Homeಕರ್ನಾಟಕಉಪಚುನಾವಣೆ: ಬೆಳಿಗ್ಗೆ ನಿಧಾನಗತಿಯಲ್ಲಿ ಆರಂಭವಾದ ಮತದಾನ ಪ್ರಕ್ರಿಯೆ ಈಗ ಚುರುಕಾಗಿದೆ!

ಉಪಚುನಾವಣೆ: ಬೆಳಿಗ್ಗೆ ನಿಧಾನಗತಿಯಲ್ಲಿ ಆರಂಭವಾದ ಮತದಾನ ಪ್ರಕ್ರಿಯೆ ಈಗ ಚುರುಕಾಗಿದೆ!

ನಾಗರಬಾವಿಯ ಮತಗಟ್ಟೆಸಂಖ್ಯೆ 290ರಲ್ಲಿ ಬಿಜೆಪಿ ಕಾರ್ಯಕರ್ತರು ಕೇಸರಿ ಬಟ್ಟೆ ಧರಿಸಿಕೊಂಡು ಮತದಾನ ಮಾಡಲು ಬಂದಿದ್ದರಿಂದ, ಕಾಂಗ್ರೆಸ್ ಮತ್ತು ನಿಜೆಪಿ ನಾಯಕರ ನಡುವೆ ವಾಗ್ವಾದಕ್ಕೆ ಕಾರಣವಾಯಿತು

- Advertisement -
- Advertisement -

ಇಂದು ಕರ್ನಾಟಕದ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಶಿರಾ ಮತ್ತು ಆರ್‌ಆರ್‌ ನಗರದಲ್ಲಿ 9 ಗಂಟೆಯ ವರದಿಯ ಪ್ರಕಾರ ಅತ್ಯಂತ ಕಡಿಮೆ ಮತದಾನ ನಡೆದಿದೆ ಎಂದು ವರದಿಯಾಗಿದೆ. ಆರ್‌ಆರ್‌ ನಗರದಲ್ಲಿ ಶೇ .6.27, ಸಿರಾದಲ್ಲಿ ಶೇ .8.25 ಮತದಾನ ದಾಖಲಾಗಿದೆ.

ಆದರೆ ಆರ್‌ಆರ್‌ ನಗರ ವಿಧಾನಸಭಾ ಕ್ಷೇತ್ರದ ಕೆಲವು ಮತಗಟ್ಟೆಗಳಲ್ಲಿ ಮಧ್ಯಾಹ್ನ 12 ಗಂಟೆ ವೇಳೆಗೆ ಮತದಾನ ಚುರುಕುಗೊಂಡಿದೆ. ಮತದಾರರು ತಮ್ಮ ಹಕ್ಕು ಚಲಾಯಿಸಲು ಸರದಿಯಲ್ಲಿ ನಿಂತ ದೃಶ್ಯ ಕಂಡುಬಂದಿದೆ. ಮಧ್ಯಾಹ್ನದ ಬಳಿಕ ಮತ್ತುಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ.

ಪ್ರತೀ ಮತಗಟ್ಟೆಯಲ್ಲೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಈ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತಗಟ್ಟೆಯಲ್ಲಿ  ಬೂತ್‌ಗಳನ್ನು ಸ್ವಚ್ಚಗೊಳಿಸುವುದು, ತಾಪಮಾನವನ್ನು ಪರಿಶೀಲಿಸುವುದು, ಮತದಾರರಿಗೆ ಕೈಗವಸುಗಳನ್ನು ಒದಗಿಸುವುದು, ಸ್ಯಾನಿಟೈಸರ್‌ಗಳನ್ನು ನೀಡುವುದು ಸೇರಿದಂತೆ ಹಲವು ವ್ಯವಸ್ಥೆಗಳನ್ನು ಮಾಡಲಾಗಿದೆ.

ಕೇತ್ರದಲ್ಲಿ ಒಟ್ಟು 678 ಮತಗಟ್ಟೆಗಳಿದ್ದು, ಅದರಲ್ಲಿ 82 ಮತಗಟ್ಟೆಗಳು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಮತದಾನ ಪ್ರಕ್ರಿಯೆ ಸುಸೂತ್ರವಾಗಿ ನಡೆಸಲು ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ.

112 ಮೊಬೈಲ್ ಸ್ಕ್ವಾಡ್ ನಿಯೋಜಿಸಲಾಗಿದ್ದು ಈ ತಂಡವು ಪ್ರತಿ ಮತಗಟ್ಟೆಗೆ ತೆರಳಿ ಬಂದೋಬಸ್ತ್ ಹಾಗೂ ಸ್ಥಿತಿಗತಿ ಬಗ್ಗೆ ನಿಗಾ ಇಡಲಿದೆ. ಪೊಲೀಸರ ಗಸ್ತು ಹೆಚ್ಚಿಸಲು 32 ಹೊಯ್ಸಳ ವಾಹನ ಮತ್ತು 91 ಚೀತಾಗಳನ್ನು ಯೋಜಿಸಲಾಗಿದೆ. ಆರ್ ಆರ್ ನಗರ ಅತಿ ಸೂಕ್ಷ್ಮ ಕ್ಷೇತ್ರವಾಗಿದ್ದು ಮತದಾನದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಸಲುವಾಗಿ 2563 ಪೊಲೀಸರನ್ನು ನಿಯೋಜಿಸಲಾಗಿದೆ.

