Homeಕರ್ನಾಟಕಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯವಿದ್ದು, ಎಲ್ಲ ಜಾತಿ ಜನಾಂಗಗಳೂ ಪ್ರವೇಶಿಸಬಹುದು ಎಂಬ ಬೋರ್ಡ್‌ ಇತ್ತು. ಅದನ್ನು ಹಾಳು ಮಾಡಲಾಗಿದೆ.

- Advertisement -
- Advertisement -

ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ಕಡಬ ಹೋಬಳಿ ವ್ಯಾಪ್ತಿಗೆ ಸೇರಿದ ಬ್ಯಾಲಹಳ್ಳಿಯಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘವು ದಲಿತರು ಹಾಲು ಕೊಳ್ಳದಂತೆ ಅನಪೇಕ್ಷಿತ ನಿಲುವನ್ನು ತಾಳಿದೆ.

ಸುಮಾರು 15 ದಲಿತ ಕುಟುಂಬಗಳು ಇರುವ ಹಳ್ಳಿ ಇದಾಗಿದ್ದು, ಲಿಂಗಾಯತ-ವೀರಶೈವ, ನಾಯಕ ಸಮುದಾಯಗಳು ಇವೆ. ಮರಾಠಿ ಭಾಷೆ ಮಾತನಾಡುವ ಸಮುದಾಯವಿರುವ ಮರಾಠಿ ಪಾಳ್ಯವು ಬ್ಯಾಲಹಳ್ಳಿಗೆ ಹೊಂದಿಕೊಂಡಂತೆ ಇದೆ.

ಬ್ಯಾಲಹಳ್ಳಿಯಲ್ಲಿರುವ ಮಾದಿಗ ಸಮುದಾಯವು ಮೊದಲಿನಿಂದಲೂ ಆರ್ಥಿಕವಾಗಿ ಹಿಂದುಳಿದಿದೆ. ಸ್ವತಃ ಹಸು ಕಟ್ಟಿಕೊಳ್ಳುವಷ್ಟು ಶಕ್ತಿ ಇಲ್ಲದ ಕುಟುಂಬಗಳು ಇವು. ಈ ಬಡ ಕುಟುಂಬಗಳು ದಲಿತ ಕಾಲೋನಿ ಪಕ್ಕದಲ್ಲಿನ ಹಾಲು ಉತ್ಪಾದಕರ ಸಂಘದಿಂದ ಮೊದಲಿನಿಂದಲೂ ಹಾಲು ಖರೀದಿಸುತ್ತಿದ್ದವು.

ಸಾಮಾನ್ಯವಾಗಿ 100 ಎಂ.ಎಲ್‌., 200 ಎಂ.ಎಲ್‌. ಹಾಲು ಖರೀದಿಸಿ ಚಹಾ ಮಾಡಿಕೊಂಡು ಕುಡಿದು ಕೂಲಿಗೆ ಹೋಗುತ್ತಿದ್ದರು. ಆದರೆ ಈಗ ಚಹಾ  ಕಾಯಿಸಿಕೊಳ್ಳಲು ಅರ್ಧ ಲೀಟರ್‌ ಅಥವಾ ಒಂದು ಲೀಟರ್‌ ಹಾಲನ್ನಷ್ಟೇ ಖರೀದಿಸಬೇಕು. ಇಲ್ಲವಾದರೆ ಹಾಲು ಕೊಡುವುದಿಲ್ಲ ಎಂದು ಇಲ್ಲಿನ ಸಹಕಾರ ಸಂಘ ಹೇಳಿದೆ.

