Homeಮುಖಪುಟ"ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ 'ಸಂವಿಧಾನಕ್ಕೆ ಅಪಚಾರ'ವೆಸಗಿದ ನ್ಯಾ. ಚಂದ್ರಚೂಡ್‌" : ದುಷ್ಯಂತ್ ದವೆ

“ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

- Advertisement -
- Advertisement -

ಹಿರಿಯ ಪತ್ರಕರ್ತ ಕರಣ ತಾಪರ್ ಅವರು ‘ದಿ ವೈರ್‌’ ಸುದ್ದಿ ಮಾಧ್ಯಮಕ್ಕಾಗಿ ನಡೆಸಿದ ಸಂದರ್ಶನದಲ್ಲಿ ದೇಶದ ಅಗ್ರಗಣ್ಯ ವಕೀಲರಲ್ಲಿ ಒಬ್ಬರು ಹಾಗೂ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್‌ನ (ವಕೀಲರ ಸಂಘ) ಮಾಜಿ ಅಧ್ಯಕ್ಷ ದುಷ್ಯಂತ್ ದವೆ ಕಣ್ಣೀರಿಟ್ಟಿದ್ದಾರೆ.

ಸಂದರ್ಶನದ ಕೊನೆಯಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ ಚಂದ್ರಚೂಡ್ ವಿರುದ್ದ ಅಸಮಾಧಾನ ಹೊರಹಾಕಿದ ದವೆ, “ಮಸೀದಿಗಳ ಸಮೀಕ್ಷೆಗೆ ಅನುಮತಿ ನೀಡುವ ಮೂಲಕ ಚಂದ್ರಚೂಡ್ ಅವರು ಸಂವಿಧಾನ ಮತ್ತು ದೇಶಕ್ಕೆ ದೊಡ್ಡ ಅಪಚಾರ ಮಾಡಿದ್ದಾರೆ” ಎಂದು ಕಣ್ಣೀರು ಹಾಕಿದ್ದಾರೆ.

ಸಂದರ್ಶನದಲ್ಲಿ “ನಿವೃತ್ತ ಸಿಜೆಐ ಚಂದ್ರಚೂಡ್ ಅವರು ‘ಯಾರೋ ಹೇಳಿದಂತೆ ನಡೆಯುತ್ತಿದ್ದಾರೆ’ ಎಂದು ದವೆ ಹೇಳಿದರು. ಆಗ ಕರಣ್ ತಾಪರ್ “ಇದರರ್ಥ ಆಡಳಿತರೂಢ ಬಿಜೆಪಿ, ಮೋದಿಯೇ?” ಎಂದು ಮರು ಪ್ರಶ್ನೆ ಹಾಕಿದರು. ಅದಕ್ಕೆ ಉತ್ತರಿಸಿದ ದವೆ, “ಆ ಬಗ್ಗೆ ಸಂದೇಹ ಬೇಡ. ಮೋದಿ ಜೊತೆ ಸೇರಿ ಚಂದ್ರಚೂಡ್ ಅವರು ‘ಆರತಿ ಮಾಡಿರುವುದರಿಂದ, ದೇವರ ಕೃಪೆಯಿಂದ ಆಯೋಧ್ಯೆ ಸಮಸ್ಯೆ ಇತ್ಯರ್ಥವಾಯಿತು ಎಂದು ಹೇಳಿರುವುದರಿಂದ ಇದು ಸಾಬೀತಾಗಿದೆ” ಎಂದಿದ್ದಾರೆ.

“ನಾನು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದೇನೆ. ನಾನು ಚಿಂತಿತನಾಗಿದ್ದೇನೆ. ಈ ಘಟನೆಗಳು ನನ್ನ ಮೇಲೆ ಇಷ್ಟೊಂದು ಪರಿಣಾಮ ಬೀರುತ್ತಿದ್ದರೆ, ಅಲ್ಪ ಸಂಖ್ಯಾತ ಸಮುದಾಯಗಳಿಗೆ ಸೇರಿದವರ ಮೇಲೆ ಎಂತಹ ಪರಿಣಾಮ ಬೀರುತ್ತಿರಬಹುದು? ಈ ದೇಶದ ಪ್ರಸ್ತುತ ಸನ್ನಿವೇಶಗಳ ಬಗ್ಗೆ ಯಾರೂ ಏಕೆ ಏನೂ ಮಾತನಾಡುತ್ತಿಲ್ಲ? ಎಲ್ಲರೂ ಕೇಳುತ್ತಾರೆ ನೀನು ಏಕೆ ಅದರಲ್ಲಿ ಕೈ ಹಾಕುತ್ತಿಯಾ? ಎಂದು. ಇದು ನನ್ನ ದೇಶ, ನಾನು ಸುಮ್ಮನಿರಲು ಸಾಧ್ಯವಿಲ್ಲ” ಎಂದು ದವೆ ಬೇಸರ ವ್ಯಕ್ತಪಡಿಸಿದ್ದಾರೆ.

