Homeಮುಖಪುಟಸಿ.ಬಿ.ಐ., ಇ.ಡಿ. ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ; ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

ಸಿ.ಬಿ.ಐ., ಇ.ಡಿ. ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ; ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

"ವಿರೋಧ ಪಕ್ಷಗಳಿಗೆ ಪ್ರಶ್ನಿಸಲು ಅವಕಾಶ ನೀಡದೆ ಪ್ರಜಾಪ್ರಭುತ್ವನ್ನು ಕೊಲ್ಲಲಾಗಿದೆ" ಎಂದು ರಾಹುಲ್‌ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರ ಅವಧಿಯನ್ನು ಪ್ರಸ್ತುತ ಎರಡು ವರ್ಷಗಳಿಂದ ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸಿದೆ.

ತಮ್ಮ 12 ಸದಸ್ಯರ ಅಮಾನತು ಪ್ರಶ್ನಿಸಿದ ಪ್ರತಿಪಕ್ಷಗಳು ಸಭಾ ತ್ಯಾಗ ಮಾಡಿದ ನಡುವೆಯೇ ಮಂಗಳವಾರ ರಾಜ್ಯಸಭೆಯಲ್ಲಿ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ‘ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ, 2021’ ಮಂಡಿಸಿದರು.

ಮಂಡಿಸಲಾದ ಮಸೂದೆಯನ್ನು ಮೇಲ್ಮನೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಲೋಕಸಭೆಯು ಈಗಾಗಲೇ ಡಿಸೆಂಬರ್ 3, 2021ರಂದು ಮಸೂದೆಯನ್ನು ಅಂಗೀಕರಿಸಿದೆ.

ಜಾರಿ ನಿರ್ದೇಶನಾಲಯದ ನಿರ್ದೇಶಕರ ಅವಧಿಯನ್ನು ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸುವ ಮಸೂದೆಯನ್ನು ಸಂಸತ್ತು ಅಂಗೀಕರಿಸಿದೆ.

ಡಿಸೆಂಬರ್ 9ರಂದು ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟ ಕೇಂದ್ರ ಜಾಗೃತ ಆಯೋಗದ (ತಿದ್ದುಪಡಿ) ಮಸೂದೆ, 2021 ಅನ್ನು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಮೇಲ್ಮನೆಯಲ್ಲಿ ಮಂಡಿಸಿದರು. ಧ್ವನಿ ಮತದ ಮೂಲಕ ಈ ಮಸೂದೆಯನ್ನು ಅಂಗೀಕರಿಸಿದರು.

ಜಾರಿ ನಿರ್ದೇಶನಾಲಯ (ಇ.ಡಿ.) ನಿರ್ದೇಶಕರ ಅವಧಿಯನ್ನು ಎರಡು ವರ್ಷದಿಂದ ಐದು ವರ್ಷಕ್ಕೆ ವಿಸ್ತರಿಸಲು ಮಸೂದೆ ಪ್ರಯತ್ನಿಸುತ್ತದೆ. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ ಪರಿಚಯಿಸಿದ ಸಚಿವ ಜೀತೇಂದ್ರ ಸಿಂಗ್‌, “ಈ ತಿದ್ದುಪಡಿಗಳನ್ನು ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿ ಮತ್ತು ಆರ್ಥಿಕ ಸ್ಥಿರತೆಗಾಗಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

“ಭ್ರಷ್ಟಾಚಾರವನ್ನು ತಡೆಗಟ್ಟಲು, ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಹೆಚ್ಚಿನ ಪಾರದರ್ಶಕತೆಗಾಗಿ ಸರ್ಕಾರ ಕೆಲಸ ಮಾಡುತ್ತಿದೆ” ಎಂದರು.

