Homeಮುಖಪುಟ"ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ 'ಸಂವಿಧಾನಕ್ಕೆ ಅಪಚಾರ'ವೆಸಗಿದ ನ್ಯಾ. ಚಂದ್ರಚೂಡ್‌" : ದುಷ್ಯಂತ್ ದವೆ

“ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

- Advertisement -
- Advertisement -

ಹಿರಿಯ ಪತ್ರಕರ್ತ ಕರಣ ತಾಪರ್ ಅವರು ‘ದಿ ವೈರ್‌’ ಸುದ್ದಿ ಮಾಧ್ಯಮಕ್ಕಾಗಿ ನಡೆಸಿದ ಸಂದರ್ಶನದಲ್ಲಿ ದೇಶದ ಅಗ್ರಗಣ್ಯ ವಕೀಲರಲ್ಲಿ ಒಬ್ಬರು ಹಾಗೂ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್‌ನ (ವಕೀಲರ ಸಂಘ) ಮಾಜಿ ಅಧ್ಯಕ್ಷ ದುಷ್ಯಂತ್ ದವೆ ಕಣ್ಣೀರಿಟ್ಟಿದ್ದಾರೆ.

ಸಂದರ್ಶನದ ಕೊನೆಯಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ ಚಂದ್ರಚೂಡ್ ವಿರುದ್ದ ಅಸಮಾಧಾನ ಹೊರಹಾಕಿದ ದವೆ, “ಮಸೀದಿಗಳ ಸಮೀಕ್ಷೆಗೆ ಅನುಮತಿ ನೀಡುವ ಮೂಲಕ ಚಂದ್ರಚೂಡ್ ಅವರು ಸಂವಿಧಾನ ಮತ್ತು ದೇಶಕ್ಕೆ ದೊಡ್ಡ ಅಪಚಾರ ಮಾಡಿದ್ದಾರೆ” ಎಂದು ಕಣ್ಣೀರು ಹಾಕಿದ್ದಾರೆ.

ಸಂದರ್ಶನದಲ್ಲಿ “ನಿವೃತ್ತ ಸಿಜೆಐ ಚಂದ್ರಚೂಡ್ ಅವರು ‘ಯಾರೋ ಹೇಳಿದಂತೆ ನಡೆಯುತ್ತಿದ್ದಾರೆ’ ಎಂದು ದವೆ ಹೇಳಿದರು. ಆಗ ಕರಣ್ ತಾಪರ್ “ಇದರರ್ಥ ಆಡಳಿತರೂಢ ಬಿಜೆಪಿ, ಮೋದಿಯೇ?” ಎಂದು ಮರು ಪ್ರಶ್ನೆ ಹಾಕಿದರು. ಅದಕ್ಕೆ ಉತ್ತರಿಸಿದ ದವೆ, “ಆ ಬಗ್ಗೆ ಸಂದೇಹ ಬೇಡ. ಮೋದಿ ಜೊತೆ ಸೇರಿ ಚಂದ್ರಚೂಡ್ ಅವರು ‘ಆರತಿ ಮಾಡಿರುವುದರಿಂದ, ದೇವರ ಕೃಪೆಯಿಂದ ಆಯೋಧ್ಯೆ ಸಮಸ್ಯೆ ಇತ್ಯರ್ಥವಾಯಿತು ಎಂದು ಹೇಳಿರುವುದರಿಂದ ಇದು ಸಾಬೀತಾಗಿದೆ” ಎಂದಿದ್ದಾರೆ.

“ನಾನು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದೇನೆ. ನಾನು ಚಿಂತಿತನಾಗಿದ್ದೇನೆ. ಈ ಘಟನೆಗಳು ನನ್ನ ಮೇಲೆ ಇಷ್ಟೊಂದು ಪರಿಣಾಮ ಬೀರುತ್ತಿದ್ದರೆ, ಅಲ್ಪ ಸಂಖ್ಯಾತ ಸಮುದಾಯಗಳಿಗೆ ಸೇರಿದವರ ಮೇಲೆ ಎಂತಹ ಪರಿಣಾಮ ಬೀರುತ್ತಿರಬಹುದು? ಈ ದೇಶದ ಪ್ರಸ್ತುತ ಸನ್ನಿವೇಶಗಳ ಬಗ್ಗೆ ಯಾರೂ ಏಕೆ ಏನೂ ಮಾತನಾಡುತ್ತಿಲ್ಲ? ಎಲ್ಲರೂ ಕೇಳುತ್ತಾರೆ ನೀನು ಏಕೆ ಅದರಲ್ಲಿ ಕೈ ಹಾಕುತ್ತಿಯಾ? ಎಂದು. ಇದು ನನ್ನ ದೇಶ, ನಾನು ಸುಮ್ಮನಿರಲು ಸಾಧ್ಯವಿಲ್ಲ” ಎಂದು ದವೆ ಬೇಸರ ವ್ಯಕ್ತಪಡಿಸಿದ್ದಾರೆ.

