Homeಕರ್ನಾಟಕಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡದ ‘ಬ್ಯಾಲಹಳ್ಳಿ ಹಾಲು ಉತ್ಪಾದಕರ ಸಂಘ’

ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯವಿದ್ದು, ಎಲ್ಲ ಜಾತಿ ಜನಾಂಗಗಳೂ ಪ್ರವೇಶಿಸಬಹುದು ಎಂಬ ಬೋರ್ಡ್‌ ಇತ್ತು. ಅದನ್ನು ಹಾಳು ಮಾಡಲಾಗಿದೆ.

- Advertisement -
- Advertisement -

ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೂಕು, ಕಡಬ ಹೋಬಳಿ ವ್ಯಾಪ್ತಿಗೆ ಸೇರಿದ ಬ್ಯಾಲಹಳ್ಳಿಯಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘವು ದಲಿತರು ಹಾಲು ಕೊಳ್ಳದಂತೆ ಅನಪೇಕ್ಷಿತ ನಿಲುವನ್ನು ತಾಳಿದೆ.

ಸುಮಾರು 15 ದಲಿತ ಕುಟುಂಬಗಳು ಇರುವ ಹಳ್ಳಿ ಇದಾಗಿದ್ದು, ಲಿಂಗಾಯತ-ವೀರಶೈವ, ನಾಯಕ ಸಮುದಾಯಗಳು ಇವೆ. ಮರಾಠಿ ಭಾಷೆ ಮಾತನಾಡುವ ಸಮುದಾಯವಿರುವ ಮರಾಠಿ ಪಾಳ್ಯವು ಬ್ಯಾಲಹಳ್ಳಿಗೆ ಹೊಂದಿಕೊಂಡಂತೆ ಇದೆ.

ಬ್ಯಾಲಹಳ್ಳಿಯಲ್ಲಿರುವ ಮಾದಿಗ ಸಮುದಾಯವು ಮೊದಲಿನಿಂದಲೂ ಆರ್ಥಿಕವಾಗಿ ಹಿಂದುಳಿದಿದೆ. ಸ್ವತಃ ಹಸು ಕಟ್ಟಿಕೊಳ್ಳುವಷ್ಟು ಶಕ್ತಿ ಇಲ್ಲದ ಕುಟುಂಬಗಳು ಇವು. ಈ ಬಡ ಕುಟುಂಬಗಳು ದಲಿತ ಕಾಲೋನಿ ಪಕ್ಕದಲ್ಲಿನ ಹಾಲು ಉತ್ಪಾದಕರ ಸಂಘದಿಂದ ಮೊದಲಿನಿಂದಲೂ ಹಾಲು ಖರೀದಿಸುತ್ತಿದ್ದವು.

ಸಾಮಾನ್ಯವಾಗಿ 100 ಎಂ.ಎಲ್‌., 200 ಎಂ.ಎಲ್‌. ಹಾಲು ಖರೀದಿಸಿ ಚಹಾ ಮಾಡಿಕೊಂಡು ಕುಡಿದು ಕೂಲಿಗೆ ಹೋಗುತ್ತಿದ್ದರು. ಆದರೆ ಈಗ ಚಹಾ  ಕಾಯಿಸಿಕೊಳ್ಳಲು ಅರ್ಧ ಲೀಟರ್‌ ಅಥವಾ ಒಂದು ಲೀಟರ್‌ ಹಾಲನ್ನಷ್ಟೇ ಖರೀದಿಸಬೇಕು. ಇಲ್ಲವಾದರೆ ಹಾಲು ಕೊಡುವುದಿಲ್ಲ ಎಂದು ಇಲ್ಲಿನ ಸಹಕಾರ ಸಂಘ ಹೇಳಿದೆ.

