Homeಕರ್ನಾಟಕಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯವಿದ್ದು, ಎಲ್ಲ ಜಾತಿ ಜನಾಂಗಗಳೂ ಪ್ರವೇಶಿಸಬಹುದು ಎಂಬ ಬೋರ್ಡ್‌ ಇತ್ತು. ಅದನ್ನು ಹಾಳು ಮಾಡಲಾಗಿದೆ.

- Advertisement -
- Advertisement -

ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ಕಡಬ ಹೋಬಳಿ ವ್ಯಾಪ್ತಿಗೆ ಸೇರಿದ ಬ್ಯಾಲಹಳ್ಳಿಯಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘವು ದಲಿತರು ಹಾಲು ಕೊಳ್ಳದಂತೆ ಅನಪೇಕ್ಷಿತ ನಿಲುವನ್ನು ತಾಳಿದೆ.

ಸುಮಾರು 15 ದಲಿತ ಕುಟುಂಬಗಳು ಇರುವ ಹಳ್ಳಿ ಇದಾಗಿದ್ದು, ಲಿಂಗಾಯತ-ವೀರಶೈವ, ನಾಯಕ ಸಮುದಾಯಗಳು ಇವೆ. ಮರಾಠಿ ಭಾಷೆ ಮಾತನಾಡುವ ಸಮುದಾಯವಿರುವ ಮರಾಠಿ ಪಾಳ್ಯವು ಬ್ಯಾಲಹಳ್ಳಿಗೆ ಹೊಂದಿಕೊಂಡಂತೆ ಇದೆ.

ಬ್ಯಾಲಹಳ್ಳಿಯಲ್ಲಿರುವ ಮಾದಿಗ ಸಮುದಾಯವು ಮೊದಲಿನಿಂದಲೂ ಆರ್ಥಿಕವಾಗಿ ಹಿಂದುಳಿದಿದೆ. ಸ್ವತಃ ಹಸು ಕಟ್ಟಿಕೊಳ್ಳುವಷ್ಟು ಶಕ್ತಿ ಇಲ್ಲದ ಕುಟುಂಬಗಳು ಇವು. ಈ ಬಡ ಕುಟುಂಬಗಳು ದಲಿತ ಕಾಲೋನಿ ಪಕ್ಕದಲ್ಲಿನ ಹಾಲು ಉತ್ಪಾದಕರ ಸಂಘದಿಂದ ಮೊದಲಿನಿಂದಲೂ ಹಾಲು ಖರೀದಿಸುತ್ತಿದ್ದವು.

ಸಾಮಾನ್ಯವಾಗಿ 100 ಎಂ.ಎಲ್‌., 200 ಎಂ.ಎಲ್‌. ಹಾಲು ಖರೀದಿಸಿ ಚಹಾ ಮಾಡಿಕೊಂಡು ಕುಡಿದು ಕೂಲಿಗೆ ಹೋಗುತ್ತಿದ್ದರು. ಆದರೆ ಈಗ ಚಹಾ  ಕಾಯಿಸಿಕೊಳ್ಳಲು ಅರ್ಧ ಲೀಟರ್‌ ಅಥವಾ ಒಂದು ಲೀಟರ್‌ ಹಾಲನ್ನಷ್ಟೇ ಖರೀದಿಸಬೇಕು. ಇಲ್ಲವಾದರೆ ಹಾಲು ಕೊಡುವುದಿಲ್ಲ ಎಂದು ಇಲ್ಲಿನ ಸಹಕಾರ ಸಂಘ ಹೇಳಿದೆ.