ದೇಶದ ಪ್ರಸ್ತಕ ಪರಿಸ್ಥಿತಿ ಮತ್ತು ಮಸೀದಿಯ ಅಡಿಯಲ್ಲಿ ಮಂದಿರ ಹುಡುಕುವ ರಾಜಕೀಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ದವೆ, ” ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರ ಮತ್ತು ಮುಸ್ಲಿಂ ಯುವಕರ ಹತ್ಯೆಗೆ ಮಾಜಿ ಸಿಜೆಐ ಡಿ.ವೈ ಚಂದ್ರಚೂಡ್ ಅವರೇ ನೇರ ಹೊಣೆ” ಎಂದು ಆರೋಪಿಸಿದ್ದಾರೆ.

“ಚಂದ್ರಚೂಡ್ ಮತ್ತು ಅವರ ಸಹೋದ್ಯೋಗಿಗಳು ಈ ಹಿಂದಿನ ಸುಪ್ರೀಂ ಕೋರ್ಟ್ ಆದೇಶಗಳನ್ನು ಧಿಕ್ಕರಿಸಿದ್ದಾರೆ. ಅವರು ಕಾನೂನಿನ ನಿಯಮವನ್ನು, ಅಂದರೆ ‘ರೂಲ್ ಆಫ್ ಲಾ’ ವನ್ನು ಮುರಿದಿಲ್ವಾ?” ಎಂದು ದವೆ ಪ್ರಶ್ನಿಸಿದ್ದಾರೆ. “ಚಂದ್ರಚೂಡ್ ಮುಸ್ಲಿಮರ ಮೇಲೆ ದಬ್ಬಾಳಿಕೆ ಮಾಡುವವರಿಗೆ ಮತ್ತು ಮಂದಿರ ಮಸೀದಿ ವಿಭಜಿಸಿ ಲಾಭ ಪಡೆಯುವವರಿಗೆ ಬೇಕಾದಂತೆ ನಡೆದುಕೊಂಡಿದ್ದಾರೆ” ಎಂದು ದವೆ ಆರೋಪಿಸಿದ್ದಾರೆ.

ನ್ಯಾಯಮೂರ್ತಿ ಚಂದ್ರಚೂಡ್ ಅವರ ಕಾರ್ಯವೈಖರಿ ಮತ್ತು ಮೇ 2022ರ ಜ್ಞಾನವ್ಯಾಪಿ ಮಸೀದಿ ಕುರಿತ ಅವರ ತೀರ್ಪನ್ನು ದವೆ ನೇರವಾಗಿ ಟೀಕಿಸಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯ್ದೆಯು ಧಾರ್ಮಿಕ ಸ್ಥಳದ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದ್ದರೂ, ಕೇವಲ ಸ್ಥಳವೊಂದರ ಧಾರ್ಮಿಕ ಲಕ್ಷಣವನ್ನು ಖಚಿತಪಡಿಸಿಕೊಳ್ಳುವುದು ಕಾಯ್ದೆಯನ್ನು ಉಲ್ಲಂಘಿಸುವುದಿಲ್ಲ” ಎಂದು ಚಂದ್ರಚೂಡ್ 2022ರಲ್ಲಿ ಮೌಖಿವಾಗಿ ಹೇಳಿದ್ದರು.

“ನ್ಯಾಯಮೂರ್ತಿ ಚಂದ್ರಚೂಡ್ ಅವರು ತಾವೇ ಭಾಗವಾಗಿದ್ದ ಅಯೋಧ್ಯ ತೀರ್ಪನ್ನು ಈ ಮೂಲಕ ಉಲ್ಲಂಘಿಸಿದ್ದಾರೆ. ನ್ಯಾಯಾಂಗ ಕಾನೂನಿಗೆ ಬದ್ದವಾಗಿರಬೇಕು. ಆದರೆ, ಜ್ಞಾನವ್ಯಾಪಿ ಪ್ರಕರಣದಲ್ಲಿ ಅವರ ತೀರ್ಪು ಆಘಾತಕಾರಿ. ಚಂದ್ರಚೂಡ್ ಅವರು ಜಾತ್ಯಾತೀತತೆ ಮತ್ತು ಕಾನೂನಿನ ನಿಯಮಗಳ ಕುರಿತು ವಿಶ್ವದಾದ್ಯಂತ ಉಪನ್ಯಾಸಗಳನ್ನು ನೀಡುತ್ತಾರೆ. ಆದರೆ, ಅವರ ಜ್ಞಾನವ್ಯಾಪಿ ಕುರಿತ ತೀರ್ಪು ಇದೆಲ್ಲದಕ್ಕೂ ನೇರ ವಿರುದ್ದವಾಗಿದೆ” ದವೆ ಹೇಳಿದ್ದಾರೆ.

