Homeಕರ್ನಾಟಕಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಉಪಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಮತದಾನದತ್ತ ಎಲ್ಲರ ಚಿತ್ತ

ಬಿಜೆಪಿ ಶಿರಾ ನಗರದಲ್ಲಿ ಪ್ರಾಬಲ್ಯ ಸಾಧಿಸಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೊರಗಿನವರ 'ಭೂತ' ತೋರಿಸಿದರೆ ಕ್ಷೇತ್ರದ ಒಳಗಿನ ಮತದಾರ ಭಯ ಬೀಳುವರೇ? ಇಲ್ಲ ಎನ್ನುತ್ತವೆ ಮೂಲಗಳು.

- Advertisement -
- Advertisement -

ಶಿರಾ ಉಪಚುನಾವಣೆಯ ಬಹಿರಂಗ ಪ್ರಚಾರ ಕಾರ್ಯಕ್ಕೆ ತೆರೆ ಬಿದ್ದಿದೆ. ಮನೆಮನೆ ಪ್ರಚಾರ ಆರಂಭವಾಗಿದೆ. ಯಾವ ಅಭ್ಯರ್ಥಿ ನಮಗೆ ಸುಲಭವಾಗಿ ಕೈಗೆಟುಕುತ್ತಾರೆ..? ಯಾರಿಂದ ಅಭಿವೃದ್ಧಿ, ಯಾವ ಅಭ್ಯರ್ಥಿ ಗೆದ್ದರೆ ಕ್ಷೇತ್ರದಲ್ಲಿ ಉಳಿಯುವುದಿಲ್ಲ, ಯಾರು ನಮ್ಮ ನೋವು ಆಲಿಸಬಲ್ಲರು ಎಂಬ ಸ್ಪಷ್ಟನೆ ಮತದಾರರಿಗೆ ಸಿಕ್ಕಿದೆ. ಈವರೆಗೆ ಎಲ್ಲಾ ಪಕ್ಷಗಳ ಮುಖಂಡರು ಆಡಿದ ನಾಟಕಗಳಿಗೆ ತಲೆದೂಗಿರುವ ಮತದಾರರು ತೀರ್ಪು ಕಾಯ್ದಿರಿಸಿದ್ದಾರೆ. ನವೆಂಬರ್ 3ರಂದು ಮತಯಂತ್ರದ ಗುಂಡಿ ಒತ್ತುವ ಮತದಾರರ ತೀರ್ಪು ನವೆಂಬರ್ 10ರಂದು ಹೊರಬೀಳಲಿದೆ.

ಇಷ್ಟು ದಿನದ ಬಹಿರಂಗ ಪ್ರಚಾರದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿಯ ಮುಖಂಡರು ಜಾತಿ ಲೆಕ್ಕಾಚಾರವನ್ನೇ ಪ್ರಮುಖ ಅಸ್ತ್ರವಾಗಿ ಪ್ರಯೋಗ ಮಾಡಿರುವುದು ಇದುವರೆಗಿನ ಬೆಳವಣಿಗೆಗಳಿಂದ ದೃಢಪಟ್ಟಿದೆ. ಪ್ರತಿ ಜಾತಿ ಸಮುದಾಯದ ಮತಗಳನ್ನು ಸೆಳೆಯುವ ಕಸರತ್ತುಗಳೂ ನಡೆದಿವೆ. ಬಿಜೆಪಿ ಒಳಮೀಸಲಾತಿ ಜಾರಿ, ಕಾಡುಗೊಲ್ಲರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ವಿಷಯಗಳನ್ನು ಪ್ರಸ್ತಾಪಿಸಿ ಈ ಸಮುದಾಯದ ಮತಗಳನ್ನು ಛಿದ್ರಗೊಳಿಸಿದೆ.