ಇದನ್ನೂ ಓದಿರಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ಅರ್ಧ ಲೀಟರ್ ಹಾಲು ತೆಗೆದುಕೊಂಡು ನಾವು ಏನು ಮಾಡಲಿ? ನಮಗೆ ದಿನಕ್ಕೆ ಅರ್ಧ ಲೀಟರ್‌, ಒಂದು ಲೀಟರ್‌ ಹಾಲು ಖರೀದಿಸಲು ಸಾಧ್ಯವಾಗದು. ದಯವಿಟ್ಟು ಮೊದಲಿನಂತೆ ನೂರು ಎಂ.ಎಲ್., ಇನ್ನೂರು ಎಂ.ಎಲ್‌. ಹಾಲು ನೀಡಿ ಎಂದು ಗೋಗರೆಯುವಂತಾಗಿದೆ.

“ಹಾಲನ್ನು ಪರೀಕ್ಷಿಸಿದ ನಂತರ ಗುಣಮಟ್ಟದ ಹಾಲನ್ನು ಖರೀದಿಸಲು ಈ ಮೊದಲು ಅವಕಾಶವಿತ್ತು. ಸಣ್ಣ ಅವ್ಯವಹಾರವೇನೋ ಸಂಘದಲ್ಲಿ ನಡೆದಿದ್ದು, ಹೀಗಾಗಿ ಸಂಘದ ಸದಸ್ಯರು, ಪದಾಧಿಕಾರಿಗಳ ನಡುವೆ ಗಲಾಟೆಯಾದಂತಿದೆ. ಇನ್ನು ಮುಂದೆ ಚಿಲ್ಲರೆ ಲೆಕ್ಕದಲ್ಲಿ ಹಾಲನ್ನೇ ಮಾರುವುದು ಬೇಡ. ಅರ್ಧ ಅಥವಾ ಒಂದು ಲೀಟರ್‌ ಹಾಲನ್ನು ಖರೀದಿಸಿದರೆ ಲೆಕ್ಕ ಸಿಗುತ್ತದೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ತಿಳಿದುಬಂದಿದೆ. ಒಳಗೊಳಗೆ ಅವರು ಭ್ರಷ್ಟಾಚಾರ ಮಾಡಿಕೊಂಡು, ನಮಗೆ ಹಾಲು ನೀಡುವುದನ್ನು ನಿಲ್ಲಿಸುವುದು ಎಷ್ಟು ಸರಿ?” ಎಂದು ದಲಿತರು ಕೇಳುತ್ತಿದ್ದಾರೆ.

“ತುಮಕೂರು ಹಾಲು ಒಕ್ಕೂಟದ ಪದಾಧಿಕಾರಿಗಳು ಬ್ಯಾಲಹಳ್ಳಿಗೆ ಬಂದು ಸಾಮಾನ್ಯ ಸಭೆ ನಡೆಸಿದ ಸಂದರ್ಭದಲ್ಲಿ ದಲಿತರು ಪ್ರಶ್ನಿಸಿದ್ದಾರೆ. ಹಾಲು ಒಕ್ಕೂಟದಲ್ಲಿ ಈ ಥರದ ನಿಯಮವೇನೂ ಇಲ್ಲ. ಅದು ಇಲ್ಲಿನ ಸಂಘದವರು ಮಾಡಿರುವ ತೀರ್ಮಾನ. ಸಂಘದೊಂದಿಗೆ ಮಾತನಾಡಿ ಒಂದು ನಿರ್ಧಾರಕ್ಕೆ ಬನ್ನಿ ಎಂದು ಒಕ್ಕೂಟದವರು ತಿಳಿಸಿದ್ದಾರೆ. ಮೊದಲಿನಂತೆ ಹಾಲು ಕೊಡಿ ಎಂದು ಕೇಳುತ್ತಿದ್ದರೂ ಕಿವಿಗೆ ಹಾಕಿಕೊಳ್ಳಲಿಲ್ಲ” ಎನ್ನುತ್ತಾರೆ ದಲಿತ ಮುಖಂಡ ಬಿ.ಸಿ.ರೇಣುಕಪ್ಪ.