ಇದನ್ನೂ ಓದಿರಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ಅರ್ಧ ಲೀಟರ್ ಹಾಲು ತೆಗೆದುಕೊಂಡು ನಾವು ಏನು ಮಾಡಲಿ? ನಮಗೆ ದಿನಕ್ಕೆ ಅರ್ಧ ಲೀಟರ್‌, ಒಂದು ಲೀಟರ್‌ ಹಾಲು ಖರೀದಿಸಲು ಸಾಧ್ಯವಾಗದು. ದಯವಿಟ್ಟು ಮೊದಲಿನಂತೆ ನೂರು ಎಂ.ಎಲ್., ಇನ್ನೂರು ಎಂ.ಎಲ್‌. ಹಾಲು ನೀಡಿ ಎಂದು ಗೋಗರೆಯುವಂತಾಗಿದೆ.

“ಹಾಲನ್ನು ಪರೀಕ್ಷಿಸಿದ ನಂತರ ಗುಣಮಟ್ಟದ ಹಾಲನ್ನು ಖರೀದಿಸಲು ಈ ಮೊದಲು ಅವಕಾಶವಿತ್ತು. ಸಣ್ಣ ಅವ್ಯವಹಾರವೇನೋ ಸಂಘದಲ್ಲಿ ನಡೆದಿದ್ದು, ಹೀಗಾಗಿ ಸಂಘದ ಸದಸ್ಯರು, ಪದಾಧಿಕಾರಿಗಳ ನಡುವೆ ಗಲಾಟೆಯಾದಂತಿದೆ. ಇನ್ನು ಮುಂದೆ ಚಿಲ್ಲರೆ ಲೆಕ್ಕದಲ್ಲಿ ಹಾಲನ್ನೇ ಮಾರುವುದು ಬೇಡ. ಅರ್ಧ ಅಥವಾ ಒಂದು ಲೀಟರ್‌ ಹಾಲನ್ನು ಖರೀದಿಸಿದರೆ ಲೆಕ್ಕ ಸಿಗುತ್ತದೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ. ಒಳಗೊಳಗೆ ಅವರು ಭ್ರಷ್ಟಾಚಾರ ಮಾಡಿಕೊಂಡು, ನಮಗೆ ಹಾಲು ನೀಡುವುದನ್ನು ನಿಲ್ಲಿಸುವುದು ಎಷ್ಟು ಸರಿ?” ಎಂದು ದಲಿತರು ಕೇಳುತ್ತಿದ್ದಾರೆ.

“ತುಮಕೂರು ಹಾಲು ಒಕ್ಕೂಟದ ಪದಾಧಿಕಾರಿಗಳು ಬ್ಯಾಲಹಳ್ಳಿಗೆ ಬಂದು ಸಾಮಾನ್ಯ ಸಭೆ ನಡೆಸಿದ ಸಂದರ್ಭದಲ್ಲಿ ದಲಿತರು ಪ್ರಶ್ನಿಸಿದ್ದಾರೆ. ಹಾಲು ಒಕ್ಕೂಟದಲ್ಲಿ ಈ ಥರದ ನಿಯಮವೇನೂ ಇಲ್ಲ. ಅದು ಇಲ್ಲಿನ ಸಂಘದವರು ಮಾಡಿರುವ ತೀರ್ಮಾನ. ಸಂಘದೊಂದಿಗೆ ಮಾತನಾಡಿ ಒಂದು ನಿರ್ಧಾರಕ್ಕೆ ಬನ್ನಿ ಎಂದು ಒಕ್ಕೂಟದವರು ತಿಳಿಸಿದ್ದಾರೆ. ಮೊದಲಿನಂತೆ ಹಾಲು ಕೊಡಿ ಎಂದು ಕೇಳುತ್ತಿದ್ದರೂ ಕಿವಿಗೆ ಹಾಕಿಕೊಳ್ಳಲಿಲ್ಲ” ಎನ್ನುತ್ತಾರೆ ದಲಿತ ಮುಖಂಡ ಬಿ.ಸಿ.ರೇಣುಕಪ್ಪ.