ಇತ್ತೀಚಿನ ವರ್ಷಗಳಲ್ಲಿ ದೇಶವು ಭ್ರಷ್ಟಾಚಾರ, ಕಪ್ಪುಹಣ, ಮಾದಕವಸ್ತು ಕಳ್ಳಸಾಗಣೆ, ಭಯೋತ್ಪಾದನೆ ಮತ್ತು ಕ್ರಿಮಿನಲ್ ಅಪರಾಧಗಳಿಗೆ ಸಂಬಂಧಿಸಿದ ಆತಂಕಗಳನ್ನು ಎದುರಿಸುತ್ತಿದೆ. ಇವೆಲ್ಲವೂ ದೇಶದ ಭದ್ರತೆ ಮತ್ತು ಆರ್ಥಿಕ ರಚನೆಗೆ ಆತಂಕಕಾರಿಯಾಗಿವೆ ಎಂದು ಹೇಳಿದರು.

ಅಪರಾಧದ ವಿಧಾನವು ಬದಲಾಗಿದೆ. ಅದು ಹೆಚ್ಚು ಅತ್ಯಾಧುನಿಕ ಮತ್ತು ರಚನಾತ್ಮಕವಾಗಿದೆ. ಹೀಗಾಗಿ ಅಪರಾಧ ತನಿಖೆ ಹೆಚ್ಚು ಕಷ್ಟಕರವಾಗಿದೆ. ಈ ಮಸೂದೆಯು ತನಿಖೆಯ ವೇಗವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು.

ಸಭಾತ್ಯಾಗ

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (ಕಾಂಗ್ರೆಸ್) ಅವರು ಅಮಾನತು ರದ್ದುಗೊಳಿಸುವಂತೆ ಮತ್ತು ಅಮಾನತುಗೊಂಡ 12 ಸದಸ್ಯರಿಗೆ ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಸಭಾಪತಿಯನ್ನು ಕೋರಿದರು. ಡಿಎಂಕೆಯ ತಿರುಚಿ ಶಿವ ಸೇರಿದಂತೆ ಇತರ ವಿರೋಧ ಪಕ್ಷದ ನಾಯಕರೂ ಅವರನ್ನು ಬೆಂಬಲಿಸಿದರು. ಆದರೆ, ಇದಕ್ಕೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬಹುತೇಕ ಪ್ರತಿಪಕ್ಷ ಸದಸ್ಯರು ಮೇಲ್ಮನೆಯಿಂದ ಹೊರ ನಡೆದರು.

ಪ್ರಜಾಪ್ರಭುತ್ವದ ಹತ್ಯೆ: ರಾಹುಲ್ ಕಿಡಿ

ಸದಸ್ಯರ ಅಮಾನತು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, “ವಿರೋಧ ಪಕ್ಷಗಳಿಗೆ ಪ್ರಶ್ನಿಸಲು ಅವಕಾಶ ನೀಡದೆ ಪ್ರಜಾಪ್ರಭುತ್ವನ್ನು ಕೊಲ್ಲಲಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಭಾರತದ ಜನರ ಧ್ವನಿಯನ್ನು ದಮನ ಮಾಡಿರುವ ಸಂಕೇತವಿದು. ಜನರ ಧ್ವನಿಯನ್ನು ಹತ್ತಿಕ್ಕಲಾಗಿದೆ. ಸಂಸತ್ತಿನಲ್ಲಿ ಗದ್ದಲದ ನಡುವೆ ವಿಧೇಯಕ ಅಂಗೀಕಾರವಾಗುತ್ತಿದೆ. ಇದು ಸಂಸತ್ತನ್ನು ನಡೆಸುವ ವಿಧಾನವಲ್ಲ. ಪ್ರಧಾನಿ ಸದನಕ್ಕೆ ಬರುವುದಿಲ್ಲ. ರಾಷ್ಟ್ರೀಯ ಮಹತ್ವದ ಯಾವುದೇ ವಿಷಯವನ್ನು ಪ್ರಸ್ತಾಪಿಸಲು ನಮಗೆ ಅವಕಾಶವಿಲ್ಲ. ಇದು ಪ್ರಜಾಪ್ರಭುತ್ವದ ಹತ್ಯೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: 12 ವರ್ಷಗಳಲ್ಲೇ ಗರಿಷ್ಠ ಮಟ್ಟದ ಸಗಟು ಹಣದುಬ್ಬರ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...