ಇದನ್ನೂ ಓದಿರಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ಅರ್ಧ ಲೀಟರ್ ಹಾಲು ತೆಗೆದುಕೊಂಡು ನಾವು ಏನು ಮಾಡಲಿ? ನಮಗೆ ದಿನಕ್ಕೆ ಅರ್ಧ ಲೀಟರ್‌, ಒಂದು ಲೀಟರ್‌ ಹಾಲು ಖರೀದಿಸಲು ಸಾಧ್ಯವಾಗದು. ದಯವಿಟ್ಟು ಮೊದಲಿನಂತೆ ನೂರು ಎಂ.ಎಲ್., ಇನ್ನೂರು ಎಂ.ಎಲ್‌. ಹಾಲು ನೀಡಿ ಎಂದು ಗೋಗರೆಯುವಂತಾಗಿದೆ.

“ಹಾಲನ್ನು ಪರೀಕ್ಷಿಸಿದ ನಂತರ ಗುಣಮಟ್ಟದ ಹಾಲನ್ನು ಖರೀದಿಸಲು ಈ ಮೊದಲು ಅವಕಾಶವಿತ್ತು. ಸಣ್ಣ ಅವ್ಯವಹಾರವೇನೋ ಸಂಘದಲ್ಲಿ ನಡೆದಿದ್ದು, ಹೀಗಾಗಿ ಸಂಘದ ಸದಸ್ಯರು, ಪದಾಧಿಕಾರಿಗಳ ನಡುವೆ ಗಲಾಟೆಯಾದಂತಿದೆ. ಇನ್ನು ಮುಂದೆ ಚಿಲ್ಲರೆ ಲೆಕ್ಕದಲ್ಲಿ ಹಾಲನ್ನೇ ಮಾರುವುದು ಬೇಡ. ಅರ್ಧ ಅಥವಾ ಒಂದು ಲೀಟರ್‌ ಹಾಲನ್ನು ಖರೀದಿಸಿದರೆ ಲೆಕ್ಕ ಸಿಗುತ್ತದೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ. ಒಳಗೊಳಗೆ ಅವರು ಭ್ರಷ್ಟಾಚಾರ ಮಾಡಿಕೊಂಡು, ನಮಗೆ ಹಾಲು ನೀಡುವುದನ್ನು ನಿಲ್ಲಿಸುವುದು ಎಷ್ಟು ಸರಿ?” ಎಂದು ದಲಿತರು ಕೇಳುತ್ತಿದ್ದಾರೆ.

“ತುಮಕೂರು ಹಾಲು ಒಕ್ಕೂಟದ ಪದಾಧಿಕಾರಿಗಳು ಬ್ಯಾಲಹಳ್ಳಿಗೆ ಬಂದು ಸಾಮಾನ್ಯ ಸಭೆ ನಡೆಸಿದ ಸಂದರ್ಭದಲ್ಲಿ ದಲಿತರು ಪ್ರಶ್ನಿಸಿದ್ದಾರೆ. ಹಾಲು ಒಕ್ಕೂಟದಲ್ಲಿ ಈ ಥರದ ನಿಯಮವೇನೂ ಇಲ್ಲ. ಅದು ಇಲ್ಲಿನ ಸಂಘದವರು ಮಾಡಿರುವ ತೀರ್ಮಾನ. ಸಂಘದೊಂದಿಗೆ ಮಾತನಾಡಿ ಒಂದು ನಿರ್ಧಾರಕ್ಕೆ ಬನ್ನಿ ಎಂದು ಒಕ್ಕೂಟದವರು ತಿಳಿಸಿದ್ದಾರೆ. ಮೊದಲಿನಂತೆ ಹಾಲು ಕೊಡಿ ಎಂದು ಕೇಳುತ್ತಿದ್ದರೂ ಕಿವಿಗೆ ಹಾಕಿಕೊಳ್ಳಲಿಲ್ಲ” ಎನ್ನುತ್ತಾರೆ ದಲಿತ ಮುಖಂಡ ಬಿ.ಸಿ.ರೇಣುಕಪ್ಪ.

