Homeಮುಖಪುಟ"ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ 'ಸಂವಿಧಾನಕ್ಕೆ ಅಪಚಾರ'ವೆಸಗಿದ ನ್ಯಾ. ಚಂದ್ರಚೂಡ್‌" : ದುಷ್ಯಂತ್ ದವೆ

“ಮಸೀದಿಗಳ ಸಮೀಕ್ಷೆಗೆ ಅನುಮತಿಸುವ ಮೂಲಕ ‘ಸಂವಿಧಾನಕ್ಕೆ ಅಪಚಾರ’ವೆಸಗಿದ ನ್ಯಾ. ಚಂದ್ರಚೂಡ್‌” : ದುಷ್ಯಂತ್ ದವೆ

- Advertisement -
- Advertisement -

ಹಿರಿಯ ಪತ್ರಕರ್ತ ಕರಣ ತಾಪರ್ ಅವರು ‘ದಿ ವೈರ್‌’ ಸುದ್ದಿ ಮಾಧ್ಯಮಕ್ಕಾಗಿ ನಡೆಸಿದ ಸಂದರ್ಶನದಲ್ಲಿ ದೇಶದ ಅಗ್ರಗಣ್ಯ ವಕೀಲರಲ್ಲಿ ಒಬ್ಬರು ಹಾಗೂ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್‌ನ (ವಕೀಲರ ಸಂಘ) ಮಾಜಿ ಅಧ್ಯಕ್ಷ ದುಷ್ಯಂತ್ ದವೆ ಕಣ್ಣೀರಿಟ್ಟಿದ್ದಾರೆ.

ಸಂದರ್ಶನದ ಕೊನೆಯಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ ಚಂದ್ರಚೂಡ್ ವಿರುದ್ದ ಅಸಮಾಧಾನ ಹೊರಹಾಕಿದ ದವೆ, “ಮಸೀದಿಗಳ ಸಮೀಕ್ಷೆಗೆ ಅನುಮತಿ ನೀಡುವ ಮೂಲಕ ಚಂದ್ರಚೂಡ್ ಅವರು ಸಂವಿಧಾನ ಮತ್ತು ದೇಶಕ್ಕೆ ದೊಡ್ಡ ಅಪಚಾರ ಮಾಡಿದ್ದಾರೆ” ಎಂದು ಕಣ್ಣೀರು ಹಾಕಿದ್ದಾರೆ.

ಸಂದರ್ಶನದಲ್ಲಿ “ನಿವೃತ್ತ ಸಿಜೆಐ ಚಂದ್ರಚೂಡ್ ಅವರು ‘ಯಾರೋ ಹೇಳಿದಂತೆ ನಡೆಯುತ್ತಿದ್ದಾರೆ’ ಎಂದು ದವೆ ಹೇಳಿದರು. ಆಗ ಕರಣ್ ತಾಪರ್ “ಇದರರ್ಥ ಆಡಳಿತರೂಢ ಬಿಜೆಪಿ, ಮೋದಿಯೇ?” ಎಂದು ಮರು ಪ್ರಶ್ನೆ ಹಾಕಿದರು. ಅದಕ್ಕೆ ಉತ್ತರಿಸಿದ ದವೆ, “ಆ ಬಗ್ಗೆ ಸಂದೇಹ ಬೇಡ. ಮೋದಿ ಜೊತೆ ಸೇರಿ ಚಂದ್ರಚೂಡ್ ಅವರು ‘ಆರತಿ ಮಾಡಿರುವುದರಿಂದ, ದೇವರ ಕೃಪೆಯಿಂದ ಆಯೋಧ್ಯೆ ಸಮಸ್ಯೆ ಇತ್ಯರ್ಥವಾಯಿತು ಎಂದು ಹೇಳಿರುವುದರಿಂದ ಇದು ಸಾಬೀತಾಗಿದೆ” ಎಂದಿದ್ದಾರೆ.

“ನಾನು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುತ್ತಿದ್ದೇನೆ. ನಾನು ಚಿಂತಿತನಾಗಿದ್ದೇನೆ. ಈ ಘಟನೆಗಳು ನನ್ನ ಮೇಲೆ ಇಷ್ಟೊಂದು ಪರಿಣಾಮ ಬೀರುತ್ತಿದ್ದರೆ, ಅಲ್ಪ ಸಂಖ್ಯಾತ ಸಮುದಾಯಗಳಿಗೆ ಸೇರಿದವರ ಮೇಲೆ ಎಂತಹ ಪರಿಣಾಮ ಬೀರುತ್ತಿರಬಹುದು? ಈ ದೇಶದ ಪ್ರಸ್ತುತ ಸನ್ನಿವೇಶಗಳ ಬಗ್ಗೆ ಯಾರೂ ಏಕೆ ಏನೂ ಮಾತನಾಡುತ್ತಿಲ್ಲ? ಎಲ್ಲರೂ ಕೇಳುತ್ತಾರೆ ನೀನು ಏಕೆ ಅದರಲ್ಲಿ ಕೈ ಹಾಕುತ್ತಿಯಾ? ಎಂದು. ಇದು ನನ್ನ ದೇಶ, ನಾನು ಸುಮ್ಮನಿರಲು ಸಾಧ್ಯವಿಲ್ಲ” ಎಂದು ದವೆ ಬೇಸರ ವ್ಯಕ್ತಪಡಿಸಿದ್ದಾರೆ.

