Homeಕರ್ನಾಟಕಉಪಚುನಾವಣೆ ಸಮೀಕ್ಷೆ ಬಿಜೆಪಿ-7, ಕಾಂಗ್ರೆಸ್-5, ಜೆಡಿಎಸ್‌-2: ಮೂರು ಪಕ್ಷಗಳದ್ದೂ ದುಸ್ಥಿತಿಯೇ 

ಉಪಚುನಾವಣೆ ಸಮೀಕ್ಷೆ ಬಿಜೆಪಿ-7, ಕಾಂಗ್ರೆಸ್-5, ಜೆಡಿಎಸ್‌-2: ಮೂರು ಪಕ್ಷಗಳದ್ದೂ ದುಸ್ಥಿತಿಯೇ 

- Advertisement -
- Advertisement -

ಉಪಚುನಾವಣೆಯ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅನರ್ಹರಿಗೆ ಸಂಬಂಧಿಸಿದ ಸುಪ್ರೀಂಕೋರ್ಟು ತೀರ್ಪು ಸಹಾ ಬಂದ ಮೇಲೆ ಗೆಲುವು ಸೋಲಿನ ಲೆಕ್ಕಾಚಾರಗಳು ಆರಂಭವಾಗಿವೆ. 12ರಲ್ಲಿ ಗೆಲ್ಲುತ್ತೇವೆ, 15 ಗೆದ್ದರೂ ಆಶ್ಚರ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು ಕೂಗು ಹಾಕುತ್ತಿದ್ದಾರಾದರೂ, ಮೂರೂ ಪಕ್ಷಗಳು ದುಸ್ಥಿತಿಯಲ್ಲೇ ಇವೆ ಎಂಬುದು ಎದ್ದು ಕಾಣುತ್ತಿದೆ. ಮೂರೂ ಪಕ್ಷಗಳ ‘ಒಳಗಿನ’ ಮೂಲಗಳನ್ನು ಮಾತಾಡಿಸಿದಾಗ ಕಂಡುಬಂದಿರುವ ಸಂಗತಿ ಇದಾಗಿದೆ.

ಈಗಾಗಲೇ ಗೆದ್ದು ಬಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಶಾಸಕರನ್ನು ಪಕ್ಷಾಂತರ ಮಾಡಿಸಿದ ಬಿಜೆಪಿ ಪಕ್ಷವು ಅದೇ (ಅನರ್ಹ) ಶಾಸಕರಿಗೇ ಟಿಕೆಟ್ ಕೊಟ್ಟರೂ, ಬಹುಮತಕ್ಕೆ ಅಗತ್ಯವಿರುವ 8 ಸೀಟುಗಳನ್ನು ಗೆಲ್ಲುವ ಸ್ಥಿತಿಯಲ್ಲಿ ಇಲ್ಲ.

ಅಧಿಕಾರದಲ್ಲಿದ್ದು, ಬಲಿಷ್ಠ ಹೈಕಮ್ಯಾಂಡ್ ಹೊಂದಿರುವ, ವಿರೋಧ ಪಕ್ಷಗಳ ಘಟಾನುಘಟಿ ನಾಯಕರನ್ನೂ ಹೆದರಿಸಿಟ್ಟುಕೊಂಡಿರುವ ಬಿಜೆಪಿಯಲ್ಲೂ ಭಿನ್ನಮತ ಇದೆ. ಹೊಸಕೋಟೆಯಲ್ಲಿ ಈಗಾಗಲೇ ಹಾಲಿ ಬಿಜೆಪಿ ಸಂಸದ ಬಚ್ಚೇಗೌಡರ ಮಗ ಮತ್ತು ಬಿಜೆಪಿಯ ಪರಾಜಿತ ಅಭ್ಯರ್ಥಿ ಶರತ್ ಪಕ್ಷೇತರರಾಗಿ ನಿಲ್ಲುವುದಾಗಿ ಘೋಷಿಸಿಯಾಗಿದೆ.

