Homeಕರ್ನಾಟಕಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಬಿಜೆಪಿ ಶಿರಾ ನಗರದಲ್ಲಿ ಪ್ರಾಬಲ್ಯ ಸಾಧಿಸಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೊರಗಿನವರ 'ಭೂತ' ತೋರಿಸಿದರೆ ಕ್ಷೇತ್ರದ ಒಳಗಿನ ಮತದಾರ ಭಯ ಬೀಳುವರೇ? ಇಲ್ಲ ಎನ್ನುತ್ತವೆ ಮೂಲಗಳು.

- Advertisement -
- Advertisement -

ಶಿರಾ ಉಪಚುನಾವಣೆಯ ಬಹಿರಂಗ ಪ್ರಚಾರ ಕಾರ್ಯಕ್ಕೆ ತೆರೆ ಬಿದ್ದಿದೆ. ಮನೆಮನೆ ಪ್ರಚಾರ ಆರಂಭವಾಗಿದೆ. ಯಾವ ಅಭ್ಯರ್ಥಿ ನಮಗೆ ಸುಲಭವಾಗಿ ಕೈಗೆಟುಕುತ್ತಾರೆ..? ಯಾರಿಂದ ಅಭಿವೃದ್ಧಿ, ಯಾವ ಅಭ್ಯರ್ಥಿ ಗೆದ್ದರೆ ಕ್ಷೇತ್ರದಲ್ಲಿ ಉಳಿಯುವುದಿಲ್ಲ, ಯಾರು ನಮ್ಮ ನೋವು ಆಲಿಸಬಲ್ಲರು ಎಂಬ ಸ್ಪಷ್ಟನೆ ಮತದಾರರಿಗೆ ಸಿಕ್ಕಿದೆ. ಈವರೆಗೆ ಎಲ್ಲಾ ಪಕ್ಷಗಳ ಮುಖಂಡರು ಆಡಿದ ನಾಟಕಗಳಿಗೆ ತಲೆದೂಗಿರುವ ಮತದಾರರು ತೀರ್ಪು ಕಾಯ್ದಿರಿಸಿದ್ದಾರೆ. ನವೆಂಬರ್ 3ರಂದು ಮತಯಂತ್ರದ ಗುಂಡಿ ಒತ್ತುವ ಮತದಾರರ ತೀರ್ಪು ನವೆಂಬರ್ 10ರಂದು ಹೊರಬೀಳಲಿದೆ.

ಇಷ್ಟು ದಿನದ ಬಹಿರಂಗ ಪ್ರಚಾರದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿಯ ಮುಖಂಡರು ಜಾತಿ ಲೆಕ್ಕಾಚಾರವನ್ನೇ ಪ್ರಮುಖ ಅಸ್ತ್ರವಾಗಿ ಪ್ರಯೋಗ ಮಾಡಿರುವುದು ಇದುವರೆಗಿನ ಬೆಳವಣಿಗೆಗಳಿಂದ ದೃಢಪಟ್ಟಿದೆ. ಪ್ರತಿ ಜಾತಿ ಸಮುದಾಯದ ಮತಗಳನ್ನು ಸೆಳೆಯುವ ಕಸರತ್ತುಗಳೂ ನಡೆದಿವೆ. ಬಿಜೆಪಿ ಒಳಮೀಸಲಾತಿ ಜಾರಿ, ಕಾಡುಗೊಲ್ಲರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ವಿಷಯಗಳನ್ನು ಪ್ರಸ್ತಾಪಿಸಿ ಈ ಸಮುದಾಯದ ಮತಗಳನ್ನು ಛಿದ್ರಗೊಳಿಸಿದೆ.