ದೇಶದ ಪ್ರಸ್ತಕ ಪರಿಸ್ಥಿತಿ ಮತ್ತು ಮಸೀದಿಯ ಅಡಿಯಲ್ಲಿ ಮಂದಿರ ಹುಡುಕುವ ರಾಜಕೀಯದ ಬಗ್ಗೆ ಕಳವಳ ವ್ಯಕ್ತಪಡಿಸಿದ ದವೆ, ” ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರ ಮತ್ತು ಮುಸ್ಲಿಂ ಯುವಕರ ಹತ್ಯೆಗೆ ಮಾಜಿ ಸಿಜೆಐ ಡಿ.ವೈ ಚಂದ್ರಚೂಡ್ ಅವರೇ ನೇರ ಹೊಣೆ” ಎಂದು ಆರೋಪಿಸಿದ್ದಾರೆ.

“ಚಂದ್ರಚೂಡ್ ಮತ್ತು ಅವರ ಸಹೋದ್ಯೋಗಿಗಳು ಈ ಹಿಂದಿನ ಸುಪ್ರೀಂ ಕೋರ್ಟ್ ಆದೇಶಗಳನ್ನು ಧಿಕ್ಕರಿಸಿದ್ದಾರೆ. ಅವರು ಕಾನೂನಿನ ನಿಯಮವನ್ನು, ಅಂದರೆ ‘ರೂಲ್ ಆಫ್ ಲಾ’ ವನ್ನು ಮುರಿದಿಲ್ವಾ?” ಎಂದು ದವೆ ಪ್ರಶ್ನಿಸಿದ್ದಾರೆ. “ಚಂದ್ರಚೂಡ್ ಮುಸ್ಲಿಮರ ಮೇಲೆ ದಬ್ಬಾಳಿಕೆ ಮಾಡುವವರಿಗೆ ಮತ್ತು ಮಂದಿರ ಮಸೀದಿ ವಿಭಜಿಸಿ ಲಾಭ ಪಡೆಯುವವರಿಗೆ ಬೇಕಾದಂತೆ ನಡೆದುಕೊಂಡಿದ್ದಾರೆ” ಎಂದು ದವೆ ಆರೋಪಿಸಿದ್ದಾರೆ.

ನ್ಯಾಯಮೂರ್ತಿ ಚಂದ್ರಚೂಡ್ ಅವರ ಕಾರ್ಯವೈಖರಿ ಮತ್ತು ಮೇ 2022ರ ಜ್ಞಾನವ್ಯಾಪಿ ಮಸೀದಿ ಕುರಿತ ಅವರ ತೀರ್ಪನ್ನು ದವೆ ನೇರವಾಗಿ ಟೀಕಿಸಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯ್ದೆಯು ಧಾರ್ಮಿಕ ಸ್ಥಳದ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದ್ದರೂ, ಕೇವಲ ಸ್ಥಳವೊಂದರ ಧಾರ್ಮಿಕ ಲಕ್ಷಣವನ್ನು ಖಚಿತಪಡಿಸಿಕೊಳ್ಳುವುದು ಕಾಯ್ದೆಯನ್ನು ಉಲ್ಲಂಘಿಸುವುದಿಲ್ಲ” ಎಂದು ಚಂದ್ರಚೂಡ್ 2022ರಲ್ಲಿ ಮೌಖಿವಾಗಿ ಹೇಳಿದ್ದರು.

“ನ್ಯಾಯಮೂರ್ತಿ ಚಂದ್ರಚೂಡ್ ಅವರು ತಾವೇ ಭಾಗವಾಗಿದ್ದ ಅಯೋಧ್ಯ ತೀರ್ಪನ್ನು ಈ ಮೂಲಕ ಉಲ್ಲಂಘಿಸಿದ್ದಾರೆ. ನ್ಯಾಯಾಂಗ ಕಾನೂನಿಗೆ ಬದ್ದವಾಗಿರಬೇಕು. ಆದರೆ, ಜ್ಞಾನವ್ಯಾಪಿ ಪ್ರಕರಣದಲ್ಲಿ ಅವರ ತೀರ್ಪು ಆಘಾತಕಾರಿ. ಚಂದ್ರಚೂಡ್ ಅವರು ಜಾತ್ಯಾತೀತತೆ ಮತ್ತು ಕಾನೂನಿನ ನಿಯಮಗಳ ಕುರಿತು ವಿಶ್ವದಾದ್ಯಂತ ಉಪನ್ಯಾಸಗಳನ್ನು ನೀಡುತ್ತಾರೆ. ಆದರೆ, ಅವರ ಜ್ಞಾನವ್ಯಾಪಿ ಕುರಿತ ತೀರ್ಪು ಇದೆಲ್ಲದಕ್ಕೂ ನೇರ ವಿರುದ್ದವಾಗಿದೆ” ದವೆ ಹೇಳಿದ್ದಾರೆ.

