Homeಕರ್ನಾಟಕಉಪಚುನಾವಣೆ ಸಮೀಕ್ಷೆ ಬಿಜೆಪಿ-7, ಕಾಂಗ್ರೆಸ್-5, ಜೆಡಿಎಸ್‌-2: ಮೂರು ಪಕ್ಷಗಳದ್ದೂ ದುಸ್ಥಿತಿಯೇ 

ಉಪಚುನಾವಣೆ ಸಮೀಕ್ಷೆ ಬಿಜೆಪಿ-7, ಕಾಂಗ್ರೆಸ್-5, ಜೆಡಿಎಸ್‌-2: ಮೂರು ಪಕ್ಷಗಳದ್ದೂ ದುಸ್ಥಿತಿಯೇ 

- Advertisement -
- Advertisement -

ಉಪಚುನಾವಣೆಯ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಅನರ್ಹರಿಗೆ ಸಂಬಂಧಿಸಿದ ಸುಪ್ರೀಂಕೋರ್ಟು ತೀರ್ಪು ಸಹಾ ಬಂದ ಮೇಲೆ ಗೆಲುವು ಸೋಲಿನ ಲೆಕ್ಕಾಚಾರಗಳು ಆರಂಭವಾಗಿವೆ. 12ರಲ್ಲಿ ಗೆಲ್ಲುತ್ತೇವೆ, 15 ಗೆದ್ದರೂ ಆಶ್ಚರ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು ಕೂಗು ಹಾಕುತ್ತಿದ್ದಾರಾದರೂ, ಮೂರೂ ಪಕ್ಷಗಳು ದುಸ್ಥಿತಿಯಲ್ಲೇ ಇವೆ ಎಂಬುದು ಎದ್ದು ಕಾಣುತ್ತಿದೆ. ಮೂರೂ ಪಕ್ಷಗಳ ‘ಒಳಗಿನ’ ಮೂಲಗಳನ್ನು ಮಾತಾಡಿಸಿದಾಗ ಕಂಡುಬಂದಿರುವ ಸಂಗತಿ ಇದಾಗಿದೆ.

ಈಗಾಗಲೇ ಗೆದ್ದು ಬಂದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಶಾಸಕರನ್ನು ಪಕ್ಷಾಂತರ ಮಾಡಿಸಿದ ಬಿಜೆಪಿ ಪಕ್ಷವು ಅದೇ (ಅನರ್ಹ) ಶಾಸಕರಿಗೇ ಟಿಕೆಟ್ ಕೊಟ್ಟರೂ, ಬಹುಮತಕ್ಕೆ ಅಗತ್ಯವಿರುವ 8 ಸೀಟುಗಳನ್ನು ಗೆಲ್ಲುವ ಸ್ಥಿತಿಯಲ್ಲಿ ಇಲ್ಲ.

ಅಧಿಕಾರದಲ್ಲಿದ್ದು, ಬಲಿಷ್ಠ ಹೈಕಮ್ಯಾಂಡ್ ಹೊಂದಿರುವ, ವಿರೋಧ ಪಕ್ಷಗಳ ಘಟಾನುಘಟಿ ನಾಯಕರನ್ನೂ ಹೆದರಿಸಿಟ್ಟುಕೊಂಡಿರುವ ಬಿಜೆಪಿಯಲ್ಲೂ ಭಿನ್ನಮತ ಇದೆ. ಹೊಸಕೋಟೆಯಲ್ಲಿ ಈಗಾಗಲೇ ಹಾಲಿ ಬಿಜೆಪಿ ಸಂಸದ ಬಚ್ಚೇಗೌಡರ ಮಗ ಮತ್ತು ಬಿಜೆಪಿಯ ಪರಾಜಿತ ಅಭ್ಯರ್ಥಿ ಶರತ್ ಪಕ್ಷೇತರರಾಗಿ ನಿಲ್ಲುವುದಾಗಿ ಘೋಷಿಸಿಯಾಗಿದೆ.