ಸಂಘದ ಕಾರ್ಯದರ್ಶಿ ಶಂಕರಪ್ಪ ಪ್ರತಿಕ್ರಿಯೆ

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸಂಘದ ಕಾರ್ಯದರ್ಶಿ ಶಂಕರಪ್ಪ, “ಅವರು ತೆಗೆದುಕೊಳ್ಳುವುದು ನೂರು ಎಂ.ಎಲ್‌., ಇನ್ನೂರು ಎಂ.ಎಲ್‌. ಹಾಲು ಅಷ್ಟೇ. ಎರಡು ಲೀಟರ್‌ ಒಟ್ಟಿಗೆ ತೆಗೆದುಕೊಂಡು ಹಂಚಿಕೊಂಡು ಬಿಡಿ ಎಂದು ಮೀಟಿಂಗ್‌ನಲ್ಲಿ ತಿಳಿಸಿದ್ದೇವೆ. ಹಾಲು ಕೊಡಬೇಕೆಂದೇನೂ ಇಲ್ಲ. ಸಂಘ ಹಾಲು ಖರೀದಿಸಲು ಮಾತ್ರ ಇರುವುದು. ಆದರೂ ಜನರ ಹಿತಾದೃಷ್ಟಿಯಿಂದ ಮೊದಲಿನಿಂದಲೂ ಹಾಲು ಮಾರಲಾಗುತ್ತಿತ್ತು” ಎಂದರು.

ಇದನ್ನೂ ಓದಿರಿ: ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

“ಒಂದು ಲೀಟರ್‌ಗೆ 36 ರೂ.ಗಳಿಗೆ ಕೊಡುತ್ತೇವೆ. ನೂರು ಎಂ.ಎಲ್‌. ತೆಗೆದುಕೊಂಡರೆ 3.60 ರೂ. ತೆಗೆದುಕೊಳ್ಳಬೇಕು. ಆದರೆ 40 ಪೈಸೆ ಚಿಲ್ಲರೆ ಇರುವುದಿಲ್ಲವಲ್ಲ. ನಾಲ್ಕು ರೂ. ತೆಗೆದುಕೊಳ್ಳಬೇಕಾಗುತ್ತದೆ. 40 ಪೈಸೆ ಚಿಲ್ಲರೆಗೂ ಕೆಲವರು ತಕರಾರು ತೆಗೆದರು. ಹೀಗಾಗಿ ಚಿಲ್ಲರೆ ಕೊಡಲು ಆಗಲ್ಲ. ಅರ್ಧ ಲೀಟರ್, ಕಾಲು ಲೀಟರ್‌ ತೆಗೆದುಕೊಳ್ಳಿ ಎಂದೆವು. ಅಷ್ಟು ತೆಗೆದುಕೊಳ್ಳಲು ಶಕ್ತಿ ಇಲ್ಲ ಅಂದರೆ ನಾವೇನು ಮಾಡಲಿ” ಎಂದು ಸಂಘದ ನಡೆಯನ್ನು ಸಮರ್ಥಿಸಿಕೊಂಡರು.

“ಒಟ್ಟಿಗೆ ತೆಗೆದುಕೊಂಡು ಹೋಗಿ ಎಂದರೂ ಆಗಲ್ಲ. ಲೀಟರ್‌ಗೆ ನಲವತ್ತು ರೂಪಾಯಿ ಏರಿಕೆಯಾದರೆ ಇದೆಲ್ಲ ಸಮಸ್ಯೆಯಾಗಲ್ಲ” ಎಂದು ಪ್ರತಿಕ್ರಿಯೆ ನೀಡಿದರು ಶಂಕರಪ್ಪ.

