೆಯನ್ನೇ ನೆಚ್ಚಿಕೊಂಡಿರುವ ಜೆಡಿಎಸ್‌ಗೆ ಪಕ್ಷದ ವರಿಷ್ಠರೇ ಬಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ಮೊದಲಾದ ನಾಯಕರು ಶಿರಾದಲ್ಲಿ ನಾಲ್ಕು ದಿನಗಳು ಭರ್ಜರಿ ಪ್ರಚಾರ ನಡೆಸಿದ ಮೇಲೆ ಜೆಡಿಎಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ಇಮ್ಮಡಿಯಾಗಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಪ್ರಜ್ವಲ್ ರೇವಣ್ಣ ಅವರು ಹುಲಿಕುಂಟೆ ಭಾಗದಲ್ಲಿ ಪಕ್ಷದಿಂದ ಬಿಜೆಪಿಯತ್ತ ಮುಖ ಮಾಡಿದ್ದ ಹಿರಿಯ ಮುಖಂಡರ ಮನವೊಲಿಸಿ ಮರಳಿ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ದಿವಂಗತ ಶಾಸಕ ಸತ್ಯನಾರಾಯಣ್ ಅವರು 8 ಸಾವಿರ ಮಂದಿಗೆ ಸಾಗುವಳಿ ಚೀಟಿ ಕೊಡಿಸಿದ್ದು ಆ ಮತಗಳು ಜೆಡಿಎಸ್ ಬಿಟ್ಟು ಬೇರೆಡೆ ಹೋಗುವುದಿಲ್ಲ ಎಂಬ ಲೆಕ್ಕಾಚಾರವೂ ಇದೆ. ಹೀಗಾಗಿ ಜೆಡಿಎಸ್‌ಗೆ ಮೂರನೇ ಸ್ಥಾನ ನಿಶ್ಚಿತ ಎಂಬುದು ಈಗ ಸುಳ್ಳಾಗಿದೆ.

ಬಿಜೆಪಿ ಶಿರಾ ನಗರದಲ್ಲಿ ಪ್ರಾಬಲ್ಯ ಸಾಧಿಸಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೊರಗಿನವರ ‘ಭೂತ’ ತೋರಿಸಿದರೆ ಕ್ಷೇತ್ರದ ಒಳಗಿನ ಮತದಾರ ಭಯ ಬೀಳುವರೇ? ಇಲ್ಲ ಎನ್ನುತ್ತವೆ ಮೂಲಗಳು. ಶಿರಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮೂರು ಪಕ್ಷಗಳ ಅಭ್ಯರ್ಥಿಗಳಿಗೂ ಒಳೇಟಿನ ಭಯ ಕಾಡುತ್ತಿದೆ.

ಮೇಲ್ನೋಟಕ್ಕೆ ಎಲ್ಲವೂ ಸರಿ ಇದ್ದಂತೆ ಕಂಡುಬಂದರೂ ಮೂರು ಪಕ್ಷಗಳ ಆತಂರಿಕ ಭಿನ್ನಮತ ಯಾರಿಗೆ ಹೊಡೆತ ಕೊಡುವುದೋ ಗೊತ್ತಿಲ್ಲ. ಆದರೆ ಹಿಂದುಳಿದ ವರ್ಗಗಳ ಮತಗಳ ಮೇಲೆ ಮೂರು ಪಕ್ಷಗಳೂ ಕಣ್ಣಿಟ್ಟಿವೆ. ಆದರೆ ಮತದಾರನ ಒಲವು ಯಾರ ಮೇಲಿದೆ ಎಂಬುದು ತಿಳಿಯಲು ಎಲ್ಲಾ ಪಕ್ಷಗಳು ನವೆಂಬರ್‌ 10 ರವರೆಗೆ ಕಾಯಲೇಬೇಕು.


ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...