Homeಕರ್ನಾಟಕಉಪಚುನಾವಣೆ ಸಮೀಕ್ಷೆ ಬಿಜೆಪಿ-7, ಕಾಂಗ್ರೆಸ್-5, ಜೆಡಿಎಸ್‌-2: ಮೂರು ಪಕ್ಷಗಳದ್ದೂ ದುಸ್ಥಿತಿಯೇ 

ಉಪಚುನಾವಣೆ ಸಮೀಕ್ಷೆ ಬಿಜೆಪಿ-7, ಕಾಂಗ್ರೆಸ್-5, ಜೆಡಿಎಸ್‌-2: ಮೂರು ಪಕ್ಷಗಳದ್ದೂ ದುಸ್ಥಿತಿಯೇ 

- Advertisement -
- Advertisement -

ಉಪಚುನಾವಣೆಯ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅನರ್ಹರಿಗೆ ಸಂಬಂಧಿಸಿದ ಸುಪ್ರೀಂಕೋರ್ಟು ತೀರ್ಪು ಸಹಾ ಬಂದ ಮೇಲೆ ಗೆಲುವು ಸೋಲಿನ ಲೆಕ್ಕಾಚಾರಗಳು ಆರಂಭವಾಗಿವೆ. 12ರಲ್ಲಿ ಗೆಲ್ಲುತ್ತೇವೆ, 15 ಗೆದ್ದರೂ ಆಶ್ಚರ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು ಕೂಗು ಹಾಕುತ್ತಿದ್ದಾರಾದರೂ, ಮೂರೂ ಪಕ್ಷಗಳು ದುಸ್ಥಿತಿಯಲ್ಲೇ ಇವೆ ಎಂಬುದು ಎದ್ದು ಕಾಣುತ್ತಿದೆ. ಮೂರೂ ಪಕ್ಷಗಳ ‘ಒಳಗಿನ’ ಮೂಲಗಳನ್ನು ಮಾತಾಡಿಸಿದಾಗ ಕಂಡುಬಂದಿರುವ ಸಂಗತಿ ಇದಾಗಿದೆ.

ಈಗಾಗಲೇ ಗೆದ್ದು ಬಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಶಾಸಕರನ್ನು ಪಕ್ಷಾಂತರ ಮಾಡಿಸಿದ ಬಿಜೆಪಿ ಪಕ್ಷವು ಅದೇ (ಅನರ್ಹ) ಶಾಸಕರಿಗೇ ಟಿಕೆಟ್ ಕೊಟ್ಟರೂ, ಬಹುಮತಕ್ಕೆ ಅಗತ್ಯವಿರುವ 8 ಸೀಟುಗಳನ್ನು ಗೆಲ್ಲುವ ಸ್ಥಿತಿಯಲ್ಲಿ ಇಲ್ಲ.

ಅಧಿಕಾರದಲ್ಲಿದ್ದು, ಬಲಿಷ್ಠ ಹೈಕಮ್ಯಾಂಡ್ ಹೊಂದಿರುವ, ವಿರೋಧ ಪಕ್ಷಗಳ ಘಟಾನುಘಟಿ ನಾಯಕರನ್ನೂ ಹೆದರಿಸಿಟ್ಟುಕೊಂಡಿರುವ ಬಿಜೆಪಿಯಲ್ಲೂ ಭಿನ್ನಮತ ಇದೆ. ಹೊಸಕೋಟೆಯಲ್ಲಿ ಈಗಾಗಲೇ ಹಾಲಿ ಬಿಜೆಪಿ ಸಂಸದ ಬಚ್ಚೇಗೌಡರ ಮಗ ಮತ್ತು ಬಿಜೆಪಿಯ ಪರಾಜಿತ ಅಭ್ಯರ್ಥಿ ಶರತ್ ಪಕ್ಷೇತರರಾಗಿ ನಿಲ್ಲುವುದಾಗಿ ಘೋಷಿಸಿಯಾಗಿದೆ.