ದೇಶದ ಪ್ರಸ್ತಕ ಪರಿಸ್ಥಿತಿ ಮತ್ತು ಮಸೀದಿಯ ಅಡಿಯಲ್ಲಿ ಮಂದಿರ ಹುಡುಕುವ ರಾಜಕೀಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ದವೆ, ” ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರ ಮತ್ತು ಮುಸ್ಲಿಂ ಯುವಕರ ಹತ್ಯೆಗೆ ಮಾಜಿ ಸಿಜೆಐ ಡಿ.ವೈ ಚಂದ್ರಚೂಡ್ ಅವರೇ ನೇರ ಹೊಣೆ” ಎಂದು ಆರೋಪಿಸಿದ್ದಾರೆ.

“ಚಂದ್ರಚೂಡ್ ಮತ್ತು ಅವರ ಸಹೋದ್ಯೋಗಿಗಳು ಈ ಹಿಂದಿನ ಸುಪ್ರೀಂ ಕೋರ್ಟ್ ಆದೇಶಗಳನ್ನು ಧಿಕ್ಕರಿಸಿದ್ದಾರೆ. ಅವರು ಕಾನೂನಿನ ನಿಯಮವನ್ನು, ಅಂದರೆ ‘ರೂಲ್ ಆಫ್ ಲಾ’ ವನ್ನು ಮುರಿದಿಲ್ವಾ?” ಎಂದು ದವೆ ಪ್ರಶ್ನಿಸಿದ್ದಾರೆ. “ಚಂದ್ರಚೂಡ್ ಮುಸ್ಲಿಮರ ಮೇಲೆ ದಬ್ಬಾಳಿಕೆ ಮಾಡುವವರಿಗೆ ಮತ್ತು ಮಂದಿರ ಮಸೀದಿ ವಿಭಜಿಸಿ ಲಾಭ ಪಡೆಯುವವರಿಗೆ ಬೇಕಾದಂತೆ ನಡೆದುಕೊಂಡಿದ್ದಾರೆ” ಎಂದು ದವೆ ಆರೋಪಿಸಿದ್ದಾರೆ.

ನ್ಯಾಯಮೂರ್ತಿ ಚಂದ್ರಚೂಡ್ ಅವರ ಕಾರ್ಯವೈಖರಿ ಮತ್ತು ಮೇ 2022ರ ಜ್ಞಾನವ್ಯಾಪಿ ಮಸೀದಿ ಕುರಿತ ಅವರ ತೀರ್ಪನ್ನು ದವೆ ನೇರವಾಗಿ ಟೀಕಿಸಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯ್ದೆಯು ಧಾರ್ಮಿಕ ಸ್ಥಳದ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದ್ದರೂ, ಕೇವಲ ಸ್ಥಳವೊಂದರ ಧಾರ್ಮಿಕ ಲಕ್ಷಣವನ್ನು ಖಚಿತಪಡಿಸಿಕೊಳ್ಳುವುದು ಕಾಯ್ದೆಯನ್ನು ಉಲ್ಲಂಘಿಸುವುದಿಲ್ಲ” ಎಂದು ಚಂದ್ರಚೂಡ್ 2022ರಲ್ಲಿ ಮೌಖಿವಾಗಿ ಹೇಳಿದ್ದರು.

“ನ್ಯಾಯಮೂರ್ತಿ ಚಂದ್ರಚೂಡ್ ಅವರು ತಾವೇ ಭಾಗವಾಗಿದ್ದ ಅಯೋಧ್ಯ ತೀರ್ಪನ್ನು ಈ ಮೂಲಕ ಉಲ್ಲಂಘಿಸಿದ್ದಾರೆ. ನ್ಯಾಯಾಂಗ ಕಾನೂನಿಗೆ ಬದ್ದವಾಗಿರಬೇಕು. ಆದರೆ, ಜ್ಞಾನವ್ಯಾಪಿ ಪ್ರಕರಣದಲ್ಲಿ ಅವರ ತೀರ್ಪು ಆಘಾತಕಾರಿ. ಚಂದ್ರಚೂಡ್ ಅವರು ಜಾತ್ಯಾತೀತತೆ ಮತ್ತು ಕಾನೂನಿನ ನಿಯಮಗಳ ಕುರಿತು ವಿಶ್ವದಾದ್ಯಂತ ಉಪನ್ಯಾಸಗಳನ್ನು ನೀಡುತ್ತಾರೆ. ಆದರೆ, ಅವರ ಜ್ಞಾನವ್ಯಾಪಿ ಕುರಿತ ತೀರ್ಪು ಇದೆಲ್ಲದಕ್ಕೂ ನೇರ ವಿರುದ್ದವಾಗಿದೆ” ದವೆ ಹೇಳಿದ್ದಾರೆ.

