Homeಕರ್ನಾಟಕಉಪಚುನಾವಣೆ: ಅಪ್ಪು ಅಗಲಿಕೆಯ ನೋವಿನ ನಡುವೆ ಮತದಾನ

ಉಪಚುನಾವಣೆ: ಅಪ್ಪು ಅಗಲಿಕೆಯ ನೋವಿನ ನಡುವೆ ಮತದಾನ

- Advertisement -
- Advertisement -

ಕರ್ನಾಟಕದ ಹಾವೇರಿ ಜಿಲ್ಲೆಯ ಹಾನಗಲ್‌, ವಿಜಯಪುರ ಜಿಲ್ಲೆಯ ಸಿಂದಗಿ ಸೇರಿ ರಾಷ್ಟ್ರಾದ್ಯಂತ ಇಂದು (ಅಕ್ಟೋಬರ್‌ 30) ಉಪಚುನಾವಣೆ ನಡೆಯುತ್ತಿದೆ. ನಟ ಪುನೀತ್‌ ರಾಜ್‌ಕುಮಾರ್‌ ಅಗಲಿಕೆಯ ನೋವಿನ ನಡುವೆ ಈ ಕ್ಷೇತ್ರಗಳ ಜನತೆ ಮತ ಚಲಾವಣೆ ಮಾಡುತ್ತಿದ್ದಾರೆ.

13 ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ಸೇರಿ ಒಟ್ಟು 29 ವಿಧಾನಸಭಾ ಕ್ಷೇತ್ರಗಳು, ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ನವೆಂಬರ್‌ 2ರಂದು ಫಲಿತಾಂಶ ಹೊರಬೀಳಲಿದೆ.

ಕರ್ನಾಟಕದ ಹಾವೇರಿ ಜಿಲ್ಲೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯಾಗಿದ್ದು, ಹಾನಗಲ್‌ ವಿಧಾನಸಭಾ ಕ್ಷೇತ್ರದ ಗೆಲುವು ಪ್ರತಿಷ್ಠೆಯದ್ದಾಗಿದೆ. ಒಟ್ಟು 13 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಆರು ಮಂದಿ ಸ್ಪರ್ಧಿಸಿದ್ದಾರೆ.

ಎರಡು ಕ್ಷೇತ್ರಗಳಲ್ಲಿ ಒಟ್ಟು 4,39,148 ಮತದಾರರಿದ್ದು, 230 ಸರ್ವೀಸ್‌ ಓಟುಗಳಿವೆ. 560 ಮತಗಟ್ಟೆಗಳಲ್ಲಿ ಮತ ಚಲಾವಣೆ ನಡೆಯುತ್ತಿದೆ.

ಸಿಂದಗಿಯ ಜೆಡಿಎಸ್‌ ಶಾಸಕ ಎಂ.ಸಿ.ಮನಗೂಳಿ ಹಾಗೂ ಹಾನಗಲ್‌ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ.ಉದಾಸಿಯವರ ನಿಧನದಿಂದಾಗಿ ಚುನಾವಣೆ ನಡೆಯುತ್ತಿದೆ. ಮನಗೂಳಿ ಅವರ ಪುತ್ರ ಅಶೋಕ್‌ ಮನಗೂಳಿ (ಸಿಂದಗಿ), ಮಾಜಿ ಶಾಸಕ ಶ್ರೀನಿವಾಸ ಮಾನೆ (ಹಾನಗಲ್‌) ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ರಮೇಶ್‌ ಬೂಸನೂರ್‌‌ (ಸಿಂಧಗಿ), ಶಿವರಾಜ್‌ ಸಜ್ಜನರ್‌ (ಹಾನಗಲ್‌) ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಮುಸ್ಲಿಂ ಅಭ್ಯರ್ಥಿಗಳನ್ನು ಜೆಡಿಎಸ್‌ ಎರಡೂ ಕ್ಷೇತ್ರಗಳಲ್ಲೂ ಕಣಕ್ಕಿಳಿಸಿದೆ. ನಾಜಿಯಾ ಶಕೀಲ್‌ ಅಹಮದ್ ಅಂಗಡಿ (ಸಿಂದಗಿ), ನಿಯಾಜ್‌ ಶೈಖ್‌ (ಹಾನಗಲ್‌) ಅವರು ಜೆಡಿಎಸ್‌ನಿಂದ ಸ್ಪರ್ಧಿಸಿದ್ದಾರೆ. ಪುನೀತ್ ರಾಜ್‌ಕುಮಾರ್‌ ನಿಧನದಿಂದಾಗಿ ಈ ಕ್ಷೇತ್ರಗಳ ಜನರು ಶೋಕಾಚರಣೆಯ ನಡುವೆ ಮತ ಚಲಾವಣೆ ಮಾಡುತ್ತಿದ್ದಾರೆ.

ಹಾನಗಲ್‌ ಕ್ಷೇತ್ರದ ನೋಟಾ ಮತದಾನದ ಜಾಗೃತಿ ಕಾರ್ಯಕರ್ತ ಪ್ರಶಾಂತ್‌ ಮುಚ್ಚಂಡಿಯವರು ‘ನಾನುಗೌರಿ.ಕಾಂ’ನೊಂದಿಗೆ ಮಾತನಾಡಿ, “ಪುನೀತ್‌  ಅವರ ನಿಧನವು ಕ್ಷೇತ್ರದ ಜನರಲ್ಲಿ ನೋವು ತಂದಿದೆ. ಅನೇಕರು ಕಣ್ಣೀರು ಹಾಕಿದ್ದಾರೆ. ಆದರೂ ಮತದಾನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಶಾಂತಿಯುತವಾಗಿ ಮತ ಚಲಾವಣೆ ಮಾಡುತ್ತಿದ್ದಾರೆ” ಎಂದರು.

“ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರಲ್ಲಿ ಹುರುಪು ಕಂಡು ಬರುತ್ತಿಲ್ಲ. ಎಲ್ಲ ಪಕ್ಷಗಳ ಅಭ್ಯರ್ಥಿಗಳು ಹೊರಗಿನವರು ಆಗಿರುವುದು ಇದಕ್ಕೆ ಕಾರಣ. ಬಹಿರಂಗ ಪ್ರಚಾರ ಮುಗಿದ ಮೇಲೂ ಅನೇಕರು ಇಲ್ಲಿಯೇ ಉಳಿದಿದ್ದಾರೆ. ಹಣದ ಹೊಳೆಯೇ ಹರಿದಿದೆ” ಎಂದು ಆರೋಪಿಸಿದರು.


ಇದನ್ನೂ ಓದಿರಿ: ಉಪಚುನಾವಣೆ: ಸಿಂಧಗಿಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಪ್ರತಿಪಕ್ಷಗಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...