Homeಮುಖಪುಟ"ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ 'ಸಂವಿಧಾನಕ್ಕೆ ಅಪಚಾರ'ವೆಸಗಿದ ನ್ಯಾ. ಚಂದ್ರಚೂಡ್‌" : ದುಷ್ಯಂತ್ ದವೆ

“ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

- Advertisement -
- Advertisement -

ಹಿರಿಯ ಪತ್ರಕರ್ತ ಕರಣ ತಾಪರ್ ಅವರು ‘ದಿ ವೈರ್‌’ ಸುದ್ದಿ ಮಾಧ್ಯಮಕ್ಕಾಗಿ ನಡೆಸಿದ ಸಂದರ್ಶನದಲ್ಲಿ ದೇಶದ ಅಗ್ರಗಣ್ಯ ವಕೀಲರಲ್ಲಿ ಒಬ್ಬರು ಹಾಗೂ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್‌ನ (ವಕೀಲರ ಸಂಘ) ಮಾಜಿ ಅಧ್ಯಕ್ಷ ದುಷ್ಯಂತ್ ದವೆ ಕಣ್ಣೀರಿಟ್ಟಿದ್ದಾರೆ.

ಸಂದರ್ಶನದ ಕೊನೆಯಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ ಚಂದ್ರಚೂಡ್ ವಿರುದ್ದ ಅಸಮಾಧಾನ ಹೊರಹಾಕಿದ ದವೆ, “ಮಸೀದಿಗಳ ಸಮೀಕ್ಷೆಗೆ ಅನುಮತಿ ನೀಡುವ ಮೂಲಕ ಚಂದ್ರಚೂಡ್ ಅವರು ಸಂವಿಧಾನ ಮತ್ತು ದೇಶಕ್ಕೆ ದೊಡ್ಡ ಅಪಚಾರ ಮಾಡಿದ್ದಾರೆ” ಎಂದು ಕಣ್ಣೀರು ಹಾಕಿದ್ದಾರೆ.

ಸಂದರ್ಶನದಲ್ಲಿ “ನಿವೃತ್ತ ಸಿಜೆಐ ಚಂದ್ರಚೂಡ್ ಅವರು ‘ಯಾರೋ ಹೇಳಿದಂತೆ ನಡೆಯುತ್ತಿದ್ದಾರೆ’ ಎಂದು ದವೆ ಹೇಳಿದರು. ಆಗ ಕರಣ್ ತಾಪರ್ “ಇದರರ್ಥ ಆಡಳಿತರೂಢ ಬಿಜೆಪಿ, ಮೋದಿಯೇ?” ಎಂದು ಮರು ಪ್ರಶ್ನೆ ಹಾಕಿದರು. ಅದಕ್ಕೆ ಉತ್ತರಿಸಿದ ದವೆ, “ಆ ಬಗ್ಗೆ ಸಂದೇಹ ಬೇಡ. ಮೋದಿ ಜೊತೆ ಸೇರಿ ಚಂದ್ರಚೂಡ್ ಅವರು ‘ಆರತಿ ಮಾಡಿರುವುದರಿಂದ, ದೇವರ ಕೃಪೆಯಿಂದ ಆಯೋಧ್ಯೆ ಸಮಸ್ಯೆ ಇತ್ಯರ್ಥವಾಯಿತು ಎಂದು ಹೇಳಿರುವುದರಿಂದ ಇದು ಸಾಬೀತಾಗಿದೆ” ಎಂದಿದ್ದಾರೆ.

“ನಾನು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದೇನೆ. ನಾನು ಚಿಂತಿತನಾಗಿದ್ದೇನೆ. ಈ ಘಟನೆಗಳು ನನ್ನ ಮೇಲೆ ಇಷ್ಟೊಂದು ಪರಿಣಾಮ ಬೀರುತ್ತಿದ್ದರೆ, ಅಲ್ಪ ಸಂಖ್ಯಾತ ಸಮುದಾಯಗಳಿಗೆ ಸೇರಿದವರ ಮೇಲೆ ಎಂತಹ ಪರಿಣಾಮ ಬೀರುತ್ತಿರಬಹುದು? ಈ ದೇಶದ ಪ್ರಸ್ತುತ ಸನ್ನಿವೇಶಗಳ ಬಗ್ಗೆ ಯಾರೂ ಏಕೆ ಏನೂ ಮಾತನಾಡುತ್ತಿಲ್ಲ? ಎಲ್ಲರೂ ಕೇಳುತ್ತಾರೆ ನೀನು ಏಕೆ ಅದರಲ್ಲಿ ಕೈ ಹಾಕುತ್ತಿಯಾ? ಎಂದು. ಇದು ನನ್ನ ದೇಶ, ನಾನು ಸುಮ್ಮನಿರಲು ಸಾಧ್ಯವಿಲ್ಲ” ಎಂದು ದವೆ ಬೇಸರ ವ್ಯಕ್ತಪಡಿಸಿದ್ದಾರೆ.

