Homeಕರ್ನಾಟಕಉಪಚುನಾವಣೆ ಸಮೀಕ್ಷೆ ಬಿಜೆಪಿ-7, ಕಾಂಗ್ರೆಸ್-5, ಜೆಡಿಎಸ್‌-2: ಮೂರು ಪಕ್ಷಗಳದ್ದೂ ದುಸ್ಥಿತಿಯೇ 

ಉಪಚುನಾವಣೆ ಸಮೀಕ್ಷೆ ಬಿಜೆಪಿ-7, ಕಾಂಗ್ರೆಸ್-5, ಜೆಡಿಎಸ್‌-2: ಮೂರು ಪಕ್ಷಗಳದ್ದೂ ದುಸ್ಥಿತಿಯೇ 

- Advertisement -
- Advertisement -

ಉಪಚುನಾವಣೆಯ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅನರ್ಹರಿಗೆ ಸಂಬಂಧಿಸಿದ ಸುಪ್ರೀಂಕೋರ್ಟು ತೀರ್ಪು ಸಹಾ ಬಂದ ಮೇಲೆ ಗೆಲುವು ಸೋಲಿನ ಲೆಕ್ಕಾಚಾರಗಳು ಆರಂಭವಾಗಿವೆ. 12ರಲ್ಲಿ ಗೆಲ್ಲುತ್ತೇವೆ, 15 ಗೆದ್ದರೂ ಆಶ್ಚರ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು ಕೂಗು ಹಾಕುತ್ತಿದ್ದಾರಾದರೂ, ಮೂರೂ ಪಕ್ಷಗಳು ದುಸ್ಥಿತಿಯಲ್ಲೇ ಇವೆ ಎಂಬುದು ಎದ್ದು ಕಾಣುತ್ತಿದೆ. ಮೂರೂ ಪಕ್ಷಗಳ ‘ಒಳಗಿನ’ ಮೂಲಗಳನ್ನು ಮಾತಾಡಿಸಿದಾಗ ಕಂಡುಬಂದಿರುವ ಸಂಗತಿ ಇದಾಗಿದೆ.

ಈಗಾಗಲೇ ಗೆದ್ದು ಬಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಶಾಸಕರನ್ನು ಪಕ್ಷಾಂತರ ಮಾಡಿಸಿದ ಬಿಜೆಪಿ ಪಕ್ಷವು ಅದೇ (ಅನರ್ಹ) ಶಾಸಕರಿಗೇ ಟಿಕೆಟ್ ಕೊಟ್ಟರೂ, ಬಹುಮತಕ್ಕೆ ಅಗತ್ಯವಿರುವ 8 ಸೀಟುಗಳನ್ನು ಗೆಲ್ಲುವ ಸ್ಥಿತಿಯಲ್ಲಿ ಇಲ್ಲ.

ಅಧಿಕಾರದಲ್ಲಿದ್ದು, ಬಲಿಷ್ಠ ಹೈಕಮ್ಯಾಂಡ್ ಹೊಂದಿರುವ, ವಿರೋಧ ಪಕ್ಷಗಳ ಘಟಾನುಘಟಿ ನಾಯಕರನ್ನೂ ಹೆದರಿಸಿಟ್ಟುಕೊಂಡಿರುವ ಬಿಜೆಪಿಯಲ್ಲೂ ಭಿನ್ನಮತ ಇದೆ. ಹೊಸಕೋಟೆಯಲ್ಲಿ ಈಗಾಗಲೇ ಹಾಲಿ ಬಿಜೆಪಿ ಸಂಸದ ಬಚ್ಚೇಗೌಡರ ಮಗ ಮತ್ತು ಬಿಜೆಪಿಯ ಪರಾಜಿತ ಅಭ್ಯರ್ಥಿ ಶರತ್ ಪಕ್ಷೇತರರಾಗಿ ನಿಲ್ಲುವುದಾಗಿ ಘೋಷಿಸಿಯಾಗಿದೆ.

