Homeಕರ್ನಾಟಕಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಬಿಜೆಪಿ ಶಿರಾ ನಗರದಲ್ಲಿ ಪ್ರಾಬಲ್ಯ ಸಾಧಿಸಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೊರಗಿನವರ 'ಭೂತ' ತೋರಿಸಿದರೆ ಕ್ಷೇತ್ರದ ಒಳಗಿನ ಮತದಾರ ಭಯ ಬೀಳುವರೇ? ಇಲ್ಲ ಎನ್ನುತ್ತವೆ ಮೂಲಗಳು.

- Advertisement -
- Advertisement -

ಶಿರಾ ಉಪಚುನಾವಣೆಯ ಬಹಿರಂಗ ಪ್ರಚಾರ ಕಾರ್ಯಕ್ಕೆ ತೆರೆ ಬಿದ್ದಿದೆ. ಮನೆಮನೆ ಪ್ರಚಾರ ಆರಂಭವಾಗಿದೆ. ಯಾವ ಅಭ್ಯರ್ಥಿ ನಮಗೆ ಸುಲಭವಾಗಿ ಕೈಗೆಟುಕುತ್ತಾರೆ..? ಯಾರಿಂದ ಅಭಿವೃದ್ಧಿ, ಯಾವ ಅಭ್ಯರ್ಥಿ ಗೆದ್ದರೆ ಕ್ಷೇತ್ರದಲ್ಲಿ ಉಳಿಯುವುದಿಲ್ಲ, ಯಾರು ನಮ್ಮ ನೋವು ಆಲಿಸಬಲ್ಲರು ಎಂಬ ಸ್ಪಷ್ಟನೆ ಮತದಾರರಿಗೆ ಸಿಕ್ಕಿದೆ. ಈವರೆಗೆ ಎಲ್ಲಾ ಪಕ್ಷಗಳ ಮುಖಂಡರು ಆಡಿದ ನಾಟಕಗಳಿಗೆ ತಲೆದೂಗಿರುವ ಮತದಾರರು ತೀರ್ಪು ಕಾಯ್ದಿರಿಸಿದ್ದಾರೆ. ನವೆಂಬರ್ 3ರಂದು ಮತಯಂತ್ರದ ಗುಂಡಿ ಒತ್ತುವ ಮತದಾರರ ತೀರ್ಪು ನವೆಂಬರ್ 10ರಂದು ಹೊರಬೀಳಲಿದೆ.

ಇಷ್ಟು ದಿನದ ಬಹಿರಂಗ ಪ್ರಚಾರದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿಯ ಮುಖಂಡರು ಜಾತಿ ಲೆಕ್ಕಾಚಾರವನ್ನೇ ಪ್ರಮುಖ ಅಸ್ತ್ರವಾಗಿ ಪ್ರಯೋಗ ಮಾಡಿರುವುದು ಇದುವರೆಗಿನ ಬೆಳವಣಿಗೆಗಳಿಂದ ದೃಢಪಟ್ಟಿದೆ. ಪ್ರತಿ ಜಾತಿ ಸಮುದಾಯದ ಮತಗಳನ್ನು ಸೆಳೆಯುವ ಕಸರತ್ತುಗಳೂ ನಡೆದಿವೆ. ಬಿಜೆಪಿ ಒಳಮೀಸಲಾತಿ ಜಾರಿ, ಕಾಡುಗೊಲ್ಲರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ವಿಷಯಗಳನ್ನು ಪ್ರಸ್ತಾಪಿಸಿ ಈ ಸಮುದಾಯದ ಮತಗಳನ್ನು ಛಿದ್ರಗೊಳಿಸಿದೆ.