“ಆರಾಧನಾ ಸ್ಥಳಗಳ ಕಾಯ್ದೆ, ಧಾರ್ಮಿಕ ಸ್ಥಳಗಳ ಸ್ವರೂಪ ಬದಲಾಯಿಸಲು ಸಾಧ್ಯವಿಲ್ಲ. 1947ರಲ್ಲಿ ಸ್ವಾತಂತ್ರ್ಯ ಬರುವಾಗ ಇದ್ದ ರೀತಿಯಲ್ಲೇ ಇರಬೇಕು ಎನ್ನುತ್ತದೆ. ಧಾರ್ಮಿಕ ಸ್ಥಳಗಳ ಸ್ವರೂಪ ಬದಲಾಯಿಸಲು ಸಾಧ್ಯವಿಲ್ಲ ಎನ್ನುವಾಗ, ಅದನ್ನು ಸಮೀಕ್ಷೆ ನಡೆಸಿ ಹಿನ್ನಲೆ ತಿಳಿಯುವ ಅಗತ್ಯವೇನಿದೆ? ಎಂದು ದವೆ ಪ್ರಶ್ನಿಸಿದ್ದಾರೆ. ಆರಾಧನಾ ಸ್ಥಳಗಳ ಕಾಯ್ದೆಯ ಮೂಲ ಉದ್ದೇಶವನ್ನೇ ತನ್ನ ಅಭಿಪ್ರಾಯದ ಮೂಲಕ ಚಂದ್ರಚೂಡ್ ಒಡೆದು ಹಾಕಿದ್ದಾರೆ” ಎಂದು ದವೆ ಕಿಡಿಕಾರಿದ್ದಾರೆ.

“ಚಂದ್ರಚೂಡ್ ಅವರೇ ಭಾಗವಾಗಿದ್ದ ಅಯೋಧ್ಯೆ ತೀರ್ಪು ಕೂಡ ಆರಾಧನಾ ಸ್ಥಳಗಳ ಕಾಯ್ದೆ1991ನ್ನು ಶ್ಲಾಘಿಸಿದೆ. ಈ ಕಾಯ್ದೆ ಸಂವಿಧಾನದ ಮೂಲಭೂತ ಮೌಲ್ಯಗಳನ್ನು ರಕ್ಷಿಸುತ್ತದೆ ಎಂದು ಹೇಳಿದೆ. ಆದರೆ, ಅದೇ ಚಂದ್ರಚೂಡ್ ಅವರು ಜ್ಞಾನವ್ಯಾಪಿ ಪ್ರಕರಣದಲ್ಲಿ ನೀಡಿರುವ ಮೌಖಿಕ ಹೇಳಿಕೆ, ಅವರೇ ಭಾಗವಾಗಿದ್ದ ಅಯೋಧ್ಯೆ ತೀರ್ಪಿನ ಪೀಠದ ಹೇಳಿಕೆಗೆ ನೇರ ವಿರುದ್ದವಾಗಿದೆ” ಎಂದು ದವೆ ತಿಳಿಸಿದ್ದಾರೆ.

ಸಂಭಾಲ್ ಹಿಂಸಾಚಾರಕ್ಕೆ ನ್ಯಾಯಾಂಗ ಹೊಣೆಯಲ್ಲವೇ? ಎಂದು ದವೆ ಪ್ರಶ್ನಿಸಿದ್ದಾರೆ. ಜ್ಞಾನವ್ಯಾಪಿ ಪ್ರಕರಣದಲ್ಲಿ ಇತರ ನ್ಯಾಯಾಧೀಶರು ಚಂದ್ರಚೂಡ್ ಅಭಿಪ್ರಾಯದ ವಿರುದ್ದ ನಿಲ್ಲಬೇಕಿತ್ತು. ಚಂದ್ರಚೂಡ್ ಅಪ್ರಮಾಣಿಕ ವ್ಯಾಖ್ಯಾನ ನೀಡಿದ್ದಾರೆ. ಅವು ಹಾನಿಕರ ಮತ್ತು ಉದ್ದೇಶಪೂರ್ವಕ ಎಂದು ದವೆ ಆರೋಪಿಸಿದ್ದಾರೆ.

