Homeಮುಖಪುಟಸಿ.ಬಿ.ಐ., ಇ.ಡಿ. ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ; ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

ಸಿ.ಬಿ.ಐ., ಇ.ಡಿ. ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ; ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

"ವಿರೋಧ ಪಕ್ಷಗಳಿಗೆ ಪ್ರಶ್ನಿಸಲು ಅವಕಾಶ ನೀಡದೆ ಪ್ರಜಾಪ್ರಭುತ್ವನ್ನು ಕೊಲ್ಲಲಾಗಿದೆ" ಎಂದು ರಾಹುಲ್‌ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರ ಅವಧಿಯನ್ನು ಪ್ರಸ್ತುತ ಎರಡು ವರ್ಷಗಳಿಂದ ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸಿದೆ.

ತಮ್ಮ 12 ಸದಸ್ಯರ ಅಮಾನತು ಪ್ರಶ್ನಿಸಿದ ಪ್ರತಿಪಕ್ಷಗಳು ಸಭಾ ತ್ಯಾಗ ಮಾಡಿದ ನಡುವೆಯೇ ಮಂಗಳವಾರ ರಾಜ್ಯಸಭೆಯಲ್ಲಿ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ‘ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ, 2021’ ಮಂಡಿಸಿದರು.

ಮಂಡಿಸಲಾದ ಮಸೂದೆಯನ್ನು ಮೇಲ್ಮನೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಲೋಕಸಭೆಯು ಈಗಾಗಲೇ ಡಿಸೆಂಬರ್ 3, 2021ರಂದು ಮಸೂದೆಯನ್ನು ಅಂಗೀಕರಿಸಿದೆ.

ಜಾರಿ ನಿರ್ದೇಶನಾಲಯದ ನಿರ್ದೇಶಕರ ಅವಧಿಯನ್ನು ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸಿದೆ.

ಡಿಸೆಂಬರ್ 9ರಂದು ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟ ಕೇಂದ್ರ ಜಾಗೃತ ಆಯೋಗದ (ತಿದ್ದುಪಡಿ) ಮಸೂದೆ, 2021 ಅನ್ನು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಮೇಲ್ಮನೆಯಲ್ಲಿ ಮಂಡಿಸಿದರು. ಧ್ವನಿ ಮತದ ಮೂಲಕ ಈ ಮಸೂದೆಯನ್ನು ಅಂಗೀಕರಿಸಿದರು.

ಜಾರಿ ನಿರ್ದೇಶನಾಲಯ (ಇ.ಡಿ.) ನಿರ್ದೇಶಕರ ಅವಧಿಯನ್ನು ಎರಡು ವರ್ಷದಿಂದ ಐದು ವರ್ಷಕ್ಕೆ ವಿಸ್ತರಿಸಲು ಮಸೂದೆ ಪ್ರಯತ್ನಿಸುತ್ತದೆ. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ ಪರಿಚಯಿಸಿದ ಸಚಿವ ಜೀತೇಂದ್ರ ಸಿಂಗ್‌, “ಈ ತಿದ್ದುಪಡಿಗಳನ್ನು ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿ ಮತ್ತು ಆರ್ಥಿಕ ಸ್ಥಿರತೆಗಾಗಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

“ಭ್ರಷ್ಟಾಚಾರವನ್ನು ತಡೆಗಟ್ಟಲು, ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಹೆಚ್ಚಿನ ಪಾರದರ್ಶಕತೆಗಾಗಿ ಸರ್ಕಾರ ಕೆಲಸ ಮಾಡುತ್ತಿದೆ” ಎಂದರು.