ಇನ್ನು, ಸಚಿವ ಬಿಎಂಟಿ ನಾಗರಾಜ್ ಅವರನ್ನು ಕರೆಸಿ ಮುಖ್ಯಮಂತ್ರಿ ಯಡಿಯೂರಪ್ಪ ಕುರುಬರಿಗೆ ಸಚಿವ ಸ್ಥಾನ ನೀಡಿದ್ದಾರೆ. ಸಿದ್ದರಾಮಯ್ಯ ಈ ಕೆಲಸವನ್ನು ಮಾಡಲಿಲ್ಲ ಎಂದು ಹೇಳಿಸುವ ಮೂಲಕ ಕುರುಬ ಸಮುದಾಯದ ಮತಗಳು ಒಂದು ಕಡೆ ಹೋಗದಂತೆ ಮಾಡಿದೆ. ಶಿರಾ ಸುತ್ತಮುತ್ತಲ ಪ್ರದೇಶದಲ್ಲಿ ಕುಂಚಿಟಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದು ಆ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವ ಭರವಸೆಯನ್ನೂ ನೀಡಿ ಆ ಮತಗಳ ಬುಟ್ಟಿಗೂ ಬಿಜೆಪಿ ಕೈ ಹಾಕಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊನೆ ಗಳಿಗೆಯಲ್ಲಿ ಶಿರಾ ಕ್ಷೇತ್ರಕ್ಕೆ ಬಂದು ಪ್ರಚಾರ ನಡೆಸಿದ್ದಾರೆ. ನೀರಿನ ರಾಜಕೀಯವನ್ನು ಮುನ್ನೆಲೆಗೆ ತಂದು ಆರು ತಿಂಗಳಲ್ಲಿ ಮದಲೂರು ಕೆರೆಗೆ ನೀರು ಹರಿಸುವ ಮತ್ತು ಗಂಗಾ ಪೂಜೆ ಮಾಡುವ ಭರವಸೆಯನ್ನು ನೀಡಿ ಹೋಗಿರುವುದು ಬಿಜೆಪಿಗೆ ಒಂದಿಷ್ಟು ಮತಗಳು ಬರಲಿವೆ ಎಂಬ ಭರವಸೆ ನೀಡಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಇತ್ತ ಮದಲೂರು ಗ್ರಾಮ ಮತ್ತು ಶಿರಾ ನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶ ಮಾಡಿತ್ತು. ಸಮಾವೇಶದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಆದರೆ ಈ ಸಮಾವೇಶದಲ್ಲಿ ಭಾಗಿಯಾಗಿದ್ದವರ ಪೈಕಿ ಶೇ 65ರಷ್ಟು ಮಂದಿ ಹೊರಗಿನವರು ಎಂದು ಹೇಳಲಾಗುತ್ತಿದೆ.

ಆಡಳಿತಾರೂಢ ಬಿಜೆಪಿ ಬಹಿರಂಗ ವಿಜಯ ಸಂಕಲ್ಪ ಸಮಾವೇಶಕ್ಕೆ ಹಿರಿಯೂರು, ಮಧುಗಿರಿ, ಚಿಕ್ಕನಾಯನಹಳ್ಳಿ, ಹುಳಿಯಾರು ಭಾಗಗಳಿಂದ ಸಾವಿರಾರು ಜನರನ್ನು ಹಣ ಕೊಟ್ಟು ಕರೆತರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮದಲೂರಿನ ಸಮಾವೇಶದಲ್ಲಿ ಭಾಗವಹಿಸಿದ್ದ ಜನರನ್ನು ಕರೆದುಕೊಂಡು 300ಕ್ಕೂ ಹೆಚ್ಚು ವಾಹನಗಳು ಹಿರಿಯೂರಿನತ್ತ ಸಾಗಿವೆ. ಈ ವಾಹನಗಳು ಜವಗೊಂಡನಹಳ್ಳಿ ಮತ್ತು ಆದಿವಾಲದತ್ತ ಪ್ರಯಾಣ ಬೆಳೆಸಿವೆ. ವಿಜಯ ಸಂಕಲ್ಪ ಸಮಾವೇಶ ಮುಗಿದ ಬಳಿಕ ಮದ್ಯವನ್ನು ಮದಲೂರು ಕೆರೆಯ ಅಂಗಳದಲ್ಲಿ ಹಂಚಿಕೆ ಮಾಡಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.

ಕಾಂಗ್ರೆಸ್ ಕೂಡ ಬೇರೆ ಬೇರೆ ಜಾತಿಯ ಮತಗಳನ್ನು ಸೆಳೆಯಲು ತಂತ್ರಗಳನ್ನು ಅನುಸರಿಸಿದೆ. ಎಲ್ಲಾ ವಿಭಾಗಗಳ ಮುಖಂಡರನ್ನು ಕ್ಷೇತ್ರಕ್ಕೆ ಕರೆಸಿ ಪ್ರಚಾರ ಕೈಗೊಂಡಿದೆ. ಕಾಂಗ್ರೆಸ್ ಮುಖಂಡರು ಜೆಡಿಎಸ್ ಅಭ್ಯರ್ಥಿಯ ಕುರಿತು ಎಲ್ಲಿಯೂ ಟೀಕೆಗಳನ್ನು ವ್ಯಕ್ತಪಡಿಸಿಲ್ಲ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ಬಿ.ಕೆ.ಹರಿಪ್ರಸಾದ್, ಕೆ.ಎನ್.ರಾಜಣ್ಣ, ಮುದ್ದಹನುಮೇಗೌಡ, ಷಡಕ್ಷರಿ, ಡಾ.ಜಿ.ಪರಮೇಶ್ವರ್, ಉಮಾಶ್ರೀ, ಜಯಮಾಲ ಹೀಗೆ ಎಲ್ಲಾ ನಾಯಕರೂ ಬಂದು ಕಾಂಗ್ರೆಸ್ ಸರ್ಕಾರದ ಸಾಧನೆಗಳು, ಶಿರಾ ಕ್ಷೇತ್ರಕ್ಕೆ ಟಿ.ಬಿ.ಜಯಚಂದ್ರ ಮಾಡಿರುವ ಕಾರ್ಯಗಳು, ಮದಲೂರು ಕೆರೆಗೆ ನೀರು ಹರಿಸುವ ಕುರಿತು ಬಿಜೆಪಿ ದ್ವಂದ್ವ, ನೀರಿನ ಸಮಸ್ಯೆ ಇದ್ದಾಗ ಶಿರಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದನ್ನು ಪ್ರಸ್ತಾಪಿಸಿ ಮತದಾರರ ಮನಸ್ಸು ಗೆಲ್ಲುವ ಯತ್ನಗಳನ್ನು ಮಾಡುತ್ತಿದೆ.

