Homeಕರ್ನಾಟಕಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯವಿದ್ದು, ಎಲ್ಲ ಜಾತಿ ಜನಾಂಗಗಳೂ ಪ್ರವೇಶಿಸಬಹುದು ಎಂಬ ಬೋರ್ಡ್‌ ಇತ್ತು. ಅದನ್ನು ಹಾಳು ಮಾಡಲಾಗಿದೆ.

- Advertisement -
- Advertisement -

ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ಕಡಬ ಹೋಬಳಿ ವ್ಯಾಪ್ತಿಗೆ ಸೇರಿದ ಬ್ಯಾಲಹಳ್ಳಿಯಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘವು ದಲಿತರು ಹಾಲು ಕೊಳ್ಳದಂತೆ ಅನಪೇಕ್ಷಿತ ನಿಲುವನ್ನು ತಾಳಿದೆ.

ಸುಮಾರು 15 ದಲಿತ ಕುಟುಂಬಗಳು ಇರುವ ಹಳ್ಳಿ ಇದಾಗಿದ್ದು, ಲಿಂಗಾಯತ-ವೀರಶೈವ, ನಾಯಕ ಸಮುದಾಯಗಳು ಇವೆ. ಮರಾಠಿ ಭಾಷೆ ಮಾತನಾಡುವ ಸಮುದಾಯವಿರುವ ಮರಾಠಿ ಪಾಳ್ಯವು ಬ್ಯಾಲಹಳ್ಳಿಗೆ ಹೊಂದಿಕೊಂಡಂತೆ ಇದೆ.

ಬ್ಯಾಲಹಳ್ಳಿಯಲ್ಲಿರುವ ಮಾದಿಗ ಸಮುದಾಯವು ಮೊದಲಿನಿಂದಲೂ ಆರ್ಥಿಕವಾಗಿ ಹಿಂದುಳಿದಿದೆ. ಸ್ವತಃ ಹಸು ಕಟ್ಟಿಕೊಳ್ಳುವಷ್ಟು ಶಕ್ತಿ ಇಲ್ಲದ ಕುಟುಂಬಗಳು ಇವು. ಈ ಬಡ ಕುಟುಂಬಗಳು ದಲಿತ ಕಾಲೋನಿ ಪಕ್ಕದಲ್ಲಿನ ಹಾಲು ಉತ್ಪಾದಕರ ಸಂಘದಿಂದ ಮೊದಲಿನಿಂದಲೂ ಹಾಲು ಖರೀದಿಸುತ್ತಿದ್ದವು.

ಸಾಮಾನ್ಯವಾಗಿ 100 ಎಂ.ಎಲ್‌., 200 ಎಂ.ಎಲ್‌. ಹಾಲು ಖರೀದಿಸಿ ಚಹಾ ಮಾಡಿಕೊಂಡು ಕುಡಿದು ಕೂಲಿಗೆ ಹೋಗುತ್ತಿದ್ದರು. ಆದರೆ ಈಗ ಚಹಾ  ಕಾಯಿಸಿಕೊಳ್ಳಲು ಅರ್ಧ ಲೀಟರ್‌ ಅಥವಾ ಒಂದು ಲೀಟರ್‌ ಹಾಲನ್ನಷ್ಟೇ ಖರೀದಿಸಬೇಕು. ಇಲ್ಲವಾದರೆ ಹಾಲು ಕೊಡುವುದಿಲ್ಲ ಎಂದು ಇಲ್ಲಿನ ಸಹಕಾರ ಸಂಘ ಹೇಳಿದೆ.

