Homeಕರ್ನಾಟಕಉಪಚುನಾವಣೆ ಸಮೀಕ್ಷೆ ಬಿಜೆಪಿ-7, ಕಾಂಗ್ರೆಸ್-5, ಜೆಡಿಎಸ್‌-2: ಮೂರು ಪಕ್ಷಗಳದ್ದೂ ದುಸ್ಥಿತಿಯೇ 

ಉಪಚುನಾವಣೆ ಸಮೀಕ್ಷೆ ಬಿಜೆಪಿ-7, ಕಾಂಗ್ರೆಸ್-5, ಜೆಡಿಎಸ್‌-2: ಮೂರು ಪಕ್ಷಗಳದ್ದೂ ದುಸ್ಥಿತಿಯೇ 

- Advertisement -
- Advertisement -

ಉಪಚುನಾವಣೆಯ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅನರ್ಹರಿಗೆ ಸಂಬಂಧಿಸಿದ ಸುಪ್ರೀಂಕೋರ್ಟು ತೀರ್ಪು ಸಹಾ ಬಂದ ಮೇಲೆ ಗೆಲುವು ಸೋಲಿನ ಲೆಕ್ಕಾಚಾರಗಳು ಆರಂಭವಾಗಿವೆ. 12ರಲ್ಲಿ ಗೆಲ್ಲುತ್ತೇವೆ, 15 ಗೆದ್ದರೂ ಆಶ್ಚರ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು ಕೂಗು ಹಾಕುತ್ತಿದ್ದಾರಾದರೂ, ಮೂರೂ ಪಕ್ಷಗಳು ದುಸ್ಥಿತಿಯಲ್ಲೇ ಇವೆ ಎಂಬುದು ಎದ್ದು ಕಾಣುತ್ತಿದೆ. ಮೂರೂ ಪಕ್ಷಗಳ ‘ಒಳಗಿನ’ ಮೂಲಗಳನ್ನು ಮಾತಾಡಿಸಿದಾಗ ಕಂಡುಬಂದಿರುವ ಸಂಗತಿ ಇದಾಗಿದೆ.

ಈಗಾಗಲೇ ಗೆದ್ದು ಬಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಶಾಸಕರನ್ನು ಪಕ್ಷಾಂತರ ಮಾಡಿಸಿದ ಬಿಜೆಪಿ ಪಕ್ಷವು ಅದೇ (ಅನರ್ಹ) ಶಾಸಕರಿಗೇ ಟಿಕೆಟ್ ಕೊಟ್ಟರೂ, ಬಹುಮತಕ್ಕೆ ಅಗತ್ಯವಿರುವ 8 ಸೀಟುಗಳನ್ನು ಗೆಲ್ಲುವ ಸ್ಥಿತಿಯಲ್ಲಿ ಇಲ್ಲ.

ಅಧಿಕಾರದಲ್ಲಿದ್ದು, ಬಲಿಷ್ಠ ಹೈಕಮ್ಯಾಂಡ್ ಹೊಂದಿರುವ, ವಿರೋಧ ಪಕ್ಷಗಳ ಘಟಾನುಘಟಿ ನಾಯಕರನ್ನೂ ಹೆದರಿಸಿಟ್ಟುಕೊಂಡಿರುವ ಬಿಜೆಪಿಯಲ್ಲೂ ಭಿನ್ನಮತ ಇದೆ. ಹೊಸಕೋಟೆಯಲ್ಲಿ ಈಗಾಗಲೇ ಹಾಲಿ ಬಿಜೆಪಿ ಸಂಸದ ಬಚ್ಚೇಗೌಡರ ಮಗ ಮತ್ತು ಬಿಜೆಪಿಯ ಪರಾಜಿತ ಅಭ್ಯರ್ಥಿ ಶರತ್ ಪಕ್ಷೇತರರಾಗಿ ನಿಲ್ಲುವುದಾಗಿ ಘೋಷಿಸಿಯಾಗಿದೆ.