ದೇಶದ ಪ್ರಸ್ತಕ ಪರಿಸ್ಥಿತಿ ಮತ್ತು ಮಸೀದಿಯ ಅಡಿಯಲ್ಲಿ ಮಂದಿರ ಹುಡುಕುವ ರಾಜಕೀಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ದವೆ, ” ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರ ಮತ್ತು ಮುಸ್ಲಿಂ ಯುವಕರ ಹತ್ಯೆಗೆ ಮಾಜಿ ಸಿಜೆಐ ಡಿ.ವೈ ಚಂದ್ರಚೂಡ್ ಅವರೇ ನೇರ ಹೊಣೆ” ಎಂದು ಆರೋಪಿಸಿದ್ದಾರೆ.

“ಚಂದ್ರಚೂಡ್ ಮತ್ತು ಅವರ ಸಹೋದ್ಯೋಗಿಗಳು ಈ ಹಿಂದಿನ ಸುಪ್ರೀಂ ಕೋರ್ಟ್ ಆದೇಶಗಳನ್ನು ಧಿಕ್ಕರಿಸಿದ್ದಾರೆ. ಅವರು ಕಾನೂನಿನ ನಿಯಮವನ್ನು, ಅಂದರೆ ‘ರೂಲ್ ಆಫ್ ಲಾ’ ವನ್ನು ಮುರಿದಿಲ್ವಾ?” ಎಂದು ದವೆ ಪ್ರಶ್ನಿಸಿದ್ದಾರೆ. “ಚಂದ್ರಚೂಡ್ ಮುಸ್ಲಿಮರ ಮೇಲೆ ದಬ್ಬಾಳಿಕೆ ಮಾಡುವವರಿಗೆ ಮತ್ತು ಮಂದಿರ ಮಸೀದಿ ವಿಭಜಿಸಿ ಲಾಭ ಪಡೆಯುವವರಿಗೆ ಬೇಕಾದಂತೆ ನಡೆದುಕೊಂಡಿದ್ದಾರೆ” ಎಂದು ದವೆ ಆರೋಪಿಸಿದ್ದಾರೆ.

ನ್ಯಾಯಮೂರ್ತಿ ಚಂದ್ರಚೂಡ್ ಅವರ ಕಾರ್ಯವೈಖರಿ ಮತ್ತು ಮೇ 2022ರ ಜ್ಞಾನವ್ಯಾಪಿ ಮಸೀದಿ ಕುರಿತ ಅವರ ತೀರ್ಪನ್ನು ದವೆ ನೇರವಾಗಿ ಟೀಕಿಸಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯ್ದೆಯು ಧಾರ್ಮಿಕ ಸ್ಥಳದ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದ್ದರೂ, ಕೇವಲ ಸ್ಥಳವೊಂದರ ಧಾರ್ಮಿಕ ಲಕ್ಷಣವನ್ನು ಖಚಿತಪಡಿಸಿಕೊಳ್ಳುವುದು ಕಾಯ್ದೆಯನ್ನು ಉಲ್ಲಂಘಿಸುವುದಿಲ್ಲ” ಎಂದು ಚಂದ್ರಚೂಡ್ 2022ರಲ್ಲಿ ಮೌಖಿವಾಗಿ ಹೇಳಿದ್ದರು.

“ನ್ಯಾಯಮೂರ್ತಿ ಚಂದ್ರಚೂಡ್ ಅವರು ತಾವೇ ಭಾಗವಾಗಿದ್ದ ಅಯೋಧ್ಯ ತೀರ್ಪನ್ನು ಈ ಮೂಲಕ ಉಲ್ಲಂಘಿಸಿದ್ದಾರೆ. ನ್ಯಾಯಾಂಗ ಕಾನೂನಿಗೆ ಬದ್ದವಾಗಿರಬೇಕು. ಆದರೆ, ಜ್ಞಾನವ್ಯಾಪಿ ಪ್ರಕರಣದಲ್ಲಿ ಅವರ ತೀರ್ಪು ಆಘಾತಕಾರಿ. ಚಂದ್ರಚೂಡ್ ಅವರು ಜಾತ್ಯಾತೀತತೆ ಮತ್ತು ಕಾನೂನಿನ ನಿಯಮಗಳ ಕುರಿತು ವಿಶ್ವದಾದ್ಯಂತ ಉಪನ್ಯಾಸಗಳನ್ನು ನೀಡುತ್ತಾರೆ. ಆದರೆ, ಅವರ ಜ್ಞಾನವ್ಯಾಪಿ ಕುರಿತ ತೀರ್ಪು ಇದೆಲ್ಲದಕ್ಕೂ ನೇರ ವಿರುದ್ದವಾಗಿದೆ” ದವೆ ಹೇಳಿದ್ದಾರೆ.

