Homeಕರ್ನಾಟಕಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಬಿಜೆಪಿ ಶಿರಾ ನಗರದಲ್ಲಿ ಪ್ರಾಬಲ್ಯ ಸಾಧಿಸಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೊರಗಿನವರ 'ಭೂತ' ತೋರಿಸಿದರೆ ಕ್ಷೇತ್ರದ ಒಳಗಿನ ಮತದಾರ ಭಯ ಬೀಳುವರೇ? ಇಲ್ಲ ಎನ್ನುತ್ತವೆ ಮೂಲಗಳು.

- Advertisement -
- Advertisement -

ಶಿರಾ ಉಪಚುನಾವಣೆಯ ಬಹಿರಂಗ ಪ್ರಚಾರ ಕಾರ್ಯಕ್ಕೆ ತೆರೆ ಬಿದ್ದಿದೆ. ಮನೆಮನೆ ಪ್ರಚಾರ ಆರಂಭವಾಗಿದೆ. ಯಾವ ಅಭ್ಯರ್ಥಿ ನಮಗೆ ಸುಲಭವಾಗಿ ಕೈಗೆಟುಕುತ್ತಾರೆ..? ಯಾರಿಂದ ಅಭಿವೃದ್ಧಿ, ಯಾವ ಅಭ್ಯರ್ಥಿ ಗೆದ್ದರೆ ಕ್ಷೇತ್ರದಲ್ಲಿ ಉಳಿಯುವುದಿಲ್ಲ, ಯಾರು ನಮ್ಮ ನೋವು ಆಲಿಸಬಲ್ಲರು ಎಂಬ ಸ್ಪಷ್ಟನೆ ಮತದಾರರಿಗೆ ಸಿಕ್ಕಿದೆ. ಈವರೆಗೆ ಎಲ್ಲಾ ಪಕ್ಷಗಳ ಮುಖಂಡರು ಆಡಿದ ನಾಟಕಗಳಿಗೆ ತಲೆದೂಗಿರುವ ಮತದಾರರು ತೀರ್ಪು ಕಾಯ್ದಿರಿಸಿದ್ದಾರೆ. ನವೆಂಬರ್ 3ರಂದು ಮತಯಂತ್ರದ ಗುಂಡಿ ಒತ್ತುವ ಮತದಾರರ ತೀರ್ಪು ನವೆಂಬರ್ 10ರಂದು ಹೊರಬೀಳಲಿದೆ.

ಇಷ್ಟು ದಿನದ ಬಹಿರಂಗ ಪ್ರಚಾರದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿಯ ಮುಖಂಡರು ಜಾತಿ ಲೆಕ್ಕಾಚಾರವನ್ನೇ ಪ್ರಮುಖ ಅಸ್ತ್ರವಾಗಿ ಪ್ರಯೋಗ ಮಾಡಿರುವುದು ಇದುವರೆಗಿನ ಬೆಳವಣಿಗೆಗಳಿಂದ ದೃಢಪಟ್ಟಿದೆ. ಪ್ರತಿ ಜಾತಿ ಸಮುದಾಯದ ಮತಗಳನ್ನು ಸೆಳೆಯುವ ಕಸರತ್ತುಗಳೂ ನಡೆದಿವೆ. ಬಿಜೆಪಿ ಒಳಮೀಸಲಾತಿ ಜಾರಿ, ಕಾಡುಗೊಲ್ಲರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ವಿಷಯಗಳನ್ನು ಪ್ರಸ್ತಾಪಿಸಿ ಈ ಸಮುದಾಯದ ಮತಗಳನ್ನು ಛಿದ್ರಗೊಳಿಸಿದೆ.