“ಆರಾಧನಾ ಸ್ಥಳಗಳ ಕಾಯ್ದೆ, ಧಾರ್ಮಿಕ ಸ್ಥಳಗಳ ಸ್ವರೂಪ ಬದಲಾಯಿಸಲು ಸಾಧ್ಯವಿಲ್ಲ. 1947ರಲ್ಲಿ ಸ್ವಾತಂತ್ರ್ಯ ಬರುವಾಗ ಇದ್ದ ರೀತಿಯಲ್ಲೇ ಇರಬೇಕು ಎನ್ನುತ್ತದೆ. ಧಾರ್ಮಿಕ ಸ್ಥಳಗಳ ಸ್ವರೂಪ ಬದಲಾಯಿಸಲು ಸಾಧ್ಯವಿಲ್ಲ ಎನ್ನುವಾಗ, ಅದನ್ನು ಸಮೀಕ್ಷೆ ನಡೆಸಿ ಹಿನ್ನಲೆ ತಿಳಿಯುವ ಅಗತ್ಯವೇನಿದೆ? ಎಂದು ದವೆ ಪ್ರಶ್ನಿಸಿದ್ದಾರೆ. ಆರಾಧನಾ ಸ್ಥಳಗಳ ಕಾಯ್ದೆಯ ಮೂಲ ಉದ್ದೇಶವನ್ನೇ ತನ್ನ ಅಭಿಪ್ರಾಯದ ಮೂಲಕ ಚಂದ್ರಚೂಡ್ ಒಡೆದು ಹಾಕಿದ್ದಾರೆ” ಎಂದು ದವೆ ಕಿಡಿಕಾರಿದ್ದಾರೆ.

“ಚಂದ್ರಚೂಡ್ ಅವರೇ ಭಾಗವಾಗಿದ್ದ ಅಯೋಧ್ಯೆ ತೀರ್ಪು ಕೂಡ ಆರಾಧನಾ ಸ್ಥಳಗಳ ಕಾಯ್ದೆ1991ನ್ನು ಶ್ಲಾಘಿಸಿದೆ. ಈ ಕಾಯ್ದೆ ಸಂವಿಧಾನದ ಮೂಲಭೂತ ಮೌಲ್ಯಗಳನ್ನು ರಕ್ಷಿಸುತ್ತದೆ ಎಂದು ಹೇಳಿದೆ. ಆದರೆ, ಅದೇ ಚಂದ್ರಚೂಡ್ ಅವರು ಜ್ಞಾನವ್ಯಾಪಿ ಪ್ರಕರಣದಲ್ಲಿ ನೀಡಿರುವ ಮೌಖಿಕ ಹೇಳಿಕೆ, ಅವರೇ ಭಾಗವಾಗಿದ್ದ ಅಯೋಧ್ಯೆ ತೀರ್ಪಿನ ಪೀಠದ ಹೇಳಿಕೆಗೆ ನೇರ ವಿರುದ್ದವಾಗಿದೆ” ಎಂದು ದವೆ ತಿಳಿಸಿದ್ದಾರೆ.

ಸಂಭಾಲ್ ಹಿಂಸಾಚಾರಕ್ಕೆ ನ್ಯಾಯಾಂಗ ಹೊಣೆಯಲ್ಲವೇ? ಎಂದು ದವೆ ಪ್ರಶ್ನಿಸಿದ್ದಾರೆ. ಜ್ಞಾನವ್ಯಾಪಿ ಪ್ರಕರಣದಲ್ಲಿ ಇತರ ನ್ಯಾಯಾಧೀಶರು ಚಂದ್ರಚೂಡ್ ಅಭಿಪ್ರಾಯದ ವಿರುದ್ದ ನಿಲ್ಲಬೇಕಿತ್ತು. ಚಂದ್ರಚೂಡ್ ಅಪ್ರಮಾಣಿಕ ವ್ಯಾಖ್ಯಾನ ನೀಡಿದ್ದಾರೆ. ಅವು ಹಾನಿಕರ ಮತ್ತು ಉದ್ದೇಶಪೂರ್ವಕ ಎಂದು ದವೆ ಆರೋಪಿಸಿದ್ದಾರೆ.