“ಆರಾಧನಾ ಸ್ಥಳಗಳ ಕಾಯ್ದೆ, ಧಾರ್ಮಿಕ ಸ್ಥಳಗಳ ಸ್ವರೂಪ ಬದಲಾಯಿಸಲು ಸಾಧ್ಯವಿಲ್ಲ. 1947ರಲ್ಲಿ ಸ್ವಾತಂತ್ರ್ಯ ಬರುವಾಗ ಇದ್ದ ರೀತಿಯಲ್ಲೇ ಇರಬೇಕು ಎನ್ನುತ್ತದೆ. ಧಾರ್ಮಿಕ ಸ್ಥಳಗಳ ಸ್ವರೂಪ ಬದಲಾಯಿಸಲು ಸಾಧ್ಯವಿಲ್ಲ ಎನ್ನುವಾಗ, ಅದನ್ನು ಸಮೀಕ್ಷೆ ನಡೆಸಿ ಹಿನ್ನಲೆ ತಿಳಿಯುವ ಅಗತ್ಯವೇನಿದೆ? ಎಂದು ದವೆ ಪ್ರಶ್ನಿಸಿದ್ದಾರೆ. ಆರಾಧನಾ ಸ್ಥಳಗಳ ಕಾಯ್ದೆಯ ಮೂಲ ಉದ್ದೇಶವನ್ನೇ ತನ್ನ ಅಭಿಪ್ರಾಯದ ಮೂಲಕ ಚಂದ್ರಚೂಡ್ ಒಡೆದು ಹಾಕಿದ್ದಾರೆ” ಎಂದು ದವೆ ಕಿಡಿಕಾರಿದ್ದಾರೆ.

“ಚಂದ್ರಚೂಡ್ ಅವರೇ ಭಾಗವಾಗಿದ್ದ ಅಯೋಧ್ಯೆ ತೀರ್ಪು ಕೂಡ ಆರಾಧನಾ ಸ್ಥಳಗಳ ಕಾಯ್ದೆ1991ನ್ನು ಶ್ಲಾಘಿಸಿದೆ. ಈ ಕಾಯ್ದೆ ಸಂವಿಧಾನದ ಮೂಲಭೂತ ಮೌಲ್ಯಗಳನ್ನು ರಕ್ಷಿಸುತ್ತದೆ ಎಂದು ಹೇಳಿದೆ. ಆದರೆ, ಅದೇ ಚಂದ್ರಚೂಡ್ ಅವರು ಜ್ಞಾನವ್ಯಾಪಿ ಪ್ರಕರಣದಲ್ಲಿ ನೀಡಿರುವ ಮೌಖಿಕ ಹೇಳಿಕೆ, ಅವರೇ ಭಾಗವಾಗಿದ್ದ ಅಯೋಧ್ಯೆ ತೀರ್ಪಿನ ಪೀಠದ ಹೇಳಿಕೆಗೆ ನೇರ ವಿರುದ್ದವಾಗಿದೆ” ಎಂದು ದವೆ ತಿಳಿಸಿದ್ದಾರೆ.

ಸಂಭಾಲ್ ಹಿಂಸಾಚಾರಕ್ಕೆ ನ್ಯಾಯಾಂಗ ಹೊಣೆಯಲ್ಲವೇ? ಎಂದು ದವೆ ಪ್ರಶ್ನಿಸಿದ್ದಾರೆ. ಜ್ಞಾನವ್ಯಾಪಿ ಪ್ರಕರಣದಲ್ಲಿ ಇತರ ನ್ಯಾಯಾಧೀಶರು ಚಂದ್ರಚೂಡ್ ಅಭಿಪ್ರಾಯದ ವಿರುದ್ದ ನಿಲ್ಲಬೇಕಿತ್ತು. ಚಂದ್ರಚೂಡ್ ಅಪ್ರಮಾಣಿಕ ವ್ಯಾಖ್ಯಾನ ನೀಡಿದ್ದಾರೆ. ಅವು ಹಾನಿಕರ ಮತ್ತು ಉದ್ದೇಶಪೂರ್ವಕ ಎಂದು ದವೆ ಆರೋಪಿಸಿದ್ದಾರೆ.

