Homeಮುಖಪುಟ'ಭಗವಂತನ ಕೃಪೆಯಿಂದ ನಾವೂ ಒಂದು ದಿನ ಬಹುಸಂಖ್ಯಾತರಾಗಬಹುದು..'; ಬಂಗಾಳ ಸಚಿವ ಹಕೀಮ್ ಹೇಳಿಕೆಗೆ ಬಿಜೆಪಿಯಿಂದ ವಿರೋಧ

‘ಭಗವಂತನ ಕೃಪೆಯಿಂದ ನಾವೂ ಒಂದು ದಿನ ಬಹುಸಂಖ್ಯಾತರಾಗಬಹುದು..’; ಬಂಗಾಳ ಸಚಿವ ಹಕೀಮ್ ಹೇಳಿಕೆಗೆ ಬಿಜೆಪಿಯಿಂದ ವಿರೋಧ

- Advertisement -
- Advertisement -

“ಪ್ರಸ್ತುತ ರಾಜ್ಯ ಮತ್ತು ದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಮುಸ್ಲಿಂ ಸಮುದಾಯವು ಭವಿಷ್ಯದಲ್ಲಿ ಬಹುಸಂಖ್ಯಾತರಾಗಬಹುದು” ಎಂದು ಪಶ್ಚಿಮ ಬಂಗಾಳದ ಸಚಿವ ಫಿರ್ಹಾದ್ ಹಕೀಮ್ ಅವರು ಶನಿವಾರ ನೀಡಿದ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ.

ಕೋಲ್ಕತ್ತಾದ ಸರ್ಕಾರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಹಕೀಮ್, “ಪಶ್ಚಿಮ ಬಂಗಾಳದಲ್ಲಿ ನಾವು ಪ್ರಸ್ತುತ ಶೇಕಡಾ 33 ರಷ್ಟಿದ್ದೇವೆ. ರಾಷ್ಟ್ರೀಯವಾಗಿ ನಾವು ಶೇಕಡಾ 17 ರಷ್ಟಿದ್ದೇವೆ. ಆದ್ದರಿಂದ, ನಮ್ಮನ್ನು ಅಲ್ಪಸಂಖ್ಯಾತರು ಎಂದು ಸಂಬೋಧಿಸಲಾಗುತ್ತಿದೆ. ಆದರೆ, ನಾವು ನಮ್ಮನ್ನು ಅಲ್ಪಸಂಖ್ಯಾತರೆಂದು ಪರಿಗಣಿಸುವುದಿಲ್ಲ. ಭಗವಂತನ ಕೃಪೆಯಿಂದ ನಾವೂ ಕೂಡ ಒಂದು ದಿನ ಬಹುಸಂಖ್ಯಾತರಾಗಬಹುದು” ಎಂದರು.

ಹಕೀಮ್ ಹೇಳಿಕೆಗೆ ಬಿಜೆಪಿಯಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಮಾಹಿತಿ ತಂತ್ರಜ್ಞಾನ ಕೋಶದ ಮುಖ್ಯಸ್ಥ ಮತ್ತು ಪಶ್ಚಿಮ ಬಂಗಾಳದ ವೀಕ್ಷಕ ಅಮಿತ್ ಮಾಳವಿಯಾ, “ಹಿಂದೂಗಳನ್ನು ಇಸ್ಲಾಂಗೆ ಪರಿವರ್ತಿಸುವ ದಾವತ್-ಎ-ಇಸ್ಲಾಂನ ಪ್ರಯತ್ನಗಳನ್ನು ಅನುಮೋದಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಎಕ್ಸ್‌ಲ್ಲಿ ಪೋಸ್ಟ್‌ ಮಾಡಿರುವ ಮಾಳವಿಯಾ, “ಮುಸ್ಲಿಂ ಬಹುಸಂಖ್ಯೆ ಕುರಿತು ಹಕೀಮ್ ಅವರ ದೃಷ್ಟಿಕೋನವು ಮುಸ್ಲಿಮರು ನ್ಯಾಯವನ್ನು ತಮ್ಮ ಕೈಗೆ ತೆಗೆದುಕೊಳ್ಳಲು, ಶರಿಯಾ ಕಾನೂನನ್ನು ಸಮರ್ಥವಾಗಿ ಅನುಷ್ಠಾನಕ್ಕೆ ತರಲು ಕಾರಣವಾಗಬಹುದು ಎಂದು ಸಲಹೆ ನೀಡಿದ್ದಾರೆ” ಎಂದರು.

ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್, ಹಕೀಮ್ ಅವರ ಹೇಳಿಕೆಯನ್ನು ‘ದ್ವೇಷ ಭಾಷಣ’ ಹಾಗೂ ‘ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿಯನ್ನು ಸೃಷ್ಟಿಸುವ ನೀಲನಕ್ಷೆ’ ಎಂದು ಆರೋಪಿಸಿದ್ದಾರೆ. ಈ ವಿಚಾರದಲ್ಲಿ ಇಂಡಿಯಾ ಬ್ಲಾಕ್‌ನಲ್ಲಿರುವ ಇತರ ವಿರೋಧ ಪಕ್ಷಗಳ ಮೌನವನ್ನು ಅವರು ಪ್ರಶ್ನಿಸಿದರು.

ತೃಣಮೂಲ ಕಾಂಗ್ರೆಸ್ ನಾಯಕ ಕುನಾಲ್ ಘೋಷ್ ಅವರು ಹಕೀಮ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಅದನ್ನು ಯಾವ ಸಂದರ್ಭದಲ್ಲಿ ಮಾಡಲಾಗಿದೆ ಎಂಬುದರ ಬಗ್ಗೆ ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. ಭಾಷಣದ ನಿರ್ದಿಷ್ಟ ಭಾಗವನ್ನು ಪ್ರತ್ಯೇಕಿಸಿ ಅದನ್ನು ಹೈಲೈಟ್ ಮಾಡುವುದು ಅನ್ಯಾಯವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ಇಂಡಿಯಾ ಬಣದ ನಾಯಕತ್ವವನ್ನು ಕಾಂಗ್ರೆಸ್ ಸಮರ್ಥಿಸಿಕೊಳ್ಳಬೇಕು: ಒಮರ್ ಅಬ್ದುಲ್ಲಾ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...