ಅಥಣಿಯಲ್ಲಿ ಪರಾಜಿತ ಅಭ್ಯರ್ಥಿ ಲಕ್ಷ್ಮಣ ಸವದಿಯೇ ಈಗ ಉಪಮುಖ್ಯಮಂತ್ರಿ. ಅವರನ್ನೇ ಈ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ಎಂದು ಘೋಷಿಸಲಾಗಿದೆ. ಆದರೆ ಅಭ್ಯರ್ಥಿ ಯಾರೆಂದು ಹೇಳಿಲ್ಲ. ಮಹೇಶ್ ಕುಮಟಳ್ಳಿಯವರನ್ನು ತಾವೇ ನಿಂತು ಗೆಲ್ಲಿಸುತ್ತಾರೋ ಸೋಲಿಸುತ್ತಾರೋ ನೋಡಬೇಕು. ಉಳಿದಂತೆ ಭಿನ್ನಮತವನ್ನು ಮೇಲ್ನೋಟಕ್ಕೆ ಬಿಜೆಪಿಯು ಹತ್ತಿಕ್ಕಿದಂತೆ ತೋರುತ್ತದಾದರೂ, ಮತದಾನ ಹೇಗೆ ನಡೆಯುತ್ತದೆಂಬುದು ಗೊತ್ತಾಗಲು ಫಲಿತಾಂಶದ ದಿನದವರೆಗೂ ಕಾಯಬೇಕು. ಹೀಗಾಗಿಯೇ ಬಿಜೆಪಿಯು 7ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಭರವಸೆ ಹೊಂದಿಲ್ಲ.

ಇದನ್ನೂ ಓದಿ: ಬಿಜೆಪಿ ಕೋರ್ ಕಮಿಟಿಯ ಅಂದಾಜು ಎಷ್ಟು?

ಇನ್ನು ಕಾಂಗ್ರೆಸ್ನ ದುಸ್ಥಿತಿ ಕಡಿಮೆ ಏನಿಲ್ಲ. ಯಶವಂತಪುರ ಕ್ಷೇತ್ರದಲ್ಲಿ ಇನ್ನೂ ಅಭ್ಯರ್ಥಿ ಹುಡುಕಲು ಸಾಧ್ಯವಾಗಿಲ್ಲ. ಹೊಸಕೋಟೆಯಲ್ಲಿ ಎಂಟಿಬಿ ಸೋಲುವಂತಾಗಲು ಸ್ವತಂತ್ರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲ್ಲಬೇಕು. ಹಾಗಾಗಿ ಭೈರತಿ ಸುರೇಶ್ ಪತ್ನಿಯನ್ನು ಕಣಕ್ಕಿಳಿಸಲಾಗುತ್ತಿದೆ. ಯಶವಂತಪುರ ಕ್ಷೇತ್ರದಲ್ಲಿ ಇದುವರೆಗೆ ಅಭ್ಯರ್ಥಿಯನ್ನು ಹುಡುಕಿಕೊಳ್ಳುವುದೇ ಸಾಧ್ಯವಾಗಿಲ್ಲ. ಅಲ್ಲಿ ಜವರಾಯಿಗೌಡರನ್ನು ಕಾಂಗ್ರೆಸ್‍‌ಗೆ ತರುವ ಪ್ರಯತ್ನ ಸಫಲವಾಗದೇ, ಈಗ ಜೆಡಿಎಸ್‌ನ ಜವರಾಯಿಗೌಡರನ್ನು ಗೆಲ್ಲಿಸುವಂತಹ ಕ್ಯಾಂಡಿಡೇಟ್ ಹಾಕುವುದಷ್ಟೇ ಕಾಂಗ್ರೆಸ್‌ಗೆ ಸಾಧ್ಯ.

ಇನ್ನು ಚಿಕ್ಕಬಳ್ಳಾಪುರದಲ್ಲಿ ಘೋಷಣೆ ಮಾಡಲಾಗಿದ್ದ ಅಭ್ಯರ್ಥಿ ಅಂಜನಪ್ಪ ಹಿಂದೆ ಸರಿದಾಗಿದೆ. ಈ ಸದ್ಯ ಅವರನ್ನೇ ಮನವೊಲಿಸುವ ಕೆಲಸ ಸಾಗಿದೆ. ಆ ಲೆಕ್ಕದಲ್ಲಿ ಸುಧಾಕರ್‌ಗೆ ನಿರಾತಂಕ ಗೆಲುವಿಗೆ ದಾರಿ ಮಾಡಿಕೊಡಲಾಗಿದೆ. ಗೋಕಾಕ್‍‌ನಲ್ಲೂ ಕ್ಯಾಂಡಿಡೇಟ್ ಅಂತಿಮವಾಗಿಲ್ಲ. ಪಕ್ಷಾಂತರದಿಂದ ತೊಂದರೆ ಅನುಭವಿಸಿದ್ದರೂ, ಕಾಗವಾಡ ಮತ್ತು ಗೋಕಾಕ್‌ನಲ್ಲಿ ಬಿಜೆಪಿಯಿಂದ ಬರುವ ಅಭ್ಯರ್ಥಿಗೆ ಕಾಯುತ್ತಿರುವ ಹೀನಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ಇನ್ನೂ ಕೆಲವು ಕ್ಷೇತ್ರಗಳಲ್ಲೂ ಹೀಗೆಯೇ ಆಗಬಹುದು.

