Homeಕರ್ನಾಟಕಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಬಿಜೆಪಿ ಶಿರಾ ನಗರದಲ್ಲಿ ಪ್ರಾಬಲ್ಯ ಸಾಧಿಸಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೊರಗಿನವರ 'ಭೂತ' ತೋರಿಸಿದರೆ ಕ್ಷೇತ್ರದ ಒಳಗಿನ ಮತದಾರ ಭಯ ಬೀಳುವರೇ? ಇಲ್ಲ ಎನ್ನುತ್ತವೆ ಮೂಲಗಳು.

- Advertisement -
- Advertisement -

ಶಿರಾ ಉಪಚುನಾವಣೆಯ ಬಹಿರಂಗ ಪ್ರಚಾರ ಕಾರ್ಯಕ್ಕೆ ತೆರೆ ಬಿದ್ದಿದೆ. ಮನೆಮನೆ ಪ್ರಚಾರ ಆರಂಭವಾಗಿದೆ. ಯಾವ ಅಭ್ಯರ್ಥಿ ನಮಗೆ ಸುಲಭವಾಗಿ ಕೈಗೆಟುಕುತ್ತಾರೆ..? ಯಾರಿಂದ ಅಭಿವೃದ್ಧಿ, ಯಾವ ಅಭ್ಯರ್ಥಿ ಗೆದ್ದರೆ ಕ್ಷೇತ್ರದಲ್ಲಿ ಉಳಿಯುವುದಿಲ್ಲ, ಯಾರು ನಮ್ಮ ನೋವು ಆಲಿಸಬಲ್ಲರು ಎಂಬ ಸ್ಪಷ್ಟನೆ ಮತದಾರರಿಗೆ ಸಿಕ್ಕಿದೆ. ಈವರೆಗೆ ಎಲ್ಲಾ ಪಕ್ಷಗಳ ಮುಖಂಡರು ಆಡಿದ ನಾಟಕಗಳಿಗೆ ತಲೆದೂಗಿರುವ ಮತದಾರರು ತೀರ್ಪು ಕಾಯ್ದಿರಿಸಿದ್ದಾರೆ. ನವೆಂಬರ್ 3ರಂದು ಮತಯಂತ್ರದ ಗುಂಡಿ ಒತ್ತುವ ಮತದಾರರ ತೀರ್ಪು ನವೆಂಬರ್ 10ರಂದು ಹೊರಬೀಳಲಿದೆ.

ಇಷ್ಟು ದಿನದ ಬಹಿರಂಗ ಪ್ರಚಾರದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿಯ ಮುಖಂಡರು ಜಾತಿ ಲೆಕ್ಕಾಚಾರವನ್ನೇ ಪ್ರಮುಖ ಅಸ್ತ್ರವಾಗಿ ಪ್ರಯೋಗ ಮಾಡಿರುವುದು ಇದುವರೆಗಿನ ಬೆಳವಣಿಗೆಗಳಿಂದ ದೃಢಪಟ್ಟಿದೆ. ಪ್ರತಿ ಜಾತಿ ಸಮುದಾಯದ ಮತಗಳನ್ನು ಸೆಳೆಯುವ ಕಸರತ್ತುಗಳೂ ನಡೆದಿವೆ. ಬಿಜೆಪಿ ಒಳಮೀಸಲಾತಿ ಜಾರಿ, ಕಾಡುಗೊಲ್ಲರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ವಿಷಯಗಳನ್ನು ಪ್ರಸ್ತಾಪಿಸಿ ಈ ಸಮುದಾಯದ ಮತಗಳನ್ನು ಛಿದ್ರಗೊಳಿಸಿದೆ.