ಅಥಣಿಯಲ್ಲಿ ಪರಾಜಿತ ಅಭ್ಯರ್ಥಿ ಲಕ್ಷ್ಮಣ ಸವದಿಯೇ ಈಗ ಉಪಮುಖ್ಯಮಂತ್ರಿ. ಅವರನ್ನೇ ಈ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ಎಂದು ಘೋಷಿಸಲಾಗಿದೆ. ಆದರೆ ಅಭ್ಯರ್ಥಿ ಯಾರೆಂದು ಹೇಳಿಲ್ಲ. ಮಹೇಶ್ ಕುಮಟಳ್ಳಿಯವರನ್ನು ತಾವೇ ನಿಂತು ಗೆಲ್ಲಿಸುತ್ತಾರೋ ಸೋಲಿಸುತ್ತಾರೋ ನೋಡಬೇಕು. ಉಳಿದಂತೆ ಭಿನ್ನಮತವನ್ನು ಮೇಲ್ನೋಟಕ್ಕೆ ಬಿಜೆಪಿಯು ಹತ್ತಿಕ್ಕಿದಂತೆ ತೋರುತ್ತದಾದರೂ, ಮತದಾನ ಹೇಗೆ ನಡೆಯುತ್ತದೆಂಬುದು ಗೊತ್ತಾಗಲು ಫಲಿತಾಂಶದ ದಿನದವರೆಗೂ ಕಾಯಬೇಕು. ಹೀಗಾಗಿಯೇ ಬಿಜೆಪಿಯು 7ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಭರವಸೆ ಹೊಂದಿಲ್ಲ.

ಇದನ್ನೂ ಓದಿ: ಬಿಜೆಪಿ ಕೋರ್ ಕಮಿಟಿಯ ಅಂದಾಜು ಎಷ್ಟು?

ಇನ್ನು ಕಾಂಗ್ರೆಸ್ನ ದುಸ್ಥಿತಿ ಕಡಿಮೆ ಏನಿಲ್ಲ. ಯಶವಂತಪುರ ಕ್ಷೇತ್ರದಲ್ಲಿ ಇನ್ನೂ ಅಭ್ಯರ್ಥಿ ಹುಡುಕಲು ಸಾಧ್ಯವಾಗಿಲ್ಲ. ಹೊಸಕೋಟೆಯಲ್ಲಿ ಎಂಟಿಬಿ ಸೋಲುವಂತಾಗಲು ಸ್ವತಂತ್ರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲ್ಲಬೇಕು. ಹಾಗಾಗಿ ಭೈರತಿ ಸುರೇಶ್ ಪತ್ನಿಯನ್ನು ಕಣಕ್ಕಿಳಿಸಲಾಗುತ್ತಿದೆ. ಯಶವಂತಪುರ ಕ್ಷೇತ್ರದಲ್ಲಿ ಇದುವರೆಗೆ ಅಭ್ಯರ್ಥಿಯನ್ನು ಹುಡುಕಿಕೊಳ್ಳುವುದೇ ಸಾಧ್ಯವಾಗಿಲ್ಲ. ಅಲ್ಲಿ ಜವರಾಯಿಗೌಡರನ್ನು ಕಾಂಗ್ರೆಸ್‍‌ಗೆ ತರುವ ಪ್ರಯತ್ನ ಸಫಲವಾಗದೇ, ಈಗ ಜೆಡಿಎಸ್‌ನ ಜವರಾಯಿಗೌಡರನ್ನು ಗೆಲ್ಲಿಸುವಂತಹ ಕ್ಯಾಂಡಿಡೇಟ್ ಹಾಕುವುದಷ್ಟೇ ಕಾಂಗ್ರೆಸ್‌ಗೆ ಸಾಧ್ಯ.

ಇನ್ನು ಚಿಕ್ಕಬಳ್ಳಾಪುರದಲ್ಲಿ ಘೋಷಣೆ ಮಾಡಲಾಗಿದ್ದ ಅಭ್ಯರ್ಥಿ ಅಂಜನಪ್ಪ ಹಿಂದೆ ಸರಿದಾಗಿದೆ. ಈ ಸದ್ಯ ಅವರನ್ನೇ ಮನವೊಲಿಸುವ ಕೆಲಸ ಸಾಗಿದೆ. ಆ ಲೆಕ್ಕದಲ್ಲಿ ಸುಧಾಕರ್‌ಗೆ ನಿರಾತಂಕ ಗೆಲುವಿಗೆ ದಾರಿ ಮಾಡಿಕೊಡಲಾಗಿದೆ. ಗೋಕಾಕ್‍‌ನಲ್ಲೂ ಕ್ಯಾಂಡಿಡೇಟ್ ಅಂತಿಮವಾಗಿಲ್ಲ. ಪಕ್ಷಾಂತರದಿಂದ ತೊಂದರೆ ಅನುಭವಿಸಿದ್ದರೂ, ಕಾಗವಾಡ ಮತ್ತು ಗೋಕಾಕ್‌ನಲ್ಲಿ ಬಿಜೆಪಿಯಿಂದ ಬರುವ ಅಭ್ಯರ್ಥಿಗೆ ಕಾಯುತ್ತಿರುವ ಹೀನಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ಇನ್ನೂ ಕೆಲವು ಕ್ಷೇತ್ರಗಳಲ್ಲೂ ಹೀಗೆಯೇ ಆಗಬಹುದು.

