Homeಕರ್ನಾಟಕಉಪಚುನಾವಣೆ ಸಮೀಕ್ಷೆ ಬಿಜೆಪಿ-7, ಕಾಂಗ್ರೆಸ್-5, ಜೆಡಿಎಸ್‌-2: ಮೂರು ಪಕ್ಷಗಳದ್ದೂ ದುಸ್ಥಿತಿಯೇ 

ಉಪಚುನಾವಣೆ ಸಮೀಕ್ಷೆ ಬಿಜೆಪಿ-7, ಕಾಂಗ್ರೆಸ್-5, ಜೆಡಿಎಸ್‌-2: ಮೂರು ಪಕ್ಷಗಳದ್ದೂ ದುಸ್ಥಿತಿಯೇ 

- Advertisement -
- Advertisement -

ಉಪಚುನಾವಣೆಯ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅನರ್ಹರಿಗೆ ಸಂಬಂಧಿಸಿದ ಸುಪ್ರೀಂಕೋರ್ಟು ತೀರ್ಪು ಸಹಾ ಬಂದ ಮೇಲೆ ಗೆಲುವು ಸೋಲಿನ ಲೆಕ್ಕಾಚಾರಗಳು ಆರಂಭವಾಗಿವೆ. 12ರಲ್ಲಿ ಗೆಲ್ಲುತ್ತೇವೆ, 15 ಗೆದ್ದರೂ ಆಶ್ಚರ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು ಕೂಗು ಹಾಕುತ್ತಿದ್ದಾರಾದರೂ, ಮೂರೂ ಪಕ್ಷಗಳು ದುಸ್ಥಿತಿಯಲ್ಲೇ ಇವೆ ಎಂಬುದು ಎದ್ದು ಕಾಣುತ್ತಿದೆ. ಮೂರೂ ಪಕ್ಷಗಳ ‘ಒಳಗಿನ’ ಮೂಲಗಳನ್ನು ಮಾತಾಡಿಸಿದಾಗ ಕಂಡುಬಂದಿರುವ ಸಂಗತಿ ಇದಾಗಿದೆ.

ಈಗಾಗಲೇ ಗೆದ್ದು ಬಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಶಾಸಕರನ್ನು ಪಕ್ಷಾಂತರ ಮಾಡಿಸಿದ ಬಿಜೆಪಿ ಪಕ್ಷವು ಅದೇ (ಅನರ್ಹ) ಶಾಸಕರಿಗೇ ಟಿಕೆಟ್ ಕೊಟ್ಟರೂ, ಬಹುಮತಕ್ಕೆ ಅಗತ್ಯವಿರುವ 8 ಸೀಟುಗಳನ್ನು ಗೆಲ್ಲುವ ಸ್ಥಿತಿಯಲ್ಲಿ ಇಲ್ಲ.

ಅಧಿಕಾರದಲ್ಲಿದ್ದು, ಬಲಿಷ್ಠ ಹೈಕಮ್ಯಾಂಡ್ ಹೊಂದಿರುವ, ವಿರೋಧ ಪಕ್ಷಗಳ ಘಟಾನುಘಟಿ ನಾಯಕರನ್ನೂ ಹೆದರಿಸಿಟ್ಟುಕೊಂಡಿರುವ ಬಿಜೆಪಿಯಲ್ಲೂ ಭಿನ್ನಮತ ಇದೆ. ಹೊಸಕೋಟೆಯಲ್ಲಿ ಈಗಾಗಲೇ ಹಾಲಿ ಬಿಜೆಪಿ ಸಂಸದ ಬಚ್ಚೇಗೌಡರ ಮಗ ಮತ್ತು ಬಿಜೆಪಿಯ ಪರಾಜಿತ ಅಭ್ಯರ್ಥಿ ಶರತ್ ಪಕ್ಷೇತರರಾಗಿ ನಿಲ್ಲುವುದಾಗಿ ಘೋಷಿಸಿಯಾಗಿದೆ.