ಆರಾಧನಾ ಸ್ಥಳಗಳ ಕಾಯ್ದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸುವ ಅರ್ಜಿಗಳನ್ನು ಏಕೆ ತಿರಸ್ಕರಿಸಿಲ್ಲ? ಎಂದು ದವೆ ಪ್ರಶ್ನಿಸಿದ್ದಾರೆ. ಅಯೋಧ್ಯೆ ತೀರ್ಪಿನಲ್ಲಿ ಪರೋಕ್ಷವಾಗಿ ನ್ಯಾಯಾಲಯ ಈ ಕಾಯ್ದೆಯನ್ನು ಎತ್ತಿ ಹಿಡಿದಿತ್ತು ಎಂದು ದವೆ ಪುನರುಚ್ಚರಿಸಿದ್ದಾರೆ. ಆರಾಧನಾ ಸ್ಥಳಗಳ ಕಾಯ್ದೆ-1991 ಅನ್ನು ಸಂಸತ್ತಿನಲ್ಲೇ ಹಿಂಪಡೆಯಲು ದವೆ ಬಿಜೆಪಿಗೆ ನೇರ ಸವಾಲು ಹಾಕಿದ್ದಾರೆ. ಅದಕ್ಕೆ ಬಿಜೆಪಿಯ ಮಿತ್ರಪಕ್ಷಗಳೇ ಬೆಂಬಲಿಸುವುದಿಲ್ಲ ಎಂದಿದ್ದಾರೆ.

“ಹೊಸ ಸಿಜೆಐ ಖನ್ನಾ ನೇತೃತ್ವದಲ್ಲಿ ಹೊಸ ರೂಪದಲ್ಲಿ ಸುಪ್ರೀಂ ಕೋರ್ಟ್ ನಡೆಯಲಿದೆ ಎಂದು ದವೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂವಿಧಾನವನ್ನು ಅವರು ಗೌರವಿಸುತ್ತಾರೆ. 2014ರಿಂದ 2024ರ ನಡುವೆ ನಡೆದಿರುವ ತಪ್ಪುಗಳನ್ನು ಅವರು ಸರಿಪಡಿಸುತ್ತಾರೆ. ನ್ಯಾಯಮೂರ್ತಿ ಖನ್ನಾ ಅವರ 7 ತಿಂಗಳ ಅಲ್ವಾವಧಿಯ ಅಧಿಕಾರದ ಬಳಿಕ, ಅನೇಕ ಒಳ್ಳೆಯ ನ್ಯಾಯಾಧೀಶರು, ಮುಖ್ಯ ನ್ಯಾಯಮೂರ್ತಿಗಳು ಬರುತ್ತಿದ್ದಾರೆ. ನನಗೆ ಅವರ ಮೇಲೆ ಭರವಸೆ ಇದೆ” ಎಂದು ದೆವ ಹೇಳಿದ್ದಾರೆ.

“ನಾನು ಹೆಮ್ಮೆಯ ಹಿಂದೂ, ನಾನೂ ಬ್ರಾಹ್ಮಣ. ನಾನು ನನ್ನ ದೇವರುಗಳನ್ನು ಪೂಜಿಸುತ್ತೇನೆ. ಆದರೆ, ನಾನು ಇತರ ಧರ್ಮಗಳನ್ನು ಗೌರವಿಸುತ್ತೇನೆ. ನಾವೀಗ ಮಂದಿರ-ಮಸೀದಿ ಅನ್ನುವುದನ್ನು ನಿಲ್ಲಿಸದಿದ್ದರೆ, ದೇಶ ಹೊತ್ತಿ ಉರಿಯಲಿದೆ” ಎಂದು ದವೆ ಎಚ್ಚರಿಸಿದ್ದಾರೆ.

“ಸಂಭಾಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಸ್ವಾಗತಾರ್ಹ. ಈ ರೀತಿ ಎಲ್ಲಾ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಕ್ರಮ ಕೈಗೊಳ್ಳಬೇಕು. ನಾನು ಇನ್ನೊಂದು ಪಾಕಿಸ್ತಾನ, ಬಾಂಗ್ಲಾದೇಶ ಆಗಲು ಬಯಸುವುದಿಲ್ಲ. ನಾವು ನಮ್ಮ ದೇಶದಲ್ಲಿ ಧಾರ್ಮಿಕ ಸಹಿಷ್ಣುತೆ ಬಯಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ : ಪೂಜಾಸ್ಥಳಗಳ ಕಾಯ್ದೆ ಕುರಿತು ಚಂದ್ರಚೂಡ್ ಹೇಳಿಕೆ ಎಲ್ಲಾ ವಿವಾದಗಳಿಗೆ ಮೂಲ : ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...