“ಆರಾಧನಾ ಸ್ಥಳಗಳ ಕಾಯ್ದೆ, ಧಾರ್ಮಿಕ ಸ್ಥಳಗಳ ಸ್ವರೂಪ ಬದಲಾಯಿಸಲು ಸಾಧ್ಯವಿಲ್ಲ. 1947ರಲ್ಲಿ ಸ್ವಾತಂತ್ರ್ಯ ಬರುವಾಗ ಇದ್ದ ರೀತಿಯಲ್ಲೇ ಇರಬೇಕು ಎನ್ನುತ್ತದೆ. ಧಾರ್ಮಿಕ ಸ್ಥಳಗಳ ಸ್ವರೂಪ ಬದಲಾಯಿಸಲು ಸಾಧ್ಯವಿಲ್ಲ ಎನ್ನುವಾಗ, ಅದನ್ನು ಸಮೀಕ್ಷೆ ನಡೆಸಿ ಹಿನ್ನಲೆ ತಿಳಿಯುವ ಅಗತ್ಯವೇನಿದೆ? ಎಂದು ದವೆ ಪ್ರಶ್ನಿಸಿದ್ದಾರೆ. ಆರಾಧನಾ ಸ್ಥಳಗಳ ಕಾಯ್ದೆಯ ಮೂಲ ಉದ್ದೇಶವನ್ನೇ ತನ್ನ ಅಭಿಪ್ರಾಯದ ಮೂಲಕ ಚಂದ್ರಚೂಡ್ ಒಡೆದು ಹಾಕಿದ್ದಾರೆ” ಎಂದು ದವೆ ಕಿಡಿಕಾರಿದ್ದಾರೆ.

“ಚಂದ್ರಚೂಡ್ ಅವರೇ ಭಾಗವಾಗಿದ್ದ ಅಯೋಧ್ಯೆ ತೀರ್ಪು ಕೂಡ ಆರಾಧನಾ ಸ್ಥಳಗಳ ಕಾಯ್ದೆ1991ನ್ನು ಶ್ಲಾಘಿಸಿದೆ. ಈ ಕಾಯ್ದೆ ಸಂವಿಧಾನದ ಮೂಲಭೂತ ಮೌಲ್ಯಗಳನ್ನು ರಕ್ಷಿಸುತ್ತದೆ ಎಂದು ಹೇಳಿದೆ. ಆದರೆ, ಅದೇ ಚಂದ್ರಚೂಡ್ ಅವರು ಜ್ಞಾನವ್ಯಾಪಿ ಪ್ರಕರಣದಲ್ಲಿ ನೀಡಿರುವ ಮೌಖಿಕ ಹೇಳಿಕೆ, ಅವರೇ ಭಾಗವಾಗಿದ್ದ ಅಯೋಧ್ಯೆ ತೀರ್ಪಿನ ಪೀಠದ ಹೇಳಿಕೆಗೆ ನೇರ ವಿರುದ್ದವಾಗಿದೆ” ಎಂದು ದವೆ ತಿಳಿಸಿದ್ದಾರೆ.

ಸಂಭಾಲ್ ಹಿಂಸಾಚಾರಕ್ಕೆ ನ್ಯಾಯಾಂಗ ಹೊಣೆಯಲ್ಲವೇ? ಎಂದು ದವೆ ಪ್ರಶ್ನಿಸಿದ್ದಾರೆ. ಜ್ಞಾನವ್ಯಾಪಿ ಪ್ರಕರಣದಲ್ಲಿ ಇತರ ನ್ಯಾಯಾಧೀಶರು ಚಂದ್ರಚೂಡ್ ಅಭಿಪ್ರಾಯದ ವಿರುದ್ದ ನಿಲ್ಲಬೇಕಿತ್ತು. ಚಂದ್ರಚೂಡ್ ಅಪ್ರಮಾಣಿಕ ವ್ಯಾಖ್ಯಾನ ನೀಡಿದ್ದಾರೆ. ಅವು ಹಾನಿಕರ ಮತ್ತು ಉದ್ದೇಶಪೂರ್ವಕ ಎಂದು ದವೆ ಆರೋಪಿಸಿದ್ದಾರೆ.