ಇತ್ತೀಚಿನ ವರ್ಷಗಳಲ್ಲಿ ದೇಶವು ಭ್ರಷ್ಟಾಚಾರ, ಕಪ್ಪುಹಣ, ಮಾದಕವಸ್ತು ಕಳ್ಳಸಾಗಣೆ, ಭಯೋತ್ಪಾದನೆ ಮತ್ತು ಕ್ರಿಮಿನಲ್ ಅಪರಾಧಗಳಿಗೆ ಸಂಬಂಧಿಸಿದ ಆತಂಕಗಳನ್ನು ಎದುರಿಸುತ್ತಿದೆ. ಇವೆಲ್ಲವೂ ದೇಶದ ಭದ್ರತೆ ಮತ್ತು ಆರ್ಥಿಕ ರಚನೆಗೆ ಆತಂಕಕಾರಿಯಾಗಿವೆ ಎಂದು ಹೇಳಿದರು.

ಅಪರಾಧದ ವಿಧಾನವು ಬದಲಾಗಿದೆ. ಅದು ಹೆಚ್ಚು ಅತ್ಯಾಧುನಿಕ ಮತ್ತು ರಚನಾತ್ಮಕವಾಗಿದೆ. ಹೀಗಾಗಿ ಅಪರಾಧ ತನಿಖೆ ಹೆಚ್ಚು ಕಷ್ಟಕರವಾಗಿದೆ. ಈ ಮಸೂದೆಯು ತನಿಖೆಯ ವೇಗವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು.

ಸಭಾತ್ಯಾಗ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (ಕಾಂಗ್ರೆಸ್) ಅವರು ಅಮಾನತು ರದ್ದುಗೊಳಿಸುವಂತೆ ಮತ್ತು ಅಮಾನತುಗೊಂಡ 12 ಸದಸ್ಯರಿಗೆ ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಸಭಾಪತಿಯನ್ನು ಕೋರಿದರು. ಡಿಎಂಕೆಯ ತಿರುಚಿ ಶಿವ ಸೇರಿದಂತೆ ಇತರ ವಿರೋಧ ಪಕ್ಷದ ನಾಯಕರೂ ಅವರನ್ನು ಬೆಂಬಲಿಸಿದರು. ಆದರೆ, ಇದಕ್ಕೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬಹುತೇಕ ಪ್ರತಿಪಕ್ಷ ಸದಸ್ಯರು ಮೇಲ್ಮನೆಯಿಂದ ಹೊರ ನಡೆದರು.

ಪ್ರಜಾಪ್ರಭುತ್ವದ ಹತ್ಯೆ: ರಾಹುಲ್ ಕಿಡಿ

ಸದಸ್ಯರ ಅಮಾನತು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, “ವಿರೋಧ ಪಕ್ಷಗಳಿಗೆ ಪ್ರಶ್ನಿಸಲು ಅವಕಾಶ ನೀಡದೆ ಪ್ರಜಾಪ್ರಭುತ್ವನ್ನು ಕೊಲ್ಲಲಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಭಾರತದ ಜನರ ಧ್ವನಿಯನ್ನು ದಮನ ಮಾಡಿರುವ ಸಂಕೇತವಿದು. ಜನರ ಧ್ವನಿಯನ್ನು ಹತ್ತಿಕ್ಕಲಾಗಿದೆ. ಸಂಸತ್ತಿನಲ್ಲಿ ಗದ್ದಲದ ನಡುವೆ ವಿಧೇಯಕ ಅಂಗೀಕಾರವಾಗುತ್ತಿದೆ. ಇದು ಸಂಸತ್ತನ್ನು ನಡೆಸುವ ವಿಧಾನವಲ್ಲ. ಪ್ರಧಾನಿ ಸದನಕ್ಕೆ ಬರುವುದಿಲ್ಲ. ರಾಷ್ಟ್ರೀಯ ಮಹತ್ವದ ಯಾವುದೇ ವಿಷಯವನ್ನು ಪ್ರಸ್ತಾಪಿಸಲು ನಮಗೆ ಅವಕಾಶವಿಲ್ಲ. ಇದು ಪ್ರಜಾಪ್ರಭುತ್ವದ ಹತ್ಯೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: 12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....