ಆರಾಧನಾ ಸ್ಥಳಗಳ ಕಾಯ್ದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸುವ ಅರ್ಜಿಗಳನ್ನು ಏಕೆ ತಿರಸ್ಕರಿಸಿಲ್ಲ? ಎಂದು ದವೆ ಪ್ರಶ್ನಿಸಿದ್ದಾರೆ. ಅಯೋಧ್ಯೆ ತೀರ್ಪಿನಲ್ಲಿ ಪರೋಕ್ಷವಾಗಿ ನ್ಯಾಯಾಲಯ ಈ ಕಾಯ್ದೆಯನ್ನು ಎತ್ತಿ ಹಿಡಿದಿತ್ತು ಎಂದು ದವೆ ಪುನರುಚ್ಚರಿಸಿದ್ದಾರೆ. ಆರಾಧನಾ ಸ್ಥಳಗಳ ಕಾಯ್ದೆ-1991 ಅನ್ನು ಸಂಸತ್ತಿನಲ್ಲೇ ಹಿಂಪಡೆಯಲು ದವೆ ಬಿಜೆಪಿಗೆ ನೇರ ಸವಾಲು ಹಾಕಿದ್ದಾರೆ. ಅದಕ್ಕೆ ಬಿಜೆಪಿಯ ಮಿತ್ರಪಕ್ಷಗಳೇ ಬೆಂಬಲಿಸುವುದಿಲ್ಲ ಎಂದಿದ್ದಾರೆ.

“ಹೊಸ ಸಿಜೆಐ ಖನ್ನಾ ನೇತೃತ್ವದಲ್ಲಿ ಹೊಸ ರೂಪದಲ್ಲಿ ಸುಪ್ರೀಂ ಕೋರ್ಟ್ ನಡೆಯಲಿದೆ ಎಂದು ದವೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂವಿಧಾನವನ್ನು ಅವರು ಗೌರವಿಸುತ್ತಾರೆ. 2014ರಿಂದ 2024ರ ನಡುವೆ ನಡೆದಿರುವ ತಪ್ಪುಗಳನ್ನು ಅವರು ಸರಿಪಡಿಸುತ್ತಾರೆ. ನ್ಯಾಯಮೂರ್ತಿ ಖನ್ನಾ ಅವರ 7 ತಿಂಗಳ ಅಲ್ವಾವಧಿಯ ಅಧಿಕಾರದ ಬಳಿಕ, ಅನೇಕ ಒಳ್ಳೆಯ ನ್ಯಾಯಾಧೀಶರು, ಮುಖ್ಯ ನ್ಯಾಯಮೂರ್ತಿಗಳು ಬರುತ್ತಿದ್ದಾರೆ. ನನಗೆ ಅವರ ಮೇಲೆ ಭರವಸೆ ಇದೆ” ಎಂದು ದೆವ ಹೇಳಿದ್ದಾರೆ.

“ನಾನು ಹೆಮ್ಮೆಯ ಹಿಂದೂ, ನಾನೂ ಬ್ರಾಹ್ಮಣ. ನಾನು ನನ್ನ ದೇವರುಗಳನ್ನು ಪೂಜಿಸುತ್ತೇನೆ. ಆದರೆ, ನಾನು ಇತರ ಧರ್ಮಗಳನ್ನು ಗೌರವಿಸುತ್ತೇನೆ. ನಾವೀಗ ಮಂದಿರ-ಮಸೀದಿ ಅನ್ನುವುದನ್ನು ನಿಲ್ಲಿಸದಿದ್ದರೆ, ದೇಶ ಹೊತ್ತಿ ಉರಿಯಲಿದೆ” ಎಂದು ದವೆ ಎಚ್ಚರಿಸಿದ್ದಾರೆ.

“ಸಂಭಾಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಸ್ವಾಗತಾರ್ಹ. ಈ ರೀತಿ ಎಲ್ಲಾ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಕ್ರಮ ಕೈಗೊಳ್ಳಬೇಕು. ನಾನು ಇನ್ನೊಂದು ಪಾಕಿಸ್ತಾನ, ಬಾಂಗ್ಲಾದೇಶ ಆಗಲು ಬಯಸುವುದಿಲ್ಲ. ನಾವು ನಮ್ಮ ದೇಶದಲ್ಲಿ ಧಾರ್ಮಿಕ ಸಹಿಷ್ಣುತೆ ಬಯಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ : ಪೂಜಾಸ್ಥಳಗಳ ಕಾಯ್ದೆ ಕುರಿತು ಚಂದ್ರಚೂಡ್ ಹೇಳಿಕೆ ಎಲ್ಲಾ ವಿವಾದಗಳಿಗೆ ಮೂಲ : ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...