ಅನುಕಂಪದ ಅಲೆಯನ್ನೇ ನೆಚ್ಚಿಕೊಂಡಿರುವ ಜೆಡಿಎಸ್‌ಗೆ ಪಕ್ಷದ ವರಿಷ್ಠರೇ ಬಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ಮೊದಲಾದ ನಾಯಕರು ಶಿರಾದಲ್ಲಿ ನಾಲ್ಕು ದಿನಗಳು ಭರ್ಜರಿ ಪ್ರಚಾರ ನಡೆಸಿದ ಮೇಲೆ ಜೆಡಿಎಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ಇಮ್ಮಡಿಯಾಗಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಪ್ರಜ್ವಲ್ ರೇವಣ್ಣ ಅವರು ಹುಲಿಕುಂಟೆ ಭಾಗದಲ್ಲಿ ಪಕ್ಷದಿಂದ ಬಿಜೆಪಿಯತ್ತ ಮುಖ ಮಾಡಿದ್ದ ಹಿರಿಯ ಮುಖಂಡರ ಮನವೊಲಿಸಿ ಮರಳಿ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ದಿವಂಗತ ಶಾಸಕ ಸತ್ಯನಾರಾಯಣ್ ಅವರು 8 ಸಾವಿರ ಮಂದಿಗೆ ಸಾಗುವಳಿ ಚೀಟಿ ಕೊಡಿಸಿದ್ದು ಆ ಮತಗಳು ಜೆಡಿಎಸ್ ಬಿಟ್ಟು ಬೇರೆಡೆ ಹೋಗುವುದಿಲ್ಲ ಎಂಬ ಲೆಕ್ಕಾಚಾರವೂ ಇದೆ. ಹೀಗಾಗಿ ಜೆಡಿಎಸ್‌ಗೆ ಮೂರನೇ ಸ್ಥಾನ ನಿಶ್ಚಿತ ಎಂಬುದು ಈಗ ಸುಳ್ಳಾಗಿದೆ.

ಬಿಜೆಪಿ ಶಿರಾ ನಗರದಲ್ಲಿ ಪ್ರಾಬಲ್ಯ ಸಾಧಿಸಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೊರಗಿನವರ ‘ಭೂತ’ ತೋರಿಸಿದರೆ ಕ್ಷೇತ್ರದ ಒಳಗಿನ ಮತದಾರ ಭಯ ಬೀಳುವರೇ? ಇಲ್ಲ ಎನ್ನುತ್ತವೆ ಮೂಲಗಳು. ಶಿರಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮೂರು ಪಕ್ಷಗಳ ಅಭ್ಯರ್ಥಿಗಳಿಗೂ ಒಳೇಟಿನ ಭಯ ಕಾಡುತ್ತಿದೆ.

ಮೇಲ್ನೋಟಕ್ಕೆ ಎಲ್ಲವೂ ಸರಿ ಇದ್ದಂತೆ ಕಂಡುಬಂದರೂ ಮೂರು ಪಕ್ಷಗಳ ಆತಂರಿಕ ಭಿನ್ನಮತ ಯಾರಿಗೆ ಹೊಡೆತ ಕೊಡುವುದೋ ಗೊತ್ತಿಲ್ಲ. ಆದರೆ ಹಿಂದುಳಿದ ವರ್ಗಗಳ ಮತಗಳ ಮೇಲೆ ಮೂರು ಪಕ್ಷಗಳೂ ಕಣ್ಣಿಟ್ಟಿವೆ. ಆದರೆ ಮತದಾರನ ಒಲವು ಯಾರ ಮೇಲಿದೆ ಎಂಬುದು ತಿಳಿಯಲು ಎಲ್ಲಾ ಪಕ್ಷಗಳು ನವೆಂಬರ್‌ 10 ರವರೆಗೆ ಕಾಯಲೇಬೇಕು.


ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...