ಸಂಘದ ಕಾರ್ಯದರ್ಶಿ ಶಂಕರಪ್ಪ ಪ್ರತಿಕ್ರಿಯೆ

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸಂಘದ ಕಾರ್ಯದರ್ಶಿ ಶಂಕರಪ್ಪ, “ಅವರು ತೆಗೆದುಕೊಳ್ಳುವುದು ನೂರು ಎಂ.ಎಲ್‌., ಇನ್ನೂರು ಎಂ.ಎಲ್‌. ಹಾಲು ಅಷ್ಟೇ. ಎರಡು ಲೀಟರ್‌ ಒಟ್ಟಿಗೆ ತೆಗೆದುಕೊಂಡು ಹಂಚಿಕೊಂಡು ಬಿಡಿ ಎಂದು ಮೀಟಿಂಗ್‌ನಲ್ಲಿ ತಿಳಿಸಿದ್ದೇವೆ. ಹಾಲು ಕೊಡಬೇಕೆಂದೇನೂ ಇಲ್ಲ. ಸಂಘ ಹಾಲು ಖರೀದಿಸಲು ಮಾತ್ರ ಇರುವುದು. ಆದರೂ ಜನರ ಹಿತಾದೃಷ್ಟಿಯಿಂದ ಮೊದಲಿನಿಂದಲೂ ಹಾಲು ಮಾರಲಾಗುತ್ತಿತ್ತು” ಎಂದರು.

ಇದನ್ನೂ ಓದಿರಿ: ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

“ಒಂದು ಲೀಟರ್‌ಗೆ 36 ರೂ.ಗಳಿಗೆ ಕೊಡುತ್ತೇವೆ. ನೂರು ಎಂ.ಎಲ್‌. ತೆಗೆದುಕೊಂಡರೆ 3.60 ರೂ. ತೆಗೆದುಕೊಳ್ಳಬೇಕು. ಆದರೆ 40 ಪೈಸೆ ಚಿಲ್ಲರೆ ಇರುವುದಿಲ್ಲವಲ್ಲ. ನಾಲ್ಕು ರೂ. ತೆಗೆದುಕೊಳ್ಳಬೇಕಾಗುತ್ತದೆ. 40 ಪೈಸೆ ಚಿಲ್ಲರೆಗೂ ಕೆಲವರು ತಕರಾರು ತೆಗೆದರು. ಹೀಗಾಗಿ ಚಿಲ್ಲರೆ ಕೊಡಲು ಆಗಲ್ಲ. ಅರ್ಧ ಲೀಟರ್, ಕಾಲು ಲೀಟರ್‌ ತೆಗೆದುಕೊಳ್ಳಿ ಎಂದೆವು. ಅಷ್ಟು ತೆಗೆದುಕೊಳ್ಳಲು ಶಕ್ತಿ ಇಲ್ಲ ಅಂದರೆ ನಾವೇನು ಮಾಡಲಿ” ಎಂದು ಸಂಘದ ನಡೆಯನ್ನು ಸಮರ್ಥಿಸಿಕೊಂಡರು.

“ಒಟ್ಟಿಗೆ ತೆಗೆದುಕೊಂಡು ಹೋಗಿ ಎಂದರೂ ಆಗಲ್ಲ. ಲೀಟರ್‌ಗೆ ನಲವತ್ತು ರೂಪಾಯಿ ಏರಿಕೆಯಾದರೆ ಇದೆಲ್ಲ ಸಮಸ್ಯೆಯಾಗಲ್ಲ” ಎಂದು ಪ್ರತಿಕ್ರಿಯೆ ನೀಡಿದರು ಶಂಕರಪ್ಪ.

