Homeಕರ್ನಾಟಕಉಪಚುನಾವಣೆ ಸಮೀಕ್ಷೆ ಬಿಜೆಪಿ-7, ಕಾಂಗ್ರೆಸ್-5, ಜೆಡಿಎಸ್‌-2: ಮೂರು ಪಕ್ಷಗಳದ್ದೂ ದುಸ್ಥಿತಿಯೇ 

ಉಪಚುನಾವಣೆ ಸಮೀಕ್ಷೆ ಬಿಜೆಪಿ-7, ಕಾಂಗ್ರೆಸ್-5, ಜೆಡಿಎಸ್‌-2: ಮೂರು ಪಕ್ಷಗಳದ್ದೂ ದುಸ್ಥಿತಿಯೇ 

- Advertisement -
- Advertisement -

ಉಪಚುನಾವಣೆಯ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅನರ್ಹರಿಗೆ ಸಂಬಂಧಿಸಿದ ಸುಪ್ರೀಂಕೋರ್ಟು ತೀರ್ಪು ಸಹಾ ಬಂದ ಮೇಲೆ ಗೆಲುವು ಸೋಲಿನ ಲೆಕ್ಕಾಚಾರಗಳು ಆರಂಭವಾಗಿವೆ. 12ರಲ್ಲಿ ಗೆಲ್ಲುತ್ತೇವೆ, 15 ಗೆದ್ದರೂ ಆಶ್ಚರ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು ಕೂಗು ಹಾಕುತ್ತಿದ್ದಾರಾದರೂ, ಮೂರೂ ಪಕ್ಷಗಳು ದುಸ್ಥಿತಿಯಲ್ಲೇ ಇವೆ ಎಂಬುದು ಎದ್ದು ಕಾಣುತ್ತಿದೆ. ಮೂರೂ ಪಕ್ಷಗಳ ‘ಒಳಗಿನ’ ಮೂಲಗಳನ್ನು ಮಾತಾಡಿಸಿದಾಗ ಕಂಡುಬಂದಿರುವ ಸಂಗತಿ ಇದಾಗಿದೆ.

ಈಗಾಗಲೇ ಗೆದ್ದು ಬಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಶಾಸಕರನ್ನು ಪಕ್ಷಾಂತರ ಮಾಡಿಸಿದ ಬಿಜೆಪಿ ಪಕ್ಷವು ಅದೇ (ಅನರ್ಹ) ಶಾಸಕರಿಗೇ ಟಿಕೆಟ್ ಕೊಟ್ಟರೂ, ಬಹುಮತಕ್ಕೆ ಅಗತ್ಯವಿರುವ 8 ಸೀಟುಗಳನ್ನು ಗೆಲ್ಲುವ ಸ್ಥಿತಿಯಲ್ಲಿ ಇಲ್ಲ.

ಅಧಿಕಾರದಲ್ಲಿದ್ದು, ಬಲಿಷ್ಠ ಹೈಕಮ್ಯಾಂಡ್ ಹೊಂದಿರುವ, ವಿರೋಧ ಪಕ್ಷಗಳ ಘಟಾನುಘಟಿ ನಾಯಕರನ್ನೂ ಹೆದರಿಸಿಟ್ಟುಕೊಂಡಿರುವ ಬಿಜೆಪಿಯಲ್ಲೂ ಭಿನ್ನಮತ ಇದೆ. ಹೊಸಕೋಟೆಯಲ್ಲಿ ಈಗಾಗಲೇ ಹಾಲಿ ಬಿಜೆಪಿ ಸಂಸದ ಬಚ್ಚೇಗೌಡರ ಮಗ ಮತ್ತು ಬಿಜೆಪಿಯ ಪರಾಜಿತ ಅಭ್ಯರ್ಥಿ ಶರತ್ ಪಕ್ಷೇತರರಾಗಿ ನಿಲ್ಲುವುದಾಗಿ ಘೋಷಿಸಿಯಾಗಿದೆ.

