Homeಕರ್ನಾಟಕಉಪ ಚುನಾವಣೆ: ಶಿಗ್ಗಾಂವಿಯಿಂದ ಮಾಜಿ ಸಿಎಂ ಬೊಮ್ಮಾಯಿ ಪುತ್ರ ಬಿಜೆಪಿಯಿಂದ ಕಣಕ್ಕೆ

ಉಪ ಚುನಾವಣೆ: ಶಿಗ್ಗಾಂವಿಯಿಂದ ಮಾಜಿ ಸಿಎಂ ಬೊಮ್ಮಾಯಿ ಪುತ್ರ ಬಿಜೆಪಿಯಿಂದ ಕಣಕ್ಕೆ

- Advertisement -
- Advertisement -

ರಾಜ್ಯದ ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯನ್ನು ಇನ್ನೂ ಹೆಸರಿಸಲಾಗಿಲ್ಲ. ಅಕ್ಟೋಬರ್ 19ರ ಶನಿವಾರದಂದು ಪಕ್ಷವು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬಿ. ಬೊಮ್ಮಾಯಿ ಅವರನ್ನು ಶಿಗ್ಗಾಂವಿ ಕ್ಷೇತ್ರದಿಂದ ಮತ್ತು ರಾಜ್ಯ ಎಸ್ಟಿ ಮೋರ್ಚಾ ಮುಖ್ಯಸ್ಥ ಬಂಗಾರು ಹನುಮಂತು ಅವರನ್ನು ಸಂಡೂರು ಕ್ಷೇತ್ರದಿಂದ ಕಣಕ್ಕಿಳಿಸಿದೆ. ಶಿಗ್ಗಾಂವಿ ಉಪ ಚುನಾವಣೆ

ಶಿಗ್ಗಾಂವಿ ಕ್ಷೇತ್ರವನ್ನು ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿದ್ದು, ಹಾವೇರಿ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಗೆದ್ದ ನಂತರ ತೆರವಾಗಿತ್ತು. ಭರತ್ ಬೊಮ್ಮಾಯಿ ಅವರು ಯುಎಸ್‌ನ ಪರ್ಡ್ಯೂ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿದ ನಂತರ ಸಿಂಗಾಪುರ್ ಮ್ಯಾನೇಜ್‌ಮೆಂಟ್ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿಯನ್ನು ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಂಗಾರು ಹನುಮಂತು ಬಿಎ, ಬಿಎಡ್ ಮಾಡಿದ್ದಾರೆ. ಸಂಡೂರು (ಎಸ್‌ಟಿ ಮೀಸಲು) ಕ್ಷೇತ್ರದಿಂದ ಬಿಜೆಪಿ ಪಕ್ಷ ಎಂದಿಗೂ ಗೆದ್ದಿಲ್ಲ. ಕರ್ನಾಟಕ ಬಿಜೆಪಿ ಮುಖ್ಯಸ್ಥ ಬಿ.ವೈ. ರಾಘವೇಂಧ್ರೆ ಅವರು ಈ ಸ್ಥಾನವನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸುವಂತೆ ಕಾರ್ಯಕ್ರಮವೊಂದರಲ್ಲಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಶಿಗ್ಗಾಂವಿ ಉಪ ಚುನಾವಣೆ

ಪಕ್ಷದ ಅಭ್ಯರ್ಥಿಗಳಾಗಿ ಆಯ್ಕೆಯಾದ ಭರತ್ ಬೊಮ್ಮಾಯಿ ಮತ್ತು ಬಂಗಾರು ಹನುಮಂತು ಅವರನ್ನು ವಿಜಯೇಂದ್ರ ಅಭಿನಂದಿಸಿದ್ದು, ಮೂರೂ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಿಕೊಳ್ಳಲು ಪಕ್ಷದ ಕಾರ್ಯಕರ್ತರು ಈ ಕ್ಷಣದಿಂದಲೇ ಯೋಧರಂತೆ ಚುನಾವಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

ವಾಲ್ಮೀಕಿ ನಿಗಮ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಈ ಸ್ಥಾನವನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ಬಿಜೆಪಿ ಸೇರಿರುವ ಗಣಿ ಉದ್ಯಮಿ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಸಂಡೂರು ಉಪಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.

ಸಂಡೂರು ಕ್ಷೇತ್ರವನ್ನು ಹಾಲಿ ಕಾಂಗ್ರೆಸ್ ಸಂಸದ ಇ.ತುಕಾರಾಂ ಪ್ರತಿನಿಧಿಸಿದ್ದರು. ಲೋಕಸಭೆ ಚುನಾವಣೆಗೆ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಕ್ಷೇತ್ರದಲ್ಲಿ ತುಕಾರಾಂ ಅವರು ಬಿಜೆಪಿಯ ಅಭ್ಯರ್ಥಿ ಬಿ.ಶ್ರೀರಾಮುಲು ಅವರನ್ನು ಸೋಲಿಸಿದ್ದರು. ಈ ಮಧ್ಯೆ ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ, ಈ ಹಿಂದೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಹಿರಿಯ ನಾಯಕ ಸಿ.ಪಿ. ಯೋಗೇಶ್ವರ ಚನ್ನಪಟ್ಟಣದಿಂದ ಕಣಕ್ಕಿಳಿಸಲು ಕುಮಾರಸ್ವಾಮಿ ಅವರೊಂದಿಗೆ ಬಿಜೆಪಿ ಮಾತುಕತೆ ನಡೆಸುತ್ತಿದೆ. ಆದರೆ, ಕುಮಾರಸ್ವಾಮಿ ತಮ್ಮ ಪಕ್ಷ ಜೆಡಿಎಸ್‌ನಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಒತ್ತಾಯಿಸುತ್ತಿದ್ದಾರೆ. ಮೂಲಗಳ ಪ್ರಕಾರ ಚನ್ನಪಟ್ಟಣದಿಂದ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ಕುಮಾರಸ್ವಾಮಿ ಬಯಸಿದ್ದು, ಇನ್ನೆರಡು ದಿನದಲ್ಲಿ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

ಇದನ್ನೂ ಓದಿ: ಎಂವಿಎ ಮೈತ್ರಿ ಸರ್ಕಾರ ರಚಿಸದಂತೆ ಮಹಾರಾಷ್ಟ್ರ ಚುನಾವಣೆ ನಿಗದಿ; ಬಿಜೆಪಿಗೆ ಲಾಭ ಮಾಡುವ ಉದ್ದೇಶ: ಆರೋಪ

ಎಂವಿಎ ಮೈತ್ರಿ ಸರ್ಕಾರ ರಚಿಸದಂತೆ ಮಹಾರಾಷ್ಟ್ರ ಚುನಾವಣೆ ನಿಗದಿ; ಬಿಜೆಪಿಗೆ ಲಾಭ ಮಾಡುವ ಉದ್ದೇಶ: ಆರೋಪ

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...