ಇನ್ನು, ಸಚಿವ ಬಿಎಂಟಿ ನಾಗರಾಜ್ ಅವರನ್ನು ಕರೆಸಿ ಮುಖ್ಯಮಂತ್ರಿ ಯಡಿಯೂರಪ್ಪ ಕುರುಬರಿಗೆ ಸಚಿವ ಸ್ಥಾನ ನೀಡಿದ್ದಾರೆ. ಸಿದ್ದರಾಮಯ್ಯ ಈ ಕೆಲಸವನ್ನು ಮಾಡಲಿಲ್ಲ ಎಂದು ಹೇಳಿಸುವ ಮೂಲಕ ಕುರುಬ ಸಮುದಾಯದ ಮತಗಳು ಒಂದು ಕಡೆ ಹೋಗದಂತೆ ಮಾಡಿದೆ. ಶಿರಾ ಸುತ್ತಮುತ್ತಲ ಪ್ರದೇಶದಲ್ಲಿ ಕುಂಚಿಟಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದು ಆ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವ ಭರವಸೆಯನ್ನೂ ನೀಡಿ ಆ ಮತಗಳ ಬುಟ್ಟಿಗೂ ಬಿಜೆಪಿ ಕೈ ಹಾಕಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊನೆ ಗಳಿಗೆಯಲ್ಲಿ ಶಿರಾ ಕ್ಷೇತ್ರಕ್ಕೆ ಬಂದು ಪ್ರಚಾರ ನಡೆಸಿದ್ದಾರೆ. ನೀರಿನ ರಾಜಕೀಯವನ್ನು ಮುನ್ನೆಲೆಗೆ ತಂದು ಆರು ತಿಂಗಳಲ್ಲಿ ಮದಲೂರು ಕೆರೆಗೆ ನೀರು ಹರಿಸುವ ಮತ್ತು ಗಂಗಾ ಪೂಜೆ ಮಾಡುವ ಭರವಸೆಯನ್ನು ನೀಡಿ ಹೋಗಿರುವುದು ಬಿಜೆಪಿಗೆ ಒಂದಿಷ್ಟು ಮತಗಳು ಬರಲಿವೆ ಎಂಬ ಭರವಸೆ ನೀಡಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಕಾಂಗ್ರೆಸ್- ಜೆಡಿಎಸ್ ನಡುವೆ ನೇರ ಹಣಾಹಣಿ

ಇತ್ತ ಮದಲೂರು ಗ್ರಾಮ ಮತ್ತು ಶಿರಾ ನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶ ಮಾಡಿತ್ತು. ಸಮಾವೇಶದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಆದರೆ ಈ ಸಮಾವೇಶದಲ್ಲಿ ಭಾಗಿಯಾಗಿದ್ದವರ ಪೈಕಿ ಶೇ 65ರಷ್ಟು ಮಂದಿ ಹೊರಗಿನವರು ಎಂದು ಹೇಳಲಾಗುತ್ತಿದೆ.

ಆಡಳಿತಾರೂಢ ಬಿಜೆಪಿ ಬಹಿರಂಗ ವಿಜಯ ಸಂಕಲ್ಪ ಸಮಾವೇಶಕ್ಕೆ ಹಿರಿಯೂರು, ಮಧುಗಿರಿ, ಚಿಕ್ಕನಾಯನಹಳ್ಳಿ, ಹುಳಿಯಾರು ಭಾಗಗಳಿಂದ ಸಾವಿರಾರು ಜನರನ್ನು ಹಣ ಕೊಟ್ಟು ಕರೆತರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮದಲೂರಿನ ಸಮಾವೇಶದಲ್ಲಿ ಭಾಗವಹಿಸಿದ್ದ ಜನರನ್ನು ಕರೆದುಕೊಂಡು 300ಕ್ಕೂ ಹೆಚ್ಚು ವಾಹನಗಳು ಹಿರಿಯೂರಿನತ್ತ ಸಾಗಿವೆ. ಈ ವಾಹನಗಳು ಜವಗೊಂಡನಹಳ್ಳಿ ಮತ್ತು ಆದಿವಾಲದತ್ತ ಪ್ರಯಾಣ ಬೆಳೆಸಿವೆ. ವಿಜಯ ಸಂಕಲ್ಪ ಸಮಾವೇಶ ಮುಗಿದ ಬಳಿಕ ಮದ್ಯವನ್ನು ಮದಲೂರು ಕೆರೆಯ ಅಂಗಳದಲ್ಲಿ ಹಂಚಿಕೆ ಮಾಡಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.

ಕಾಂಗ್ರೆಸ್ ಕೂಡ ಬೇರೆ ಬೇರೆ ಜಾತಿಯ ಮತಗಳನ್ನು ಸೆಳೆಯಲು ತಂತ್ರಗಳನ್ನು ಅನುಸರಿಸಿದೆ. ಎಲ್ಲಾ ವಿಭಾಗಗಳ ಮುಖಂಡರನ್ನು ಕ್ಷೇತ್ರಕ್ಕೆ ಕರೆಸಿ ಪ್ರಚಾರ ಕೈಗೊಂಡಿದೆ. ಕಾಂಗ್ರೆಸ್ ಮುಖಂಡರು ಜೆಡಿಎಸ್ ಅಭ್ಯರ್ಥಿಯ ಕುರಿತು ಎಲ್ಲಿಯೂ ಟೀಕೆಗಳನ್ನು ವ್ಯಕ್ತಪಡಿಸಿಲ್ಲ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ಬಿ.ಕೆ.ಹರಿಪ್ರಸಾದ್, ಕೆ.ಎನ್.ರಾಜಣ್ಣ, ಮುದ್ದಹನುಮೇಗೌಡ, ಷಡಕ್ಷರಿ, ಡಾ.ಜಿ.ಪರಮೇಶ್ವರ್, ಉಮಾಶ್ರೀ, ಜಯಮಾಲ ಹೀಗೆ ಎಲ್ಲಾ ನಾಯಕರೂ ಬಂದು ಕಾಂಗ್ರೆಸ್ ಸರ್ಕಾರದ ಸಾಧನೆಗಳು, ಶಿರಾ ಕ್ಷೇತ್ರಕ್ಕೆ ಟಿ.ಬಿ.ಜಯಚಂದ್ರ ಮಾಡಿರುವ ಕಾರ್ಯಗಳು, ಮದಲೂರು ಕೆರೆಗೆ ನೀರು ಹರಿಸುವ ಕುರಿತು ಬಿಜೆಪಿ ದ್ವಂದ್ವ, ನೀರಿನ ಸಮಸ್ಯೆ ಇದ್ದಾಗ ಶಿರಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಿದ್ದನ್ನು ಪ್ರಸ್ತಾಪಿಸಿ ಮತದಾರರ ಮನಸ್ಸು ಗೆಲ್ಲುವ ಯತ್ನಗಳನ್ನು ಮಾಡುತ್ತಿದೆ.