ಜೆಡಿಎಸ್‍ ಮಿಕ್ಕೆಲ್ಲರಿಗಿಂತಲೂ ಕೆಟ್ಟ ಸ್ಥಿತಿಯಲ್ಲಿದೆ. ಉಪಚುನಾವಣೆಯ ಫಲಿತಾಂಶ ನೆಗೆಟಿವ್ ಆದರೆ ಬಿಜೆಪಿಗೆ ತಾನೇ ಬೆಂಬಲ ಕೊಡುವುದಾಗಿ ಗೌಡರು ಮತ್ತು ಮಗ ಘೋಷಿಸಿಯಾಗಿದೆ. ತನ್ನ ಸರ್ಕಾರವನ್ನು ಇಳಿಸಿದ ಪಕ್ಷಕ್ಕೆ ಇಷ್ಟು ಬೇಗ ಬೆಂಬಲ ನೀಡಲು ನಿಂತಿದೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿ ಆ ಕಡೆಗೆ ಗೋಪಾಲಯ್ಯ ಹೋಗಿದ್ದಷ್ಟೇ ಅಲ್ಲ; ಬಹಳ ಕಾಲದಿಂದ ಜೆಡಿಎಸ್‍‌ ದುಡಿಯುತ್ತಾ ಬಂದಿದ್ದ ಆರ್.ವಿ.ಹರೀಶ್‍ ಸಹಾ ಪಕ್ಷಕ್ಕೆ ಮೊನ್ನೆಯಷ್ಟೇ ರಾಜೀನಾಮೆ ಕೊಟ್ಟಿದ್ದಾರೆ. ಏಕೆಂದರೆ ಅಲ್ಲಿ ಇನ್ಯಾರೋ ವಲಸೆ ಹಕ್ಕಿಯನ್ನು ಅಪ್ಪ ಮಕ್ಕಳು ಹಿಡಿದುಕೊಂಡು ಬರಲಿದ್ದಾರೆ ಎಂಬ ತನ್ನ ಭಾವನೆಯನ್ನೂ ಅವರು ಮುಚ್ಚಿಟ್ಟಿಲ್ಲ.

ಹುಣಸೂರಿನಲ್ಲಿ ಎಚ್.ವಿಶ್ವನಾಥ್‌ರನ್ನು ಗೆಲ್ಲಿಸಿಕೊಂಡು ಬಂದಿದ್ದ ಜೆಡಿಎಸ್ ಈಗ ಕಾಂಗ್ರೆಸ್‌ಗೆ ಗೆಲುವು ಬಿಟ್ಟುಕೊಟ್ಟಂತಿದೆ. ದೇವೇಗೌಡರನ್ನು ಹಾವು, ವಿಷ ಎಂದೆಲ್ಲಾ ಬಯ್ದಿದ್ದ ಬಚ್ಚೇಗೌಡರ ಮಗನಿಗೆ ಹೊಸಕೋಟೆಯಲ್ಲಿ ಬೆಂಬಲ ಸೂಚಿಸಿ ಅಭ್ಯರ್ಥಿಯನ್ನೇ ಹಾಕುವುದಿಲ್ಲ ಎಂದಿರುವುದೂ ಜೆಡಿಎಸ್‍‌ನ ಪರಿಸ್ಥಿತಿ ಬಿಂಬಿಸುತ್ತಿದೆ.

ಈ ಎಲ್ಲಾ ಕಾರಣಗಳಿಂದಾಗಿ ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳ ಪೈಕಿ ಬಿಜೆಪಿ 7, ಕಾಂಗ್ರೆಸ್ 5 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚು ಕಾಣುತ್ತಿದೆ. ಇನ್ನೊಂದು ಕ್ಷೇತ್ರವು ಬಿಜೆಪಿ ಅಥವಾ ಕಾಂಗ್ರೆಸ್‌ಗೆ ಒಲಿಯಬಹುದು, ಬಿಜೆಪಿಗೇ ಸಾಧ್ಯತೆ ಹೆಚ್ಚು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...