ಅಥಣಿಯಲ್ಲಿ ಪರಾಜಿತ ಅಭ್ಯರ್ಥಿ ಲಕ್ಷ್ಮಣ ಸವದಿಯೇ ಈಗ ಉಪಮುಖ್ಯಮಂತ್ರಿ. ಅವರನ್ನೇ ಈ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ಎಂದು ಘೋಷಿಸಲಾಗಿದೆ. ಆದರೆ ಅಭ್ಯರ್ಥಿ ಯಾರೆಂದು ಹೇಳಿಲ್ಲ. ಮಹೇಶ್ ಕುಮಟಳ್ಳಿಯವರನ್ನು ತಾವೇ ನಿಂತು ಗೆಲ್ಲಿಸುತ್ತಾರೋ ಸೋಲಿಸುತ್ತಾರೋ ನೋಡಬೇಕು. ಉಳಿದಂತೆ ಭಿನ್ನಮತವನ್ನು ಮೇಲ್ನೋಟಕ್ಕೆ ಬಿಜೆಪಿಯು ಹತ್ತಿಕ್ಕಿದಂತೆ ತೋರುತ್ತದಾದರೂ, ಮತದಾನ ಹೇಗೆ ನಡೆಯುತ್ತದೆಂಬುದು ಗೊತ್ತಾಗಲು ಫಲಿತಾಂಶದ ದಿನದವರೆಗೂ ಕಾಯಬೇಕು. ಹೀಗಾಗಿಯೇ ಬಿಜೆಪಿಯು 7ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಭರವಸೆ ಹೊಂದಿಲ್ಲ.

ಇದನ್ನೂ ಓದಿ: ಬಿಜೆಪಿ ಕೋರ್ ಕಮಿಟಿಯ ಅಂದಾಜು ಎಷ್ಟು?

ಇನ್ನು ಕಾಂಗ್ರೆಸ್ನ ದುಸ್ಥಿತಿ ಕಡಿಮೆ ಏನಿಲ್ಲ. ಯಶವಂತಪುರ ಕ್ಷೇತ್ರದಲ್ಲಿ ಇನ್ನೂ ಅಭ್ಯರ್ಥಿ ಹುಡುಕಲು ಸಾಧ್ಯವಾಗಿಲ್ಲ. ಹೊಸಕೋಟೆಯಲ್ಲಿ ಎಂಟಿಬಿ ಸೋಲುವಂತಾಗಲು ಸ್ವತಂತ್ರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲ್ಲಬೇಕು. ಹಾಗಾಗಿ ಭೈರತಿ ಸುರೇಶ್ ಪತ್ನಿಯನ್ನು ಕಣಕ್ಕಿಳಿಸಲಾಗುತ್ತಿದೆ. ಯಶವಂತಪುರ ಕ್ಷೇತ್ರದಲ್ಲಿ ಇದುವರೆಗೆ ಅಭ್ಯರ್ಥಿಯನ್ನು ಹುಡುಕಿಕೊಳ್ಳುವುದೇ ಸಾಧ್ಯವಾಗಿಲ್ಲ. ಅಲ್ಲಿ ಜವರಾಯಿಗೌಡರನ್ನು ಕಾಂಗ್ರೆಸ್‍‌ಗೆ ತರುವ ಪ್ರಯತ್ನ ಸಫಲವಾಗದೇ, ಈಗ ಜೆಡಿಎಸ್‌ನ ಜವರಾಯಿಗೌಡರನ್ನು ಗೆಲ್ಲಿಸುವಂತಹ ಕ್ಯಾಂಡಿಡೇಟ್ ಹಾಕುವುದಷ್ಟೇ ಕಾಂಗ್ರೆಸ್‌ಗೆ ಸಾಧ್ಯ.

ಇನ್ನು ಚಿಕ್ಕಬಳ್ಳಾಪುರದಲ್ಲಿ ಘೋಷಣೆ ಮಾಡಲಾಗಿದ್ದ ಅಭ್ಯರ್ಥಿ ಅಂಜನಪ್ಪ ಹಿಂದೆ ಸರಿದಾಗಿದೆ. ಈ ಸದ್ಯ ಅವರನ್ನೇ ಮನವೊಲಿಸುವ ಕೆಲಸ ಸಾಗಿದೆ. ಆ ಲೆಕ್ಕದಲ್ಲಿ ಸುಧಾಕರ್‌ಗೆ ನಿರಾತಂಕ ಗೆಲುವಿಗೆ ದಾರಿ ಮಾಡಿಕೊಡಲಾಗಿದೆ. ಗೋಕಾಕ್‍‌ನಲ್ಲೂ ಕ್ಯಾಂಡಿಡೇಟ್ ಅಂತಿಮವಾಗಿಲ್ಲ. ಪಕ್ಷಾಂತರದಿಂದ ತೊಂದರೆ ಅನುಭವಿಸಿದ್ದರೂ, ಕಾಗವಾಡ ಮತ್ತು ಗೋಕಾಕ್‌ನಲ್ಲಿ ಬಿಜೆಪಿಯಿಂದ ಬರುವ ಅಭ್ಯರ್ಥಿಗೆ ಕಾಯುತ್ತಿರುವ ಹೀನಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ಇನ್ನೂ ಕೆಲವು ಕ್ಷೇತ್ರಗಳಲ್ಲೂ ಹೀಗೆಯೇ ಆಗಬಹುದು.