ಸಂಘದ ಕಾರ್ಯದರ್ಶಿ ಶಂಕರಪ್ಪ ಪ್ರತಿಕ್ರಿಯೆ

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸಂಘದ ಕಾರ್ಯದರ್ಶಿ ಶಂಕರಪ್ಪ, “ಅವರು ತೆಗೆದುಕೊಳ್ಳುವುದು ನೂರು ಎಂ.ಎಲ್‌., ಇನ್ನೂರು ಎಂ.ಎಲ್‌. ಹಾಲು ಅಷ್ಟೇ. ಎರಡು ಲೀಟರ್‌ ಒಟ್ಟಿಗೆ ತೆಗೆದುಕೊಂಡು ಹಂಚಿಕೊಂಡು ಬಿಡಿ ಎಂದು ಮೀಟಿಂಗ್‌ನಲ್ಲಿ ತಿಳಿಸಿದ್ದೇವೆ. ಹಾಲು ಕೊಡಬೇಕೆಂದೇನೂ ಇಲ್ಲ. ಸಂಘ ಹಾಲು ಖರೀದಿಸಲು ಮಾತ್ರ ಇರುವುದು. ಆದರೂ ಜನರ ಹಿತಾದೃಷ್ಟಿಯಿಂದ ಮೊದಲಿನಿಂದಲೂ ಹಾಲು ಮಾರಲಾಗುತ್ತಿತ್ತು” ಎಂದರು.

ಇದನ್ನೂ ಓದಿರಿ: ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

“ಒಂದು ಲೀಟರ್‌ಗೆ 36 ರೂ.ಗಳಿಗೆ ಕೊಡುತ್ತೇವೆ. ನೂರು ಎಂ.ಎಲ್‌. ತೆಗೆದುಕೊಂಡರೆ 3.60 ರೂ. ತೆಗೆದುಕೊಳ್ಳಬೇಕು. ಆದರೆ 40 ಪೈಸೆ ಚಿಲ್ಲರೆ ಇರುವುದಿಲ್ಲವಲ್ಲ. ನಾಲ್ಕು ರೂ. ತೆಗೆದುಕೊಳ್ಳಬೇಕಾಗುತ್ತದೆ. 40 ಪೈಸೆ ಚಿಲ್ಲರೆಗೂ ಕೆಲವರು ತಕರಾರು ತೆಗೆದರು. ಹೀಗಾಗಿ ಚಿಲ್ಲರೆ ಕೊಡಲು ಆಗಲ್ಲ. ಅರ್ಧ ಲೀಟರ್, ಕಾಲು ಲೀಟರ್‌ ತೆಗೆದುಕೊಳ್ಳಿ ಎಂದೆವು. ಅಷ್ಟು ತೆಗೆದುಕೊಳ್ಳಲು ಶಕ್ತಿ ಇಲ್ಲ ಅಂದರೆ ನಾವೇನು ಮಾಡಲಿ” ಎಂದು ಸಂಘದ ನಡೆಯನ್ನು ಸಮರ್ಥಿಸಿಕೊಂಡರು.

“ಒಟ್ಟಿಗೆ ತೆಗೆದುಕೊಂಡು ಹೋಗಿ ಎಂದರೂ ಆಗಲ್ಲ. ಲೀಟರ್‌ಗೆ ನಲವತ್ತು ರೂಪಾಯಿ ಏರಿಕೆಯಾದರೆ ಇದೆಲ್ಲ ಸಮಸ್ಯೆಯಾಗಲ್ಲ” ಎಂದು ಪ್ರತಿಕ್ರಿಯೆ ನೀಡಿದರು ಶಂಕರಪ್ಪ.