ಇದನ್ನೂ ಓದಿರಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ಅರ್ಧ ಲೀಟರ್ ಹಾಲು ತೆಗೆದುಕೊಂಡು ನಾವು ಏನು ಮಾಡಲಿ? ನಮಗೆ ದಿನಕ್ಕೆ ಅರ್ಧ ಲೀಟರ್‌, ಒಂದು ಲೀಟರ್‌ ಹಾಲು ಖರೀದಿಸಲು ಸಾಧ್ಯವಾಗದು. ದಯವಿಟ್ಟು ಮೊದಲಿನಂತೆ ನೂರು ಎಂ.ಎಲ್., ಇನ್ನೂರು ಎಂ.ಎಲ್‌. ಹಾಲು ನೀಡಿ ಎಂದು ಗೋಗರೆಯುವಂತಾಗಿದೆ.

“ಹಾಲನ್ನು ಪರೀಕ್ಷಿಸಿದ ನಂತರ ಗುಣಮಟ್ಟದ ಹಾಲನ್ನು ಖರೀದಿಸಲು ಈ ಮೊದಲು ಅವಕಾಶವಿತ್ತು. ಸಣ್ಣ ಅವ್ಯವಹಾರವೇನೋ ಸಂಘದಲ್ಲಿ ನಡೆದಿದ್ದು, ಹೀಗಾಗಿ ಸಂಘದ ಸದಸ್ಯರು, ಪದಾಧಿಕಾರಿಗಳ ನಡುವೆ ಗಲಾಟೆಯಾದಂತಿದೆ. ಇನ್ನು ಮುಂದೆ ಚಿಲ್ಲರೆ ಲೆಕ್ಕದಲ್ಲಿ ಹಾಲನ್ನೇ ಮಾರುವುದು ಬೇಡ. ಅರ್ಧ ಅಥವಾ ಒಂದು ಲೀಟರ್‌ ಹಾಲನ್ನು ಖರೀದಿಸಿದರೆ ಲೆಕ್ಕ ಸಿಗುತ್ತದೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ. ಒಳಗೊಳಗೆ ಅವರು ಭ್ರಷ್ಟಾಚಾರ ಮಾಡಿಕೊಂಡು, ನಮಗೆ ಹಾಲು ನೀಡುವುದನ್ನು ನಿಲ್ಲಿಸುವುದು ಎಷ್ಟು ಸರಿ?” ಎಂದು ದಲಿತರು ಕೇಳುತ್ತಿದ್ದಾರೆ.

“ತುಮಕೂರು ಹಾಲು ಒಕ್ಕೂಟದ ಪದಾಧಿಕಾರಿಗಳು ಬ್ಯಾಲಹಳ್ಳಿಗೆ ಬಂದು ಸಾಮಾನ್ಯ ಸಭೆ ನಡೆಸಿದ ಸಂದರ್ಭದಲ್ಲಿ ದಲಿತರು ಪ್ರಶ್ನಿಸಿದ್ದಾರೆ. ಹಾಲು ಒಕ್ಕೂಟದಲ್ಲಿ ಈ ಥರದ ನಿಯಮವೇನೂ ಇಲ್ಲ. ಅದು ಇಲ್ಲಿನ ಸಂಘದವರು ಮಾಡಿರುವ ತೀರ್ಮಾನ. ಸಂಘದೊಂದಿಗೆ ಮಾತನಾಡಿ ಒಂದು ನಿರ್ಧಾರಕ್ಕೆ ಬನ್ನಿ ಎಂದು ಒಕ್ಕೂಟದವರು ತಿಳಿಸಿದ್ದಾರೆ. ಮೊದಲಿನಂತೆ ಹಾಲು ಕೊಡಿ ಎಂದು ಕೇಳುತ್ತಿದ್ದರೂ ಕಿವಿಗೆ ಹಾಕಿಕೊಳ್ಳಲಿಲ್ಲ” ಎನ್ನುತ್ತಾರೆ ದಲಿತ ಮುಖಂಡ ಬಿ.ಸಿ.ರೇಣುಕಪ್ಪ.