ಅಥಣಿಯಲ್ಲಿ ಪರಾಜಿತ ಅಭ್ಯರ್ಥಿ ಲಕ್ಷ್ಮಣ ಸವದಿಯೇ ಈಗ ಉಪಮುಖ್ಯಮಂತ್ರಿ. ಅವರನ್ನೇ ಈ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ಎಂದು ಘೋಷಿಸಲಾಗಿದೆ. ಆದರೆ ಅಭ್ಯರ್ಥಿ ಯಾರೆಂದು ಹೇಳಿಲ್ಲ. ಮಹೇಶ್ ಕುಮಟಳ್ಳಿಯವರನ್ನು ತಾವೇ ನಿಂತು ಗೆಲ್ಲಿಸುತ್ತಾರೋ ಸೋಲಿಸುತ್ತಾರೋ ನೋಡಬೇಕು. ಉಳಿದಂತೆ ಭಿನ್ನಮತವನ್ನು ಮೇಲ್ನೋಟಕ್ಕೆ ಬಿಜೆಪಿಯು ಹತ್ತಿಕ್ಕಿದಂತೆ ತೋರುತ್ತದಾದರೂ, ಮತದಾನ ಹೇಗೆ ನಡೆಯುತ್ತದೆಂಬುದು ಗೊತ್ತಾಗಲು ಫಲಿತಾಂಶದ ದಿನದವರೆಗೂ ಕಾಯಬೇಕು. ಹೀಗಾಗಿಯೇ ಬಿಜೆಪಿಯು 7ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಭರವಸೆ ಹೊಂದಿಲ್ಲ.

ಇದನ್ನೂ ಓದಿ: ಬಿಜೆಪಿ ಕೋರ್ ಕಮಿಟಿಯ ಅಂದಾಜು ಎಷ್ಟು?

ಇನ್ನು ಕಾಂಗ್ರೆಸ್ನ ದುಸ್ಥಿತಿ ಕಡಿಮೆ ಏನಿಲ್ಲ. ಯಶವಂತಪುರ ಕ್ಷೇತ್ರದಲ್ಲಿ ಇನ್ನೂ ಅಭ್ಯರ್ಥಿ ಹುಡುಕಲು ಸಾಧ್ಯವಾಗಿಲ್ಲ. ಹೊಸಕೋಟೆಯಲ್ಲಿ ಎಂಟಿಬಿ ಸೋಲುವಂತಾಗಲು ಸ್ವತಂತ್ರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲ್ಲಬೇಕು. ಹಾಗಾಗಿ ಭೈರತಿ ಸುರೇಶ್ ಪತ್ನಿಯನ್ನು ಕಣಕ್ಕಿಳಿಸಲಾಗುತ್ತಿದೆ. ಯಶವಂತಪುರ ಕ್ಷೇತ್ರದಲ್ಲಿ ಇದುವರೆಗೆ ಅಭ್ಯರ್ಥಿಯನ್ನು ಹುಡುಕಿಕೊಳ್ಳುವುದೇ ಸಾಧ್ಯವಾಗಿಲ್ಲ. ಅಲ್ಲಿ ಜವರಾಯಿಗೌಡರನ್ನು ಕಾಂಗ್ರೆಸ್‍‌ಗೆ ತರುವ ಪ್ರಯತ್ನ ಸಫಲವಾಗದೇ, ಈಗ ಜೆಡಿಎಸ್‌ನ ಜವರಾಯಿಗೌಡರನ್ನು ಗೆಲ್ಲಿಸುವಂತಹ ಕ್ಯಾಂಡಿಡೇಟ್ ಹಾಕುವುದಷ್ಟೇ ಕಾಂಗ್ರೆಸ್‌ಗೆ ಸಾಧ್ಯ.

ಇನ್ನು ಚಿಕ್ಕಬಳ್ಳಾಪುರದಲ್ಲಿ ಘೋಷಣೆ ಮಾಡಲಾಗಿದ್ದ ಅಭ್ಯರ್ಥಿ ಅಂಜನಪ್ಪ ಹಿಂದೆ ಸರಿದಾಗಿದೆ. ಈ ಸದ್ಯ ಅವರನ್ನೇ ಮನವೊಲಿಸುವ ಕೆಲಸ ಸಾಗಿದೆ. ಆ ಲೆಕ್ಕದಲ್ಲಿ ಸುಧಾಕರ್‌ಗೆ ನಿರಾತಂಕ ಗೆಲುವಿಗೆ ದಾರಿ ಮಾಡಿಕೊಡಲಾಗಿದೆ. ಗೋಕಾಕ್‍‌ನಲ್ಲೂ ಕ್ಯಾಂಡಿಡೇಟ್ ಅಂತಿಮವಾಗಿಲ್ಲ. ಪಕ್ಷಾಂತರದಿಂದ ತೊಂದರೆ ಅನುಭವಿಸಿದ್ದರೂ, ಕಾಗವಾಡ ಮತ್ತು ಗೋಕಾಕ್‌ನಲ್ಲಿ ಬಿಜೆಪಿಯಿಂದ ಬರುವ ಅಭ್ಯರ್ಥಿಗೆ ಕಾಯುತ್ತಿರುವ ಹೀನಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ಇನ್ನೂ ಕೆಲವು ಕ್ಷೇತ್ರಗಳಲ್ಲೂ ಹೀಗೆಯೇ ಆಗಬಹುದು.