ಇನ್ನು, ಸಚಿವ ಬಿಎಂಟಿ ನಾಗರಾಜ್ ಅವರನ್ನು ಕರೆಸಿ ಮುಖ್ಯಮಂತ್ರಿ ಯಡಿಯೂರಪ್ಪ ಕುರುಬರಿಗೆ ಸಚಿವ ಸ್ಥಾನ ನೀಡಿದ್ದಾರೆ. ಸಿದ್ದರಾಮಯ್ಯ ಈ ಕೆಲಸವನ್ನು ಮಾಡಲಿಲ್ಲ ಎಂದು ಹೇಳಿಸುವ ಮೂಲಕ ಕುರುಬ ಸಮುದಾಯದ ಮತಗಳು ಒಂದು ಕಡೆ ಹೋಗದಂತೆ ಮಾಡಿದೆ. ಶಿರಾ ಸುತ್ತಮುತ್ತಲ ಪ್ರದೇಶದಲ್ಲಿ ಕುಂಚಿಟಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದು ಆ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವ ಭರವಸೆಯನ್ನೂ ನೀಡಿ ಆ ಮತಗಳ ಬುಟ್ಟಿಗೂ ಬಿಜೆಪಿ ಕೈ ಹಾಕಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊನೆ ಗಳಿಗೆಯಲ್ಲಿ ಶಿರಾ ಕ್ಷೇತ್ರಕ್ಕೆ ಬಂದು ಪ್ರಚಾರ ನಡೆಸಿದ್ದಾರೆ. ನೀರಿನ ರಾಜಕೀಯವನ್ನು ಮುನ್ನೆಲೆಗೆ ತಂದು ಆರು ತಿಂಗಳಲ್ಲಿ ಮದಲೂರು ಕೆರೆಗೆ ನೀರು ಹರಿಸುವ ಮತ್ತು ಗಂಗಾ ಪೂಜೆ ಮಾಡುವ ಭರವಸೆಯನ್ನು ನೀಡಿ ಹೋಗಿರುವುದು ಬಿಜೆಪಿಗೆ ಒಂದಿಷ್ಟು ಮತಗಳು ಬರಲಿವೆ ಎಂಬ ಭರವಸೆ ನೀಡಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಇತ್ತ ಮದಲೂರು ಗ್ರಾಮ ಮತ್ತು ಶಿರಾ ನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶ ಮಾಡಿತ್ತು. ಸಮಾವೇಶದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಆದರೆ ಈ ಸಮಾವೇಶದಲ್ಲಿ ಭಾಗಿಯಾಗಿದ್ದವರ ಪೈಕಿ ಶೇ 65ರಷ್ಟು ಮಂದಿ ಹೊರಗಿನವರು ಎಂದು ಹೇಳಲಾಗುತ್ತಿದೆ.

ಆಡಳಿತಾರೂಢ ಬಿಜೆಪಿ ಬಹಿರಂಗ ವಿಜಯ ಸಂಕಲ್ಪ ಸಮಾವೇಶಕ್ಕೆ ಹಿರಿಯೂರು, ಮಧುಗಿರಿ, ಚಿಕ್ಕನಾಯನಹಳ್ಳಿ, ಹುಳಿಯಾರು ಭಾಗಗಳಿಂದ ಸಾವಿರಾರು ಜನರನ್ನು ಹಣ ಕೊಟ್ಟು ಕರೆತರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮದಲೂರಿನ ಸಮಾವೇಶದಲ್ಲಿ ಭಾಗವಹಿಸಿದ್ದ ಜನರನ್ನು ಕರೆದುಕೊಂಡು 300ಕ್ಕೂ ಹೆಚ್ಚು ವಾಹನಗಳು ಹಿರಿಯೂರಿನತ್ತ ಸಾಗಿವೆ. ಈ ವಾಹನಗಳು ಜವಗೊಂಡನಹಳ್ಳಿ ಮತ್ತು ಆದಿವಾಲದತ್ತ ಪ್ರಯಾಣ ಬೆಳೆಸಿವೆ. ವಿಜಯ ಸಂಕಲ್ಪ ಸಮಾವೇಶ ಮುಗಿದ ಬಳಿಕ ಮದ್ಯವನ್ನು ಮದಲೂರು ಕೆರೆಯ ಅಂಗಳದಲ್ಲಿ ಹಂಚಿಕೆ ಮಾಡಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.

ಕಾಂಗ್ರೆಸ್ ಕೂಡ ಬೇರೆ ಬೇರೆ ಜಾತಿಯ ಮತಗಳನ್ನು ಸೆಳೆಯಲು ತಂತ್ರಗಳನ್ನು ಅನುಸರಿಸಿದೆ. ಎಲ್ಲಾ ವಿಭಾಗಗಳ ಮುಖಂಡರನ್ನು ಕ್ಷೇತ್ರಕ್ಕೆ ಕರೆಸಿ ಪ್ರಚಾರ ಕೈಗೊಂಡಿದೆ. ಕಾಂಗ್ರೆಸ್ ಮುಖಂಡರು ಜೆಡಿಎಸ್ ಅಭ್ಯರ್ಥಿಯ ಕುರಿತು ಎಲ್ಲಿಯೂ ಟೀಕೆಗಳನ್ನು ವ್ಯಕ್ತಪಡಿಸಿಲ್ಲ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ಬಿ.ಕೆ.ಹರಿಪ್ರಸಾದ್, ಕೆ.ಎನ್.ರಾಜಣ್ಣ, ಮುದ್ದಹನುಮೇಗೌಡ, ಷಡಕ್ಷರಿ, ಡಾ.ಜಿ.ಪರಮೇಶ್ವರ್, ಉಮಾಶ್ರೀ, ಜಯಮಾಲ ಹೀಗೆ ಎಲ್ಲಾ ನಾಯಕರೂ ಬಂದು ಕಾಂಗ್ರೆಸ್ ಸರ್ಕಾರದ ಸಾಧನೆಗಳು, ಶಿರಾ ಕ್ಷೇತ್ರಕ್ಕೆ ಟಿ.ಬಿ.ಜಯಚಂದ್ರ ಮಾಡಿರುವ ಕಾರ್ಯಗಳು, ಮದಲೂರು ಕೆರೆಗೆ ನೀರು ಹರಿಸುವ ಕುರಿತು ಬಿಜೆಪಿ ದ್ವಂದ್ವ, ನೀರಿನ ಸಮಸ್ಯೆ ಇದ್ದಾಗ ಶಿರಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದನ್ನು ಪ್ರಸ್ತಾಪಿಸಿ ಮತದಾರರ ಮನಸ್ಸು ಗೆಲ್ಲುವ ಯತ್ನಗಳನ್ನು ಮಾಡುತ್ತಿದೆ.