ಇನ್ನು, ಸಚಿವ ಬಿಎಂಟಿ ನಾಗರಾಜ್ ಅವರನ್ನು ಕರೆಸಿ ಮುಖ್ಯಮಂತ್ರಿ ಯಡಿಯೂರಪ್ಪ ಕುರುಬರಿಗೆ ಸಚಿವ ಸ್ಥಾನ ನೀಡಿದ್ದಾರೆ. ಸಿದ್ದರಾಮಯ್ಯ ಈ ಕೆಲಸವನ್ನು ಮಾಡಲಿಲ್ಲ ಎಂದು ಹೇಳಿಸುವ ಮೂಲಕ ಕುರುಬ ಸಮುದಾಯದ ಮತಗಳು ಒಂದು ಕಡೆ ಹೋಗದಂತೆ ಮಾಡಿದೆ. ಶಿರಾ ಸುತ್ತಮುತ್ತಲ ಪ್ರದೇಶದಲ್ಲಿ ಕುಂಚಿಟಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದು ಆ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವ ಭರವಸೆಯನ್ನೂ ನೀಡಿ ಆ ಮತಗಳ ಬುಟ್ಟಿಗೂ ಬಿಜೆಪಿ ಕೈ ಹಾಕಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊನೆ ಗಳಿಗೆಯಲ್ಲಿ ಶಿರಾ ಕ್ಷೇತ್ರಕ್ಕೆ ಬಂದು ಪ್ರಚಾರ ನಡೆಸಿದ್ದಾರೆ. ನೀರಿನ ರಾಜಕೀಯವನ್ನು ಮುನ್ನೆಲೆಗೆ ತಂದು ಆರು ತಿಂಗಳಲ್ಲಿ ಮದಲೂರು ಕೆರೆಗೆ ನೀರು ಹರಿಸುವ ಮತ್ತು ಗಂಗಾ ಪೂಜೆ ಮಾಡುವ ಭರವಸೆಯನ್ನು ನೀಡಿ ಹೋಗಿರುವುದು ಬಿಜೆಪಿಗೆ ಒಂದಿಷ್ಟು ಮತಗಳು ಬರಲಿವೆ ಎಂಬ ಭರವಸೆ ನೀಡಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಇತ್ತ ಮದಲೂರು ಗ್ರಾಮ ಮತ್ತು ಶಿರಾ ನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶ ಮಾಡಿತ್ತು. ಸಮಾವೇಶದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಆದರೆ ಈ ಸಮಾವೇಶದಲ್ಲಿ ಭಾಗಿಯಾಗಿದ್ದವರ ಪೈಕಿ ಶೇ 65ರಷ್ಟು ಮಂದಿ ಹೊರಗಿನವರು ಎಂದು ಹೇಳಲಾಗುತ್ತಿದೆ.

ಆಡಳಿತಾರೂಢ ಬಿಜೆಪಿ ಬಹಿರಂಗ ವಿಜಯ ಸಂಕಲ್ಪ ಸಮಾವೇಶಕ್ಕೆ ಹಿರಿಯೂರು, ಮಧುಗಿರಿ, ಚಿಕ್ಕನಾಯನಹಳ್ಳಿ, ಹುಳಿಯಾರು ಭಾಗಗಳಿಂದ ಸಾವಿರಾರು ಜನರನ್ನು ಹಣ ಕೊಟ್ಟು ಕರೆತರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮದಲೂರಿನ ಸಮಾವೇಶದಲ್ಲಿ ಭಾಗವಹಿಸಿದ್ದ ಜನರನ್ನು ಕರೆದುಕೊಂಡು 300ಕ್ಕೂ ಹೆಚ್ಚು ವಾಹನಗಳು ಹಿರಿಯೂರಿನತ್ತ ಸಾಗಿವೆ. ಈ ವಾಹನಗಳು ಜವಗೊಂಡನಹಳ್ಳಿ ಮತ್ತು ಆದಿವಾಲದತ್ತ ಪ್ರಯಾಣ ಬೆಳೆಸಿವೆ. ವಿಜಯ ಸಂಕಲ್ಪ ಸಮಾವೇಶ ಮುಗಿದ ಬಳಿಕ ಮದ್ಯವನ್ನು ಮದಲೂರು ಕೆರೆಯ ಅಂಗಳದಲ್ಲಿ ಹಂಚಿಕೆ ಮಾಡಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.

ಕಾಂಗ್ರೆಸ್ ಕೂಡ ಬೇರೆ ಬೇರೆ ಜಾತಿಯ ಮತಗಳನ್ನು ಸೆಳೆಯಲು ತಂತ್ರಗಳನ್ನು ಅನುಸರಿಸಿದೆ. ಎಲ್ಲಾ ವಿಭಾಗಗಳ ಮುಖಂಡರನ್ನು ಕ್ಷೇತ್ರಕ್ಕೆ ಕರೆಸಿ ಪ್ರಚಾರ ಕೈಗೊಂಡಿದೆ. ಕಾಂಗ್ರೆಸ್ ಮುಖಂಡರು ಜೆಡಿಎಸ್ ಅಭ್ಯರ್ಥಿಯ ಕುರಿತು ಎಲ್ಲಿಯೂ ಟೀಕೆಗಳನ್ನು ವ್ಯಕ್ತಪಡಿಸಿಲ್ಲ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ಬಿ.ಕೆ.ಹರಿಪ್ರಸಾದ್, ಕೆ.ಎನ್.ರಾಜಣ್ಣ, ಮುದ್ದಹನುಮೇಗೌಡ, ಷಡಕ್ಷರಿ, ಡಾ.ಜಿ.ಪರಮೇಶ್ವರ್, ಉಮಾಶ್ರೀ, ಜಯಮಾಲ ಹೀಗೆ ಎಲ್ಲಾ ನಾಯಕರೂ ಬಂದು ಕಾಂಗ್ರೆಸ್ ಸರ್ಕಾರದ ಸಾಧನೆಗಳು, ಶಿರಾ ಕ್ಷೇತ್ರಕ್ಕೆ ಟಿ.ಬಿ.ಜಯಚಂದ್ರ ಮಾಡಿರುವ ಕಾರ್ಯಗಳು, ಮದಲೂರು ಕೆರೆಗೆ ನೀರು ಹರಿಸುವ ಕುರಿತು ಬಿಜೆಪಿ ದ್ವಂದ್ವ, ನೀರಿನ ಸಮಸ್ಯೆ ಇದ್ದಾಗ ಶಿರಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದನ್ನು ಪ್ರಸ್ತಾಪಿಸಿ ಮತದಾರರ ಮನಸ್ಸು ಗೆಲ್ಲುವ ಯತ್ನಗಳನ್ನು ಮಾಡುತ್ತಿದೆ.

