Homeಮುಖಪುಟನಿಮ್ಮ ಕಾಯ್ದೆಯಿಂದ ರಾಜ್ಯ ಧರ್ಮಾಂಧತೆಯ ಕೇಂದ್ರವಾಗಿದೆ: ಆದಿತ್ಯನಾಥ್‌ಗೆ 104 ಮಾಜಿ IAS ಅಧಿಕಾರಿಗಳ ಪತ್ರ

ನಿಮ್ಮ ಕಾಯ್ದೆಯಿಂದ ರಾಜ್ಯ ಧರ್ಮಾಂಧತೆಯ ಕೇಂದ್ರವಾಗಿದೆ: ಆದಿತ್ಯನಾಥ್‌ಗೆ 104 ಮಾಜಿ IAS ಅಧಿಕಾರಿಗಳ ಪತ್ರ

"ಸಂವಿಧಾನವನ್ನು ಎತ್ತಿಹಿಡಿಯುವುದಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಸೇರಿದಂತೆ ಎಲ್ಲ ರಾಜಕಾರಣಿಗಳು ಸಂವಿಧಾನದ ಬಗ್ಗೆ ಅರಿವುಮೂಡಿಸಿಕೊಳ್ಳುವ ಅಗತ್ಯವಿದೆ"

- Advertisement -
- Advertisement -

“ಉತ್ತರ ಪ್ರದೇಶ ಸರ್ಕಾರದ ಕಾನೂನು ಬಾಹಿರ ಮತಾಂತರ ನಿಷೇಧ ಕಾಯ್ದೆಯು ರಾಜ್ಯವನ್ನು, ದ್ವೇಷ ರಾಜಕೀಯ, ವಿಭಜನೆ, ಧರ್ಮಾಂಧತೆಯ ಕೇಂದ್ರಬಿಂದುವಾಗಿ ಪರಿವರ್ತನೆಗೊಳಿಸಿದೆ” ಎಂದು ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್, ಮಾಜಿ ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಸೇರಿದಂತೆ 104 ಮಾಜಿ ಐಎಎಸ್ ಅಧಿಕಾರಿಗಳು ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಪತ್ರ ಬರೆದಿದ್ದಾರೆ.

ಈ ವಿವಾದಾತ್ಮಕ ಕಾಯ್ದೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿರುವ ಮಾಜಿ ಐಎಎಸ್ ಅಧಿಕಾರಿಗಳು, “ಸಂವಿಧಾನವನ್ನು ಎತ್ತಿಹಿಡಿಯುವುದಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಸೇರಿದಂತೆ ಎಲ್ಲ ರಾಜಕಾರಣಿಗಳು ಸಂವಿಧಾನದ ಬಗ್ಗೆ ಅರಿವುಮೂಡಿಸಿಕೊಳ್ಳುವ ಅಗತ್ಯವಿದೆ” ಎಂದಿದ್ದಾರೆ.

“ಒಂದು ಕಾಲದಲ್ಲಿ ಗಂಗಾ-ಯಮುನಾ ನಾಗರಿಕತೆಯ ತೊಟ್ಟಿಲಾಗಿದ್ದ ಉತ್ತರಪ್ರದೇಶ, ಈಗ ರಾಜಕೀಯ ದ್ವೇಷ, ವಿಭಜನೆ, ಧರ್ಮಾಂಧತೆಯ ಕೇಂದ್ರವಾಗಿದೆ. ರಾಜ್ಯಾಡಳಿತ ಕೋಮು ವಿಷವನ್ನು ಕಕ್ಕುತ್ತಿದೆ. ಉತ್ತರಪ್ರದೇಶದಾದ್ಯಂತ ಯುವ ಭಾರತೀಯರ ಮೇಲೆ ನಿಮ್ಮ ಆಡಳಿತ ಹೀನಾಯವಾಗಿ ದೌರ್ಜನ್ಯ ನಡೆಸಿದೆ. ಅಮಾಯಕ ದಂಪತಿಯನ್ನು ದಾಳಿಕೋರರು ವಿಚಾರಣೆ ನಡೆಸಿದಾಗ ಹಾಗೂ ಕಿರುಕುಳ ನೀಡಿದಾಗ ಮೂಕ ಪ್ರೇಕ್ಷಕರಾಗಿದ್ದ ಪೊಲೀಸರು ಕ್ಷಮೆಗೆ ಅರ್ಹರಲ್ಲ” ಎಂದು ಮಾಜಿ ಐಎಎಸ್ ಅಧಿಕಾರಿಗಳು ಪತ್ರದಲ್ಲಿ ಹೇಳಿದ್ದಾರೆ.

ಈ ಪತ್ರದ ಪೂರ್ಣ ಪಠ್ಯವನ್ನು ಇಲ್ಲಿ ಓದಿ.

ಇದನ್ನೂ ಓದಿ: ಕಸಗುಡಿಸುತ್ತಿದ್ದ ಕಚೇರಿಗೆ ಅಧ್ಯಕ್ಷೆಯಾಗಿ ಆಯ್ಕೆಯಾದ ಆನಂದವಳ್ಳಿ!

ಇದನ್ನೂ ಓದಿ: ಉತ್ತರ ಪ್ರದೇಶ: ಯುವಕನನ್ನು ಹಾಡಹಗಲೇ ನಡುರಸ್ತೆಯಲ್ಲಿ ಥಳಿಸಿ ಕೊಂದ ದುಷ್ಕರ್ಮಿಗಳು

ಇತ್ತೀಚೆಗೆ ರಾಜ್ಯದಲ್ಲಿ ‘ಲವ್ ಜಿಹಾದ್’ ಎನ್ನುವ ಅಸಾಂವಿಧಾನಿಕ ಪದವನ್ನು ಬಳಸಿ ಅಮಾಯಕರನ್ನು ಅದರ ಬಲಿಪಶುಗಳನ್ನಾಗಿ ಮಾಡಲಾಗುತ್ತಿದೆ. ಈ ಕಾನೂನನ್ನು ಹಿಂದೂ ಸಂಘಟನೆಗಳು ಸ್ವೇಚ್ಚೆಯಾಗಿ ಬಳಸಿಕೊಳ್ಳುತ್ತಿದೆ.

ಆದರೆ, ಅಲಹಾಬಾದ್ ಹೈಕೋರ್ಟ್‌ ಸೇರಿದಂತೆ ಇತರೆ ನ್ಯಾಯಾಲಯಗಳು ಈ ಕಾನೂನನ್ನು ವಿಮರ್ಶಿಸಿವೆ. ಯಾವುದೆ ಒಬ್ಬ ವಯಸ್ಕ ಯುವತಿ ತನ್ನ ಇಚ್ಚೆಗೆ ಅನುಗುಣವಾಗಿ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಿದೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಮದನ್ ಬಿ ಲೋಕೂರ್ ಸೇರಿದಂತೆ ನಾಲ್ವರು ಮಾಜಿ ನ್ಯಾಯಾಧೀಶರು ಈ ಸುಗ್ರೀವಾಜ್ಞೆಯನ್ನು ಟೀಕಿಸಿದ್ದಾರೆ.


ಇದನ್ನೂ ಓದಿ: ಜೆಡಿಎಸ್‌‌ನ ಜಾತ್ಯಾತೀತತೆ ಪರೀಕ್ಷಿಸಿದವರಿಗೆ ಈ ಸಾವು ಉತ್ತರ ನೀಡಿರಬಹುದು: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...