ಅಥಣಿಯಲ್ಲಿ ಪರಾಜಿತ ಅಭ್ಯರ್ಥಿ ಲಕ್ಷ್ಮಣ ಸವದಿಯೇ ಈಗ ಉಪಮುಖ್ಯಮಂತ್ರಿ. ಅವರನ್ನೇ ಈ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ಎಂದು ಘೋಷಿಸಲಾಗಿದೆ. ಆದರೆ ಅಭ್ಯರ್ಥಿ ಯಾರೆಂದು ಹೇಳಿಲ್ಲ. ಮಹೇಶ್ ಕುಮಟಳ್ಳಿಯವರನ್ನು ತಾವೇ ನಿಂತು ಗೆಲ್ಲಿಸುತ್ತಾರೋ ಸೋಲಿಸುತ್ತಾರೋ ನೋಡಬೇಕು. ಉಳಿದಂತೆ ಭಿನ್ನಮತವನ್ನು ಮೇಲ್ನೋಟಕ್ಕೆ ಬಿಜೆಪಿಯು ಹತ್ತಿಕ್ಕಿದಂತೆ ತೋರುತ್ತದಾದರೂ, ಮತದಾನ ಹೇಗೆ ನಡೆಯುತ್ತದೆಂಬುದು ಗೊತ್ತಾಗಲು ಫಲಿತಾಂಶದ ದಿನದವರೆಗೂ ಕಾಯಬೇಕು. ಹೀಗಾಗಿಯೇ ಬಿಜೆಪಿಯು 7ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಭರವಸೆ ಹೊಂದಿಲ್ಲ.

ಇದನ್ನೂ ಓದಿ: ಬಿಜೆಪಿ ಕೋರ್ ಕಮಿಟಿಯ ಅಂದಾಜು ಎಷ್ಟು?

ಇನ್ನು ಕಾಂಗ್ರೆಸ್ನ ದುಸ್ಥಿತಿ ಕಡಿಮೆ ಏನಿಲ್ಲ. ಯಶವಂತಪುರ ಕ್ಷೇತ್ರದಲ್ಲಿ ಇನ್ನೂ ಅಭ್ಯರ್ಥಿ ಹುಡುಕಲು ಸಾಧ್ಯವಾಗಿಲ್ಲ. ಹೊಸಕೋಟೆಯಲ್ಲಿ ಎಂಟಿಬಿ ಸೋಲುವಂತಾಗಲು ಸ್ವತಂತ್ರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲ್ಲಬೇಕು. ಹಾಗಾಗಿ ಭೈರತಿ ಸುರೇಶ್ ಪತ್ನಿಯನ್ನು ಕಣಕ್ಕಿಳಿಸಲಾಗುತ್ತಿದೆ. ಯಶವಂತಪುರ ಕ್ಷೇತ್ರದಲ್ಲಿ ಇದುವರೆಗೆ ಅಭ್ಯರ್ಥಿಯನ್ನು ಹುಡುಕಿಕೊಳ್ಳುವುದೇ ಸಾಧ್ಯವಾಗಿಲ್ಲ. ಅಲ್ಲಿ ಜವರಾಯಿಗೌಡರನ್ನು ಕಾಂಗ್ರೆಸ್‍‌ಗೆ ತರುವ ಪ್ರಯತ್ನ ಸಫಲವಾಗದೇ, ಈಗ ಜೆಡಿಎಸ್‌ನ ಜವರಾಯಿಗೌಡರನ್ನು ಗೆಲ್ಲಿಸುವಂತಹ ಕ್ಯಾಂಡಿಡೇಟ್ ಹಾಕುವುದಷ್ಟೇ ಕಾಂಗ್ರೆಸ್‌ಗೆ ಸಾಧ್ಯ.

ಇನ್ನು ಚಿಕ್ಕಬಳ್ಳಾಪುರದಲ್ಲಿ ಘೋಷಣೆ ಮಾಡಲಾಗಿದ್ದ ಅಭ್ಯರ್ಥಿ ಅಂಜನಪ್ಪ ಹಿಂದೆ ಸರಿದಾಗಿದೆ. ಈ ಸದ್ಯ ಅವರನ್ನೇ ಮನವೊಲಿಸುವ ಕೆಲಸ ಸಾಗಿದೆ. ಆ ಲೆಕ್ಕದಲ್ಲಿ ಸುಧಾಕರ್‌ಗೆ ನಿರಾತಂಕ ಗೆಲುವಿಗೆ ದಾರಿ ಮಾಡಿಕೊಡಲಾಗಿದೆ. ಗೋಕಾಕ್‍‌ನಲ್ಲೂ ಕ್ಯಾಂಡಿಡೇಟ್ ಅಂತಿಮವಾಗಿಲ್ಲ. ಪಕ್ಷಾಂತರದಿಂದ ತೊಂದರೆ ಅನುಭವಿಸಿದ್ದರೂ, ಕಾಗವಾಡ ಮತ್ತು ಗೋಕಾಕ್‌ನಲ್ಲಿ ಬಿಜೆಪಿಯಿಂದ ಬರುವ ಅಭ್ಯರ್ಥಿಗೆ ಕಾಯುತ್ತಿರುವ ಹೀನಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ಇನ್ನೂ ಕೆಲವು ಕ್ಷೇತ್ರಗಳಲ್ಲೂ ಹೀಗೆಯೇ ಆಗಬಹುದು.