ಅಥಣಿಯಲ್ಲಿ ಪರಾಜಿತ ಅಭ್ಯರ್ಥಿ ಲಕ್ಷ್ಮಣ ಸವದಿಯೇ ಈಗ ಉಪಮುಖ್ಯಮಂತ್ರಿ. ಅವರನ್ನೇ ಈ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ಎಂದು ಘೋಷಿಸಲಾಗಿದೆ. ಆದರೆ ಅಭ್ಯರ್ಥಿ ಯಾರೆಂದು ಹೇಳಿಲ್ಲ. ಮಹೇಶ್ ಕುಮಟಳ್ಳಿಯವರನ್ನು ತಾವೇ ನಿಂತು ಗೆಲ್ಲಿಸುತ್ತಾರೋ ಸೋಲಿಸುತ್ತಾರೋ ನೋಡಬೇಕು. ಉಳಿದಂತೆ ಭಿನ್ನಮತವನ್ನು ಮೇಲ್ನೋಟಕ್ಕೆ ಬಿಜೆಪಿಯು ಹತ್ತಿಕ್ಕಿದಂತೆ ತೋರುತ್ತದಾದರೂ, ಮತದಾನ ಹೇಗೆ ನಡೆಯುತ್ತದೆಂಬುದು ಗೊತ್ತಾಗಲು ಫಲಿತಾಂಶದ ದಿನದವರೆಗೂ ಕಾಯಬೇಕು. ಹೀಗಾಗಿಯೇ ಬಿಜೆಪಿಯು 7ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಭರವಸೆ ಹೊಂದಿಲ್ಲ.

ಇದನ್ನೂ ಓದಿ: ಬಿಜೆಪಿ ಕೋರ್ ಕಮಿಟಿಯ ಅಂದಾಜು ಎಷ್ಟು?

ಇನ್ನು ಕಾಂಗ್ರೆಸ್ನ ದುಸ್ಥಿತಿ ಕಡಿಮೆ ಏನಿಲ್ಲ. ಯಶವಂತಪುರ ಕ್ಷೇತ್ರದಲ್ಲಿ ಇನ್ನೂ ಅಭ್ಯರ್ಥಿ ಹುಡುಕಲು ಸಾಧ್ಯವಾಗಿಲ್ಲ. ಹೊಸಕೋಟೆಯಲ್ಲಿ ಎಂಟಿಬಿ ಸೋಲುವಂತಾಗಲು ಸ್ವತಂತ್ರ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲ್ಲಬೇಕು. ಹಾಗಾಗಿ ಭೈರತಿ ಸುರೇಶ್ ಪತ್ನಿಯನ್ನು ಕಣಕ್ಕಿಳಿಸಲಾಗುತ್ತಿದೆ. ಯಶವಂತಪುರ ಕ್ಷೇತ್ರದಲ್ಲಿ ಇದುವರೆಗೆ ಅಭ್ಯರ್ಥಿಯನ್ನು ಹುಡುಕಿಕೊಳ್ಳುವುದೇ ಸಾಧ್ಯವಾಗಿಲ್ಲ. ಅಲ್ಲಿ ಜವರಾಯಿಗೌಡರನ್ನು ಕಾಂಗ್ರೆಸ್‍‌ಗೆ ತರುವ ಪ್ರಯತ್ನ ಸಫಲವಾಗದೇ, ಈಗ ಜೆಡಿಎಸ್‌ನ ಜವರಾಯಿಗೌಡರನ್ನು ಗೆಲ್ಲಿಸುವಂತಹ ಕ್ಯಾಂಡಿಡೇಟ್ ಹಾಕುವುದಷ್ಟೇ ಕಾಂಗ್ರೆಸ್‌ಗೆ ಸಾಧ್ಯ.

ಇನ್ನು ಚಿಕ್ಕಬಳ್ಳಾಪುರದಲ್ಲಿ ಘೋಷಣೆ ಮಾಡಲಾಗಿದ್ದ ಅಭ್ಯರ್ಥಿ ಅಂಜನಪ್ಪ ಹಿಂದೆ ಸರಿದಾಗಿದೆ. ಈ ಸದ್ಯ ಅವರನ್ನೇ ಮನವೊಲಿಸುವ ಕೆಲಸ ಸಾಗಿದೆ. ಆ ಲೆಕ್ಕದಲ್ಲಿ ಸುಧಾಕರ್‌ಗೆ ನಿರಾತಂಕ ಗೆಲುವಿಗೆ ದಾರಿ ಮಾಡಿಕೊಡಲಾಗಿದೆ. ಗೋಕಾಕ್‍‌ನಲ್ಲೂ ಕ್ಯಾಂಡಿಡೇಟ್ ಅಂತಿಮವಾಗಿಲ್ಲ. ಪಕ್ಷಾಂತರದಿಂದ ತೊಂದರೆ ಅನುಭವಿಸಿದ್ದರೂ, ಕಾಗವಾಡ ಮತ್ತು ಗೋಕಾಕ್‌ನಲ್ಲಿ ಬಿಜೆಪಿಯಿಂದ ಬರುವ ಅಭ್ಯರ್ಥಿಗೆ ಕಾಯುತ್ತಿರುವ ಹೀನಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ಇನ್ನೂ ಕೆಲವು ಕ್ಷೇತ್ರಗಳಲ್ಲೂ ಹೀಗೆಯೇ ಆಗಬಹುದು.