ಅಥಣಿಯಲ್ಲಿ ಪರಾಜಿತ ಅಭ್ಯರ್ಥಿ ಲಕ್ಷ್ಮಣ ಸವದಿಯೇ ಈಗ ಉಪಮುಖ್ಯಮಂತ್ರಿ. ಅವರನ್ನೇ ಈ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ಎಂದು ಘೋಷಿಸಲಾಗಿದೆ. ಆದರೆ ಅಭ್ಯರ್ಥಿ ಯಾರೆಂದು ಹೇಳಿಲ್ಲ. ಮಹೇಶ್ ಕುಮಟಳ್ಳಿಯವರನ್ನು ತಾವೇ ನಿಂತು ಗೆಲ್ಲಿಸುತ್ತಾರೋ ಸೋಲಿಸುತ್ತಾರೋ ನೋಡಬೇಕು. ಉಳಿದಂತೆ ಭಿನ್ನಮತವನ್ನು ಮೇಲ್ನೋಟಕ್ಕೆ ಬಿಜೆಪಿಯು ಹತ್ತಿಕ್ಕಿದಂತೆ ತೋರುತ್ತದಾದರೂ, ಮತದಾನ ಹೇಗೆ ನಡೆಯುತ್ತದೆಂಬುದು ಗೊತ್ತಾಗಲು ಫಲಿತಾಂಶದ ದಿನದವರೆಗೂ ಕಾಯಬೇಕು. ಹೀಗಾಗಿಯೇ ಬಿಜೆಪಿಯು 7ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಭರವಸೆ ಹೊಂದಿಲ್ಲ.

ಇದನ್ನೂ ಓದಿ: ಬಿಜೆಪಿ ಕೋರ್ ಕಮಿಟಿಯ ಅಂದಾಜು ಎಷ್ಟು?

ಇನ್ನು ಕಾಂಗ್ರೆಸ್ನ ದುಸ್ಥಿತಿ ಕಡಿಮೆ ಏನಿಲ್ಲ. ಯಶವಂತಪುರ ಕ್ಷೇತ್ರದಲ್ಲಿ ಇನ್ನೂ ಅಭ್ಯರ್ಥಿ ಹುಡುಕಲು ಸಾಧ್ಯವಾಗಿಲ್ಲ. ಹೊಸಕೋಟೆಯಲ್ಲಿ ಎಂಟಿಬಿ ಸೋಲುವಂತಾಗಲು ಸ್ವತಂತ್ರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲ್ಲಬೇಕು. ಹಾಗಾಗಿ ಭೈರತಿ ಸುರೇಶ್ ಪತ್ನಿಯನ್ನು ಕಣಕ್ಕಿಳಿಸಲಾಗುತ್ತಿದೆ. ಯಶವಂತಪುರ ಕ್ಷೇತ್ರದಲ್ಲಿ ಇದುವರೆಗೆ ಅಭ್ಯರ್ಥಿಯನ್ನು ಹುಡುಕಿಕೊಳ್ಳುವುದೇ ಸಾಧ್ಯವಾಗಿಲ್ಲ. ಅಲ್ಲಿ ಜವರಾಯಿಗೌಡರನ್ನು ಕಾಂಗ್ರೆಸ್‍‌ಗೆ ತರುವ ಪ್ರಯತ್ನ ಸಫಲವಾಗದೇ, ಈಗ ಜೆಡಿಎಸ್‌ನ ಜವರಾಯಿಗೌಡರನ್ನು ಗೆಲ್ಲಿಸುವಂತಹ ಕ್ಯಾಂಡಿಡೇಟ್ ಹಾಕುವುದಷ್ಟೇ ಕಾಂಗ್ರೆಸ್‌ಗೆ ಸಾಧ್ಯ.

ಇನ್ನು ಚಿಕ್ಕಬಳ್ಳಾಪುರದಲ್ಲಿ ಘೋಷಣೆ ಮಾಡಲಾಗಿದ್ದ ಅಭ್ಯರ್ಥಿ ಅಂಜನಪ್ಪ ಹಿಂದೆ ಸರಿದಾಗಿದೆ. ಈ ಸದ್ಯ ಅವರನ್ನೇ ಮನವೊಲಿಸುವ ಕೆಲಸ ಸಾಗಿದೆ. ಆ ಲೆಕ್ಕದಲ್ಲಿ ಸುಧಾಕರ್‌ಗೆ ನಿರಾತಂಕ ಗೆಲುವಿಗೆ ದಾರಿ ಮಾಡಿಕೊಡಲಾಗಿದೆ. ಗೋಕಾಕ್‍‌ನಲ್ಲೂ ಕ್ಯಾಂಡಿಡೇಟ್ ಅಂತಿಮವಾಗಿಲ್ಲ. ಪಕ್ಷಾಂತರದಿಂದ ತೊಂದರೆ ಅನುಭವಿಸಿದ್ದರೂ, ಕಾಗವಾಡ ಮತ್ತು ಗೋಕಾಕ್‌ನಲ್ಲಿ ಬಿಜೆಪಿಯಿಂದ ಬರುವ ಅಭ್ಯರ್ಥಿಗೆ ಕಾಯುತ್ತಿರುವ ಹೀನಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ಇನ್ನೂ ಕೆಲವು ಕ್ಷೇತ್ರಗಳಲ್ಲೂ ಹೀಗೆಯೇ ಆಗಬಹುದು.