ಜೆಡಿಎಸ್‍ ಮಿಕ್ಕೆಲ್ಲರಿಗಿಂತಲೂ ಕೆಟ್ಟ ಸ್ಥಿತಿಯಲ್ಲಿದೆ. ಉಪಚುನಾವಣೆಯ ಫಲಿತಾಂಶ ನೆಗೆಟಿವ್ ಆದರೆ ಬಿಜೆಪಿಗೆ ತಾನೇ ಬೆಂಬಲ ಕೊಡುವುದಾಗಿ ಗೌಡರು ಮತ್ತು ಮಗ ಘೋಷಿಸಿಯಾಗಿದೆ. ತನ್ನ ಸರ್ಕಾರವನ್ನು ಇಳಿಸಿದ ಪಕ್ಷಕ್ಕೆ ಇಷ್ಟು ಬೇಗ ಬೆಂಬಲ ನೀಡಲು ನಿಂತಿದೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿ ಆ ಕಡೆಗೆ ಗೋಪಾಲಯ್ಯ ಹೋಗಿದ್ದಷ್ಟೇ ಅಲ್ಲ; ಬಹಳ ಕಾಲದಿಂದ ಜೆಡಿಎಸ್‍‌ ದುಡಿಯುತ್ತಾ ಬಂದಿದ್ದ ಆರ್.ವಿ.ಹರೀಶ್‍ ಸಹಾ ಪಕ್ಷಕ್ಕೆ ಮೊನ್ನೆಯಷ್ಟೇ ರಾಜೀನಾಮೆ ಕೊಟ್ಟಿದ್ದಾರೆ. ಏಕೆಂದರೆ ಅಲ್ಲಿ ಇನ್ಯಾರೋ ವಲಸೆ ಹಕ್ಕಿಯನ್ನು ಅಪ್ಪ ಮಕ್ಕಳು ಹಿಡಿದುಕೊಂಡು ಬರಲಿದ್ದಾರೆ ಎಂಬ ತನ್ನ ಭಾವನೆಯನ್ನೂ ಅವರು ಮುಚ್ಚಿಟ್ಟಿಲ್ಲ.

ಹುಣಸೂರಿನಲ್ಲಿ ಎಚ್.ವಿಶ್ವನಾಥ್‌ರನ್ನು ಗೆಲ್ಲಿಸಿಕೊಂಡು ಬಂದಿದ್ದ ಜೆಡಿಎಸ್ ಈಗ ಕಾಂಗ್ರೆಸ್‌ಗೆ ಗೆಲುವು ಬಿಟ್ಟುಕೊಟ್ಟಂತಿದೆ. ದೇವೇಗೌಡರನ್ನು ಹಾವು, ವಿಷ ಎಂದೆಲ್ಲಾ ಬಯ್ದಿದ್ದ ಬಚ್ಚೇಗೌಡರ ಮಗನಿಗೆ ಹೊಸಕೋಟೆಯಲ್ಲಿ ಬೆಂಬಲ ಸೂಚಿಸಿ ಅಭ್ಯರ್ಥಿಯನ್ನೇ ಹಾಕುವುದಿಲ್ಲ ಎಂದಿರುವುದೂ ಜೆಡಿಎಸ್‍‌ನ ಪರಿಸ್ಥಿತಿ ಬಿಂಬಿಸುತ್ತಿದೆ.

ಈ ಎಲ್ಲಾ ಕಾರಣಗಳಿಂದಾಗಿ ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳ ಪೈಕಿ ಬಿಜೆಪಿ 7, ಕಾಂಗ್ರೆಸ್ 5 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚು ಕಾಣುತ್ತಿದೆ. ಇನ್ನೊಂದು ಕ್ಷೇತ್ರವು ಬಿಜೆಪಿ ಅಥವಾ ಕಾಂಗ್ರೆಸ್‌ಗೆ ಒಲಿಯಬಹುದು, ಬಿಜೆಪಿಗೇ ಸಾಧ್ಯತೆ ಹೆಚ್ಚು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...