ಅನುಕಂಪದ ಅಲೆಯನ್ನೇ ನೆಚ್ಚಿಕೊಂಡಿರುವ ಜೆಡಿಎಸ್‌ಗೆ ಪಕ್ಷದ ವರಿಷ್ಠರೇ ಬಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ಮೊದಲಾದ ನಾಯಕರು ಶಿರಾದಲ್ಲಿ ನಾಲ್ಕು ದಿನಗಳು ಭರ್ಜರಿ ಪ್ರಚಾರ ನಡೆಸಿದ ಮೇಲೆ ಜೆಡಿಎಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ಇಮ್ಮಡಿಯಾಗಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಪ್ರಜ್ವಲ್ ರೇವಣ್ಣ ಅವರು ಹುಲಿಕುಂಟೆ ಭಾಗದಲ್ಲಿ ಪಕ್ಷದಿಂದ ಬಿಜೆಪಿಯತ್ತ ಮುಖ ಮಾಡಿದ್ದ ಹಿರಿಯ ಮುಖಂಡರ ಮನವೊಲಿಸಿ ಮರಳಿ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ದಿವಂಗತ ಶಾಸಕ ಸತ್ಯನಾರಾಯಣ್ ಅವರು 8 ಸಾವಿರ ಮಂದಿಗೆ ಸಾಗುವಳಿ ಚೀಟಿ ಕೊಡಿಸಿದ್ದು ಆ ಮತಗಳು ಜೆಡಿಎಸ್ ಬಿಟ್ಟು ಬೇರೆಡೆ ಹೋಗುವುದಿಲ್ಲ ಎಂಬ ಲೆಕ್ಕಾಚಾರವೂ ಇದೆ. ಹೀಗಾಗಿ ಜೆಡಿಎಸ್‌ಗೆ ಮೂರನೇ ಸ್ಥಾನ ನಿಶ್ಚಿತ ಎಂಬುದು ಈಗ ಸುಳ್ಳಾಗಿದೆ.

ಬಿಜೆಪಿ ಶಿರಾ ನಗರದಲ್ಲಿ ಪ್ರಾಬಲ್ಯ ಸಾಧಿಸಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೊರಗಿನವರ ‘ಭೂತ’ ತೋರಿಸಿದರೆ ಕ್ಷೇತ್ರದ ಒಳಗಿನ ಮತದಾರ ಭಯ ಬೀಳುವರೇ? ಇಲ್ಲ ಎನ್ನುತ್ತವೆ ಮೂಲಗಳು. ಶಿರಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮೂರು ಪಕ್ಷಗಳ ಅಭ್ಯರ್ಥಿಗಳಿಗೂ ಒಳೇಟಿನ ಭಯ ಕಾಡುತ್ತಿದೆ.

ಮೇಲ್ನೋಟಕ್ಕೆ ಎಲ್ಲವೂ ಸರಿ ಇದ್ದಂತೆ ಕಂಡುಬಂದರೂ ಮೂರು ಪಕ್ಷಗಳ ಆತಂರಿಕ ಭಿನ್ನಮತ ಯಾರಿಗೆ ಹೊಡೆತ ಕೊಡುವುದೋ ಗೊತ್ತಿಲ್ಲ. ಆದರೆ ಹಿಂದುಳಿದ ವರ್ಗಗಳ ಮತಗಳ ಮೇಲೆ ಮೂರು ಪಕ್ಷಗಳೂ ಕಣ್ಣಿಟ್ಟಿವೆ. ಆದರೆ ಮತದಾರನ ಒಲವು ಯಾರ ಮೇಲಿದೆ ಎಂಬುದು ತಿಳಿಯಲು ಎಲ್ಲಾ ಪಕ್ಷಗಳು ನವೆಂಬರ್‌ 10 ರವರೆಗೆ ಕಾಯಲೇಬೇಕು.


ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...