ಜೆಡಿಎಸ್‍ ಮಿಕ್ಕೆಲ್ಲರಿಗಿಂತಲೂ ಕೆಟ್ಟ ಸ್ಥಿತಿಯಲ್ಲಿದೆ. ಉಪಚುನಾವಣೆಯ ಫಲಿತಾಂಶ ನೆಗೆಟಿವ್ ಆದರೆ ಬಿಜೆಪಿಗೆ ತಾನೇ ಬೆಂಬಲ ಕೊಡುವುದಾಗಿ ಗೌಡರು ಮತ್ತು ಮಗ ಘೋಷಿಸಿಯಾಗಿದೆ. ತನ್ನ ಸರ್ಕಾರವನ್ನು ಇಳಿಸಿದ ಪಕ್ಷಕ್ಕೆ ಇಷ್ಟು ಬೇಗ ಬೆಂಬಲ ನೀಡಲು ನಿಂತಿದೆ. ಮಹಾಲಕ್ಷ್ಮಿ ಲೇಔಟ್‌ನಲ್ಲಿ ಆ ಕಡೆಗೆ ಗೋಪಾಲಯ್ಯ ಹೋಗಿದ್ದಷ್ಟೇ ಅಲ್ಲ; ಬಹಳ ಕಾಲದಿಂದ ಜೆಡಿಎಸ್‍‌ ದುಡಿಯುತ್ತಾ ಬಂದಿದ್ದ ಆರ್.ವಿ.ಹರೀಶ್‍ ಸಹಾ ಪಕ್ಷಕ್ಕೆ ಮೊನ್ನೆಯಷ್ಟೇ ರಾಜೀನಾಮೆ ಕೊಟ್ಟಿದ್ದಾರೆ. ಏಕೆಂದರೆ ಅಲ್ಲಿ ಇನ್ಯಾರೋ ವಲಸೆ ಹಕ್ಕಿಯನ್ನು ಅಪ್ಪ ಮಕ್ಕಳು ಹಿಡಿದುಕೊಂಡು ಬರಲಿದ್ದಾರೆ ಎಂಬ ತನ್ನ ಭಾವನೆಯನ್ನೂ ಅವರು ಮುಚ್ಚಿಟ್ಟಿಲ್ಲ.

ಹುಣಸೂರಿನಲ್ಲಿ ಎಚ್.ವಿಶ್ವನಾಥ್‌ರನ್ನು ಗೆಲ್ಲಿಸಿಕೊಂಡು ಬಂದಿದ್ದ ಜೆಡಿಎಸ್ ಈಗ ಕಾಂಗ್ರೆಸ್‌ಗೆ ಗೆಲುವು ಬಿಟ್ಟುಕೊಟ್ಟಂತಿದೆ. ದೇವೇಗೌಡರನ್ನು ಹಾವು, ವಿಷ ಎಂದೆಲ್ಲಾ ಬಯ್ದಿದ್ದ ಬಚ್ಚೇಗೌಡರ ಮಗನಿಗೆ ಹೊಸಕೋಟೆಯಲ್ಲಿ ಬೆಂಬಲ ಸೂಚಿಸಿ ಅಭ್ಯರ್ಥಿಯನ್ನೇ ಹಾಕುವುದಿಲ್ಲ ಎಂದಿರುವುದೂ ಜೆಡಿಎಸ್‍‌ನ ಪರಿಸ್ಥಿತಿ ಬಿಂಬಿಸುತ್ತಿದೆ.

ಈ ಎಲ್ಲಾ ಕಾರಣಗಳಿಂದಾಗಿ ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳ ಪೈಕಿ ಬಿಜೆಪಿ 7, ಕಾಂಗ್ರೆಸ್ 5 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚು ಕಾಣುತ್ತಿದೆ. ಇನ್ನೊಂದು ಕ್ಷೇತ್ರವು ಬಿಜೆಪಿ ಅಥವಾ ಕಾಂಗ್ರೆಸ್‌ಗೆ ಒಲಿಯಬಹುದು, ಬಿಜೆಪಿಗೇ ಸಾಧ್ಯತೆ ಹೆಚ್ಚು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...