ಸಂಘದ ಕಾರ್ಯದರ್ಶಿ ಶಂಕರಪ್ಪ ಪ್ರತಿಕ್ರಿಯೆ

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸಂಘದ ಕಾರ್ಯದರ್ಶಿ ಶಂಕರಪ್ಪ, “ಅವರು ತೆಗೆದುಕೊಳ್ಳುವುದು ನೂರು ಎಂ.ಎಲ್‌., ಇನ್ನೂರು ಎಂ.ಎಲ್‌. ಹಾಲು ಅಷ್ಟೇ. ಎರಡು ಲೀಟರ್‌ ಒಟ್ಟಿಗೆ ತೆಗೆದುಕೊಂಡು ಹಂಚಿಕೊಂಡು ಬಿಡಿ ಎಂದು ಮೀಟಿಂಗ್‌ನಲ್ಲಿ ತಿಳಿಸಿದ್ದೇವೆ. ಹಾಲು ಕೊಡಬೇಕೆಂದೇನೂ ಇಲ್ಲ. ಸಂಘ ಹಾಲು ಖರೀದಿಸಲು ಮಾತ್ರ ಇರುವುದು. ಆದರೂ ಜನರ ಹಿತಾದೃಷ್ಟಿಯಿಂದ ಮೊದಲಿನಿಂದಲೂ ಹಾಲು ಮಾರಲಾಗುತ್ತಿತ್ತು” ಎಂದರು.

ಇದನ್ನೂ ಓದಿರಿ: ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

“ಒಂದು ಲೀಟರ್‌ಗೆ 36 ರೂ.ಗಳಿಗೆ ಕೊಡುತ್ತೇವೆ. ನೂರು ಎಂ.ಎಲ್‌. ತೆಗೆದುಕೊಂಡರೆ 3.60 ರೂ. ತೆಗೆದುಕೊಳ್ಳಬೇಕು. ಆದರೆ 40 ಪೈಸೆ ಚಿಲ್ಲರೆ ಇರುವುದಿಲ್ಲವಲ್ಲ. ನಾಲ್ಕು ರೂ. ತೆಗೆದುಕೊಳ್ಳಬೇಕಾಗುತ್ತದೆ. 40 ಪೈಸೆ ಚಿಲ್ಲರೆಗೂ ಕೆಲವರು ತಕರಾರು ತೆಗೆದರು. ಹೀಗಾಗಿ ಚಿಲ್ಲರೆ ಕೊಡಲು ಆಗಲ್ಲ. ಅರ್ಧ ಲೀಟರ್, ಕಾಲು ಲೀಟರ್‌ ತೆಗೆದುಕೊಳ್ಳಿ ಎಂದೆವು. ಅಷ್ಟು ತೆಗೆದುಕೊಳ್ಳಲು ಶಕ್ತಿ ಇಲ್ಲ ಅಂದರೆ ನಾವೇನು ಮಾಡಲಿ” ಎಂದು ಸಂಘದ ನಡೆಯನ್ನು ಸಮರ್ಥಿಸಿಕೊಂಡರು.

“ಒಟ್ಟಿಗೆ ತೆಗೆದುಕೊಂಡು ಹೋಗಿ ಎಂದರೂ ಆಗಲ್ಲ. ಲೀಟರ್‌ಗೆ ನಲವತ್ತು ರೂಪಾಯಿ ಏರಿಕೆಯಾದರೆ ಇದೆಲ್ಲ ಸಮಸ್ಯೆಯಾಗಲ್ಲ” ಎಂದು ಪ್ರತಿಕ್ರಿಯೆ ನೀಡಿದರು ಶಂಕರಪ್ಪ.