ಆರಾಧನಾ ಸ್ಥಳಗಳ ಕಾಯ್ದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸುವ ಅರ್ಜಿಗಳನ್ನು ಏಕೆ ತಿರಸ್ಕರಿಸಿಲ್ಲ? ಎಂದು ದವೆ ಪ್ರಶ್ನಿಸಿದ್ದಾರೆ. ಅಯೋಧ್ಯೆ ತೀರ್ಪಿನಲ್ಲಿ ಪರೋಕ್ಷವಾಗಿ ನ್ಯಾಯಾಲಯ ಈ ಕಾಯ್ದೆಯನ್ನು ಎತ್ತಿ ಹಿಡಿದಿತ್ತು ಎಂದು ದವೆ ಪುನರುಚ್ಚರಿಸಿದ್ದಾರೆ. ಆರಾಧನಾ ಸ್ಥಳಗಳ ಕಾಯ್ದೆ-1991 ಅನ್ನು ಸಂಸತ್ತಿನಲ್ಲೇ ಹಿಂಪಡೆಯಲು ದವೆ ಬಿಜೆಪಿಗೆ ನೇರ ಸವಾಲು ಹಾಕಿದ್ದಾರೆ. ಅದಕ್ಕೆ ಬಿಜೆಪಿಯ ಮಿತ್ರಪಕ್ಷಗಳೇ ಬೆಂಬಲಿಸುವುದಿಲ್ಲ ಎಂದಿದ್ದಾರೆ.

“ಹೊಸ ಸಿಜೆಐ ಖನ್ನಾ ನೇತೃತ್ವದಲ್ಲಿ ಹೊಸ ರೂಪದಲ್ಲಿ ಸುಪ್ರೀಂ ಕೋರ್ಟ್ ನಡೆಯಲಿದೆ ಎಂದು ದವೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂವಿಧಾನವನ್ನು ಅವರು ಗೌರವಿಸುತ್ತಾರೆ. 2014ರಿಂದ 2024ರ ನಡುವೆ ನಡೆದಿರುವ ತಪ್ಪುಗಳನ್ನು ಅವರು ಸರಿಪಡಿಸುತ್ತಾರೆ. ನ್ಯಾಯಮೂರ್ತಿ ಖನ್ನಾ ಅವರ 7 ತಿಂಗಳ ಅಲ್ವಾವಧಿಯ ಅಧಿಕಾರದ ಬಳಿಕ, ಅನೇಕ ಒಳ್ಳೆಯ ನ್ಯಾಯಾಧೀಶರು, ಮುಖ್ಯ ನ್ಯಾಯಮೂರ್ತಿಗಳು ಬರುತ್ತಿದ್ದಾರೆ. ನನಗೆ ಅವರ ಮೇಲೆ ಭರವಸೆ ಇದೆ” ಎಂದು ದೆವ ಹೇಳಿದ್ದಾರೆ.

“ನಾನು ಹೆಮ್ಮೆಯ ಹಿಂದೂ, ನಾನೂ ಬ್ರಾಹ್ಮಣ. ನಾನು ನನ್ನ ದೇವರುಗಳನ್ನು ಪೂಜಿಸುತ್ತೇನೆ. ಆದರೆ, ನಾನು ಇತರ ಧರ್ಮಗಳನ್ನು ಗೌರವಿಸುತ್ತೇನೆ. ನಾವೀಗ ಮಂದಿರ-ಮಸೀದಿ ಅನ್ನುವುದನ್ನು ನಿಲ್ಲಿಸದಿದ್ದರೆ, ದೇಶ ಹೊತ್ತಿ ಉರಿಯಲಿದೆ” ಎಂದು ದವೆ ಎಚ್ಚರಿಸಿದ್ದಾರೆ.

“ಸಂಭಾಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಸ್ವಾಗತಾರ್ಹ. ಈ ರೀತಿ ಎಲ್ಲಾ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಕ್ರಮ ಕೈಗೊಳ್ಳಬೇಕು. ನಾನು ಇನ್ನೊಂದು ಪಾಕಿಸ್ತಾನ, ಬಾಂಗ್ಲಾದೇಶ ಆಗಲು ಬಯಸುವುದಿಲ್ಲ. ನಾವು ನಮ್ಮ ದೇಶದಲ್ಲಿ ಧಾರ್ಮಿಕ ಸಹಿಷ್ಣುತೆ ಬಯಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ : ಪೂಜಾಸ್ಥಳಗಳ ಕಾಯ್ದೆ ಕುರಿತು ಚಂದ್ರಚೂಡ್ ಹೇಳಿಕೆ ಎಲ್ಲಾ ವಿವಾದಗಳಿಗೆ ಮೂಲ : ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...