ಆರಾಧನಾ ಸ್ಥಳಗಳ ಕಾಯ್ದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸುವ ಅರ್ಜಿಗಳನ್ನು ಏಕೆ ತಿರಸ್ಕರಿಸಿಲ್ಲ? ಎಂದು ದವೆ ಪ್ರಶ್ನಿಸಿದ್ದಾರೆ. ಅಯೋಧ್ಯೆ ತೀರ್ಪಿನಲ್ಲಿ ಪರೋಕ್ಷವಾಗಿ ನ್ಯಾಯಾಲಯ ಈ ಕಾಯ್ದೆಯನ್ನು ಎತ್ತಿ ಹಿಡಿದಿತ್ತು ಎಂದು ದವೆ ಪುನರುಚ್ಚರಿಸಿದ್ದಾರೆ. ಆರಾಧನಾ ಸ್ಥಳಗಳ ಕಾಯ್ದೆ-1991 ಅನ್ನು ಸಂಸತ್ತಿನಲ್ಲೇ ಹಿಂಪಡೆಯಲು ದವೆ ಬಿಜೆಪಿಗೆ ನೇರ ಸವಾಲು ಹಾಕಿದ್ದಾರೆ. ಅದಕ್ಕೆ ಬಿಜೆಪಿಯ ಮಿತ್ರಪಕ್ಷಗಳೇ ಬೆಂಬಲಿಸುವುದಿಲ್ಲ ಎಂದಿದ್ದಾರೆ.

“ಹೊಸ ಸಿಜೆಐ ಖನ್ನಾ ನೇತೃತ್ವದಲ್ಲಿ ಹೊಸ ರೂಪದಲ್ಲಿ ಸುಪ್ರೀಂ ಕೋರ್ಟ್ ನಡೆಯಲಿದೆ ಎಂದು ದವೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂವಿಧಾನವನ್ನು ಅವರು ಗೌರವಿಸುತ್ತಾರೆ. 2014ರಿಂದ 2024ರ ನಡುವೆ ನಡೆದಿರುವ ತಪ್ಪುಗಳನ್ನು ಅವರು ಸರಿಪಡಿಸುತ್ತಾರೆ. ನ್ಯಾಯಮೂರ್ತಿ ಖನ್ನಾ ಅವರ 7 ತಿಂಗಳ ಅಲ್ವಾವಧಿಯ ಅಧಿಕಾರದ ಬಳಿಕ, ಅನೇಕ ಒಳ್ಳೆಯ ನ್ಯಾಯಾಧೀಶರು, ಮುಖ್ಯ ನ್ಯಾಯಮೂರ್ತಿಗಳು ಬರುತ್ತಿದ್ದಾರೆ. ನನಗೆ ಅವರ ಮೇಲೆ ಭರವಸೆ ಇದೆ” ಎಂದು ದೆವ ಹೇಳಿದ್ದಾರೆ.

“ನಾನು ಹೆಮ್ಮೆಯ ಹಿಂದೂ, ನಾನೂ ಬ್ರಾಹ್ಮಣ. ನಾನು ನನ್ನ ದೇವರುಗಳನ್ನು ಪೂಜಿಸುತ್ತೇನೆ. ಆದರೆ, ನಾನು ಇತರ ಧರ್ಮಗಳನ್ನು ಗೌರವಿಸುತ್ತೇನೆ. ನಾವೀಗ ಮಂದಿರ-ಮಸೀದಿ ಅನ್ನುವುದನ್ನು ನಿಲ್ಲಿಸದಿದ್ದರೆ, ದೇಶ ಹೊತ್ತಿ ಉರಿಯಲಿದೆ” ಎಂದು ದವೆ ಎಚ್ಚರಿಸಿದ್ದಾರೆ.

“ಸಂಭಾಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಸ್ವಾಗತಾರ್ಹ. ಈ ರೀತಿ ಎಲ್ಲಾ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಕ್ರಮ ಕೈಗೊಳ್ಳಬೇಕು. ನಾನು ಇನ್ನೊಂದು ಪಾಕಿಸ್ತಾನ, ಬಾಂಗ್ಲಾದೇಶ ಆಗಲು ಬಯಸುವುದಿಲ್ಲ. ನಾವು ನಮ್ಮ ದೇಶದಲ್ಲಿ ಧಾರ್ಮಿಕ ಸಹಿಷ್ಣುತೆ ಬಯಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ : ಪೂಜಾಸ್ಥಳಗಳ ಕಾಯ್ದೆ ಕುರಿತು ಚಂದ್ರಚೂಡ್ ಹೇಳಿಕೆ ಎಲ್ಲಾ ವಿವಾದಗಳಿಗೆ ಮೂಲ : ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...