ಶಂಕರಪ್ಪ ಅವರು ಹೀಗೆ ಹೇಳುತ್ತಿದ್ದಾರೆಂದು ದಲಿತ ಮುಖಂಡರಿಗೆ ತಿಳಿಸಿದಾಗ, “ಎಲ್ಲ ಅಳತೆ ಮಾಪನಗಳು ಅವರ ಬಳಿಯೇ ಇರುತ್ತವೆ. ಅಳತೆ ಮಾಡಿಕೊಡಲು ಆಗುವುದಿಲ್ಲವೇ? ಇವೆಲ್ಲ ತಾತ್ಸರ ಮನೋಭಾವವಷ್ಟೇ. ನಾವು ನಾಲ್ಕು ರೂಪಾಯಿ ಕೊಡಲು ಸಿದ್ಧರಿದ್ದೇವೆ. ಸಂಘದೊಳಗೆ ಆಗಿರುವ ಕಿತಾಪತಿಗೆ ನಮ್ಮನ್ನು ಬಲಿಪಶು ಮಾಡಲಾಗಿದೆ” ಎಂದರು.

ಮುಜರಾಯಿ ದೇವಾಲಯಕ್ಕೆ ಪ್ರವೇಶಿಸಲು ಹೆದರಿಕೆ

ಬ್ಯಾಲಹಳ್ಳಿ ಗ್ರಾಮದಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಸೇರಿದ ತೊಳಸಮ್ಮ ದೇವಸ್ಥಾನವಿದ್ದು, ಸವರ್ಣೀಯ ಸಮುದಾಯದ ಹಿಡಿತದಲ್ಲಿದೆ. ದೇವಾಲಯಕ್ಕೆ ಪ್ರವೇಶಿಸಬೇಕೆಂಬ ಆಸೆ ಅನೇಕ ದಲಿತರಿಗಿದ್ದರೂ ಧೈರ್ಯ ಸಾಲದೆ ಸುಮ್ಮನಾಗಿದ್ದಾರೆ. ಅಲ್ಲದೆ ದೇವಾಲಯದ ಹೊರಗೆ ಹಾಕಿರುವ ಬೋರ್ಡ್‌‌ ಅನ್ನು ಅಳಿಸಿ ಹಾಕುವ ಪ್ರಯತ್ನವನ್ನು ಸವರ್ಣೀಯ ಜಾತಿಗಳು ಮಾಡಿವೆ.

ಮುಜರಾಯಿ ಇಲಾಖೆಯ ಬೋರ್ಡ್ ಕೆರೆದು ಅಳಿಸಿ ಹಾಕಿರುವುದು….

ಊರಿನ ಬಸ್‌ ನಿಲ್ದಾಣದಲ್ಲಿ ದೇವಾಲಯವಿದ್ದು, ಮುಜರಾಯಿ ಇಲಾಖೆಯು ದೇವಾಲಯದ ಹೊರಗೆ, “ಯಾವುದೇ ಜಾತಿ, ಜನಾಂಗ, ಧರ್ಮ, ಲಿಂಗ ಭೇದವಿಲ್ಲದೆ ಪ್ರವೇಶ ಮಾಡಬಹುದು” ಎಂದು ಬೋರ್ಡ್ ಹಾಕಿದೆ. ‘ಜಾತಿ, ಜನಾಂಗ, ದೇವಾಲಯ ಪ್ರವೇಶ’ ಇತ್ಯಾದಿ ಪದಗಳನ್ನು ಕಾಣದಂತೆ ಕೆರೆದು ಹಾಕಲಾಗಿದೆ.

ಒಂದು ಚಿಲ್ಲರೆ ನೆಪದಲ್ಲಿ ಹಾಲು ನೀಡಲು ನಿರಾಕರಣೆ, ಮತ್ತೊಂದು ಕಡೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯ ಪ್ರವೇಶಿಸಲು ಅಡ್ಡಿ, ಆತಂಕ… ಇದು ಬ್ಯಾಲಹಳ್ಳಿಯ ಪರಿಸ್ಥಿತಿಯಾಗಿದೆ.

ಬ್ಯಾಲಹಳ್ಳಿ ಗ್ರಾಮದಲ್ಲಿನ ತೊಳಸಮ್ಮ ದೇವಾಲಯ

ಇದನ್ನೂ ಓದಿರಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...