ಶಂಕರಪ್ಪ ಅವರು ಹೀಗೆ ಹೇಳುತ್ತಿದ್ದಾರೆಂದು ದಲಿತ ಮುಖಂಡರಿಗೆ ತಿಳಿಸಿದಾಗ, “ಎಲ್ಲ ಅಳತೆ ಮಾಪನಗಳು ಅವರ ಬಳಿಯೇ ಇರುತ್ತವೆ. ಅಳತೆ ಮಾಡಿಕೊಡಲು ಆಗುವುದಿಲ್ಲವೇ? ಇವೆಲ್ಲ ತಾತ್ಸರ ಮನೋಭಾವವಷ್ಟೇ. ನಾವು ನಾಲ್ಕು ರೂಪಾಯಿ ಕೊಡಲು ಸಿದ್ಧರಿದ್ದೇವೆ. ಸಂಘದೊಳಗೆ ಆಗಿರುವ ಕಿತಾಪತಿಗೆ ನಮ್ಮನ್ನು ಬಲಿಪಶು ಮಾಡಲಾಗಿದೆ” ಎಂದರು.

ಮುಜರಾಯಿ ದೇವಾಲಯಕ್ಕೆ ಪ್ರವೇಶಿಸಲು ಹೆದರಿಕೆ

ಬ್ಯಾಲಹಳ್ಳಿ ಗ್ರಾಮದಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಸೇರಿದ ತೊಳಸಮ್ಮ ದೇವಸ್ಥಾನವಿದ್ದು, ಸವರ್ಣೀಯ ಸಮುದಾಯದ ಹಿಡಿತದಲ್ಲಿದೆ. ದೇವಾಲಯಕ್ಕೆ ಪ್ರವೇಶಿಸಬೇಕೆಂಬ ಆಸೆ ಅನೇಕ ದಲಿತರಿಗಿದ್ದರೂ ಧೈರ್ಯ ಸಾಲದೆ ಸುಮ್ಮನಾಗಿದ್ದಾರೆ. ಅಲ್ಲದೆ ದೇವಾಲಯದ ಹೊರಗೆ ಹಾಕಿರುವ ಬೋರ್ಡ್‌‌ ಅನ್ನು ಅಳಿಸಿ ಹಾಕುವ ಪ್ರಯತ್ನವನ್ನು ಸವರ್ಣೀಯ ಜಾತಿಗಳು ಮಾಡಿವೆ.

ಮುಜರಾಯಿ ಇಲಾಖೆಯ ಬೋರ್ಡ್ ಕೆರೆದು ಅಳಿಸಿ ಹಾಕಿರುವುದು….

ಊರಿನ ಬಸ್‌ ನಿಲ್ದಾಣದಲ್ಲಿ ದೇವಾಲಯವಿದ್ದು, ಮುಜರಾಯಿ ಇಲಾಖೆಯು ದೇವಾಲಯದ ಹೊರಗೆ, “ಯಾವುದೇ ಜಾತಿ, ಜನಾಂಗ, ಧರ್ಮ, ಲಿಂಗ ಭೇದವಿಲ್ಲದೆ ಪ್ರವೇಶ ಮಾಡಬಹುದು” ಎಂದು ಬೋರ್ಡ್ ಹಾಕಿದೆ. ‘ಜಾತಿ, ಜನಾಂಗ, ದೇವಾಲಯ ಪ್ರವೇಶ’ ಇತ್ಯಾದಿ ಪದಗಳನ್ನು ಕಾಣದಂತೆ ಕೆರೆದು ಹಾಕಲಾಗಿದೆ.

ಒಂದು ಚಿಲ್ಲರೆ ನೆಪದಲ್ಲಿ ಹಾಲು ನೀಡಲು ನಿರಾಕರಣೆ, ಮತ್ತೊಂದು ಕಡೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯ ಪ್ರವೇಶಿಸಲು ಅಡ್ಡಿ, ಆತಂಕ… ಇದು ಬ್ಯಾಲಹಳ್ಳಿಯ ಪರಿಸ್ಥಿತಿಯಾಗಿದೆ.

ಬ್ಯಾಲಹಳ್ಳಿ ಗ್ರಾಮದಲ್ಲಿನ ತೊಳಸಮ್ಮ ದೇವಾಲಯ

ಇದನ್ನೂ ಓದಿರಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...