ಅನುಕಂಪದ ಅಲೆಯನ್ನೇ ನೆಚ್ಚಿಕೊಂಡಿರುವ ಜೆಡಿಎಸ್‌ಗೆ ಪಕ್ಷದ ವರಿಷ್ಠರೇ ಬಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ಮೊದಲಾದ ನಾಯಕರು ಶಿರಾದಲ್ಲಿ ನಾಲ್ಕು ದಿನಗಳು ಭರ್ಜರಿ ಪ್ರಚಾರ ನಡೆಸಿದ ಮೇಲೆ ಜೆಡಿಎಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ಇಮ್ಮಡಿಯಾಗಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಪ್ರಜ್ವಲ್ ರೇವಣ್ಣ ಅವರು ಹುಲಿಕುಂಟೆ ಭಾಗದಲ್ಲಿ ಪಕ್ಷದಿಂದ ಬಿಜೆಪಿಯತ್ತ ಮುಖ ಮಾಡಿದ್ದ ಹಿರಿಯ ಮುಖಂಡರ ಮನವೊಲಿಸಿ ಮರಳಿ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ದಿವಂಗತ ಶಾಸಕ ಸತ್ಯನಾರಾಯಣ್ ಅವರು 8 ಸಾವಿರ ಮಂದಿಗೆ ಸಾಗುವಳಿ ಚೀಟಿ ಕೊಡಿಸಿದ್ದು ಆ ಮತಗಳು ಜೆಡಿಎಸ್ ಬಿಟ್ಟು ಬೇರೆಡೆ ಹೋಗುವುದಿಲ್ಲ ಎಂಬ ಲೆಕ್ಕಾಚಾರವೂ ಇದೆ. ಹೀಗಾಗಿ ಜೆಡಿಎಸ್‌ಗೆ ಮೂರನೇ ಸ್ಥಾನ ನಿಶ್ಚಿತ ಎಂಬುದು ಈಗ ಸುಳ್ಳಾಗಿದೆ.

ಬಿಜೆಪಿ ಶಿರಾ ನಗರದಲ್ಲಿ ಪ್ರಾಬಲ್ಯ ಸಾಧಿಸಿದ್ದರೆ, ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೊರಗಿನವರ ‘ಭೂತ’ ತೋರಿಸಿದರೆ ಕ್ಷೇತ್ರದ ಒಳಗಿನ ಮತದಾರ ಭಯ ಬೀಳುವರೇ? ಇಲ್ಲ ಎನ್ನುತ್ತವೆ ಮೂಲಗಳು. ಶಿರಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮೂರು ಪಕ್ಷಗಳ ಅಭ್ಯರ್ಥಿಗಳಿಗೂ ಒಳೇಟಿನ ಭಯ ಕಾಡುತ್ತಿದೆ.

ಮೇಲ್ನೋಟಕ್ಕೆ ಎಲ್ಲವೂ ಸರಿ ಇದ್ದಂತೆ ಕಂಡುಬಂದರೂ ಮೂರು ಪಕ್ಷಗಳ ಆತಂರಿಕ ಭಿನ್ನಮತ ಯಾರಿಗೆ ಹೊಡೆತ ಕೊಡುವುದೋ ಗೊತ್ತಿಲ್ಲ. ಆದರೆ ಹಿಂದುಳಿದ ವರ್ಗಗಳ ಮತಗಳ ಮೇಲೆ ಮೂರು ಪಕ್ಷಗಳೂ ಕಣ್ಣಿಟ್ಟಿವೆ. ಆದರೆ ಮತದಾರನ ಒಲವು ಯಾರ ಮೇಲಿದೆ ಎಂಬುದು ತಿಳಿಯಲು ಎಲ್ಲಾ ಪಕ್ಷಗಳು ನವೆಂಬರ್‌ 10 ರವರೆಗೆ ಕಾಯಲೇಬೇಕು.


ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...