ಇನ್ನು, ಸಚಿವ ಬಿಎಂಟಿ ನಾಗರಾಜ್ ಅವರನ್ನು ಕರೆಸಿ ಮುಖ್ಯಮಂತ್ರಿ ಯಡಿಯೂರಪ್ಪ ಕುರುಬರಿಗೆ ಸಚಿವ ಸ್ಥಾನ ನೀಡಿದ್ದಾರೆ. ಸಿದ್ದರಾಮಯ್ಯ ಈ ಕೆಲಸವನ್ನು ಮಾಡಲಿಲ್ಲ ಎಂದು ಹೇಳಿಸುವ ಮೂಲಕ ಕುರುಬ ಸಮುದಾಯದ ಮತಗಳು ಒಂದು ಕಡೆ ಹೋಗದಂತೆ ಮಾಡಿದೆ. ಶಿರಾ ಸುತ್ತಮುತ್ತಲ ಪ್ರದೇಶದಲ್ಲಿ ಕುಂಚಿಟಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದು ಆ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವ ಭರವಸೆಯನ್ನೂ ನೀಡಿ ಆ ಮತಗಳ ಬುಟ್ಟಿಗೂ ಬಿಜೆಪಿ ಕೈ ಹಾಕಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊನೆ ಗಳಿಗೆಯಲ್ಲಿ ಶಿರಾ ಕ್ಷೇತ್ರಕ್ಕೆ ಬಂದು ಪ್ರಚಾರ ನಡೆಸಿದ್ದಾರೆ. ನೀರಿನ ರಾಜಕೀಯವನ್ನು ಮುನ್ನೆಲೆಗೆ ತಂದು ಆರು ತಿಂಗಳಲ್ಲಿ ಮದಲೂರು ಕೆರೆಗೆ ನೀರು ಹರಿಸುವ ಮತ್ತು ಗಂಗಾ ಪೂಜೆ ಮಾಡುವ ಭರವಸೆಯನ್ನು ನೀಡಿ ಹೋಗಿರುವುದು ಬಿಜೆಪಿಗೆ ಒಂದಿಷ್ಟು ಮತಗಳು ಬರಲಿವೆ ಎಂಬ ಭರವಸೆ ನೀಡಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಇತ್ತ ಮದಲೂರು ಗ್ರಾಮ ಮತ್ತು ಶಿರಾ ನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶ ಮಾಡಿತ್ತು. ಸಮಾವೇಶದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಆದರೆ ಈ ಸಮಾವೇಶದಲ್ಲಿ ಭಾಗಿಯಾಗಿದ್ದವರ ಪೈಕಿ ಶೇ 65ರಷ್ಟು ಮಂದಿ ಹೊರಗಿನವರು ಎಂದು ಹೇಳಲಾಗುತ್ತಿದೆ.

ಆಡಳಿತಾರೂಢ ಬಿಜೆಪಿ ಬಹಿರಂಗ ವಿಜಯ ಸಂಕಲ್ಪ ಸಮಾವೇಶಕ್ಕೆ ಹಿರಿಯೂರು, ಮಧುಗಿರಿ, ಚಿಕ್ಕನಾಯನಹಳ್ಳಿ, ಹುಳಿಯಾರು ಭಾಗಗಳಿಂದ ಸಾವಿರಾರು ಜನರನ್ನು ಹಣ ಕೊಟ್ಟು ಕರೆತರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮದಲೂರಿನ ಸಮಾವೇಶದಲ್ಲಿ ಭಾಗವಹಿಸಿದ್ದ ಜನರನ್ನು ಕರೆದುಕೊಂಡು 300ಕ್ಕೂ ಹೆಚ್ಚು ವಾಹನಗಳು ಹಿರಿಯೂರಿನತ್ತ ಸಾಗಿವೆ. ಈ ವಾಹನಗಳು ಜವಗೊಂಡನಹಳ್ಳಿ ಮತ್ತು ಆದಿವಾಲದತ್ತ ಪ್ರಯಾಣ ಬೆಳೆಸಿವೆ. ವಿಜಯ ಸಂಕಲ್ಪ ಸಮಾವೇಶ ಮುಗಿದ ಬಳಿಕ ಮದ್ಯವನ್ನು ಮದಲೂರು ಕೆರೆಯ ಅಂಗಳದಲ್ಲಿ ಹಂಚಿಕೆ ಮಾಡಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.

ಕಾಂಗ್ರೆಸ್ ಕೂಡ ಬೇರೆ ಬೇರೆ ಜಾತಿಯ ಮತಗಳನ್ನು ಸೆಳೆಯಲು ತಂತ್ರಗಳನ್ನು ಅನುಸರಿಸಿದೆ. ಎಲ್ಲಾ ವಿಭಾಗಗಳ ಮುಖಂಡರನ್ನು ಕ್ಷೇತ್ರಕ್ಕೆ ಕರೆಸಿ ಪ್ರಚಾರ ಕೈಗೊಂಡಿದೆ. ಕಾಂಗ್ರೆಸ್ ಮುಖಂಡರು ಜೆಡಿಎಸ್ ಅಭ್ಯರ್ಥಿಯ ಕುರಿತು ಎಲ್ಲಿಯೂ ಟೀಕೆಗಳನ್ನು ವ್ಯಕ್ತಪಡಿಸಿಲ್ಲ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ಬಿ.ಕೆ.ಹರಿಪ್ರಸಾದ್, ಕೆ.ಎನ್.ರಾಜಣ್ಣ, ಮುದ್ದಹನುಮೇಗೌಡ, ಷಡಕ್ಷರಿ, ಡಾ.ಜಿ.ಪರಮೇಶ್ವರ್, ಉಮಾಶ್ರೀ, ಜಯಮಾಲ ಹೀಗೆ ಎಲ್ಲಾ ನಾಯಕರೂ ಬಂದು ಕಾಂಗ್ರೆಸ್ ಸರ್ಕಾರದ ಸಾಧನೆಗಳು, ಶಿರಾ ಕ್ಷೇತ್ರಕ್ಕೆ ಟಿ.ಬಿ.ಜಯಚಂದ್ರ ಮಾಡಿರುವ ಕಾರ್ಯಗಳು, ಮದಲೂರು ಕೆರೆಗೆ ನೀರು ಹರಿಸುವ ಕುರಿತು ಬಿಜೆಪಿ ದ್ವಂದ್ವ, ನೀರಿನ ಸಮಸ್ಯೆ ಇದ್ದಾಗ ಶಿರಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದನ್ನು ಪ್ರಸ್ತಾಪಿಸಿ ಮತದಾರರ ಮನಸ್ಸು ಗೆಲ್ಲುವ ಯತ್ನಗಳನ್ನು ಮಾಡುತ್ತಿದೆ.