ಜೆಡಿಎಸ್‍ ಮಿಕ್ಕೆಲ್ಲರಿಗಿಂತಲೂ ಕೆಟ್ಟ ಸ್ಥಿತಿಯಲ್ಲಿದೆ. ಉಪಚುನಾವಣೆಯ ಫಲಿತಾಂಶ ನೆಗೆಟಿವ್ ಆದರೆ ಬಿಜೆಪಿಗೆ ತಾನೇ ಬೆಂಬಲ ಕೊಡುವುದಾಗಿ ಗೌಡರು ಮತ್ತು ಮಗ ಘೋಷಿಸಿಯಾಗಿದೆ. ತನ್ನ ಸರ್ಕಾರವನ್ನು ಇಳಿಸಿದ ಪಕ್ಷಕ್ಕೆ ಇಷ್ಟು ಬೇಗ ಬೆಂಬಲ ನೀಡಲು ನಿಂತಿದೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿ ಆ ಕಡೆಗೆ ಗೋಪಾಲಯ್ಯ ಹೋಗಿದ್ದಷ್ಟೇ ಅಲ್ಲ; ಬಹಳ ಕಾಲದಿಂದ ಜೆಡಿಎಸ್‍‌ ದುಡಿಯುತ್ತಾ ಬಂದಿದ್ದ ಆರ್.ವಿ.ಹರೀಶ್‍ ಸಹಾ ಪಕ್ಷಕ್ಕೆ ಮೊನ್ನೆಯಷ್ಟೇ ರಾಜೀನಾಮೆ ಕೊಟ್ಟಿದ್ದಾರೆ. ಏಕೆಂದರೆ ಅಲ್ಲಿ ಇನ್ಯಾರೋ ವಲಸೆ ಹಕ್ಕಿಯನ್ನು ಅಪ್ಪ ಮಕ್ಕಳು ಹಿಡಿದುಕೊಂಡು ಬರಲಿದ್ದಾರೆ ಎಂಬ ತನ್ನ ಭಾವನೆಯನ್ನೂ ಅವರು ಮುಚ್ಚಿಟ್ಟಿಲ್ಲ.

ಹುಣಸೂರಿನಲ್ಲಿ ಎಚ್.ವಿಶ್ವನಾಥ್‌ರನ್ನು ಗೆಲ್ಲಿಸಿಕೊಂಡು ಬಂದಿದ್ದ ಜೆಡಿಎಸ್ ಈಗ ಕಾಂಗ್ರೆಸ್‌ಗೆ ಗೆಲುವು ಬಿಟ್ಟುಕೊಟ್ಟಂತಿದೆ. ದೇವೇಗೌಡರನ್ನು ಹಾವು, ವಿಷ ಎಂದೆಲ್ಲಾ ಬಯ್ದಿದ್ದ ಬಚ್ಚೇಗೌಡರ ಮಗನಿಗೆ ಹೊಸಕೋಟೆಯಲ್ಲಿ ಬೆಂಬಲ ಸೂಚಿಸಿ ಅಭ್ಯರ್ಥಿಯನ್ನೇ ಹಾಕುವುದಿಲ್ಲ ಎಂದಿರುವುದೂ ಜೆಡಿಎಸ್‍‌ನ ಪರಿಸ್ಥಿತಿ ಬಿಂಬಿಸುತ್ತಿದೆ.

ಈ ಎಲ್ಲಾ ಕಾರಣಗಳಿಂದಾಗಿ ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳ ಪೈಕಿ ಬಿಜೆಪಿ 7, ಕಾಂಗ್ರೆಸ್ 5 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚು ಕಾಣುತ್ತಿದೆ. ಇನ್ನೊಂದು ಕ್ಷೇತ್ರವು ಬಿಜೆಪಿ ಅಥವಾ ಕಾಂಗ್ರೆಸ್‌ಗೆ ಒಲಿಯಬಹುದು, ಬಿಜೆಪಿಗೇ ಸಾಧ್ಯತೆ ಹೆಚ್ಚು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...