ಜೆಡಿಎಸ್‍ ಮಿಕ್ಕೆಲ್ಲರಿಗಿಂತಲೂ ಕೆಟ್ಟ ಸ್ಥಿತಿಯಲ್ಲಿದೆ. ಉಪಚುನಾವಣೆಯ ಫಲಿತಾಂಶ ನೆಗೆಟಿವ್ ಆದರೆ ಬಿಜೆಪಿಗೆ ತಾನೇ ಬೆಂಬಲ ಕೊಡುವುದಾಗಿ ಗೌಡರು ಮತ್ತು ಮಗ ಘೋಷಿಸಿಯಾಗಿದೆ. ತನ್ನ ಸರ್ಕಾರವನ್ನು ಇಳಿಸಿದ ಪಕ್ಷಕ್ಕೆ ಇಷ್ಟು ಬೇಗ ಬೆಂಬಲ ನೀಡಲು ನಿಂತಿದೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿ ಆ ಕಡೆಗೆ ಗೋಪಾಲಯ್ಯ ಹೋಗಿದ್ದಷ್ಟೇ ಅಲ್ಲ; ಬಹಳ ಕಾಲದಿಂದ ಜೆಡಿಎಸ್‍‌ ದುಡಿಯುತ್ತಾ ಬಂದಿದ್ದ ಆರ್.ವಿ.ಹರೀಶ್‍ ಸಹಾ ಪಕ್ಷಕ್ಕೆ ಮೊನ್ನೆಯಷ್ಟೇ ರಾಜೀನಾಮೆ ಕೊಟ್ಟಿದ್ದಾರೆ. ಏಕೆಂದರೆ ಅಲ್ಲಿ ಇನ್ಯಾರೋ ವಲಸೆ ಹಕ್ಕಿಯನ್ನು ಅಪ್ಪ ಮಕ್ಕಳು ಹಿಡಿದುಕೊಂಡು ಬರಲಿದ್ದಾರೆ ಎಂಬ ತನ್ನ ಭಾವನೆಯನ್ನೂ ಅವರು ಮುಚ್ಚಿಟ್ಟಿಲ್ಲ.

ಹುಣಸೂರಿನಲ್ಲಿ ಎಚ್.ವಿಶ್ವನಾಥ್‌ರನ್ನು ಗೆಲ್ಲಿಸಿಕೊಂಡು ಬಂದಿದ್ದ ಜೆಡಿಎಸ್ ಈಗ ಕಾಂಗ್ರೆಸ್‌ಗೆ ಗೆಲುವು ಬಿಟ್ಟುಕೊಟ್ಟಂತಿದೆ. ದೇವೇಗೌಡರನ್ನು ಹಾವು, ವಿಷ ಎಂದೆಲ್ಲಾ ಬಯ್ದಿದ್ದ ಬಚ್ಚೇಗೌಡರ ಮಗನಿಗೆ ಹೊಸಕೋಟೆಯಲ್ಲಿ ಬೆಂಬಲ ಸೂಚಿಸಿ ಅಭ್ಯರ್ಥಿಯನ್ನೇ ಹಾಕುವುದಿಲ್ಲ ಎಂದಿರುವುದೂ ಜೆಡಿಎಸ್‍‌ನ ಪರಿಸ್ಥಿತಿ ಬಿಂಬಿಸುತ್ತಿದೆ.

ಈ ಎಲ್ಲಾ ಕಾರಣಗಳಿಂದಾಗಿ ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳ ಪೈಕಿ ಬಿಜೆಪಿ 7, ಕಾಂಗ್ರೆಸ್ 5 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚು ಕಾಣುತ್ತಿದೆ. ಇನ್ನೊಂದು ಕ್ಷೇತ್ರವು ಬಿಜೆಪಿ ಅಥವಾ ಕಾಂಗ್ರೆಸ್‌ಗೆ ಒಲಿಯಬಹುದು, ಬಿಜೆಪಿಗೇ ಸಾಧ್ಯತೆ ಹೆಚ್ಚು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...