ಶಂಕರಪ್ಪ ಅವರು ಹೀಗೆ ಹೇಳುತ್ತಿದ್ದಾರೆಂದು ದಲಿತ ಮುಖಂಡರಿಗೆ ತಿಳಿಸಿದಾಗ, “ಎಲ್ಲ ಅಳತೆ ಮಾಪನಗಳು ಅವರ ಬಳಿಯೇ ಇರುತ್ತವೆ. ಅಳತೆ ಮಾಡಿಕೊಡಲು ಆಗುವುದಿಲ್ಲವೇ? ಇವೆಲ್ಲ ತಾತ್ಸರ ಮನೋಭಾವವಷ್ಟೇ. ನಾವು ನಾಲ್ಕು ರೂಪಾಯಿ ಕೊಡಲು ಸಿದ್ಧರಿದ್ದೇವೆ. ಸಂಘದೊಳಗೆ ಆಗಿರುವ ಕಿತಾಪತಿಗೆ ನಮ್ಮನ್ನು ಬಲಿಪಶು ಮಾಡಲಾಗಿದೆ” ಎಂದರು.

ಮುಜರಾಯಿ ದೇವಾಲಯಕ್ಕೆ ಪ್ರವೇಶಿಸಲು ಹೆದರಿಕೆ

ಬ್ಯಾಲಹಳ್ಳಿ ಗ್ರಾಮದಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಸೇರಿದ ತೊಳಸಮ್ಮ ದೇವಸ್ಥಾನವಿದ್ದು, ಸವರ್ಣೀಯ ಸಮುದಾಯದ ಹಿಡಿತದಲ್ಲಿದೆ. ದೇವಾಲಯಕ್ಕೆ ಪ್ರವೇಶಿಸಬೇಕೆಂಬ ಆಸೆ ಅನೇಕ ದಲಿತರಿಗಿದ್ದರೂ ಧೈರ್ಯ ಸಾಲದೆ ಸುಮ್ಮನಾಗಿದ್ದಾರೆ. ಅಲ್ಲದೆ ದೇವಾಲಯದ ಹೊರಗೆ ಹಾಕಿರುವ ಬೋರ್ಡ್‌‌ ಅನ್ನು ಅಳಿಸಿ ಹಾಕುವ ಪ್ರಯತ್ನವನ್ನು ಸವರ್ಣೀಯ ಜಾತಿಗಳು ಮಾಡಿವೆ.

ಮುಜರಾಯಿ ಇಲಾಖೆಯ ಬೋರ್ಡ್ ಕೆರೆದು ಅಳಿಸಿ ಹಾಕಿರುವುದು….

ಊರಿನ ಬಸ್‌ ನಿಲ್ದಾಣದಲ್ಲಿ ದೇವಾಲಯವಿದ್ದು, ಮುಜರಾಯಿ ಇಲಾಖೆಯು ದೇವಾಲಯದ ಹೊರಗೆ, “ಯಾವುದೇ ಜಾತಿ, ಜನಾಂಗ, ಧರ್ಮ, ಲಿಂಗ ಭೇದವಿಲ್ಲದೆ ಪ್ರವೇಶ ಮಾಡಬಹುದು” ಎಂದು ಬೋರ್ಡ್ ಹಾಕಿದೆ. ‘ಜಾತಿ, ಜನಾಂಗ, ದೇವಾಲಯ ಪ್ರವೇಶ’ ಇತ್ಯಾದಿ ಪದಗಳನ್ನು ಕಾಣದಂತೆ ಕೆರೆದು ಹಾಕಲಾಗಿದೆ.

ಒಂದು ಚಿಲ್ಲರೆ ನೆಪದಲ್ಲಿ ಹಾಲು ನೀಡಲು ನಿರಾಕರಣೆ, ಮತ್ತೊಂದು ಕಡೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯ ಪ್ರವೇಶಿಸಲು ಅಡ್ಡಿ, ಆತಂಕ… ಇದು ಬ್ಯಾಲಹಳ್ಳಿಯ ಪರಿಸ್ಥಿತಿಯಾಗಿದೆ.

ಬ್ಯಾಲಹಳ್ಳಿ ಗ್ರಾಮದಲ್ಲಿನ ತೊಳಸಮ್ಮ ದೇವಾಲಯ

ಇದನ್ನೂ ಓದಿರಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...