Homeಮುಖಪುಟನಿಮ್ಮ ಕಾಯ್ದೆಯಿಂದ ರಾಜ್ಯ ಧರ್ಮಾಂಧತೆಯ ಕೇಂದ್ರವಾಗಿದೆ: ಆದಿತ್ಯನಾಥ್‌ಗೆ 104 ಮಾಜಿ IAS ಅಧಿಕಾರಿಗಳ ಪತ್ರ

ನಿಮ್ಮ ಕಾಯ್ದೆಯಿಂದ ರಾಜ್ಯ ಧರ್ಮಾಂಧತೆಯ ಕೇಂದ್ರವಾಗಿದೆ: ಆದಿತ್ಯನಾಥ್‌ಗೆ 104 ಮಾಜಿ IAS ಅಧಿಕಾರಿಗಳ ಪತ್ರ

"ಸಂವಿಧಾನವನ್ನು ಎತ್ತಿಹಿಡಿಯುವುದಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಸೇರಿದಂತೆ ಎಲ್ಲ ರಾಜಕಾರಣಿಗಳು ಸಂವಿಧಾನದ ಬಗ್ಗೆ ಅರಿವುಮೂಡಿಸಿಕೊಳ್ಳುವ ಅಗತ್ಯವಿದೆ"

- Advertisement -
- Advertisement -

“ಉತ್ತರ ಪ್ರದೇಶ ಸರ್ಕಾರದ ಕಾನೂನು ಬಾಹಿರ ಮತಾಂತರ ನಿಷೇಧ ಕಾಯ್ದೆಯು ರಾಜ್ಯವನ್ನು, ದ್ವೇಷ ರಾಜಕೀಯ, ವಿಭಜನೆ, ಧರ್ಮಾಂಧತೆಯ ಕೇಂದ್ರಬಿಂದುವಾಗಿ ಪರಿವರ್ತನೆಗೊಳಿಸಿದೆ” ಎಂದು ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್, ಮಾಜಿ ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಸೇರಿದಂತೆ 104 ಮಾಜಿ ಐಎಎಸ್ ಅಧಿಕಾರಿಗಳು ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಪತ್ರ ಬರೆದಿದ್ದಾರೆ.

ಈ ವಿವಾದಾತ್ಮಕ ಕಾಯ್ದೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿರುವ ಮಾಜಿ ಐಎಎಸ್ ಅಧಿಕಾರಿಗಳು, “ಸಂವಿಧಾನವನ್ನು ಎತ್ತಿಹಿಡಿಯುವುದಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಸೇರಿದಂತೆ ಎಲ್ಲ ರಾಜಕಾರಣಿಗಳು ಸಂವಿಧಾನದ ಬಗ್ಗೆ ಅರಿವುಮೂಡಿಸಿಕೊಳ್ಳುವ ಅಗತ್ಯವಿದೆ” ಎಂದಿದ್ದಾರೆ.

“ಒಂದು ಕಾಲದಲ್ಲಿ ಗಂಗಾ-ಯಮುನಾ ನಾಗರಿಕತೆಯ ತೊಟ್ಟಿಲಾಗಿದ್ದ ಉತ್ತರಪ್ರದೇಶ, ಈಗ ರಾಜಕೀಯ ದ್ವೇಷ, ವಿಭಜನೆ, ಧರ್ಮಾಂಧತೆಯ ಕೇಂದ್ರವಾಗಿದೆ. ರಾಜ್ಯಾಡಳಿತ ಕೋಮು ವಿಷವನ್ನು ಕಕ್ಕುತ್ತಿದೆ. ಉತ್ತರಪ್ರದೇಶದಾದ್ಯಂತ ಯುವ ಭಾರತೀಯರ ಮೇಲೆ ನಿಮ್ಮ ಆಡಳಿತ ಹೀನಾಯವಾಗಿ ದೌರ್ಜನ್ಯ ನಡೆಸಿದೆ. ಅಮಾಯಕ ದಂಪತಿಯನ್ನು ದಾಳಿಕೋರರು ವಿಚಾರಣೆ ನಡೆಸಿದಾಗ ಹಾಗೂ ಕಿರುಕುಳ ನೀಡಿದಾಗ ಮೂಕ ಪ್ರೇಕ್ಷಕರಾಗಿದ್ದ ಪೊಲೀಸರು ಕ್ಷಮೆಗೆ ಅರ್ಹರಲ್ಲ” ಎಂದು ಮಾಜಿ ಐಎಎಸ್ ಅಧಿಕಾರಿಗಳು ಪತ್ರದಲ್ಲಿ ಹೇಳಿದ್ದಾರೆ.

ಈ ಪತ್ರದ ಪೂರ್ಣ ಪಠ್ಯವನ್ನು ಇಲ್ಲಿ ಓದಿ.

ಇದನ್ನೂ ಓದಿ: ಕಸಗುಡಿಸುತ್ತಿದ್ದ ಕಚೇರಿಗೆ ಅಧ್ಯಕ್ಷೆಯಾಗಿ ಆಯ್ಕೆಯಾದ ಆನಂದವಳ್ಳಿ!

ಇದನ್ನೂ ಓದಿ: ಉತ್ತರ ಪ್ರದೇಶ: ಯುವಕನನ್ನು ಹಾಡಹಗಲೇ ನಡುರಸ್ತೆಯಲ್ಲಿ ಥಳಿಸಿ ಕೊಂದ ದುಷ್ಕರ್ಮಿಗಳು

ಇತ್ತೀಚೆಗೆ ರಾಜ್ಯದಲ್ಲಿ ‘ಲವ್ ಜಿಹಾದ್’ ಎನ್ನುವ ಅಸಾಂವಿಧಾನಿಕ ಪದವನ್ನು ಬಳಸಿ ಅಮಾಯಕರನ್ನು ಅದರ ಬಲಿಪಶುಗಳನ್ನಾಗಿ ಮಾಡಲಾಗುತ್ತಿದೆ. ಈ ಕಾನೂನನ್ನು ಹಿಂದೂ ಸಂಘಟನೆಗಳು ಸ್ವೇಚ್ಚೆಯಾಗಿ ಬಳಸಿಕೊಳ್ಳುತ್ತಿದೆ.

ಆದರೆ, ಅಲಹಾಬಾದ್ ಹೈಕೋರ್ಟ್‌ ಸೇರಿದಂತೆ ಇತರೆ ನ್ಯಾಯಾಲಯಗಳು ಈ ಕಾನೂನನ್ನು ವಿಮರ್ಶಿಸಿವೆ. ಯಾವುದೆ ಒಬ್ಬ ವಯಸ್ಕ ಯುವತಿ ತನ್ನ ಇಚ್ಚೆಗೆ ಅನುಗುಣವಾಗಿ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಿದೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಮದನ್ ಬಿ ಲೋಕೂರ್ ಸೇರಿದಂತೆ ನಾಲ್ವರು ಮಾಜಿ ನ್ಯಾಯಾಧೀಶರು ಈ ಸುಗ್ರೀವಾಜ್ಞೆಯನ್ನು ಟೀಕಿಸಿದ್ದಾರೆ.


ಇದನ್ನೂ ಓದಿ: ಜೆಡಿಎಸ್‌‌ನ ಜಾತ್ಯಾತೀತತೆ ಪರೀಕ್ಷಿಸಿದವರಿಗೆ ಈ ಸಾವು ಉತ್ತರ ನೀಡಿರಬಹುದು: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...