ಕ್ಷೇತ್ರದಲ್ಲಿ ಮೂವರು ಡಿಸಿಪಿಗಳು, 8 ಎಸಿಪಿ, 30 ಇನ್ಸ್‌ಪೆಕ್ಟರ್, 94 ಪಿಎಸ್ಐ, 185 ಎಎಸ್ಐ, 1547 ಕಾನ್‌ಸ್ಟೆಬಲ್ ಗಳು, 699 ಗೃಹ ರಕ್ಷಕ ಸಿಬ್ಬಂದಿ, 19 ಕೆಎಸ್ಆರ್ ಪಿ, 20 ಸಿಎಆರ್ ತುಕಡಿ, 3 ಸಿಎಪಿಎಫ್ ಪ್ಯಾರಾ ಮಿಲಿಟರಿ ತುಕಡಿ ನಿಯೋಜಿಸಲಾಗಿದೆ.

ಇಲ್ಲಿಯವರೆಗೆ ಎರಡೂ ಕ್ಷೇತ್ರಗಳಲ್ಲಿ ಮತದಾನ ಶಾಂತಿಯುತವಾಗಿಯೇ ನಡೆದಿದೆ. ಇದೀಗ ಬಂದ ವರದಿಯ ಪ್ರಕಾರ ನಾಗರಬಾವಿಯ ಮತಗಟ್ಟೆಸಂಖ್ಯೆ 290ರಲ್ಲಿ ಬಿಜೆಪಿ ಕಾರ್ಯಕರ್ತರು ಕೇಸರಿ ಬಟ್ಟೆ ಧರಿಸಿಕೊಂಡು ಮತದಾನ ಮಾಡಲು ಬಂದಿದ್ದರಿಂದ, ಕಾಂಗ್ರೆಸ್ ಮತ್ತು ನಿಜೆಪಿ ನಾಯಕರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ನಂತರ ಪೊಲೀಸರು ಬಂದು ಇದನ್ನು ತಿಳಿಗೊಳಿಸಿದರು.

ಇದನ್ನೂ ಓದಿ: ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಆರ್.ಆರ್.ನಗರದಲ್ಲಿ, 1,200 ಕ್ಕೂ ಹೆಚ್ಚು ಮತದಾರರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಚುನಾವಣಾ ಸಿಬ್ಬಂದಿ ಅವರನ್ನು ಪ್ರತ್ಯೇಕವಾಗಿ ಸಂಪರ್ಕಿಸುತ್ತಿದ್ದು, ಅವರು ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಿದ್ದಾರೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಸಂಜೆ 5 ಗಂಟೆ ನಂತರ ಸೋಂಕಿತರಿಗೆ ಮತದಾನ ಮಾಡಲು ಸಹ ವ್ಯವಸ್ಥೆ ಮಾಡಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ತಮ್ಮ ಟ್ವೀಟ್‌ನಲ್ಲಿ ಮತದಾರರು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಸಿರಾದಲ್ಲಿ ಡಾ.ರಾಜೇಶ್ ಗೌಡರನ್ನು ಬಿಜೆಪಿ ಕಣಕ್ಕಿಳಿಸಿದ್ದು, ಕಾಂಗ್ರೆಸ್ ಪಕ್ಷವು ತನ್ನ ಹಿರಿಯ ನಾಯಕ ಮತ್ತು ಮಾಜಿ ಸಚಿವ ಟಿ ಬಿ ಜಯಚಂದ್ರ ಅವರನ್ನು ಕಣಕ್ಕಿಳಿಸಿದೆ. ಸಹಾನುಭೂತಿಯ ಅಲೆಯನ್ನು ಸದುಪಯೋಗಪಡಿಸಿಕೊಳ್ಳುವ ಪ್ರಯತ್ನದಲ್ಲಿ ಜೆಡಿಎಸ್ ಮಾಜಿ ಶಾಸಕ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರನ್ನು ಕಣಕ್ಕಿಳಿಸಿದೆ.

ಆರ್‌.ಆರ್.ನಗರದಲ್ಲಿ ಜೆಡಿಎಸ್‌ನಿಂದ ವಿ.ಕೃಷ್ಣಮೂರ್ತಿ ಸ್ಪರ್ಧಿಸುತ್ತಿದ್ದು, ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರವಾಗಿದ್ದ ಮುನಿರತ್ನ ಈ ಭಾರಿ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ಇನ್ನು ಕಾಂಗ್ರೆಸ್‌ನಿಂದ ಐಎಎಸ್ ಅಧಿಕಾರಿ ದಿವಂಗತ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಕಣದಲ್ಲಿದ್ದಾರೆ.

ಆರ್‌ಆರ್‌ ನಗರದಲ್ಲಿ ಮತಚಲಾವಣೆ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, “ಎಲ್ಲರೂ ಹೊರಗೆ ಬಂದು ಮತಚಲಾವಣೆ ಹಾಕುವುದರ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ಚುನಾವಣಾ ಆಯೋಗವು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ” ಎಂದು ಹೇಳಿದರು.

ಆರ್.ಆರ್.ನಗರದಲ್ಲಿ 4.6 ಲಕ್ಷಕ್ಕೂ ಹೆಚ್ಚು ಮತದಾರರು ಮತ್ತು ಸಿರಾದಲ್ಲಿ 2.3 ಲಕ್ಷ ಮತದಾರರಿದ್ದಾರೆ. ಮತದಾನ ಎಣಿಕೆ ಮತ್ತು ಫಲಿತಾಂಶ ನವೆಂಬರ್ 10 ಕ್ಕೆ ಹೊರಬೀಳಲಿದೆ.


ಇದನ್ನೂ ಓದಿ: ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...