ಶಂಕರಪ್ಪ ಅವರು ಹೀಗೆ ಹೇಳುತ್ತಿದ್ದಾರೆಂದು ದಲಿತ ಮುಖಂಡರಿಗೆ ತಿಳಿಸಿದಾಗ, “ಎಲ್ಲ ಅಳತೆ ಮಾಪನಗಳು ಅವರ ಬಳಿಯೇ ಇರುತ್ತವೆ. ಅಳತೆ ಮಾಡಿಕೊಡಲು ಆಗುವುದಿಲ್ಲವೇ? ಇವೆಲ್ಲ ತಾತ್ಸರ ಮನೋಭಾವವಷ್ಟೇ. ನಾವು ನಾಲ್ಕು ರೂಪಾಯಿ ಕೊಡಲು ಸಿದ್ಧರಿದ್ದೇವೆ. ಸಂಘದೊಳಗೆ ಆಗಿರುವ ಕಿತಾಪತಿಗೆ ನಮ್ಮನ್ನು ಬಲಿಪಶು ಮಾಡಲಾಗಿದೆ” ಎಂದರು.

ಮುಜರಾಯಿ ದೇವಾಲಯಕ್ಕೆ ಪ್ರವೇಶಿಸಲು ಹೆದರಿಕೆ

ಬ್ಯಾಲಹಳ್ಳಿ ಗ್ರಾಮದಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಸೇರಿದ ತೊಳಸಮ್ಮ ದೇವಸ್ಥಾನವಿದ್ದು, ಸವರ್ಣೀಯ ಸಮುದಾಯದ ಹಿಡಿತದಲ್ಲಿದೆ. ದೇವಾಲಯಕ್ಕೆ ಪ್ರವೇಶಿಸಬೇಕೆಂಬ ಆಸೆ ಅನೇಕ ದಲಿತರಿಗಿದ್ದರೂ ಧೈರ್ಯ ಸಾಲದೆ ಸುಮ್ಮನಾಗಿದ್ದಾರೆ. ಅಲ್ಲದೆ ದೇವಾಲಯದ ಹೊರಗೆ ಹಾಕಿರುವ ಬೋರ್ಡ್‌‌ ಅನ್ನು ಅಳಿಸಿ ಹಾಕುವ ಪ್ರಯತ್ನವನ್ನು ಸವರ್ಣೀಯ ಜಾತಿಗಳು ಮಾಡಿವೆ.

ಮುಜರಾಯಿ ಇಲಾಖೆಯ ಬೋರ್ಡ್ ಕೆರೆದು ಅಳಿಸಿ ಹಾಕಿರುವುದು….

ಊರಿನ ಬಸ್‌ ನಿಲ್ದಾಣದಲ್ಲಿ ದೇವಾಲಯವಿದ್ದು, ಮುಜರಾಯಿ ಇಲಾಖೆಯು ದೇವಾಲಯದ ಹೊರಗೆ, “ಯಾವುದೇ ಜಾತಿ, ಜನಾಂಗ, ಧರ್ಮ, ಲಿಂಗ ಭೇದವಿಲ್ಲದೆ ಪ್ರವೇಶ ಮಾಡಬಹುದು” ಎಂದು ಬೋರ್ಡ್ ಹಾಕಿದೆ. ‘ಜಾತಿ, ಜನಾಂಗ, ದೇವಾಲಯ ಪ್ರವೇಶ’ ಇತ್ಯಾದಿ ಪದಗಳನ್ನು ಕಾಣದಂತೆ ಕೆರೆದು ಹಾಕಲಾಗಿದೆ.

ಒಂದು ಚಿಲ್ಲರೆ ನೆಪದಲ್ಲಿ ಹಾಲು ನೀಡಲು ನಿರಾಕರಣೆ, ಮತ್ತೊಂದು ಕಡೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯ ಪ್ರವೇಶಿಸಲು ಅಡ್ಡಿ, ಆತಂಕ… ಇದು ಬ್ಯಾಲಹಳ್ಳಿಯ ಪರಿಸ್ಥಿತಿಯಾಗಿದೆ.

ಬ್ಯಾಲಹಳ್ಳಿ ಗ್ರಾಮದಲ್ಲಿನ ತೊಳಸಮ್ಮ ದೇವಾಲಯ

ಇದನ್ನೂ ಓದಿರಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...