ಅನುಕಂಪದ ಅಲೆಯನ್ನೇ ನೆಚ್ಚಿಕೊಂಡಿರುವ ಜೆಡಿಎಸ್‌ಗೆ ಪಕ್ಷದ ವರಿಷ್ಠರೇ ಬಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ಮೊದಲಾದ ನಾಯಕರು ಶಿರಾದಲ್ಲಿ ನಾಲ್ಕು ದಿನಗಳು ಭರ್ಜರಿ ಪ್ರಚಾರ ನಡೆಸಿದ ಮೇಲೆ ಜೆಡಿಎಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ಇಮ್ಮಡಿಯಾಗಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಪ್ರಜ್ವಲ್ ರೇವಣ್ಣ ಅವರು ಹುಲಿಕುಂಟೆ ಭಾಗದಲ್ಲಿ ಪಕ್ಷದಿಂದ ಬಿಜೆಪಿಯತ್ತ ಮುಖ ಮಾಡಿದ್ದ ಹಿರಿಯ ಮುಖಂಡರ ಮನವೊಲಿಸಿ ಮರಳಿ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ದಿವಂಗತ ಶಾಸಕ ಸತ್ಯನಾರಾಯಣ್ ಅವರು 8 ಸಾವಿರ ಮಂದಿಗೆ ಸಾಗುವಳಿ ಚೀಟಿ ಕೊಡಿಸಿದ್ದು ಆ ಮತಗಳು ಜೆಡಿಎಸ್ ಬಿಟ್ಟು ಬೇರೆಡೆ ಹೋಗುವುದಿಲ್ಲ ಎಂಬ ಲೆಕ್ಕಾಚಾರವೂ ಇದೆ. ಹೀಗಾಗಿ ಜೆಡಿಎಸ್‌ಗೆ ಮೂರನೇ ಸ್ಥಾನ ನಿಶ್ಚಿತ ಎಂಬುದು ಈಗ ಸುಳ್ಳಾಗಿದೆ.

ಬಿಜೆಪಿ ಶಿರಾ ನಗರದಲ್ಲಿ ಪ್ರಾಬಲ್ಯ ಸಾಧಿಸಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೊರಗಿನವರ ‘ಭೂತ’ ತೋರಿಸಿದರೆ ಕ್ಷೇತ್ರದ ಒಳಗಿನ ಮತದಾರ ಭಯ ಬೀಳುವರೇ? ಇಲ್ಲ ಎನ್ನುತ್ತವೆ ಮೂಲಗಳು. ಶಿರಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮೂರು ಪಕ್ಷಗಳ ಅಭ್ಯರ್ಥಿಗಳಿಗೂ ಒಳೇಟಿನ ಭಯ ಕಾಡುತ್ತಿದೆ.

ಮೇಲ್ನೋಟಕ್ಕೆ ಎಲ್ಲವೂ ಸರಿ ಇದ್ದಂತೆ ಕಂಡುಬಂದರೂ ಮೂರು ಪಕ್ಷಗಳ ಆತಂರಿಕ ಭಿನ್ನಮತ ಯಾರಿಗೆ ಹೊಡೆತ ಕೊಡುವುದೋ ಗೊತ್ತಿಲ್ಲ. ಆದರೆ ಹಿಂದುಳಿದ ವರ್ಗಗಳ ಮತಗಳ ಮೇಲೆ ಮೂರು ಪಕ್ಷಗಳೂ ಕಣ್ಣಿಟ್ಟಿವೆ. ಆದರೆ ಮತದಾರನ ಒಲವು ಯಾರ ಮೇಲಿದೆ ಎಂಬುದು ತಿಳಿಯಲು ಎಲ್ಲಾ ಪಕ್ಷಗಳು ನವೆಂಬರ್‌ 10 ರವರೆಗೆ ಕಾಯಲೇಬೇಕು.


ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...