ಅನುಕಂಪದ ಅಲೆಯನ್ನೇ ನೆಚ್ಚಿಕೊಂಡಿರುವ ಜೆಡಿಎಸ್‌ಗೆ ಪಕ್ಷದ ವರಿಷ್ಠರೇ ಬಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ಮೊದಲಾದ ನಾಯಕರು ಶಿರಾದಲ್ಲಿ ನಾಲ್ಕು ದಿನಗಳು ಭರ್ಜರಿ ಪ್ರಚಾರ ನಡೆಸಿದ ಮೇಲೆ ಜೆಡಿಎಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ಇಮ್ಮಡಿಯಾಗಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಪ್ರಜ್ವಲ್ ರೇವಣ್ಣ ಅವರು ಹುಲಿಕುಂಟೆ ಭಾಗದಲ್ಲಿ ಪಕ್ಷದಿಂದ ಬಿಜೆಪಿಯತ್ತ ಮುಖ ಮಾಡಿದ್ದ ಹಿರಿಯ ಮುಖಂಡರ ಮನವೊಲಿಸಿ ಮರಳಿ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ದಿವಂಗತ ಶಾಸಕ ಸತ್ಯನಾರಾಯಣ್ ಅವರು 8 ಸಾವಿರ ಮಂದಿಗೆ ಸಾಗುವಳಿ ಚೀಟಿ ಕೊಡಿಸಿದ್ದು ಆ ಮತಗಳು ಜೆಡಿಎಸ್ ಬಿಟ್ಟು ಬೇರೆಡೆ ಹೋಗುವುದಿಲ್ಲ ಎಂಬ ಲೆಕ್ಕಾಚಾರವೂ ಇದೆ. ಹೀಗಾಗಿ ಜೆಡಿಎಸ್‌ಗೆ ಮೂರನೇ ಸ್ಥಾನ ನಿಶ್ಚಿತ ಎಂಬುದು ಈಗ ಸುಳ್ಳಾಗಿದೆ.

ಬಿಜೆಪಿ ಶಿರಾ ನಗರದಲ್ಲಿ ಪ್ರಾಬಲ್ಯ ಸಾಧಿಸಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೊರಗಿನವರ ‘ಭೂತ’ ತೋರಿಸಿದರೆ ಕ್ಷೇತ್ರದ ಒಳಗಿನ ಮತದಾರ ಭಯ ಬೀಳುವರೇ? ಇಲ್ಲ ಎನ್ನುತ್ತವೆ ಮೂಲಗಳು. ಶಿರಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮೂರು ಪಕ್ಷಗಳ ಅಭ್ಯರ್ಥಿಗಳಿಗೂ ಒಳೇಟಿನ ಭಯ ಕಾಡುತ್ತಿದೆ.

ಮೇಲ್ನೋಟಕ್ಕೆ ಎಲ್ಲವೂ ಸರಿ ಇದ್ದಂತೆ ಕಂಡುಬಂದರೂ ಮೂರು ಪಕ್ಷಗಳ ಆತಂರಿಕ ಭಿನ್ನಮತ ಯಾರಿಗೆ ಹೊಡೆತ ಕೊಡುವುದೋ ಗೊತ್ತಿಲ್ಲ. ಆದರೆ ಹಿಂದುಳಿದ ವರ್ಗಗಳ ಮತಗಳ ಮೇಲೆ ಮೂರು ಪಕ್ಷಗಳೂ ಕಣ್ಣಿಟ್ಟಿವೆ. ಆದರೆ ಮತದಾರನ ಒಲವು ಯಾರ ಮೇಲಿದೆ ಎಂಬುದು ತಿಳಿಯಲು ಎಲ್ಲಾ ಪಕ್ಷಗಳು ನವೆಂಬರ್‌ 10 ರವರೆಗೆ ಕಾಯಲೇಬೇಕು.


ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...