ಜೆಡಿಎಸ್‍ ಮಿಕ್ಕೆಲ್ಲರಿಗಿಂತಲೂ ಕೆಟ್ಟ ಸ್ಥಿತಿಯಲ್ಲಿದೆ. ಉಪಚುನಾವಣೆಯ ಫಲಿತಾಂಶ ನೆಗೆಟಿವ್ ಆದರೆ ಬಿಜೆಪಿಗೆ ತಾನೇ ಬೆಂಬಲ ಕೊಡುವುದಾಗಿ ಗೌಡರು ಮತ್ತು ಮಗ ಘೋಷಿಸಿಯಾಗಿದೆ. ತನ್ನ ಸರ್ಕಾರವನ್ನು ಇಳಿಸಿದ ಪಕ್ಷಕ್ಕೆ ಇಷ್ಟು ಬೇಗ ಬೆಂಬಲ ನೀಡಲು ನಿಂತಿದೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿ ಆ ಕಡೆಗೆ ಗೋಪಾಲಯ್ಯ ಹೋಗಿದ್ದಷ್ಟೇ ಅಲ್ಲ; ಬಹಳ ಕಾಲದಿಂದ ಜೆಡಿಎಸ್‍‌ ದುಡಿಯುತ್ತಾ ಬಂದಿದ್ದ ಆರ್.ವಿ.ಹರೀಶ್‍ ಸಹಾ ಪಕ್ಷಕ್ಕೆ ಮೊನ್ನೆಯಷ್ಟೇ ರಾಜೀನಾಮೆ ಕೊಟ್ಟಿದ್ದಾರೆ. ಏಕೆಂದರೆ ಅಲ್ಲಿ ಇನ್ಯಾರೋ ವಲಸೆ ಹಕ್ಕಿಯನ್ನು ಅಪ್ಪ ಮಕ್ಕಳು ಹಿಡಿದುಕೊಂಡು ಬರಲಿದ್ದಾರೆ ಎಂಬ ತನ್ನ ಭಾವನೆಯನ್ನೂ ಅವರು ಮುಚ್ಚಿಟ್ಟಿಲ್ಲ.

ಹುಣಸೂರಿನಲ್ಲಿ ಎಚ್.ವಿಶ್ವನಾಥ್‌ರನ್ನು ಗೆಲ್ಲಿಸಿಕೊಂಡು ಬಂದಿದ್ದ ಜೆಡಿಎಸ್ ಈಗ ಕಾಂಗ್ರೆಸ್‌ಗೆ ಗೆಲುವು ಬಿಟ್ಟುಕೊಟ್ಟಂತಿದೆ. ದೇವೇಗೌಡರನ್ನು ಹಾವು, ವಿಷ ಎಂದೆಲ್ಲಾ ಬಯ್ದಿದ್ದ ಬಚ್ಚೇಗೌಡರ ಮಗನಿಗೆ ಹೊಸಕೋಟೆಯಲ್ಲಿ ಬೆಂಬಲ ಸೂಚಿಸಿ ಅಭ್ಯರ್ಥಿಯನ್ನೇ ಹಾಕುವುದಿಲ್ಲ ಎಂದಿರುವುದೂ ಜೆಡಿಎಸ್‍‌ನ ಪರಿಸ್ಥಿತಿ ಬಿಂಬಿಸುತ್ತಿದೆ.

ಈ ಎಲ್ಲಾ ಕಾರಣಗಳಿಂದಾಗಿ ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳ ಪೈಕಿ ಬಿಜೆಪಿ 7, ಕಾಂಗ್ರೆಸ್ 5 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚು ಕಾಣುತ್ತಿದೆ. ಇನ್ನೊಂದು ಕ್ಷೇತ್ರವು ಬಿಜೆಪಿ ಅಥವಾ ಕಾಂಗ್ರೆಸ್‌ಗೆ ಒಲಿಯಬಹುದು, ಬಿಜೆಪಿಗೇ ಸಾಧ್ಯತೆ ಹೆಚ್ಚು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...