Homeಕರ್ನಾಟಕಉಪ ಚುನಾವಣೆ: ಶಿಗ್ಗಾಂವಿಯಿಂದ ಮಾಜಿ ಸಿಎಂ ಬೊಮ್ಮಾಯಿ ಪುತ್ರ ಬಿಜೆಪಿಯಿಂದ ಕಣಕ್ಕೆ

ಉಪ ಚುನಾವಣೆ: ಶಿಗ್ಗಾಂವಿಯಿಂದ ಮಾಜಿ ಸಿಎಂ ಬೊಮ್ಮಾಯಿ ಪುತ್ರ ಬಿಜೆಪಿಯಿಂದ ಕಣಕ್ಕೆ

- Advertisement -
- Advertisement -

ರಾಜ್ಯದ ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯನ್ನು ಇನ್ನೂ ಹೆಸರಿಸಲಾಗಿಲ್ಲ. ಅಕ್ಟೋಬರ್ 19ರ ಶನಿವಾರದಂದು ಪಕ್ಷವು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬಿ. ಬೊಮ್ಮಾಯಿ ಅವರನ್ನು ಶಿಗ್ಗಾಂವಿ ಕ್ಷೇತ್ರದಿಂದ ಮತ್ತು ರಾಜ್ಯ ಎಸ್ಟಿ ಮೋರ್ಚಾ ಮುಖ್ಯಸ್ಥ ಬಂಗಾರು ಹನುಮಂತು ಅವರನ್ನು ಸಂಡೂರು ಕ್ಷೇತ್ರದಿಂದ ಕಣಕ್ಕಿಳಿಸಿದೆ. ಶಿಗ್ಗಾಂವಿ ಉಪ ಚುನಾವಣೆ

ಶಿಗ್ಗಾಂವಿ ಕ್ಷೇತ್ರವನ್ನು ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿದ್ದು, ಹಾವೇರಿ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಗೆದ್ದ ನಂತರ ತೆರವಾಗಿತ್ತು. ಭರತ್ ಬೊಮ್ಮಾಯಿ ಅವರು ಯುಎಸ್‌ನ ಪರ್ಡ್ಯೂ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿದ ನಂತರ ಸಿಂಗಾಪುರ್ ಮ್ಯಾನೇಜ್‌ಮೆಂಟ್ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿಯನ್ನು ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಂಗಾರು ಹನುಮಂತು ಬಿಎ, ಬಿಎಡ್ ಮಾಡಿದ್ದಾರೆ. ಸಂಡೂರು (ಎಸ್‌ಟಿ ಮೀಸಲು) ಕ್ಷೇತ್ರದಿಂದ ಬಿಜೆಪಿ ಪಕ್ಷ ಎಂದಿಗೂ ಗೆದ್ದಿಲ್ಲ. ಕರ್ನಾಟಕ ಬಿಜೆಪಿ ಮುಖ್ಯಸ್ಥ ಬಿ.ವೈ. ರಾಘವೇಂಧ್ರೆ ಅವರು ಈ ಸ್ಥಾನವನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸುವಂತೆ ಕಾರ್ಯಕ್ರಮವೊಂದರಲ್ಲಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಶಿಗ್ಗಾಂವಿ ಉಪ ಚುನಾವಣೆ

ಪಕ್ಷದ ಅಭ್ಯರ್ಥಿಗಳಾಗಿ ಆಯ್ಕೆಯಾದ ಭರತ್ ಬೊಮ್ಮಾಯಿ ಮತ್ತು ಬಂಗಾರು ಹನುಮಂತು ಅವರನ್ನು ವಿಜಯೇಂದ್ರ ಅಭಿನಂದಿಸಿದ್ದು, ಮೂರೂ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಿಕೊಳ್ಳಲು ಪಕ್ಷದ ಕಾರ್ಯಕರ್ತರು ಈ ಕ್ಷಣದಿಂದಲೇ ಯೋಧರಂತೆ ಚುನಾವಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

ವಾಲ್ಮೀಕಿ ನಿಗಮ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಈ ಸ್ಥಾನವನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ಬಿಜೆಪಿ ಸೇರಿರುವ ಗಣಿ ಉದ್ಯಮಿ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಸಂಡೂರು ಉಪಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.

ಸಂಡೂರು ಕ್ಷೇತ್ರವನ್ನು ಹಾಲಿ ಕಾಂಗ್ರೆಸ್ ಸಂಸದ ಇ.ತುಕಾರಾಂ ಪ್ರತಿನಿಧಿಸಿದ್ದರು. ಲೋಕಸಭೆ ಚುನಾವಣೆಗೆ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಕ್ಷೇತ್ರದಲ್ಲಿ ತುಕಾರಾಂ ಅವರು ಬಿಜೆಪಿಯ ಅಭ್ಯರ್ಥಿ ಬಿ.ಶ್ರೀರಾಮುಲು ಅವರನ್ನು ಸೋಲಿಸಿದ್ದರು. ಈ ಮಧ್ಯೆ ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ, ಈ ಹಿಂದೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಹಿರಿಯ ನಾಯಕ ಸಿ.ಪಿ. ಯೋಗೇಶ್ವರ ಚನ್ನಪಟ್ಟಣದಿಂದ ಕಣಕ್ಕಿಳಿಸಲು ಕುಮಾರಸ್ವಾಮಿ ಅವರೊಂದಿಗೆ ಬಿಜೆಪಿ ಮಾತುಕತೆ ನಡೆಸುತ್ತಿದೆ. ಆದರೆ, ಕುಮಾರಸ್ವಾಮಿ ತಮ್ಮ ಪಕ್ಷ ಜೆಡಿಎಸ್‌ನಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಒತ್ತಾಯಿಸುತ್ತಿದ್ದಾರೆ. ಮೂಲಗಳ ಪ್ರಕಾರ ಚನ್ನಪಟ್ಟಣದಿಂದ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಕುಮಾರಸ್ವಾಮಿ ಬಯಸಿದ್ದು, ಇನ್ನೆರಡು ದಿನದಲ್ಲಿ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

ಇದನ್ನೂ ಓದಿ: ಎಂವಿಎ ಮೈತ್ರಿ ಸರ್ಕಾರ ರಚಿಸದಂತೆ ಮಹಾರಾಷ್ಟ್ರ ಚುನಾವಣೆ ನಿಗದಿ; ಬಿಜೆಪಿಗೆ ಲಾಭ ಮಾಡುವ ಉದ್ದೇಶ: ಆರೋಪ

ಎಂವಿಎ ಮೈತ್ರಿ ಸರ್ಕಾರ ರಚಿಸದಂತೆ ಮಹಾರಾಷ್ಟ್ರ ಚುನಾವಣೆ ನಿಗದಿ; ಬಿಜೆಪಿಗೆ ಲಾಭ ಮಾಡುವ ಉದ್ದೇಶ: ಆರೋಪ

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...