ಜೆಡಿಎಸ್‍ ಮಿಕ್ಕೆಲ್ಲರಿಗಿಂತಲೂ ಕೆಟ್ಟ ಸ್ಥಿತಿಯಲ್ಲಿದೆ. ಉಪಚುನಾವಣೆಯ ಫಲಿತಾಂಶ ನೆಗೆಟಿವ್ ಆದರೆ ಬಿಜೆಪಿಗೆ ತಾನೇ ಬೆಂಬಲ ಕೊಡುವುದಾಗಿ ಗೌಡರು ಮತ್ತು ಮಗ ಘೋಷಿಸಿಯಾಗಿದೆ. ತನ್ನ ಸರ್ಕಾರವನ್ನು ಇಳಿಸಿದ ಪಕ್ಷಕ್ಕೆ ಇಷ್ಟು ಬೇಗ ಬೆಂಬಲ ನೀಡಲು ನಿಂತಿದೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿ ಆ ಕಡೆಗೆ ಗೋಪಾಲಯ್ಯ ಹೋಗಿದ್ದಷ್ಟೇ ಅಲ್ಲ; ಬಹಳ ಕಾಲದಿಂದ ಜೆಡಿಎಸ್‍‌ ದುಡಿಯುತ್ತಾ ಬಂದಿದ್ದ ಆರ್.ವಿ.ಹರೀಶ್‍ ಸಹಾ ಪಕ್ಷಕ್ಕೆ ಮೊನ್ನೆಯಷ್ಟೇ ರಾಜೀನಾಮೆ ಕೊಟ್ಟಿದ್ದಾರೆ. ಏಕೆಂದರೆ ಅಲ್ಲಿ ಇನ್ಯಾರೋ ವಲಸೆ ಹಕ್ಕಿಯನ್ನು ಅಪ್ಪ ಮಕ್ಕಳು ಹಿಡಿದುಕೊಂಡು ಬರಲಿದ್ದಾರೆ ಎಂಬ ತನ್ನ ಭಾವನೆಯನ್ನೂ ಅವರು ಮುಚ್ಚಿಟ್ಟಿಲ್ಲ.

ಹುಣಸೂರಿನಲ್ಲಿ ಎಚ್.ವಿಶ್ವನಾಥ್‌ರನ್ನು ಗೆಲ್ಲಿಸಿಕೊಂಡು ಬಂದಿದ್ದ ಜೆಡಿಎಸ್ ಈಗ ಕಾಂಗ್ರೆಸ್‌ಗೆ ಗೆಲುವು ಬಿಟ್ಟುಕೊಟ್ಟಂತಿದೆ. ದೇವೇಗೌಡರನ್ನು ಹಾವು, ವಿಷ ಎಂದೆಲ್ಲಾ ಬಯ್ದಿದ್ದ ಬಚ್ಚೇಗೌಡರ ಮಗನಿಗೆ ಹೊಸಕೋಟೆಯಲ್ಲಿ ಬೆಂಬಲ ಸೂಚಿಸಿ ಅಭ್ಯರ್ಥಿಯನ್ನೇ ಹಾಕುವುದಿಲ್ಲ ಎಂದಿರುವುದೂ ಜೆಡಿಎಸ್‍‌ನ ಪರಿಸ್ಥಿತಿ ಬಿಂಬಿಸುತ್ತಿದೆ.

ಈ ಎಲ್ಲಾ ಕಾರಣಗಳಿಂದಾಗಿ ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳ ಪೈಕಿ ಬಿಜೆಪಿ 7, ಕಾಂಗ್ರೆಸ್ 5 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚು ಕಾಣುತ್ತಿದೆ. ಇನ್ನೊಂದು ಕ್ಷೇತ್ರವು ಬಿಜೆಪಿ ಅಥವಾ ಕಾಂಗ್ರೆಸ್‌ಗೆ ಒಲಿಯಬಹುದು, ಬಿಜೆಪಿಗೇ ಸಾಧ್ಯತೆ ಹೆಚ್ಚು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...